ಭಾರತೀಯ ರಿಸರ್ವ್ ಬ್ಯಾಂಕ್ (RBI) ಗವರ್ನರ್ ಶಕ್ತಿಕಾಂತ್ ದಾಸ್ ಅವರು ಬುಧವಾರ ನಿಗದಿಯಾಗದ ಸಭೆಯಲ್ಲಿ ಹಣಕಾಸು ನೀತಿ ಸಮಿತಿ (MPC) ಒಮ್ಮತದಿಂದ 40 ಬಿಪಿಎಸ್ ದರಗಳನ್ನು ಹೆಚ್ಚಿಸಿದೆ ಎಂದು ಹೇಳಿದರು. ಸುದ್ದಿಗೋಷ್ಠಿ ಉದ್ದೇಶಿಸಿ ಮಾತನಾಡುತ್ತಿರುವ ಆರ್ಬಿಐ ಗವರ್ನರ್, ಮೇ 2 ಮತ್ತು ಮೇ 4ರ ನಡುವೆ ಎಂಪಿಸಿ ಆಫ್-ಸೈಕಲ್ ಸಭೆಯನ್ನ ನಡೆಸಿತು.
ಆರ್ಬಿಐ ತನ್ನ ಏಪ್ರಿಲ್ ಹಣಕಾಸು ನೀತಿಯಲ್ಲಿ ತನ್ನ ಬೆಂಚ್ಮಾರ್ಕ್ ಸಾಲದ ದರವನ್ನ ದಾಖಲೆಯ ಕಡಿಮೆ ಮಟ್ಟದಲ್ಲಿ ಇರಿಸಿತ್ತು, ರೆಪೊ ದರವನ್ನು 4%ಕ್ಕೆ ಬದಲಾಯಿಸದೆ ಇರಿಸಿತ್ತು. ಎಂಪಿಸಿ ತನ್ನ ಹೊಂದಾಣಿಕೆಯ ನಿಲುವನ್ನು ಉಳಿಸಿಕೊಳ್ಳಲು ಆಯ್ಕೆ ಮಾಡಿಕೊಂಡಿತ್ತು. ಆದ್ರೆ, ‘ಹಣದುಬ್ಬರವು ಬೆಳವಣಿಗೆಯನ್ನು ಬೆಂಬಲಿಸುವ ಗುರಿಯೊಳಗೆ ಉಳಿಯುವುದನ್ನು ಖಚಿತಪಡಿಸಿಕೊಳ್ಳಲು ಹೊಂದಾಣಿಕೆಯನ್ನು ಹಿಂತೆಗೆದುಕೊಳ್ಳುವುದರ ಬಗ್ಗೆ ಗಮನ ಹರಿಸಲು ಸರ್ವಾನುಮತದಿಂದ ಮತ ಚಲಾಯಿಸಿತ್ತು.
ಭಾರತದಲ್ಲಿ ಚಿಲ್ಲರೆ ಹಣದುಬ್ಬರವು ಮಾರ್ಚ್ನಲ್ಲಿ 17 ತಿಂಗಳ ಗರಿಷ್ಠ ಮಟ್ಟಕ್ಕೆ ಏರಿದ್ದು, ಆಹಾರ ಮತ್ತು ತಯಾರಾದ ವಸ್ತುಗಳ ಬೆಲೆಗಳಲ್ಲಿ ನಿರೀಕ್ಷೆಗಿಂತ ಏರಿಕೆ ಕಂಡುಬಂದಿದೆ ಎಂದು ಅಧಿಕೃತ ಅಂಕಿಅಂಶಗಳು ತಿಳಿಸಿವೆ.
ಕಾವೇರಿ ಜಲಾನಯನ ಪ್ರದೇಶದಲ್ಲಿ ಭಾರೀ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಕಾವೇರಿ ನದಿ ಮೈದುಂಬಿ ಹರಿಯುತ್ತಿದೆ.…
ಕಾಸರಗೋಡು ಜಿಲ್ಲೆಯ ನೆಟ್ಟಣಿಗೆ ಬಳಿಯ ಕೃಷಿ ಕಾರ್ಮಿಕ ರಾಮಕೃಷ್ಣ ಇಳಂತೋಡಿ ಅವರು ಅಡಿಕೆಗೆ…
ಕೃಷಿ ಬೆಳವಣಿಗೆಯ ಬಗ್ಗೆ ಮಿಜೋರಾಂ ಸರ್ಕಾರವು ಆದ್ಯತೆ ನೀಡುತ್ತಿದೆ. ಕಳೆದ ಕೆಲವು ಸಮಯಗಳಿಂದ…
ಬಂಗಾಳಕೊಲ್ಲಿಯ ತಿರುಗುವಿಕೆಯು ಉತ್ತರ ಪ್ರದೇಶ ತಲುಪಿದ್ದು ಅಲ್ಲಿ ಶಿಥಿಲಗೊಳ್ಳುವ ಲಕ್ಷಣಗಳಿವೆ. ಇಂಡೋನೇಷ್ಯಾದಲ್ಲಿ ಉದ್ರೇಕಗೊಂಡಿರುವ ಜ್ವಾಲಾಮುಖಿಯು…
ಮಂಗಳೂರು-ಬೆಂಗಳೂರು ರೈಲು ಮಾರ್ಗದ ಶಿರಾಡಿ ಘಾಟಿಯ ಎಡಕುಮಾರಿ ಮತ್ತು ಶಿರಿಬಾಗಿಲು ನಿಲ್ದಾಣಗಳ ನಡುವೆ…
ಅಡಿಕೆ ಬೆಳೆಯಲ್ಲಿನ ವಿವಿಧ ಸಮಸ್ಯೆ ಭಾರತದಲ್ಲಿ ಮಾತ್ರವಲ್ಲ, ವಿವಿಧ ದೇಶಗಳಲ್ಲೂ ಈಗ ಕಾಣಿಸಿಕೊಳ್ಳಲು…