Advertisement
ಪ್ರಮುಖ

ಮರು ಜಾರಿಗೆ ಬಂದ `ಕೃಷಿ ಭಾಗ್ಯ’ ಯೋಜನೆ | 24 ಜಿಲ್ಲೆಗಳ 106 ತಾಲೂಕುಗಳಲ್ಲಿ ಅನುಷ್ಠಾನ ಮಾಡಲು ಮಾರ್ಗಸೂಚಿ ಹಾಗೂ ಕ್ರಿಯಾ ಯೋಜನೆ – ಎನ್. ಚಲುವರಾಯಸ್ವಾಮಿ

Share

ಸರ್ಕಾರಗಳು(Govt) ರೈತರ(Farmer) ಹಿತ ಕಾಪಾಡಿದರಷ್ಟೆ ಒಳ್ಳೆಯ ಬೆಳೆ(Crop) ತೆಗೆಯಲು ಸಾಧ್ಯ. ರೈತ ತಲೆ ಎತ್ತಿ ಬದುಕಲು ಸಾಧ್ಯ. ಇದೀಗ ಕರ್ನಾಟಕದ(Karnataka) ಮಳೆಯಾಶ್ರಿತ ಪ್ರದೇಶಗಳಲ್ಲಿ ಸುಸ್ಥಿರ ಕೃಷಿಗೆ (Agriculture) ಮಳೆ ನೀರನ್ನು(Rain Water) ಒದಗಿಸಿ ಕೃಷಿ ಉತ್ಪಾದನೆ ಹೆಚ್ಚಿಸಲು 2023-24ನೇ ಸಾಲಿನ ಆಯವ್ಯಯದಲ್ಲಿ(Budget) ರಾಜ್ಯದ 24 ಜಿಲ್ಲೆಗಳ 106 ತಾಲೂಕುಗಳಲ್ಲಿ (2014ರ ಅವಿಭಜಿತ ತಾಲೂಕುಗಳು) ಕೃಷಿ ಭಾಗ್ಯ ಯೋಜನೆ (Krishi Bhagya Yojana) ಮರು ಜಾರಿಗೊಳಿಸಿದೆ ಎಂದು ಕೃಷಿ ಸಚಿವ ಎನ್. ಚಲುವರಾಯಸ್ವಾಮಿ (N Chaluvarayaswamy) ತಿಳಿಸಿದರು.

ಕರ್ನಾಟಕ ವಿಧಾನಸಭೆಯಲ್ಲಿ ಶಿರಹಟ್ಟಿ ಶಾಸಕರಾದ ಡಾ. ಚಂದ್ರು ಲಮಾಣಿ ಅವರ ಚುಕ್ಕೆ ಗುರುತಿನ ಪ್ರಶ್ನೆಗೆ ಉತ್ತರಿಸಿದ ಅವರು, ರಾಜ್ಯ ಮಳೆಯಾಶ್ರಿತ ಕೃಷಿ ನೀತಿ, 2014ರ ಅನ್ವಯ 100 ಕೋಟಿ ರೂ.ಗಳ ಅನುದಾನದಲ್ಲಿ ಸದರಿ ಯೋಜನೆಯನ್ನು 2023-24ನೇ ಸಾಲಿನಲ್ಲಿ ಪ್ಯಾಕೇಜ್ ಮಾದರಿಯಲ್ಲಿ (ಕ್ಷೇತ್ರ ಬದು, ಕೃಷಿ ಹೊಂಡ, ಪಾಲಿಥೀನ್ ಹೊದಿಕೆ, ತಂತಿಬೇಲಿ, ಪಂಪ್ ಸೆಟ್, ಸೂಕ್ಷ್ಮ ನೀರಾವರಿ ಘಟಕಗಳು) ಮಾರ್ಗಸೂಚಿ ಹಾಗೂ ಕ್ರಿಯಾ ಯೋಜನೆಯನ್ವಯ ಕಾರ್ಯಕ್ರಮ ಅನುಷ್ಠಾನ ಮಾಡಲಾಗುತ್ತಿದೆ ಎಂದು ಮಾಹಿತಿ ನೀಡಿದರು.

