ಭಾರತೀಯ ರಿಸರ್ವ್ ಬ್ಯಾಂಕ್ (RBI) ಗವರ್ನರ್ ಶಕ್ತಿಕಾಂತ್ ದಾಸ್ ಅವರು ಬುಧವಾರ ನಿಗದಿಯಾಗದ ಸಭೆಯಲ್ಲಿ ಹಣಕಾಸು ನೀತಿ ಸಮಿತಿ (MPC) ಒಮ್ಮತದಿಂದ 40 ಬಿಪಿಎಸ್ ದರಗಳನ್ನು ಹೆಚ್ಚಿಸಿದೆ ಎಂದು ಹೇಳಿದರು. ಸುದ್ದಿಗೋಷ್ಠಿ ಉದ್ದೇಶಿಸಿ ಮಾತನಾಡುತ್ತಿರುವ ಆರ್ಬಿಐ ಗವರ್ನರ್, ಮೇ 2 ಮತ್ತು ಮೇ 4ರ ನಡುವೆ ಎಂಪಿಸಿ ಆಫ್-ಸೈಕಲ್ ಸಭೆಯನ್ನ ನಡೆಸಿತು.
ಆರ್ಬಿಐ ತನ್ನ ಏಪ್ರಿಲ್ ಹಣಕಾಸು ನೀತಿಯಲ್ಲಿ ತನ್ನ ಬೆಂಚ್ಮಾರ್ಕ್ ಸಾಲದ ದರವನ್ನ ದಾಖಲೆಯ ಕಡಿಮೆ ಮಟ್ಟದಲ್ಲಿ ಇರಿಸಿತ್ತು, ರೆಪೊ ದರವನ್ನು 4%ಕ್ಕೆ ಬದಲಾಯಿಸದೆ ಇರಿಸಿತ್ತು. ಎಂಪಿಸಿ ತನ್ನ ಹೊಂದಾಣಿಕೆಯ ನಿಲುವನ್ನು ಉಳಿಸಿಕೊಳ್ಳಲು ಆಯ್ಕೆ ಮಾಡಿಕೊಂಡಿತ್ತು. ಆದ್ರೆ, ‘ಹಣದುಬ್ಬರವು ಬೆಳವಣಿಗೆಯನ್ನು ಬೆಂಬಲಿಸುವ ಗುರಿಯೊಳಗೆ ಉಳಿಯುವುದನ್ನು ಖಚಿತಪಡಿಸಿಕೊಳ್ಳಲು ಹೊಂದಾಣಿಕೆಯನ್ನು ಹಿಂತೆಗೆದುಕೊಳ್ಳುವುದರ ಬಗ್ಗೆ ಗಮನ ಹರಿಸಲು ಸರ್ವಾನುಮತದಿಂದ ಮತ ಚಲಾಯಿಸಿತ್ತು.
ಭಾರತದಲ್ಲಿ ಚಿಲ್ಲರೆ ಹಣದುಬ್ಬರವು ಮಾರ್ಚ್ನಲ್ಲಿ 17 ತಿಂಗಳ ಗರಿಷ್ಠ ಮಟ್ಟಕ್ಕೆ ಏರಿದ್ದು, ಆಹಾರ ಮತ್ತು ತಯಾರಾದ ವಸ್ತುಗಳ ಬೆಲೆಗಳಲ್ಲಿ ನಿರೀಕ್ಷೆಗಿಂತ ಏರಿಕೆ ಕಂಡುಬಂದಿದೆ ಎಂದು ಅಧಿಕೃತ ಅಂಕಿಅಂಶಗಳು ತಿಳಿಸಿವೆ.
ಹಿಮನದಿ ಕುಸಿತದಿಂದ ಸಂಭವಿಸಿದ ಭೀಕರ ಪ್ರವಾಹದ ಬಳಿಕ ನೇಪಾಳ ಪ್ರಧಾನಿ ಬಾಲೆಂದ್ರ ಶಾ…
2023ರಿಂದ 2026ರವರೆಗೆ ದೇಶದ 23 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ ಪರೀಕ್ಷಿಸಿದ 70,652…
ಕಾಸರಗೋಡಿನ ICAR-CPCRIನಲ್ಲಿ ವಿಶ್ವ ತೆಂಗು ದಿನ–2026 ಆಚರಿಸಿ, ಹವಾಮಾನ ಅನಿಶ್ಚಿತತೆಯ ನಡುವೆ ತೆಂಗು…
ಕರಾವಳಿಯಲ್ಲಿ ಮುಂದಿನ ಎರಡು ದಿನ ಅಲ್ಲಲ್ಲಿ ಸಾಮಾನ್ಯ ಮಳೆಯಾದರೂ ಜೋರು ಮಳೆಯ ಸಾಧ್ಯತೆ…
ಕೃಷಿ ಉತ್ಪಾದನೆ ಹೆಚ್ಚಿಸಲು ಬ್ಯಾಂಕ್ಗಳು ರೈತರಿಗೆ ಹೆಚ್ಚಿನ ಸಾಂಸ್ಥಿಕ ಸಾಲ ನೀಡಬೇಕು ಎಂದು…
E20 ನೀತಿಯಡಿ ಎಥನಾಲ್ ಉತ್ಪಾದನೆಗೆ ಜೋಳ ಸೇರಿದಂತೆ ಧಾನ್ಯಗಳ ಬೇಡಿಕೆ ಹೆಚ್ಚುತ್ತಿರುವ ನಡುವೆ…