90ರ ವಯಸ್ಸಿನಲ್ಲಿ ಬಂದು ನಿಮ್ಮ ಬಳಿ ಕೈ ಚಾಚುತ್ತಿದ್ದೇನೆ, ನಿಖಿಲ್ ಗೆಲ್ಲಿಸಿ: ಹೆಚ್‍ಡಿಡಿ ಕಣ್ಣೀರು

May 6, 2023
7:30 AM

ಇಲ್ಲಿನ ವಿಧಾನಸಭಾ ಕ್ಷೇತ್ರದ ಸುಗ್ಗನಹಳ್ಳಿ ಗ್ರಾಮದಲ್ಲಿ ಮೊಮ್ಮಗ ನಿಖಿಲ್ ಕುಮಾರಸ್ವಾಮಿ ಪರ ಮಾಜಿ ಪ್ರಧಾನಿ ಹೆಚ್‍ಡಿಡಿ ಅದ್ದೂರಿ ರೋಡ್ ಶೋ ನಡೆಸಿದರು. ಬಳಿಕ ಮಾತನಾಡಿದ ಹೆಚ್.ಡಿ.ದೇವೇಗೌಡ ಭಾವನಾತ್ಮಕವಾಗಿ ನಿಖಿಲ್ ಗೆಲ್ಲಿಸುವಂತೆ ಮನವಿ ಮಾಡಿದರು.

ನಾನು ಎಲ್ಲಾ ಕಡೆ ಸುತ್ತಾಡಿ ಬಂದಾಗ ಈ ಗ್ರಾಮದ ಹೆಣ್ಣು ಮಗಳು ನನಗೆ ಊಟ ಹಾಕಿದ್ರು. ಈ ಮಣ್ಣಿನ ಅನ್ನದ ಖುಣ ನನ್ನ ಮೇಲಿದೆ. ನಿಮ್ಮ ಮುಂದೆ ಕೈಚಾಚಲಿಕ್ಕೆ ಬಂದಿದ್ದೇನೆ. ನಾನು ಯಾರಿಗೋಸ್ಕರ ಬಂದಿದ್ದೇನೆ ಅಂತ ನಿಮಗೆ ಗೊತ್ತು. ಮಂಡ್ಯದಲ್ಲಿ ನಿಖಿಲ್ ಕುಮಾರಸ್ವಾಮಿ ಅವರನ್ನ ಮೋಸ, ವಂಚನೆ ಮಾಡಿ ಸೋಲಿಸಿದರು. ಇವತ್ತು ರಾಮನಗರದ ಜನತೆ ನಾವಿದ್ದೇವೆ ಅನ್ನೋ ವಿಶ್ವಾಸ ಕೊಟ್ಟಿದ್ದಾರೆ. ನಿಖಿಲ್ ಗೆಲ್ಲಿಸುತ್ತೇವೆ ಎಂಬ ಧೈರ್ಯ ನೀಡ್ತಿದ್ದಾರೆ. ಮುದುಕ ಬಂದು ಮತ ಕೇಳ್ತಿದ್ದಾನೆ ಅಂತ ವ್ಯಂಗ್ಯ ಮಾಡಿದರು. ಅದಕ್ಕೆ ನೀವು ಉತ್ತರ ಕೊಡಬೇಕು ಎಂದರು.

