MIRROR FOCUS

2000 ರೂಪಾಯಿ ನೋಟು ಬದಲಾವಣೆಯ ಗಡುವು ವಿಸ್ತರಿಸಿದ ಆರ್‌ಬಿಐ | ಅ.7 ರವರೆಗೆ ಕಾಲಾವಕಾಶ |

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

2,000  ರೂಪಾಯಿಯ ನೋಟುಗಳನ್ನು ಬದಲಾಯಿಸಿಕೊಳ್ಳುವ ಗಡುವನ್ನು ಅಕ್ಟೋಬರ್ 7 ರವರೆಗೆ ಆರ್‌ಬಿಐ ವಿಸ್ತರಿಸಿದೆ.ಜನಸಾಮಾನ್ಯರು ತಮ್ಮ ನೋಟುಗಳನ್ನು 2023ರ ಸೆಪ್ಟೆಂಬರ್ 30ರವರೆಗೆ ಬ್ಯಾಂಕ್‌ಗಳಲ್ಲಿ ಬದಲಾಯಿಸಿಕೊಳ್ಳುವಂತೆ ಸೂಚಿಸಿತ್ತು. ಇದೀಗ ಭಾರತೀಯ ರಿಸರ್ವ್ ಬ್ಯಾಂಕ್ ₹2000 ನೋಟುಗಳ ವಿನಿಮಯದ ಗಡುವನ್ನು ಅಕ್ಟೋಬರ್ 7 ರವರೆಗೆ ವಿಸ್ತರಿಸಿದೆ.

Advertisement

ಮೇ 19 ರಂದು  2000 ರೂಪಾಯಿಯ ನೋಟುಗಳನ್ನು ಚಲಾವಣೆಯಿಂದ ಹಿಂತೆಗೆದುಕೊಳ್ಳುವುದಾಗಿ ಆರ್‌ಬಿಐ ಘೋಷಿಸಿತ್ತು. ಜನಸಾಮಾನ್ಯರು ತಮ್ಮ ನೋಟುಗಳನ್ನು ಸೆಪ್ಟೆಂಬರ್ 30, 2023 ರೊಳಗೆ ಬದಲಾಯಿಸಿಕೊಳ್ಳುವಂತೆ ಸೂಚಿಸಿತ್ತು. ಇದೀಗ ಗಡುವನ್ನು ವಿಸ್ತರಣೆ ಮಾಡಿದೆ.

ಆರ್‌ಬಿಐ ಅಂಕಿಅಂಶಗಳ ಪ್ರಕಾರ, ಮೇ 19 ರಂದು ಒಟ್ಟು ₹3.56 ಲಕ್ಷ ಕೋಟಿ ಮೌಲ್ಯದ ₹2000 ನೋಟುಗಳು ಚಲಾವಣೆಯಲ್ಲಿದ್ದವು. ಬ್ಯಾಂಕ್‌ಗಳು ಸೆಪ್ಟೆಂಬರ್ 29 ರ ಹೊತ್ತಿಗೆ ₹3.42 ಲಕ್ಷ ಕೋಟಿ ಮೌಲ್ಯದ ₹2000 ನೋಟುಗಳನ್ನು ಸ್ವೀಕರಿಸಿವೆ. ಅಂದರೆ ₹0.14 ಲಕ್ಷ ಕೋಟಿ ಮೌಲ್ಯದ ನೋಟುಗಳು ಇನ್ನೂ ಚಲಾವಣೆಯಲ್ಲಿವೆ.

ಮೇ 19ಕ್ಕೆ ಚಲಾವಣೆಯಲ್ಲಿದ್ದ ₹2000 ನೋಟುಗಳಲ್ಲಿ ಶೇ.96ರಷ್ಟು ನೋಟುಗಳು ವಾಪಸಾಗಿವೆ ಎಂದು ಆರ್‌ಬಿಐ ಪ್ರಕಟಣೆಯಲ್ಲಿ ತಿಳಿಸಿದೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹವಾಮಾನ ವರದಿ | 25-04-2025 | ಅಲ್ಲಲ್ಲಿ ಗುಡುಗು ಸಹಿತ ಸಾಮಾನ್ಯ ಮಳೆ |

ಮುನ್ಸೂಚನೆಯಂತೆ ಮೇ 1 ರಿಂದ ದಕ್ಷಿಣ ಒಳನಾಡಿನ ಅಲ್ಲಲ್ಲಿ ಮಳೆ ಆರಂಭವಾಗುವ ಸಾಧ್ಯತೆಗಳಿವೆ.

