Advertisement
MIRROR FOCUS

2000 ರೂಪಾಯಿ ನೋಟು ಬದಲಾವಣೆಯ ಗಡುವು ವಿಸ್ತರಿಸಿದ ಆರ್‌ಬಿಐ | ಅ.7 ರವರೆಗೆ ಕಾಲಾವಕಾಶ |

Share

2,000  ರೂಪಾಯಿಯ ನೋಟುಗಳನ್ನು ಬದಲಾಯಿಸಿಕೊಳ್ಳುವ ಗಡುವನ್ನು ಅಕ್ಟೋಬರ್ 7 ರವರೆಗೆ ಆರ್‌ಬಿಐ ವಿಸ್ತರಿಸಿದೆ.ಜನಸಾಮಾನ್ಯರು ತಮ್ಮ ನೋಟುಗಳನ್ನು 2023ರ ಸೆಪ್ಟೆಂಬರ್ 30ರವರೆಗೆ ಬ್ಯಾಂಕ್‌ಗಳಲ್ಲಿ ಬದಲಾಯಿಸಿಕೊಳ್ಳುವಂತೆ ಸೂಚಿಸಿತ್ತು. ಇದೀಗ ಭಾರತೀಯ ರಿಸರ್ವ್ ಬ್ಯಾಂಕ್ ₹2000 ನೋಟುಗಳ ವಿನಿಮಯದ ಗಡುವನ್ನು ಅಕ್ಟೋಬರ್ 7 ರವರೆಗೆ ವಿಸ್ತರಿಸಿದೆ.

ಮೇ 19 ರಂದು  2000 ರೂಪಾಯಿಯ ನೋಟುಗಳನ್ನು ಚಲಾವಣೆಯಿಂದ ಹಿಂತೆಗೆದುಕೊಳ್ಳುವುದಾಗಿ ಆರ್‌ಬಿಐ ಘೋಷಿಸಿತ್ತು. ಜನಸಾಮಾನ್ಯರು ತಮ್ಮ ನೋಟುಗಳನ್ನು ಸೆಪ್ಟೆಂಬರ್ 30, 2023 ರೊಳಗೆ ಬದಲಾಯಿಸಿಕೊಳ್ಳುವಂತೆ ಸೂಚಿಸಿತ್ತು. ಇದೀಗ ಗಡುವನ್ನು ವಿಸ್ತರಣೆ ಮಾಡಿದೆ.

ಆರ್‌ಬಿಐ ಅಂಕಿಅಂಶಗಳ ಪ್ರಕಾರ, ಮೇ 19 ರಂದು ಒಟ್ಟು ₹3.56 ಲಕ್ಷ ಕೋಟಿ ಮೌಲ್ಯದ ₹2000 ನೋಟುಗಳು ಚಲಾವಣೆಯಲ್ಲಿದ್ದವು. ಬ್ಯಾಂಕ್‌ಗಳು ಸೆಪ್ಟೆಂಬರ್ 29 ರ ಹೊತ್ತಿಗೆ ₹3.42 ಲಕ್ಷ ಕೋಟಿ ಮೌಲ್ಯದ ₹2000 ನೋಟುಗಳನ್ನು ಸ್ವೀಕರಿಸಿವೆ. ಅಂದರೆ ₹0.14 ಲಕ್ಷ ಕೋಟಿ ಮೌಲ್ಯದ ನೋಟುಗಳು ಇನ್ನೂ ಚಲಾವಣೆಯಲ್ಲಿವೆ.

ಮೇ 19ಕ್ಕೆ ಚಲಾವಣೆಯಲ್ಲಿದ್ದ ₹2000 ನೋಟುಗಳಲ್ಲಿ ಶೇ.96ರಷ್ಟು ನೋಟುಗಳು ವಾಪಸಾಗಿವೆ ಎಂದು ಆರ್‌ಬಿಐ ಪ್ರಕಟಣೆಯಲ್ಲಿ ತಿಳಿಸಿದೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹವಾಮಾನ ವರದಿ | 03-09-2026 | ಕರಾವಳಿ–ಮಲೆನಾಡಿನಲ್ಲಿ ಮತ್ತೆ ಮಳೆಯ ಸಾಧ್ಯತೆ…?

