Advertisement
ಪ್ರಮುಖ

ಮರು ಜಾರಿಗೆ ಬಂದ `ಕೃಷಿ ಭಾಗ್ಯ’ ಯೋಜನೆ | 24 ಜಿಲ್ಲೆಗಳ 106 ತಾಲೂಕುಗಳಲ್ಲಿ ಅನುಷ್ಠಾನ ಮಾಡಲು ಮಾರ್ಗಸೂಚಿ ಹಾಗೂ ಕ್ರಿಯಾ ಯೋಜನೆ – ಎನ್. ಚಲುವರಾಯಸ್ವಾಮಿ

Share

ಸರ್ಕಾರಗಳು(Govt) ರೈತರ(Farmer) ಹಿತ ಕಾಪಾಡಿದರಷ್ಟೆ ಒಳ್ಳೆಯ ಬೆಳೆ(Crop) ತೆಗೆಯಲು ಸಾಧ್ಯ. ರೈತ ತಲೆ ಎತ್ತಿ ಬದುಕಲು ಸಾಧ್ಯ. ಇದೀಗ ಕರ್ನಾಟಕದ(Karnataka) ಮಳೆಯಾಶ್ರಿತ ಪ್ರದೇಶಗಳಲ್ಲಿ ಸುಸ್ಥಿರ ಕೃಷಿಗೆ (Agriculture) ಮಳೆ ನೀರನ್ನು(Rain Water) ಒದಗಿಸಿ ಕೃಷಿ ಉತ್ಪಾದನೆ ಹೆಚ್ಚಿಸಲು 2023-24ನೇ ಸಾಲಿನ ಆಯವ್ಯಯದಲ್ಲಿ(Budget) ರಾಜ್ಯದ 24 ಜಿಲ್ಲೆಗಳ 106 ತಾಲೂಕುಗಳಲ್ಲಿ (2014ರ ಅವಿಭಜಿತ ತಾಲೂಕುಗಳು) ಕೃಷಿ ಭಾಗ್ಯ ಯೋಜನೆ (Krishi Bhagya Yojana) ಮರು ಜಾರಿಗೊಳಿಸಿದೆ ಎಂದು ಕೃಷಿ ಸಚಿವ ಎನ್. ಚಲುವರಾಯಸ್ವಾಮಿ (N Chaluvarayaswamy) ತಿಳಿಸಿದರು.

ಕರ್ನಾಟಕ ವಿಧಾನಸಭೆಯಲ್ಲಿ ಶಿರಹಟ್ಟಿ ಶಾಸಕರಾದ ಡಾ. ಚಂದ್ರು ಲಮಾಣಿ ಅವರ ಚುಕ್ಕೆ ಗುರುತಿನ ಪ್ರಶ್ನೆಗೆ ಉತ್ತರಿಸಿದ ಅವರು, ರಾಜ್ಯ ಮಳೆಯಾಶ್ರಿತ ಕೃಷಿ ನೀತಿ, 2014ರ ಅನ್ವಯ 100 ಕೋಟಿ ರೂ.ಗಳ ಅನುದಾನದಲ್ಲಿ ಸದರಿ ಯೋಜನೆಯನ್ನು 2023-24ನೇ ಸಾಲಿನಲ್ಲಿ ಪ್ಯಾಕೇಜ್ ಮಾದರಿಯಲ್ಲಿ (ಕ್ಷೇತ್ರ ಬದು, ಕೃಷಿ ಹೊಂಡ, ಪಾಲಿಥೀನ್ ಹೊದಿಕೆ, ತಂತಿಬೇಲಿ, ಪಂಪ್ ಸೆಟ್, ಸೂಕ್ಷ್ಮ ನೀರಾವರಿ ಘಟಕಗಳು) ಮಾರ್ಗಸೂಚಿ ಹಾಗೂ ಕ್ರಿಯಾ ಯೋಜನೆಯನ್ವಯ ಕಾರ್ಯಕ್ರಮ ಅನುಷ್ಠಾನ ಮಾಡಲಾಗುತ್ತಿದೆ ಎಂದು ಮಾಹಿತಿ ನೀಡಿದರು.

