ಸುದ್ದಿಗಳು

90ರ ವಯಸ್ಸಿನಲ್ಲಿ ಬಂದು ನಿಮ್ಮ ಬಳಿ ಕೈ ಚಾಚುತ್ತಿದ್ದೇನೆ, ನಿಖಿಲ್ ಗೆಲ್ಲಿಸಿ: ಹೆಚ್‍ಡಿಡಿ ಕಣ್ಣೀರು

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ಇಲ್ಲಿನ ವಿಧಾನಸಭಾ ಕ್ಷೇತ್ರದ ಸುಗ್ಗನಹಳ್ಳಿ ಗ್ರಾಮದಲ್ಲಿ ಮೊಮ್ಮಗ ನಿಖಿಲ್ ಕುಮಾರಸ್ವಾಮಿ ಪರ ಮಾಜಿ ಪ್ರಧಾನಿ ಹೆಚ್‍ಡಿಡಿ ಅದ್ದೂರಿ ರೋಡ್ ಶೋ ನಡೆಸಿದರು. ಬಳಿಕ ಮಾತನಾಡಿದ ಹೆಚ್.ಡಿ.ದೇವೇಗೌಡ ಭಾವನಾತ್ಮಕವಾಗಿ ನಿಖಿಲ್ ಗೆಲ್ಲಿಸುವಂತೆ ಮನವಿ ಮಾಡಿದರು.

Advertisement
Advertisement

ನಾನು ಎಲ್ಲಾ ಕಡೆ ಸುತ್ತಾಡಿ ಬಂದಾಗ ಈ ಗ್ರಾಮದ ಹೆಣ್ಣು ಮಗಳು ನನಗೆ ಊಟ ಹಾಕಿದ್ರು. ಈ ಮಣ್ಣಿನ ಅನ್ನದ ಖುಣ ನನ್ನ ಮೇಲಿದೆ. ನಿಮ್ಮ ಮುಂದೆ ಕೈಚಾಚಲಿಕ್ಕೆ ಬಂದಿದ್ದೇನೆ. ನಾನು ಯಾರಿಗೋಸ್ಕರ ಬಂದಿದ್ದೇನೆ ಅಂತ ನಿಮಗೆ ಗೊತ್ತು. ಮಂಡ್ಯದಲ್ಲಿ ನಿಖಿಲ್ ಕುಮಾರಸ್ವಾಮಿ ಅವರನ್ನ ಮೋಸ, ವಂಚನೆ ಮಾಡಿ ಸೋಲಿಸಿದರು. ಇವತ್ತು ರಾಮನಗರದ ಜನತೆ ನಾವಿದ್ದೇವೆ ಅನ್ನೋ ವಿಶ್ವಾಸ ಕೊಟ್ಟಿದ್ದಾರೆ. ನಿಖಿಲ್ ಗೆಲ್ಲಿಸುತ್ತೇವೆ ಎಂಬ ಧೈರ್ಯ ನೀಡ್ತಿದ್ದಾರೆ. ಮುದುಕ ಬಂದು ಮತ ಕೇಳ್ತಿದ್ದಾನೆ ಅಂತ ವ್ಯಂಗ್ಯ ಮಾಡಿದರು. ಅದಕ್ಕೆ ನೀವು ಉತ್ತರ ಕೊಡಬೇಕು ಎಂದರು.

ಬಿಜೆಪಿ ಅವರು ಹಿಂದಿನ ಬಾಗಿಲಿನಿಂದ ಬಂದು ಅಧಿಕಾರ ಹಿಡಿದಿದ್ದಾರೆ. ಕಾಂಗ್ರೆಸ್ ಅವರ ಕೈಯಲ್ಲೂ ಅಭಿವೃದ್ಧಿ ಮಾಡಲು ಆಗಲಿಲ್ಲ. ಕುಮಾರಸ್ವಾಮಿ ಇವತ್ತು ಇಡೀ ರಾಜ್ಯ ಪಂಚರತ್ನ ರಥಯಾತ್ರೆ ಮಾಡಿ ಸುತ್ತುತ್ತಿದ್ದಾರೆ. ಸ್ತ್ರೀ ಶಕ್ತಿ ಸಾಲಮನ್ನಾ ಮಾಡೋ ಏಕೈಕ ವ್ಯಕ್ತಿ ಕುಮಾರಸ್ವಾಮಿ. ನೀವು ನಮ್ಮನ್ನ ಉಳಿಸಿದ್ರಿ, ಪ್ರಧಾನಿ ಮಂತ್ರಿ ಮಾಡಿದ್ರಿ. ಮಂಡ್ಯದಲ್ಲಿ ನಿಖಿಲ್ ಸೋಲಿಸಿ ನೋವು ಕೊಟ್ಟರು. ಈಗ ನಿಮ್ಮ ಮನೆ ಬಾಗಿಲಿಗೆ ಬಂದಿದ್ದೇನೆ. ದಯಮಾಡಿ ನಿಖಿಲ್ ನನ್ನು ಗೆಲ್ಲಿಸಿ. ಈ 90ನೇ ವಯಸ್ಸಿನಲ್ಲಿ ನಿಮ್ಮನ್ನು ಕೈಚಾಚಿ ಕೇಳಿಕೊಳ್ಳುತ್ತೇನೆ ಎಂದು ಮನವಿ ಮಾಡಿದರು.