ಮುಂಗಾರು 2023ನೇ ಸಾಲಿನ ಬರಪೀಡಿತ ತಾಲೂಕುಗಳ ಪಟ್ಟಿಯಲ್ಲಿ ಶಿರಹಟ್ಟಿ ಮತ್ತು ಲಕ್ಷ್ಮೇಶ್ವರ ತಾಲೂಕುಗಳು ಸೇರ್ಪಡೆಯಾಗಿದ್ದರೂ ಸಹ 2023-24ನೇ ಸಾಲಿನಲ್ಲಿ ರಾಜ್ಯ ಮಳೆಯಾಶ್ರಿತ ಕೃಷಿ ನೀತಿ, 2014ರ ಅನ್ವಯ ಕೃಷಿ ಭಾಗ್ಯ ಯೋಜನೆ ರಾಜ್ಯದ ಒಣ ಕೃಷಿ ಹವಾಮಾನ ವಲಯಗಳಲ್ಲಿ ಇರುವ ತಾಲೂಕುಗಳಲ್ಲಿ ಮಾತ್ರ ಅನುಷ್ಠಾನ ಮಾಡಲಾಗುತ್ತಿದೆ. ಹಾಗಾಗಿ ಗದಗ ಜಿಲ್ಲೆಯ ಶಿರಹಟ್ಟಿ ಮತ್ತು ಲಕ್ಷ್ಮೇಶ್ವರ ತಾಲೂಕುಗಳು ಒಣ ಕೃಷಿ ಹವಾಮಾನ ವಲಯದಲ್ಲಿ ಇಲ್ಲದಿರುವ ಕಾರಣ ಸೇರ್ಪಡೆ ಮಾಡಲಾಗಿಲ್ಲ ಎಂದು ತಿಳಿಸಿದರು.

2023-24ನೇ ಸಾಲಿನ ಆಯವ್ಯಯದಲ್ಲಿ ಕೃಷಿ ಭಾಗ್ಯ ಯೋಜನೆಯನ್ನು ಮರು ಜಾರಿಗೊಳಿಸಲಾಗಿದ್ದು, ರಾಜ್ಯದ ಮಳೆಯಾಶ್ರಿತ ಕೃಷಿ ನೀತಿ, 2014ರ ಅನ್ವಯ ರಾಜ್ಯದ 24 ಜಿಲ್ಲೆ 106 ತಾಲೂಕುಗಳಲ್ಲಿ (2014ರ ಅವಿಭಜಿತ ತಾಲೂಕುಗಳು) ಅನುಷ್ಠಾನ ಮಾಡಲು ಮಾರ್ಗಸೂಚಿ ಹಾಗೂ ಕ್ರಿಯಾ ಯೋಜನೆಯನ್ನು ಈಗಾಗಲೇ ಜಿಲ್ಲೆಗಳಿಗೆ ನೀಡಲಾಗಿದೆ. ಅದರಂತೆ ಕಾರ್ಯಕ್ರಮ ಅನುಷ್ಠಾನ ಮಾಡಲಾಗುತ್ತಿದೆ ಎಂದು ಹೇಳಿದರು. ಪ್ರಸಕ್ತ ಸಾಲಿನ ಆರ್ಥಿಕ ವರ್ಷಾಂತ್ಯಕ್ಕೆ ಕೇವಲ ಒಂದು ತಿಂಗಳು ಬಾಕಿ ಇದ್ದು, ಈ ಹಂತದಲ್ಲಿ ಯಾವುದೇ ಸೇರ್ಪಡೆ/ಬದಲಾವಣೆ ಹಾಗೂ ಅದರಂತೆಯೇ ಅನುಷ್ಠಾನ ಕಷ್ಟಸಾಧ್ಯವಾಗಿರುತ್ತದೆ ಎಂದು ತಿಳಿಸಿದರು.