ಕರ್ನಾಟಕದ ಹಲವು ಭಾಗಗಳಲ್ಲಿ ಸೆ.5ರಿಂದ ಕೆಲವು ದಿನ ಮಳೆಯ ತೀವ್ರತೆ ಕಡಿಮೆಯಾಗುವ ಲಕ್ಷಣಗಳಿವೆ.…

17 hours ago

ಹಿಮಾಲಯದಲ್ಲಿ ಹಿಮ ಕರಗಿದರೆ ಅದರ ಪರಿಣಾಮ ಎಲ್ಲಿಗೆ ತಲುಪುತ್ತದೆ? – ಹಿಮಾಲಯದ ದುರಂತದ ಬಳಿಕ ನೇಪಾಳದ ಪ್ರಧಾನಿ ಎಚ್ಚರಿಕೆ

ಹಿಮನದಿ ಕುಸಿತದಿಂದ ಸಂಭವಿಸಿದ ಭೀಕರ ಪ್ರವಾಹದ ಬಳಿಕ ನೇಪಾಳ ಪ್ರಧಾನಿ ಬಾಲೆಂದ್ರ ಶಾ…

24 hours ago

ನಾವು ತಿನ್ನುವ ಆಹಾರದಲ್ಲಿ ಕೀಟನಾಶಕ – ಕರ್ನಾಟಕದಲ್ಲಿ 9,176 ಮಾದರಿಗಳಲ್ಲಿ 334 ಮಿತಿ ಮೀರಿವೆ – ದೇಶದ ಅಂಕಿ ಏನು ಹೇಳುತ್ತದೆ?

2023ರಿಂದ 2026ರವರೆಗೆ ದೇಶದ 23 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ ಪರೀಕ್ಷಿಸಿದ 70,652…

1 day ago

ಒಂದೇ ತೆಂಗಿನ ಮರದಿಂದ ₹10,000 ಆದಾಯ? ಮೌಲ್ಯವರ್ಧನೆಗೆ ಹೊಸ ದಾರಿ ತೋರಿದ ವಿಶ್ವ ತೆಂಗು ದಿನ

ಕಾಸರಗೋಡಿನ ICAR-CPCRIನಲ್ಲಿ ವಿಶ್ವ ತೆಂಗು ದಿನ–2026 ಆಚರಿಸಿ, ಹವಾಮಾನ ಅನಿಶ್ಚಿತತೆಯ ನಡುವೆ ತೆಂಗು…

1 day ago

ಹವಾಮಾನ ವರದಿ | 02-09-2026 | ಉತ್ತರ ಭಾರತದ ವಾಯುಭಾರ ಕುಸಿತ ದುರ್ಬಲವಾಗುವ ಸಾಧ್ಯತೆ

ಕರಾವಳಿಯಲ್ಲಿ ಮುಂದಿನ ಎರಡು ದಿನ ಅಲ್ಲಲ್ಲಿ ಸಾಮಾನ್ಯ ಮಳೆಯಾದರೂ ಜೋರು ಮಳೆಯ ಸಾಧ್ಯತೆ…

2 days ago

ಕೃಷಿಗೆ ಸಾಲ ಹೆಚ್ಚಿಸಿ – ಅಲ್ಪಾವಧಿ ಮಾತ್ರವಲ್ಲ, ದೀರ್ಘಾವಧಿ ಸಾಲವೂ ಬೇಕು – ಬ್ಯಾಂಕ್‌ಗಳಿಗೆ ನಿರ್ಮಲಾ ಸೀತಾರಾಮನ್ ಸೂಚನೆ

ಕೃಷಿ ಉತ್ಪಾದನೆ ಹೆಚ್ಚಿಸಲು ಬ್ಯಾಂಕ್‌ಗಳು ರೈತರಿಗೆ ಹೆಚ್ಚಿನ ಸಾಂಸ್ಥಿಕ ಸಾಲ ನೀಡಬೇಕು ಎಂದು…

2 days ago