Advertisement
ಸುದ್ದಿಗಳು

#Chess | ಚೆಸ್‌ ಚಾಂಪಿಯನ್‌ ಆಗಿ ಹೊರಹೊಮ್ಮಿದ ರವೀಶ್‌ ಕೋಟೆ | ರಾಷ್ಟ್ರಮಟ್ಟದ ಪಂದ್ಯಾಟಕ್ಕೆ ಆಯ್ಕೆ |

Share

ಕರ್ನಾಟಕ ರಾಜ್ಯ ಸ್ಕೂಲ್ ಚಾಂಪಿಯನ್ ಶಿಪ್2023  ರಲ್ಲಿ 15ರ ವಯೋಮಾನದ ಮುಕ್ತ ವಿಭಾಗದಲ್ಲಿ ರವೀಶ್ ಕೋಟೆ ಇವರು ಚಾಂಪಿಯನ್ ಆಗಿ ಹೊರಹೊಮ್ಮಿದ್ದಾರೆ. ಇವರು 25 ಅಗಸ್ಟ್ ರಿಂದ 27ರ ವರೆಗೆ ಮೈಸೂರಿನಲ್ಲಿ ನಡೆದ ಪಂದ್ಯಾಟದಲ್ಲಿ ಆರು ಸುತ್ತಿನಲ್ಲಿ 5.5 ಅಂಕ ಗಳಿಸಿರುತ್ತಾರೆ. ಮುಂದಿನ ಜನವರಿ ತಿಂಗಳಲ್ಲಿ ಬಿಹಾರದಲ್ಲಿ ನಡೆಯುವ ರಾಷ್ಟ್ರ ಮಟ್ಟದ ಟೂರ್ನಿಯಲ್ಲಿ ಆಡಲು ಅರ್ಹತೆ ಪಡೆದಿದಾರೆ. ಇವರು ಜ್ಞಾನ ಗಂಗಾ ಸೆಂಟ್ರಲ್ ಸ್ಕೂಲ್ ಬೆಳ್ಳಾರೆಯಲ್ಲಿ ಒಂಬತ್ತನೆಯ ತರಗತಿಯಲ್ಲಿ ಓದುತ್ತಿದ್ದು, ಜೀನಿಯಸ್ ಚೆಸ್ ಸ್ಕೂಲ್ ನ  ಸತ್ಯ ಪ್ರಸಾದ್ ಕೋಟೆಯವರಲ್ಲಿ ತರಬೇತಿ ಪಡೆಯುತ್ತಿದ್ದಾರೆ.

Advertisement

ಸದ್ಯ ಇವರ Fide rating 1500 (classical)ಇದ್ದು,  ಮೂರನೇಯ ತರಗತಿಯಿಂದ ಚೆಸ್ ಆಡಲು ಆರಂಭಿಸಿದ್ದರು.  ಪುತ್ತೂರು ಜೀನಿಯಸ್ ಚೆಸ್ ಶಾಲೆಯಲ್ಲಿ ಸತ್ಯ ಪ್ರಸಾದ್ ಕೋಟೆ ಯವರಿಂದ ತರಬೇತಿ ಪಡೆಯುತ್ತಿದ್ದು ಜಿಲ್ಲಾ ಮಟ್ಟ ರಾಜ್ಯ ಮಟ್ಟದ ಹಾಗೂ ವಿವಿಧ ರಾಜ್ಯಗಳಲ್ಲಿ ರಾಷ್ಟ ಮಟ್ಟದ ಪಂದ್ಯಾಟದಲ್ಲಿ ಭಾಗವಹಿಸಿ ಹಲವು ಪ್ರಶಸ್ತಿ ಬಹುಮಾನಗಳನ್ನು ಪಡಕೊಂಡಿರುತ್ತಾರೆ. ಇವರ ಚೆಸ್ ಆಟಕ್ಕೆ ಜ್ಞಾನ ಗಂಗಾ ಸೆಂಟ್ರಲ್ ಸ್ಕೂಲ್ ಬೆಳ್ಳಾರೆ ಇದರ ಪ್ರಾಂಶುಪಾಲರ ಹಾಗೂ ಅದ್ಯಾಪಕರ ಪ್ರೋತ್ಸಾಹ ತುಂಬಾ ಉತ್ತೇಜನಕವಾಗಿರುವುದು ಸಹಕಾರಿಯಾಗಿದೆ. ಚೆಸ್ ನ ಮೂರೂ ವಿಭಾಗಗಳಲ್ಲಿ Classical, Rapid ಹಾಗೂ Blitz ನಲ್ಲಿ ಆಡಬಲ್ಲವರಾಗಿದ್ದು ಎಲ್ಲಾ ವಿಭಾಗಗಳಲ್ಲಿ Fide rating ಹೊಂದಿರುತ್ತಾರೆ.

