Advertisement
ಸುದ್ದಿಗಳು

#Chess | ಚೆಸ್‌ ಚಾಂಪಿಯನ್‌ ಆಗಿ ಹೊರಹೊಮ್ಮಿದ ರವೀಶ್‌ ಕೋಟೆ | ರಾಷ್ಟ್ರಮಟ್ಟದ ಪಂದ್ಯಾಟಕ್ಕೆ ಆಯ್ಕೆ |

Share

ಕರ್ನಾಟಕ ರಾಜ್ಯ ಸ್ಕೂಲ್ ಚಾಂಪಿಯನ್ ಶಿಪ್2023  ರಲ್ಲಿ 15ರ ವಯೋಮಾನದ ಮುಕ್ತ ವಿಭಾಗದಲ್ಲಿ ರವೀಶ್ ಕೋಟೆ ಇವರು ಚಾಂಪಿಯನ್ ಆಗಿ ಹೊರಹೊಮ್ಮಿದ್ದಾರೆ. ಇವರು 25 ಅಗಸ್ಟ್ ರಿಂದ 27ರ ವರೆಗೆ ಮೈಸೂರಿನಲ್ಲಿ ನಡೆದ ಪಂದ್ಯಾಟದಲ್ಲಿ ಆರು ಸುತ್ತಿನಲ್ಲಿ 5.5 ಅಂಕ ಗಳಿಸಿರುತ್ತಾರೆ. ಮುಂದಿನ ಜನವರಿ ತಿಂಗಳಲ್ಲಿ ಬಿಹಾರದಲ್ಲಿ ನಡೆಯುವ ರಾಷ್ಟ್ರ ಮಟ್ಟದ ಟೂರ್ನಿಯಲ್ಲಿ ಆಡಲು ಅರ್ಹತೆ ಪಡೆದಿದಾರೆ. ಇವರು ಜ್ಞಾನ ಗಂಗಾ ಸೆಂಟ್ರಲ್ ಸ್ಕೂಲ್ ಬೆಳ್ಳಾರೆಯಲ್ಲಿ ಒಂಬತ್ತನೆಯ ತರಗತಿಯಲ್ಲಿ ಓದುತ್ತಿದ್ದು, ಜೀನಿಯಸ್ ಚೆಸ್ ಸ್ಕೂಲ್ ನ  ಸತ್ಯ ಪ್ರಸಾದ್ ಕೋಟೆಯವರಲ್ಲಿ ತರಬೇತಿ ಪಡೆಯುತ್ತಿದ್ದಾರೆ.

ಸದ್ಯ ಇವರ Fide rating 1500 (classical)ಇದ್ದು,  ಮೂರನೇಯ ತರಗತಿಯಿಂದ ಚೆಸ್ ಆಡಲು ಆರಂಭಿಸಿದ್ದರು.  ಪುತ್ತೂರು ಜೀನಿಯಸ್ ಚೆಸ್ ಶಾಲೆಯಲ್ಲಿ ಸತ್ಯ ಪ್ರಸಾದ್ ಕೋಟೆ ಯವರಿಂದ ತರಬೇತಿ ಪಡೆಯುತ್ತಿದ್ದು ಜಿಲ್ಲಾ ಮಟ್ಟ ರಾಜ್ಯ ಮಟ್ಟದ ಹಾಗೂ ವಿವಿಧ ರಾಜ್ಯಗಳಲ್ಲಿ ರಾಷ್ಟ ಮಟ್ಟದ ಪಂದ್ಯಾಟದಲ್ಲಿ ಭಾಗವಹಿಸಿ ಹಲವು ಪ್ರಶಸ್ತಿ ಬಹುಮಾನಗಳನ್ನು ಪಡಕೊಂಡಿರುತ್ತಾರೆ. ಇವರ ಚೆಸ್ ಆಟಕ್ಕೆ ಜ್ಞಾನ ಗಂಗಾ ಸೆಂಟ್ರಲ್ ಸ್ಕೂಲ್ ಬೆಳ್ಳಾರೆ ಇದರ ಪ್ರಾಂಶುಪಾಲರ ಹಾಗೂ ಅದ್ಯಾಪಕರ ಪ್ರೋತ್ಸಾಹ ತುಂಬಾ ಉತ್ತೇಜನಕವಾಗಿರುವುದು ಸಹಕಾರಿಯಾಗಿದೆ. ಚೆಸ್ ನ ಮೂರೂ ವಿಭಾಗಗಳಲ್ಲಿ Classical, Rapid ಹಾಗೂ Blitz ನಲ್ಲಿ ಆಡಬಲ್ಲವರಾಗಿದ್ದು ಎಲ್ಲಾ ವಿಭಾಗಗಳಲ್ಲಿ Fide rating ಹೊಂದಿರುತ್ತಾರೆ.