  • ಅಂತರ್ಜಾಲ ಮಾಹಿತಿ

In the 2023-24 budget, Krishi Bhagya Yojana has been re-implemented in 106 taluks (undivided taluks of 2014) of 24 districts of the state to increase agricultural production by providing rain water for sustainable agriculture in the rain-fed areas of Karnataka. Agriculture Minister N. N Chaluvarayaswamy said.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಕೇಂದ್ರ ಕೃಷಿ ಸಚಿವರನ್ನು ಭೇಟಿಯಾದ ಕ್ಯಾಂಪ್ಕೋ ನಿಯೋಗ – ಅಡಿಕೆ ಹಾನಿಕಾರಕ ಕುರಿತ ಸಂಶೋಧನೆ, ಎಲೆಚುಕ್ಕೆ ರೋಗ ನಿಯಂತ್ರಣ ಕುರಿತು ಚರ್ಚೆ

ಅಡಿಕೆಯ ಆರೋಗ್ಯ ಸುರಕ್ಷತೆ ಮತ್ತು ಎಲೆಚುಕ್ಕೆ ರೋಗ ನಿಯಂತ್ರಣ ಕುರಿತು ಕ್ಯಾಂಪ್ಕೋ ನಿಯೋಗವು…

1 hour ago

ಹವಾಮಾನ ವರದಿ | 10-06-2026 | ಕರ್ನಾಟಕದಲ್ಲಿ ಮುಂಗಾರು ದುರ್ಬಲ – ಮುಂದಿನ 10 ದಿನ ಭಾರೀ ಮಳೆ ಸಾಧ್ಯತೆ ಕಡಿಮೆ, ಅಲ್ಲಲ್ಲಿ ಮಾತ್ರ ಮಳೆ

ರಾಜ್ಯದಲ್ಲಿ ಮುಂಗಾರು ದುರ್ಬಲಗೊಂಡಿದ್ದು ಮುಂದಿನ 10 ದಿನಗಳವರೆಗೆ ಭಾರೀ ಮಳೆಯ ಸಾಧ್ಯತೆ ಕಡಿಮೆ…

1 hour ago

ರಬ್ಬರ್ ಬೆಲೆ ಇತಿಹಾಸದಲ್ಲೇ ದಾಖಲೆ- ಕೆ.ಜಿಗೆ ₹263 ತಲುಪಿದ ರಬ್ಬರ್ ಧಾರಣೆ..!

ನೈಸರ್ಗಿಕ ರಬ್ಬರ್ ಬೆಲೆ ಪ್ರತಿ ಕೆ.ಜಿಗೆ ₹263 ತಲುಪಿ ಹೊಸ ದಾಖಲೆ ನಿರ್ಮಿಸಿದೆ.…

4 hours ago

₹2.34 ಕೋಟಿ ಮೌಲ್ಯದ ಅಡಿಕೆ ಜಪ್ತಿ – ಶಿವಮೊಗ್ಗದ 8 ಮಂದಿಯ ವಿರುದ್ಧ ಕೇಸ್..!

ಮಹಾರಾಷ್ಟ್ರದ ಹಿಂಗೋಲಿಯಲ್ಲಿ ₹2.34 ಕೋಟಿ ಮೌಲ್ಯದ 88,544 ಕೆ.ಜಿ. ಅಡಿಕೆಯನ್ನು ಆಹಾರ ಸುರಕ್ಷತಾ…

9 hours ago

ಹಲಸು ಅಭಿವೃದ್ಧಿಗೆ ರಾಷ್ಟ್ರೀಯ ಮಂಡಳಿ ಸ್ಥಾಪಿಸಲು ಮಾಜಿ ಪ್ರಧಾನಿ ದೇವೇ ಗೌಡ ಒತ್ತಾಯ

ಬೆಂಗಳೂರು ಹಣ್ಣು ಮೇಳಕ್ಕೆ ಭೇಟಿ ನೀಡಿದ ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡ ಅವರು…

10 hours ago