Advertisement
ಸುದ್ದಿಗಳು

90ರ ವಯಸ್ಸಿನಲ್ಲಿ ಬಂದು ನಿಮ್ಮ ಬಳಿ ಕೈ ಚಾಚುತ್ತಿದ್ದೇನೆ, ನಿಖಿಲ್ ಗೆಲ್ಲಿಸಿ: ಹೆಚ್‍ಡಿಡಿ ಕಣ್ಣೀರು

Share

ಇಲ್ಲಿನ ವಿಧಾನಸಭಾ ಕ್ಷೇತ್ರದ ಸುಗ್ಗನಹಳ್ಳಿ ಗ್ರಾಮದಲ್ಲಿ ಮೊಮ್ಮಗ ನಿಖಿಲ್ ಕುಮಾರಸ್ವಾಮಿ ಪರ ಮಾಜಿ ಪ್ರಧಾನಿ ಹೆಚ್‍ಡಿಡಿ ಅದ್ದೂರಿ ರೋಡ್ ಶೋ ನಡೆಸಿದರು. ಬಳಿಕ ಮಾತನಾಡಿದ ಹೆಚ್.ಡಿ.ದೇವೇಗೌಡ ಭಾವನಾತ್ಮಕವಾಗಿ ನಿಖಿಲ್ ಗೆಲ್ಲಿಸುವಂತೆ ಮನವಿ ಮಾಡಿದರು.

Advertisement
Advertisement

ನಾನು ಎಲ್ಲಾ ಕಡೆ ಸುತ್ತಾಡಿ ಬಂದಾಗ ಈ ಗ್ರಾಮದ ಹೆಣ್ಣು ಮಗಳು ನನಗೆ ಊಟ ಹಾಕಿದ್ರು. ಈ ಮಣ್ಣಿನ ಅನ್ನದ ಖುಣ ನನ್ನ ಮೇಲಿದೆ. ನಿಮ್ಮ ಮುಂದೆ ಕೈಚಾಚಲಿಕ್ಕೆ ಬಂದಿದ್ದೇನೆ. ನಾನು ಯಾರಿಗೋಸ್ಕರ ಬಂದಿದ್ದೇನೆ ಅಂತ ನಿಮಗೆ ಗೊತ್ತು. ಮಂಡ್ಯದಲ್ಲಿ ನಿಖಿಲ್ ಕುಮಾರಸ್ವಾಮಿ ಅವರನ್ನ ಮೋಸ, ವಂಚನೆ ಮಾಡಿ ಸೋಲಿಸಿದರು. ಇವತ್ತು ರಾಮನಗರದ ಜನತೆ ನಾವಿದ್ದೇವೆ ಅನ್ನೋ ವಿಶ್ವಾಸ ಕೊಟ್ಟಿದ್ದಾರೆ. ನಿಖಿಲ್ ಗೆಲ್ಲಿಸುತ್ತೇವೆ ಎಂಬ ಧೈರ್ಯ ನೀಡ್ತಿದ್ದಾರೆ. ಮುದುಕ ಬಂದು ಮತ ಕೇಳ್ತಿದ್ದಾನೆ ಅಂತ ವ್ಯಂಗ್ಯ ಮಾಡಿದರು. ಅದಕ್ಕೆ ನೀವು ಉತ್ತರ ಕೊಡಬೇಕು ಎಂದರು.

ಬಿಜೆಪಿ ಅವರು ಹಿಂದಿನ ಬಾಗಿಲಿನಿಂದ ಬಂದು ಅಧಿಕಾರ ಹಿಡಿದಿದ್ದಾರೆ. ಕಾಂಗ್ರೆಸ್ ಅವರ ಕೈಯಲ್ಲೂ ಅಭಿವೃದ್ಧಿ ಮಾಡಲು ಆಗಲಿಲ್ಲ. ಕುಮಾರಸ್ವಾಮಿ ಇವತ್ತು ಇಡೀ ರಾಜ್ಯ ಪಂಚರತ್ನ ರಥಯಾತ್ರೆ ಮಾಡಿ ಸುತ್ತುತ್ತಿದ್ದಾರೆ. ಸ್ತ್ರೀ ಶಕ್ತಿ ಸಾಲಮನ್ನಾ ಮಾಡೋ ಏಕೈಕ ವ್ಯಕ್ತಿ ಕುಮಾರಸ್ವಾಮಿ. ನೀವು ನಮ್ಮನ್ನ ಉಳಿಸಿದ್ರಿ, ಪ್ರಧಾನಿ ಮಂತ್ರಿ ಮಾಡಿದ್ರಿ. ಮಂಡ್ಯದಲ್ಲಿ ನಿಖಿಲ್ ಸೋಲಿಸಿ ನೋವು ಕೊಟ್ಟರು. ಈಗ ನಿಮ್ಮ ಮನೆ ಬಾಗಿಲಿಗೆ ಬಂದಿದ್ದೇನೆ. ದಯಮಾಡಿ ನಿಖಿಲ್ ನನ್ನು ಗೆಲ್ಲಿಸಿ. ಈ 90ನೇ ವಯಸ್ಸಿನಲ್ಲಿ ನಿಮ್ಮನ್ನು ಕೈಚಾಚಿ ಕೇಳಿಕೊಳ್ಳುತ್ತೇನೆ ಎಂದು ಮನವಿ ಮಾಡಿದರು.