ಮುಂಗಾರು 2023ನೇ ಸಾಲಿನ ಬರಪೀಡಿತ ತಾಲೂಕುಗಳ ಪಟ್ಟಿಯಲ್ಲಿ ಶಿರಹಟ್ಟಿ ಮತ್ತು ಲಕ್ಷ್ಮೇಶ್ವರ ತಾಲೂಕುಗಳು ಸೇರ್ಪಡೆಯಾಗಿದ್ದರೂ ಸಹ 2023-24ನೇ ಸಾಲಿನಲ್ಲಿ ರಾಜ್ಯ ಮಳೆಯಾಶ್ರಿತ ಕೃಷಿ ನೀತಿ, 2014ರ ಅನ್ವಯ ಕೃಷಿ ಭಾಗ್ಯ ಯೋಜನೆ ರಾಜ್ಯದ ಒಣ ಕೃಷಿ ಹವಾಮಾನ ವಲಯಗಳಲ್ಲಿ ಇರುವ ತಾಲೂಕುಗಳಲ್ಲಿ ಮಾತ್ರ ಅನುಷ್ಠಾನ ಮಾಡಲಾಗುತ್ತಿದೆ. ಹಾಗಾಗಿ ಗದಗ ಜಿಲ್ಲೆಯ ಶಿರಹಟ್ಟಿ ಮತ್ತು ಲಕ್ಷ್ಮೇಶ್ವರ ತಾಲೂಕುಗಳು ಒಣ ಕೃಷಿ ಹವಾಮಾನ ವಲಯದಲ್ಲಿ ಇಲ್ಲದಿರುವ ಕಾರಣ ಸೇರ್ಪಡೆ ಮಾಡಲಾಗಿಲ್ಲ ಎಂದು ತಿಳಿಸಿದರು.

2023-24ನೇ ಸಾಲಿನ ಆಯವ್ಯಯದಲ್ಲಿ ಕೃಷಿ ಭಾಗ್ಯ ಯೋಜನೆಯನ್ನು ಮರು ಜಾರಿಗೊಳಿಸಲಾಗಿದ್ದು, ರಾಜ್ಯದ ಮಳೆಯಾಶ್ರಿತ ಕೃಷಿ ನೀತಿ, 2014ರ ಅನ್ವಯ ರಾಜ್ಯದ 24 ಜಿಲ್ಲೆ 106 ತಾಲೂಕುಗಳಲ್ಲಿ (2014ರ ಅವಿಭಜಿತ ತಾಲೂಕುಗಳು) ಅನುಷ್ಠಾನ ಮಾಡಲು ಮಾರ್ಗಸೂಚಿ ಹಾಗೂ ಕ್ರಿಯಾ ಯೋಜನೆಯನ್ನು ಈಗಾಗಲೇ ಜಿಲ್ಲೆಗಳಿಗೆ ನೀಡಲಾಗಿದೆ. ಅದರಂತೆ ಕಾರ್ಯಕ್ರಮ ಅನುಷ್ಠಾನ ಮಾಡಲಾಗುತ್ತಿದೆ ಎಂದು ಹೇಳಿದರು. ಪ್ರಸಕ್ತ ಸಾಲಿನ ಆರ್ಥಿಕ ವರ್ಷಾಂತ್ಯಕ್ಕೆ ಕೇವಲ ಒಂದು ತಿಂಗಳು ಬಾಕಿ ಇದ್ದು, ಈ ಹಂತದಲ್ಲಿ ಯಾವುದೇ ಸೇರ್ಪಡೆ/ಬದಲಾವಣೆ ಹಾಗೂ ಅದರಂತೆಯೇ ಅನುಷ್ಠಾನ ಕಷ್ಟಸಾಧ್ಯವಾಗಿರುತ್ತದೆ ಎಂದು ತಿಳಿಸಿದರು.