ಇವರು ಸುಳ್ಯ ತಾಲೂಕಿನ ಎಣ್ಮೂರಿನ ಅಲೆಂಗಾರದಲ್ಲಿರುವ ರಮೇಶ್‌ ಕೋಟೆ ಹಾಗೂ ಶುಭಮಂಗಳ  ಅವರ ಪುತ್ರ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹವಾಮಾನ ವರದಿ | 21-04-2026 | ಕರಾವಳಿ-ಮಲೆನಾಡಿನಲ್ಲಿ ಮಳೆ ಜೋರಾಗಲಿದೆ, ಉತ್ತರ ಒಳನಾಡಿಗೂ ಗುಡುಗು ಮಳೆ..!

ರಾಜ್ಯದ ಕರಾವಳಿ ಮತ್ತು ಮಲೆನಾಡಿನಲ್ಲಿ ಮಳೆ ಮುಂದುವರಿಯಲಿದ್ದು, ಉತ್ತರ ಒಳನಾಡಿನಲ್ಲಿ ಏಪ್ರಿಲ್ 25ರವರೆಗೆ…

21 hours ago

ವಿದ್ಯುತ್ ದರ ಶಾಕ್..! ಸಣ್ಣ ಕೈಗಾರಿಕೆಗಳಿಗೆ ಭಾರೀ ಹೊರೆ – ಉಮಾ ರೆಡ್ಡಿ ಎಚ್ಚರಿಕೆ

ವಿದ್ಯುತ್ ದರ ಏರಿಕೆ ಮತ್ತು ಹಿಂಬದಿ ಬಿಲ್ಲಿಂಗ್ ಕ್ರಮದಿಂದ ಸಣ್ಣ ಮತ್ತು ಮಧ್ಯಮ…

1 day ago

ಮುಳಬಾಗಿಲಿನಲ್ಲಿ ಹೋಟೆಲ್ ಮೇಲೆ ದಾಳಿ : 30 ಲೀಟರ್ ಹಳೆಯ ತುಪ್ಪ ಜಪ್ತಿ, ದಂಡ

ಮುಳಬಾಗಿಲಿನ ಹೋಟೆಲ್ ಮೇಲೆ ದಾಳಿ ನಡೆಸಿ 30 ಲೀಟರ್ ಅವಧಿ ಮೀರಿದ ತುಪ್ಪ…

1 day ago

ರೈತರಿಗೆ ಗುಡ್ ನ್ಯೂಸ್..! ತೊಗರಿ ಖರೀದಿ ಅವಧಿ ಮೇ 15ರವರೆಗೆ ವಿಸ್ತರಣೆ

ತೊಗರಿ ಬೆಳೆಗಾರರ ಹಿತಕ್ಕಾಗಿ ಖರೀದಿ ಅವಧಿಯನ್ನು ಮೇ 15ರವರೆಗೆ ವಿಸ್ತರಿಸಲಾಗಿದೆ. ಇದರಿಂದ ರೈತರಿಗೆ…

1 day ago

ವಿಜಯಪುರದಲ್ಲಿ ತಾಪಮಾನ ಹೆಚ್ಚಳ : ಜಿಲ್ಲಾಸ್ಪತ್ರೆಯಲ್ಲಿ 10 ಬೆಡ್ AC ವಾರ್ಡ್ ಸಿದ್ಧ

ವಿಜಯಪುರದಲ್ಲಿ ಬಿಸಿಲಿನ ತೀವ್ರತೆ ಹೆಚ್ಚಳ ಹಿನ್ನೆಲೆ ಜಿಲ್ಲಾಸ್ಪತ್ರೆಯಲ್ಲಿ 10 ಬೆಡ್ ವಿಶೇಷ ವಾರ್ಡ್…

1 day ago

ಹೊಸರುಚಿ | ಗುಜ್ಜೆ ಮಂಚೂರಿ – ಕರಾವಳಿಯ ಸಾಂಪ್ರದಾಯಿಕ ರುಚಿಗೆ ಚೈನೀಸ್ ಟ್ವಿಸ್ಟ್

ಗುಜ್ಜೆ ಬಳಸಿ ತಯಾರಿಸುವ ಮಂಚೂರಿ ರುಚಿಕರ ಫ್ಯೂಷನ್ ತಿನಿಸಾಗಿದೆ. ಮನೆಯಲ್ಲಿ ಸುಲಭವಾಗಿ ಮಾಡುವ…

2 days ago