ನಿಖಿಲ್ ಕುಮಾರಸ್ವಾಮಿ ಗೆಲ್ಲಿಸುವ ಜವಾಬ್ದಾರಿ ನಿಮ್ಮದು. ರಾಮನಗರ ಜನ ಸಭ್ಯಸ್ಥರು. ನನ್ನನ್ನು ಹರಸಿ, ಗೆಲ್ಲಸಿ ನನ್ನನ್ನು ಪ್ರಧಾನಿ ಮಾಡಿದ್ರಿ. ಹಾಗೆಯೇ ನಿಖಿಲ್ ಅವರನ್ನೂ ಗೆಲ್ಲಿಸಿ ಎಂದು ನಿಖಿಲ್ ಅವರ ಕೈ ಎತ್ತಿ ಗೆಲ್ಲಿಸುವಂತೆ ದೇವೇಗೌಡ್ರು ಕಣ್ಣೀರು ಹಾಕಿ ಮನವಿ ಮಾಡಿದರು.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಮಣ್ಣಿಲ್ಲದೇ ಅವಕಾಡೊ ಬೆಳೆ..! ಜೇನು ಸೇರಿಸಿದ ಕೃಷಿ ಈಗ ಹೊಸ ಟ್ರೆಂಡ್

2026 ರಲ್ಲಿ ಹೈಡ್ರೋಪೋನಿಕ್ ಅವಕಾಡೊ ಕೃಷಿ ಮತ್ತು ಜೇನು ಪರಾಗಸ್ಪರ್ಶದ ಸಂಯೋಜನೆ ಹೊಸ…

11 hours ago

ರೇಷ್ಮೆ ಗೂಡಿಗೆ 800 ರೂ.ವರೆಗೆ ಬೆಲೆ | ಚಾಮರಾಜನಗರದಲ್ಲಿ ರೈತರಿಗೆ ಲಾಭದಾಯಕ ಹಾದಿ

ಚಾಮರಾಜನಗರ ಜಿಲ್ಲೆಯಲ್ಲಿ ರೇಷ್ಮೆ ಗೂಡಿಗೆ ಕೆಜಿಗೆ 750ರಿಂದ 800 ರೂಪಾಯಿವರೆಗೆ ಬೆಲೆ ಸಿಗುತ್ತಿದೆ.…

12 hours ago

ಸ್ಥಳೀಯ ಚುನಾವಣೆಗಳಲ್ಲಿ ಇವಿಎಂಗೆ ಬ್ರೇಕ್ | ಬ್ಯಾಲೆಟ್ ಪೇಪರ್ ಮೂಲಕ ಮತದಾನಕ್ಕೆ ಸಚಿವ ಸಂಪುಟ ಹಸಿರು ನಿಶಾನೆ

ಕರ್ನಾಟಕದಲ್ಲಿ ಸ್ಥಳೀಯ ಸಂಸ್ಥೆಗಳ ಚುನಾವಣೆಗಳಲ್ಲಿ ಇವಿಎಂ ಬದಲಿಗೆ ಬ್ಯಾಲೆಟ್ ಪೇಪರ್ ಮೂಲಕ ಮತದಾನ…

12 hours ago

ಕೇಂದ್ರವು ಕೇರಳದ ರಬ್ಬರ್ ಕ್ಷೇತ್ರವನ್ನು ದುರ್ಬಲಗೊಳಿಸುತ್ತಿದೆ – ಆರೋಪ

ಕೇಂದ್ರ ಸರ್ಕಾರವು ರಾಜ್ಯದ ರಬ್ಬರ್ ಕೃಷಿಯನ್ನು ಈಶಾನ್ಯಕ್ಕೆ ಸ್ಥಳಾಂತರಿಸುವ ಮೂಲಕ ರಬ್ಬರ್ ಕ್ಷೇತ್ರವನ್ನು…

12 hours ago

ಅಡಿಕೆ ಮಾರುಕಟ್ಟೆ ಸಮೀಕರಣ : ಬೆಲೆ ನಿರ್ಧಾರದ ಹಿಂದಿನ ಅರ್ಥಶಾಸ್ತ್ರ ಮತ್ತು ಮನೋವಿಜ್ಞಾನ

ಅಡಿಕೆ ಮಾರುಕಟ್ಟೆ ಎಂದರೆ ಕೇವಲ ಕೃಷಿ ಉತ್ಪನ್ನಗಳ ವಿನಿಮಯ ಕೇಂದ್ರವಲ್ಲ; ಅದೊಂದು ಸಂಕೀರ್ಣವಾದ…

20 hours ago

ಅಡಿಕೆ ಕಳ್ಳಸಾಗಣೆ ಜಾಲಕ್ಕೆ ಮಿಝೋರಂ ಸರ್ಕಾರದ ಬಿಗಿ ಹಿಡಿತ – ಅಡಿಕೆ ಮಾರುಕಟ್ಟೆ ಚೇತರಿಕೆ ಸಾಧ್ಯತೆ

ಮಿಝೋರಂ ಸರ್ಕಾರವು ಅಡಿಕೆ ಕಳ್ಳಸಾಗಣೆ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವುದಾಗಿ ಘೋಷಿಸಿದೆ. ಯಾವುದೇ…

21 hours ago