  • ಅಂತರ್ಜಾಲ ಮಾಹಿತಿ

In the 2023-24 budget, Krishi Bhagya Yojana has been re-implemented in 106 taluks (undivided taluks of 2014) of 24 districts of the state to increase agricultural production by providing rain water for sustainable agriculture in the rain-fed areas of Karnataka. Agriculture Minister N. N Chaluvarayaswamy said.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಆಮದು ಕಳಪೆ ಅಡಿಕೆ ಮಿಶ್ರಣದ ಎಚ್ಚರಿಕೆ- ಬೆಳೆಗಾರರಿಗೆ ಕ್ಯಾಂಪ್ಕೊ ಮನವಿ

ಆಮದುಗೊಂಡ ಕಳಪೆ ಅಡಿಕೆಯನ್ನು ದೇಶೀಯ ಅಡಿಕೆಯೊಂದಿಗೆ ಮಿಶ್ರಣ ಮಾಡಲಾಗುತ್ತಿದೆ ಎಂಬ ವರದಿಗಳ ಹಿನ್ನೆಲೆಯಲ್ಲಿ…

8 hours ago

ಹವಾಮಾನ ವರದಿ | 21-07-2026 | ಕರಾವಳಿ-ಮಲೆನಾಡಿನಲ್ಲಿ ಸಾಧಾರಣ ಮಳೆ ಮುಂದುವರಿಕೆ, ಭಾರೀ ಮಳೆ ಸಾಧ್ಯತೆ ಕಡಿಮೆ

ಕರಾವಳಿ ಮತ್ತು ಮಲೆನಾಡಿನಲ್ಲಿ ಮುಂದಿನ 10 ದಿನಗಳವರೆಗೆ ಬಿಟ್ಟು ಬಿಟ್ಟು ಸಾಧಾರಣ ಮಳೆ…

16 hours ago

ಅಡಿಕೆ ರೋಗ ಸಂಕಷ್ಟಕ್ಕೆ ಸಂಸತ್ತಿನಲ್ಲಿ ಧ್ವನಿ : ನಿಯಮ 377ರಡಿ ಕ್ಯಾ. ಬ್ರಿಜೇಶ್ ಚೌಟ ಒತ್ತಾಯ

ಅಡಿಕೆ ತೋಟಗಳಲ್ಲಿ ಹೆಚ್ಚುತ್ತಿರುವ ಎಲೆ ಚುಕ್ಕೆ, ಹಳದಿ ಎಲೆ ಮತ್ತು ಕೊಳೆ ರೋಗಗಳಿಗೆ…

1 day ago

ದೇಶಾದ್ಯಂತ ಮುಂಗಾರು ಅಬ್ಬರ : ಹಲವು ರಾಜ್ಯಗಳಿಗೆ ಭಾರೀ ಮಳೆ ಎಚ್ಚರಿಕೆ, ಹಿಮಾಲಯ ತಪ್ಪಲಿನಲ್ಲಿ ರೆಡ್ ಅಲರ್ಟ್

ದೇಶಾದ್ಯಂತ ಮುಂಗಾರು ಮತ್ತಷ್ಟು ತೀವ್ರಗೊಂಡಿದ್ದು, ಉತ್ತರ ಭಾರತದ ಹಲವು ಭಾಗಗಳಿಗೆ ರೆಡ್ ಅಲರ್ಟ್…

2 days ago

ರಾಜ್ಯದಲ್ಲಿ ಬರದ ಛಾಯೆ | 178 ತಾಲ್ಲೂಕುಗಳಲ್ಲಿ ತೀವ್ರ ಮಳೆ ಕೊರತೆ, ಜಲಾಶಯಗಳ ನೀರಿನ ಮಟ್ಟ ಶೇ.40ಕ್ಕೆ ಕುಸಿತ

ರಾಜ್ಯದಲ್ಲಿ ಮುಂಗಾರು ಮಳೆ 39% ಕೊರತೆಯಾಗಿದ್ದು, 26 ಜಿಲ್ಲೆಗಳ 178 ತಾಲ್ಲೂಕುಗಳಲ್ಲಿ ಬರದ…

2 days ago

ಪುತ್ತೂರಿಗೆ ಪುತ್ತಿಲ? ಪುತ್ತೂರಿನ ರಾಜಕೀಯದ ಹೊಸ ವ್ಯಾಕರಣ

ಪುತ್ತೂರಿನ ರಾಜಕೀಯದಲ್ಲಿ ವ್ಯಕ್ತಿತ್ವದ ಪ್ರಭಾವ ಹೆಚ್ಚುತ್ತಿರುವ ಕುರಿತು ಈ ವಿಶ್ಲೇಷಣೆ ಬೆಳಕು ಚೆಲ್ಲುತ್ತದೆ.…

2 days ago