ಬಿಜೆಪಿ ಅವರು ಹಿಂದಿನ ಬಾಗಿಲಿನಿಂದ ಬಂದು ಅಧಿಕಾರ ಹಿಡಿದಿದ್ದಾರೆ. ಕಾಂಗ್ರೆಸ್ ಅವರ ಕೈಯಲ್ಲೂ ಅಭಿವೃದ್ಧಿ ಮಾಡಲು ಆಗಲಿಲ್ಲ. ಕುಮಾರಸ್ವಾಮಿ ಇವತ್ತು ಇಡೀ ರಾಜ್ಯ ಪಂಚರತ್ನ ರಥಯಾತ್ರೆ ಮಾಡಿ ಸುತ್ತುತ್ತಿದ್ದಾರೆ. ಸ್ತ್ರೀ ಶಕ್ತಿ ಸಾಲಮನ್ನಾ ಮಾಡೋ ಏಕೈಕ ವ್ಯಕ್ತಿ ಕುಮಾರಸ್ವಾಮಿ. ನೀವು ನಮ್ಮನ್ನ ಉಳಿಸಿದ್ರಿ, ಪ್ರಧಾನಿ ಮಂತ್ರಿ ಮಾಡಿದ್ರಿ. ಮಂಡ್ಯದಲ್ಲಿ ನಿಖಿಲ್ ಸೋಲಿಸಿ ನೋವು ಕೊಟ್ಟರು. ಈಗ ನಿಮ್ಮ ಮನೆ ಬಾಗಿಲಿಗೆ ಬಂದಿದ್ದೇನೆ. ದಯಮಾಡಿ ನಿಖಿಲ್ ನನ್ನು ಗೆಲ್ಲಿಸಿ. ಈ 90ನೇ ವಯಸ್ಸಿನಲ್ಲಿ ನಿಮ್ಮನ್ನು ಕೈಚಾಚಿ ಕೇಳಿಕೊಳ್ಳುತ್ತೇನೆ ಎಂದು ಮನವಿ ಮಾಡಿದರು.

ನಿಖಿಲ್ ಕುಮಾರಸ್ವಾಮಿ ಗೆಲ್ಲಿಸುವ ಜವಾಬ್ದಾರಿ ನಿಮ್ಮದು. ರಾಮನಗರ ಜನ ಸಭ್ಯಸ್ಥರು. ನನ್ನನ್ನು ಹರಸಿ, ಗೆಲ್ಲಸಿ ನನ್ನನ್ನು ಪ್ರಧಾನಿ ಮಾಡಿದ್ರಿ. ಹಾಗೆಯೇ ನಿಖಿಲ್ ಅವರನ್ನೂ ಗೆಲ್ಲಿಸಿ ಎಂದು ನಿಖಿಲ್ ಅವರ ಕೈ ಎತ್ತಿ ಗೆಲ್ಲಿಸುವಂತೆ ದೇವೇಗೌಡ್ರು ಕಣ್ಣೀರು ಹಾಕಿ ಮನವಿ ಮಾಡಿದರು.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಮಳೆ ಹೆಚ್ಚಿಸಲು ಮೋಡ ಬಿತ್ತನೆಗೆ ಚಾಲನೆ – ಮೋಡ ಬಿತ್ತನೆಯಿಂದ ಮಳೆ ಬರುತ್ತದೆಯೇ?
September 4, 2026
10:47 PM
by: ದ ರೂರಲ್ ಮಿರರ್.ಕಾಂ
3,000 ವರ್ಷಗಳ ಹಿಂದೆಯೇ ರೈತರು ಹವಾಮಾನ ಬದಲಾವಣೆಗೆ ಹೊಂದಿಕೊಂಡಿದ್ದರು..! ಬಿಹಾರದ ಪುರಾತನ ಬೀಜಗಳು ಹೇಳಿದ ಕೃಷಿ ಪಾಠ
September 4, 2026
8:50 PM
by: ದ ರೂರಲ್ ಮಿರರ್.ಕಾಂ
ಶ್ರೀಕೃಷ್ಣನನ್ನು ದೇವನಾಗಿ ಮಾತ್ರವಲ್ಲ, ಗುರುವಿನ ರೂಪದಲ್ಲೂ ಕಾಣುವ ದೃಷ್ಟಿ
September 4, 2026
3:11 PM
by: ದ ರೂರಲ್ ಮಿರರ್.ಕಾಂ
ಹವಾಮಾನ ವರದಿ | 04-09-2026 | ಮುಂಗಾರು ದುರ್ಬಲ… ಆದರೂ ಕರ್ನಾಟಕದಲ್ಲಿ ಗುಡುಗು ಮಳೆ ಮುಂದುವರಿಯುವ ಸಾಧ್ಯತೆ!
September 4, 2026
3:00 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror