Advertisement
ಸುದ್ದಿಗಳು

90ರ ವಯಸ್ಸಿನಲ್ಲಿ ಬಂದು ನಿಮ್ಮ ಬಳಿ ಕೈ ಚಾಚುತ್ತಿದ್ದೇನೆ, ನಿಖಿಲ್ ಗೆಲ್ಲಿಸಿ: ಹೆಚ್‍ಡಿಡಿ ಕಣ್ಣೀರು

Share

ಇಲ್ಲಿನ ವಿಧಾನಸಭಾ ಕ್ಷೇತ್ರದ ಸುಗ್ಗನಹಳ್ಳಿ ಗ್ರಾಮದಲ್ಲಿ ಮೊಮ್ಮಗ ನಿಖಿಲ್ ಕುಮಾರಸ್ವಾಮಿ ಪರ ಮಾಜಿ ಪ್ರಧಾನಿ ಹೆಚ್‍ಡಿಡಿ ಅದ್ದೂರಿ ರೋಡ್ ಶೋ ನಡೆಸಿದರು. ಬಳಿಕ ಮಾತನಾಡಿದ ಹೆಚ್.ಡಿ.ದೇವೇಗೌಡ ಭಾವನಾತ್ಮಕವಾಗಿ ನಿಖಿಲ್ ಗೆಲ್ಲಿಸುವಂತೆ ಮನವಿ ಮಾಡಿದರು.

ನಾನು ಎಲ್ಲಾ ಕಡೆ ಸುತ್ತಾಡಿ ಬಂದಾಗ ಈ ಗ್ರಾಮದ ಹೆಣ್ಣು ಮಗಳು ನನಗೆ ಊಟ ಹಾಕಿದ್ರು. ಈ ಮಣ್ಣಿನ ಅನ್ನದ ಖುಣ ನನ್ನ ಮೇಲಿದೆ. ನಿಮ್ಮ ಮುಂದೆ ಕೈಚಾಚಲಿಕ್ಕೆ ಬಂದಿದ್ದೇನೆ. ನಾನು ಯಾರಿಗೋಸ್ಕರ ಬಂದಿದ್ದೇನೆ ಅಂತ ನಿಮಗೆ ಗೊತ್ತು. ಮಂಡ್ಯದಲ್ಲಿ ನಿಖಿಲ್ ಕುಮಾರಸ್ವಾಮಿ ಅವರನ್ನ ಮೋಸ, ವಂಚನೆ ಮಾಡಿ ಸೋಲಿಸಿದರು. ಇವತ್ತು ರಾಮನಗರದ ಜನತೆ ನಾವಿದ್ದೇವೆ ಅನ್ನೋ ವಿಶ್ವಾಸ ಕೊಟ್ಟಿದ್ದಾರೆ. ನಿಖಿಲ್ ಗೆಲ್ಲಿಸುತ್ತೇವೆ ಎಂಬ ಧೈರ್ಯ ನೀಡ್ತಿದ್ದಾರೆ. ಮುದುಕ ಬಂದು ಮತ ಕೇಳ್ತಿದ್ದಾನೆ ಅಂತ ವ್ಯಂಗ್ಯ ಮಾಡಿದರು. ಅದಕ್ಕೆ ನೀವು ಉತ್ತರ ಕೊಡಬೇಕು ಎಂದರು.

ಬಿಜೆಪಿ ಅವರು ಹಿಂದಿನ ಬಾಗಿಲಿನಿಂದ ಬಂದು ಅಧಿಕಾರ ಹಿಡಿದಿದ್ದಾರೆ. ಕಾಂಗ್ರೆಸ್ ಅವರ ಕೈಯಲ್ಲೂ ಅಭಿವೃದ್ಧಿ ಮಾಡಲು ಆಗಲಿಲ್ಲ. ಕುಮಾರಸ್ವಾಮಿ ಇವತ್ತು ಇಡೀ ರಾಜ್ಯ ಪಂಚರತ್ನ ರಥಯಾತ್ರೆ ಮಾಡಿ ಸುತ್ತುತ್ತಿದ್ದಾರೆ. ಸ್ತ್ರೀ ಶಕ್ತಿ ಸಾಲಮನ್ನಾ ಮಾಡೋ ಏಕೈಕ ವ್ಯಕ್ತಿ ಕುಮಾರಸ್ವಾಮಿ. ನೀವು ನಮ್ಮನ್ನ ಉಳಿಸಿದ್ರಿ, ಪ್ರಧಾನಿ ಮಂತ್ರಿ ಮಾಡಿದ್ರಿ. ಮಂಡ್ಯದಲ್ಲಿ ನಿಖಿಲ್ ಸೋಲಿಸಿ ನೋವು ಕೊಟ್ಟರು. ಈಗ ನಿಮ್ಮ ಮನೆ ಬಾಗಿಲಿಗೆ ಬಂದಿದ್ದೇನೆ. ದಯಮಾಡಿ ನಿಖಿಲ್ ನನ್ನು ಗೆಲ್ಲಿಸಿ. ಈ 90ನೇ ವಯಸ್ಸಿನಲ್ಲಿ ನಿಮ್ಮನ್ನು ಕೈಚಾಚಿ ಕೇಳಿಕೊಳ್ಳುತ್ತೇನೆ ಎಂದು ಮನವಿ ಮಾಡಿದರು.