ಇವರು ಸುಳ್ಯ ತಾಲೂಕಿನ ಎಣ್ಮೂರಿನ ಅಲೆಂಗಾರದಲ್ಲಿರುವ ರಮೇಶ್‌ ಕೋಟೆ ಹಾಗೂ ಶುಭಮಂಗಳ  ಅವರ ಪುತ್ರ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಅಂಡಮಾನಿಗೆ ಮುಂಗಾರು ಶೀಘ್ರ ಪ್ರವೇಶ ಸಾಧ್ಯತೆ : ಕೇರಳಕ್ಕೆ ಮುಂಗಾರು ಬೇಗನೆ ಆಗಮನದ ಸೂಚನೆ

ಮೇ 15 ರ ಸುಮಾರಿಗೆ ಮುಂಗಾರು ಅಂಡಮಾನ್ ಸಮುದ್ರ ಪ್ರವೇಶಿಸುವ ಸಾಧ್ಯತೆ ಇದೆ.…

22 hours ago

ಹವಾಮಾನ ವರದಿ | 14-05-2026 | ಮೇ 20-25 ರೊಳಗೆ ಕೇರಳಕ್ಕೆ ಮುಂಗಾರು ಪ್ರವೇಶ ಸಾಧ್ಯತೆ

ರಾಜ್ಯದ ಹಲವು ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯ ಮುನ್ಸೂಚನೆ ಮುಂದುವರಿದಿದೆ. ಮೇ 20-25ರೊಳಗೆ…

22 hours ago

ಹವಾಮಾನ ವರದಿ | 13-05-2026| ಕರ್ನಾಟಕದಲ್ಲಿ ಇನ್ನೂ ಕೆಲ ದಿನ ಗುಡುಗು ಸಹಿತ ಮಳೆ| ಮೇ 20-25ರೊಳಗೆ ಮುಂಗಾರು ಪ್ರವೇಶ ಸಾಧ್ಯತೆ!

ಕರ್ನಾಟಕದಲ್ಲಿ 14.05.2026ರ ಬೆಳಿಗ್ಗೆ 8 ಗಂಟೆವರೆಗಿನ ಹವಾಮಾನ ಮುನ್ಸೂಚನೆಯ ಪ್ರಕಾರ ಕರಾವಳಿ, ಮಲೆನಾಡು…

2 days ago

ಹವಾಮಾನ ವರದಿ | 12-05-2026 | ಮೇ 20ರ ಸುಮಾರಿಗೆ ಕರಾವಳಿಯಲ್ಲಿ ಮುಂಗಾರು ಮಾದರಿಯ ಮಳೆ ಸಾಧ್ಯತೆ..! |

ರಾಜ್ಯದ ಬಹುತೇಕ ಭಾಗಗಳಲ್ಲಿ ಬಿಸಿಲು ಮುಂದುವರಿದರೂ ಸಂಜೆ, ರಾತ್ರಿ ಗುಡುಗು ಸಹಿತ ಮಳೆಯ…

3 days ago

ರೋಸ್ಟೆಡ್‌ ಅಡಿಕೆ- ಸುಪ್ರೀಂ ಕೋರ್ಟ್‌ ಮಹತ್ವದ ಆದೇಶ | “ರೋಸ್ಟೆಡ್‌ ಅಡಿಕೆ” ವರ್ಗೀಕರಣಕ್ಕೆ ಮುದ್ರೆ, ಜಪ್ತಿ ಸರಕುಗಳಿಗೆ ಮಾರ್ಗಸೂಚಿ

‘ರೋಸ್ಟೆಡ್‌ ಅಡಿಕೆ’ ವರ್ಗೀಕರಣ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್‌ ಅಲಹಾಬಾದ್‌ ಹೈಕೋರ್ಟ್‌ ಆದೇಶಕ್ಕೆ ತಾತ್ಕಾಲಿಕ…

3 days ago