2 hours ago

ಒತ್ತುವರಿಯಾಗಿರುವ  ಕೆರೆಗಳನ್ನು ಮುಲಾಜಿಲ್ಲದೆ ತೆರವುಗೊಳಿಸಲು ಮುಖ್ಯಮಂತ್ರಿ ಸೂಚನೆ

ಖಾಸಗಿಯವರಿಂದ ಒತ್ತುವರಿಯಾಗಿರುವ  ಪ್ರದೇಶವನ್ನು ಯಾವುದೇ ಮುಲಾಜಿಲ್ಲದೆ ತೆರವುಗೊಳಿಸಲು ಮುಖ್ಯಮಂತ್ರಿಗಳು ಅಧಿಕಾರಿಗಳಿಗೆ ಸೂಚಿಸಿದ್ದಾರೆ. ಮುಖ್ಯಮಂತ್ರಿ…

9 hours ago

ಭಾರತದಿಂದ ಅಫ್ಘಾನಿಸ್ತಾನಕ್ಕೆ 4.8 ಟನ್ ಜೀವರಕ್ಷಕ ಲಸಿಕೆ ರವಾನೆ

ಭಾರತವು 4.8 ಟನ್ ಲಸಿಕೆಗಳನ್ನು ಅಫ್ಘಾನಿಸ್ತಾನಕ್ಕೆಕಳುಹಿಸುವ ಮೂಲಕ ಮಾನವೀಯ ನೆರವು ನೀಡಿದೆ. ಇದರಲ್ಲಿ…

9 hours ago

ಭ್ರಷ್ಟಾಚಾರದ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ  | ಉಪಲೋಕಾಯುಕ್ತ ಬಿ. ವೀರಪ್ಪ ಎಚ್ಚರಿಕೆ

ರಾಜ್ಯದಲ್ಲಿ ಲೋಕಾಯುಕ್ತ ಸಂಸ್ಥೆಯನ್ನು ಬಲಪಡಿಸುವ ನಿಟ್ಟಿನಲ್ಲಿ ರಾಜ್ಯಾದ್ಯಂತ ಪ್ರವಾಸ ಕೈಗೊಂಡಿದ್ದು, ಭ್ರಷ್ಟಾಚಾರದ ವಿರುದ್ಧ…

9 hours ago

ಶುಕ್ರ ಮತ್ತು ರಾಹು ಮೀನ ರಾಶಿಯಲ್ಲಿ ಸಂಯೋಗ | 5 ರಾಶಿಚಕ್ರಗಳಲ್ಲಿ ವಿಶೇಷ ಪ್ರಭಾವ |

ಹೆಚ್ಚಿನ ಮಾಹಿತಿಗಾಗಿ ರಾಯರ ಪರಮಭಕ್ತರಾದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490

9 hours ago

ಸಂಜೀವಿನಿ ಸ್ವ ಸಹಾಯ ಸಂಘಗಳ ಸದಸ್ಯರ ಉತ್ಪನ್ನಗಳ ಪ್ರದರ್ಶನ ಮಾರಾಟ ಮೇಳ | ಜಿಲ್ಲೆಯ ಅತ್ಯುತ್ತಮ ಕೃಷಿ ಸಖಿ ಪ್ರಶಸ್ತಿ ಸಂಪಾಜೆ ಮೋಹಿನಿ ವಿಶ್ವನಾಥ್ ಅವರಿಗೆ

ಜಿಲ್ಲಾಡಳಿತ ಜಿಲ್ಲಾ ಪಂಚಾಯತ್, ಕೌಶಲ್ಯಾಭಿವೃದ್ಧಿ ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ, ಸಂಜೀವಿನಿ ಕರ್ನಾಟಕ…

19 hours ago