ನಿಖಿಲ್ ಕುಮಾರಸ್ವಾಮಿ ಗೆಲ್ಲಿಸುವ ಜವಾಬ್ದಾರಿ ನಿಮ್ಮದು. ರಾಮನಗರ ಜನ ಸಭ್ಯಸ್ಥರು. ನನ್ನನ್ನು ಹರಸಿ, ಗೆಲ್ಲಸಿ ನನ್ನನ್ನು ಪ್ರಧಾನಿ ಮಾಡಿದ್ರಿ. ಹಾಗೆಯೇ ನಿಖಿಲ್ ಅವರನ್ನೂ ಗೆಲ್ಲಿಸಿ ಎಂದು ನಿಖಿಲ್ ಅವರ ಕೈ ಎತ್ತಿ ಗೆಲ್ಲಿಸುವಂತೆ ದೇವೇಗೌಡ್ರು ಕಣ್ಣೀರು ಹಾಕಿ ಮನವಿ ಮಾಡಿದರು.

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಬದುಕು ಪುರಾಣ | ಅಂದು ಒಬ್ಬ ಬಕಾಸುರ.. ಇಂದು?

ಭೋಜನವೆಂದರೆ ಉದರಾಗ್ನಿಯನ್ನು ತಣಿಸುವ ಯಜ್ಞ. ಉದರಾಗ್ನಿಗೆ ಖಾದ್ಯಗಳೇ ಆಜ್ಯಗಳು. ಯಜ್ಞವೆಂದಾಗ ಶ್ರದ್ಧೆ, ಭಕ್ತಿ ಮತ್ತು…

8 hours ago

ಪರಿಘ ಯೋಗ, ಈ 5 ರಾಶಿಗೆ ಅತ್ಯಂತ ಶುಭ..!

ಹೆಚ್ಚಿನ ಮಾಹಿತಿಗಾಗಿ ರಾಯರ ಪರಮಭಕ್ತರದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490

8 hours ago

ಹವಾಮಾನ ವರದಿ | 07-06-2025 | ಜೂನ್ 11 ರಿಂದ ಕರಾವಳಿ ಜಿಲ್ಲೆಗಳ ಹೆಚ್ಚಿನ ಭಾಗಗಳಲ್ಲಿ ಉತ್ತಮ ಮಳೆ

ಅರಬ್ಬಿ ಸಮುದ್ರದಲ್ಲಿ ಮೇಲ್ಮೈ ಸುಳಿಗಾಳಿ ಉಂಟಾಗಿದ್ದು, ಇದರ ಪ್ರಭಾವದಿಂದ ಜೂನ್ 11 ರಿಂದ…

1 day ago

ಸುಸ್ಥಿರ ಅಭಿವೃದ್ಧಿ ಯಾವಾಗಲೂ ತತ್ವಶಾಸ್ತ್ರ ಮತ್ತು ಸಿದ್ಧಾಂತದ ಮೂಲತತ್ವಾಗಿದೆ

ಇತ್ತೀಚಿನ  ದಿನಗಳಲ್ಲಿ ಮಾಲಿನ್ಯದ ಬಗ್ಗೆ ಹೆಚ್ಚುತ್ತಿರುವ ಕಾಳಜಿ, ಪರಿಸರ ಸಂರಕ್ಷಣೆಯ ಬಗ್ಗೆ ಚಿಂತಿಸುವಂತೆ…

1 day ago

ನಿಮಗೆ ಸಾಡೇಸಾತಿ ಶುರುವಾಗಿದ್ರೆ ಶನಿ ನೀಡ್ತಾನೆ ಈ 6 ಸೂಚನೆ..!

ಹೆಚ್ಚಿನ ಮಾಹಿತಿಗಾಗಿ ರಾಯರ ಪರಮ ಭಕ್ತರಾದ ಜ್ಯೋತಿಷ್ಗಳನ್ನು ಸಂಪರ್ಕಿಸಿ 9535156490

1 day ago

ಹೊಸರುಚಿ | ಹಲಸಿನ ಹಣ್ಣಿನ ಮಲ್ಪುರಿ

ಹಲಸಿನ ಹಣ್ಣಿನ ಮಲ್ಪುರಿಗೆ ಬೇಕಾಗುವ ಸಾಮಗ್ರಿಗಳು : ಹಲಸಿನ ಹಣ್ಣಿನ ಪಲ್ಪ್ 1/2 ಕಪ್,…

1 day ago