ನಿಖಿಲ್ ಕುಮಾರಸ್ವಾಮಿ ಗೆಲ್ಲಿಸುವ ಜವಾಬ್ದಾರಿ ನಿಮ್ಮದು. ರಾಮನಗರ ಜನ ಸಭ್ಯಸ್ಥರು. ನನ್ನನ್ನು ಹರಸಿ, ಗೆಲ್ಲಸಿ ನನ್ನನ್ನು ಪ್ರಧಾನಿ ಮಾಡಿದ್ರಿ. ಹಾಗೆಯೇ ನಿಖಿಲ್ ಅವರನ್ನೂ ಗೆಲ್ಲಿಸಿ ಎಂದು ನಿಖಿಲ್ ಅವರ ಕೈ ಎತ್ತಿ ಗೆಲ್ಲಿಸುವಂತೆ ದೇವೇಗೌಡ್ರು ಕಣ್ಣೀರು ಹಾಕಿ ಮನವಿ ಮಾಡಿದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಅಡಿಕೆ ಮಾರುಕಟ್ಟೆ ಸುದ್ದಿ | ಅಡಿಕೆ ಧಾರಣೆ ಇಳಿಕೆಯಿಂದ ಸ್ಥಿರತೆಯತ್ತ ಮುಂದುವರಿಕೆ

ದಕ್ಷಿಣ ಕನ್ನಡ ಮತ್ತು ಮಲೆನಾಡು ಭಾಗದ ಕೃಷಿ ಮಾರುಕಟ್ಟೆಯಲ್ಲಿ ಸಹಜ ಸ್ಥಿತಿಯಲ್ಲಿ ಕಂಡುಬಂದಿದೆ.…

7 hours ago

2030ರೊಳಗೆ 5 ಟ್ರಿಲಿಯನ್ ಆರ್ಥಿಕತೆ ಮೀರಿದ ರಾಷ್ಟ್ರವಾಗಲಿದೆ ಭಾರತ

2030ರೊಳಗೆ ಭಾರತ 5 ಟ್ರಿಲಿಯನ್ ಆರ್ಥಿಕತೆಯನ್ನು ಮೀರುತ್ತದೆ ಎಂದು ಪ್ರಲ್ಹಾದ ಜೋಶಿ ವಿಶ್ವಾಸ…

11 hours ago

ರೈತರ ಹಿತಕ್ಕಾಗಿ ಎರಡು ಮಹತ್ವದ ಸುಧಾರಣೆಗಳು | ಹೊಸ ಬೀಜ ಕಾಯ್ದೆ, ಪರಿಷ್ಕೃತ ಕೀಟನಾಶಕ ಕಾಯ್ದೆ ಜಾರಿಗೆ ಕೇಂದ್ರ ಸಿದ್ಧತೆ

ರೈತರ ಹಿತದೃಷ್ಟಿಯಿಂದ ಕೇಂದ್ರ ಸರ್ಕಾರ ಹೊಸ ಬೀಜ ಕಾಯ್ದೆ ಮತ್ತು ಪರಿಷ್ಕೃತ ಕೀಟನಾಶಕ…

11 hours ago

ಇನ್ನೆರಡು ದಿನಗಳಲ್ಲಿ ತಂಬಾಕು ಬೆಳೆಗಾರರ ಸಮಸ್ಯೆಗೆ ಪರಿಹಾರ : ಕುಮಾರಸ್ವಾಮಿ ಭರವಸೆ

ಮೈಸೂರು ವಿಭಾಗದ ತಂಬಾಕು ರೈತರು ಖರೀದಿ ಸಮಸ್ಯೆಯಿಂದ ಸಂಕಷ್ಟದಲ್ಲಿದ್ದು, ಈ ಬಗ್ಗೆ ಕೇಂದ್ರ…

12 hours ago

ಅಡಿಕೆ ತೋಟದ ಹಳದಿ ಎಲೆ ರೋಗ ಚೀನಾದಲ್ಲೂ ಮದ್ದಿಲ್ಲ…! | ಮಣ್ಣಿನೊಳಗಿನ ಡಿಎನ್‌ಎ ನೀಡುತ್ತಿದೆ ಎಚ್ಚರಿಕೆ

ಅಡಿಕೆಯ ಹಳದಿ ಎಲೆ ರೋಗವು(YLD) ಕೇವಲ ಎಲೆಯ ಸಮಸ್ಯೆಯಲ್ಲ, ಮಣ್ಣಿನೊಳಗಿನ ಸೂಕ್ಷ್ಮಜೀವಿಗಳ ಸಮತೋಲನ…

23 hours ago

ಹವಾಮಾನ ವರದಿ | 02-03-2026 | ರಾಜ್ಯದಲ್ಲಿ ಮೋಡ ಕವಿದ ವಾತಾವರಣ… ಆದರೆ, ಮಳೆ ಇದೆಯೋ..? ಇಲ್ವೋ..?!

ರಾಜ್ಯದಾದ್ಯಂತ ಮೋಡ ಕವಿದ ವಾತಾವರಣ ಮುಂದುವರಿಯಲಿದ್ದು, ಮಾರ್ಚ್‌ 3 ರವರೆಗೆ ಮಳೆಯ ಸಾಧ್ಯತೆ…

1 day ago