Advertisement
The Rural Mirror ವಾರದ ವಿಶೇಷ

ಅಡಿಕೆ ಧಾರಣೆ ಏರಿಕೆಗೆ ಕಾರಣ ಇದೆ | ಈಗ ಅಡಿಕೆ ಮಾರುಕಟ್ಟೆಗೆ ಅನ್ವಯಿಸುವ ಸಿದ್ಧಾಂತಗಳು ಯಾವುದು..?

Share

ಅಡಿಕೆ ಮಾರುಕಟ್ಟೆ ಒಂದು ಅತೀ ಸೂಕ್ಷ್ಮ ಮಾರುಕಟ್ಟೆ.ಇಲ್ಲಿ ಸಣ್ಣ ಸಣ್ಣ ವಿಷಯಗಳು ಇಡೀ ಮಾರುಕಟ್ಟೆಯನ್ನು ಬುಡಮೇಲು ಮಾಡಬಲ್ಲದು.ಇದು ಮಾಹಿತಿಯ ಕೊರತೆಯಿಂದ, ಗೊಂದಲಗಳಿಂದ ,ಸರಕಾರದ ಬದಲಾದ ನೀತಿಗಳಿಂದ, ಪ್ರಾಕೃತಿಕ ಅಸಮತೋಲನಗಳಿಂದ,ಯುದ್ಧ ಇತ್ಯಾದಿಗಳಿಂದ. ವಾಸ್ತವವಾಗಿ ಇವಾವುದು ಮಾರುಕಟ್ಟೆ ಇಲ್ಲವೇ ದಾರನೇ ಮೇಲೆ ಯಾವುದೇ ಪ್ರಭಾವ ಬೀರುವುದಿಲ್ಲ.ಹೀಗಿದ್ದರೂ ಯಾಕೆ ಹೀಗಾಗುತ್ತದೆ ಎಂಬುದನ್ನು ನೋಡಿದಾಗ ಈ ಕ್ಷೇತ್ರದಲ್ಲಿ ಕಂಡು ಬರುವ ಮುಖ್ಯ ಲೋಪವೆಂದರೆ ಸರಿಯಾದ ಮಾಹಿತಿಯ ಕೊರತೆ, ಅಲ್ಲದೆ ಬಹು ಪಾಲು ಕಾರ್ಯ ನಿರ್ವಹಿಸುವ ಅಸಂಘಟಿತ ಮಾರಾಟ ವ್ಯವಸ್ಥೆ.…..ಮುಂದೆ ಓದಿ….

ಮೇಲಿನ ಈ ಸ್ಥಿತಿಯಿಂದಾಗಿ ಇಲ್ಲಿ ಕೆಲವೊಂದು ಸಿದ್ಧಾಂತಗಳು ಪರೋಕ್ಷವಾಗಿ ಅನ್ವಯ ಆಗುತ್ತಿವೆ.ಈ ಸಿದ್ದಾಂತಗಳೆಂದರೆ ಮೈಂಡ್ ಗೇಮ್,ಸ್ಪೆಕುಲೇಟಿವ್ ಮತ್ತು ಸೆಂಟಿಮೆಂಟ್.

ಮೈಂಡ್ ಗೇಮ್: ಈ ಸಿದ್ಧಾಂತ ಅಡಿಕೆ ಮಾರುಕಟ್ಟೆಯಲ್ಲಿ ಪ್ರಮುಖ ಪಾತ್ರ ವಹಿಸುತ್ತದೆ. ಬೆಳೆಗಾರರ ಮನಸ್ಥಿತಿಯನ್ನು ಅರ್ಥೈಸಿ ಅದಕ್ಕನುಗುಣವಾಗಿ ಬೇಡಿಕೆಯನ್ನು ಇಡುವುದು. ಯಾವುದಾದರೂ ಗೊಂದಲ ವಾತಾವರಣದಲ್ಲಿ ಸೃಷ್ಟಿ ಆದಾಗ ಇನ್ನು ಧಾರಣೆ ಏರಿಕೆಗೆ ಅವಕಾಶ ಕಡಿಮೆ, ಸಾಧ್ಯವಾದಷ್ಟು ಬೇಗ ಅಡಿಕೆಯನ್ನು ಮಾರಾಟ ಮಾಡಲು ಒತ್ತಡ ಹೇರುವುದು. ಉದಾಹರಣೆಗೆ ಪ್ರಾಕೃತಿಕ ವಿಕೋಪ ಆದಾಗ,ನೀತಿ ನಿಯಮಗಳಲ್ಲಿ ಬದಲಾವಣೆ ಆದಾಗ ಅಡಿಕೆ ಮೇಲೆ ತೋಗು ಕತ್ತಿ ಬಂದಾಗ ಇತ್ಯಾದಿ. ವಾಸ್ತವವಾಗಿ ಇವಾವುದೂ ಪ್ರಭಲ ಪರಿಣಾಮ ಬೀರುವುದಿಲ್ಲ. ಇದೇ ರೀತಿ ಆಮದಾಗಬಹುದು ಆಮದಾಗಿದೆ ಇತ್ಯಾದಿ ವಿಚಾರಗಳು.

ಸ್ಪೆಕುಲೆಟಿವ್ : ಇಲ್ಲಿ ಊಹೆಗಳು ಮಾರುಕಟ್ಟೆಯನ್ನು ಏರು ಪೇರು ಮಾಡುತ್ತವೆ. ಪೂರೈಕೆ ಮತ್ತು ಬೇಡಿಕೆ ಬಗ್ಗೆ ಸರಿಯಾದ ಮಾಹಿತಿಗಳು ಇಲ್ಲದೆ ಕೇವಲ ಊಹೆಗಳ ಆಧಾರದಲ್ಲಿ ಧಾರಣೆ ಆತಂತ್ರಗೊಳ್ಳುವುದು. ಉದಾಹರಣೆಗೆ ಸ್ಟಾಕ್ ಇರುವ ಮಾಲು ಖಾಲಿ ಆಗದೆ ಇದ್ದಾಗ ಬೇಡಿಕೆ ಮತ್ತು ಪೂರೈಕೆ ಏರು ಪೇರು ಆಗಿ ದಾರಣೆಯು ಅದೇ ದಾರಿ ಹಿಡಿಯುತ್ತದೆ.

ಸೆಂಟಿಮೆಂಟ್ : ಇದು ಬೆಳೆಗಾರರ ಭಾವನೆಗಳ ಮೇಲೆ ಆಗುವಂತಹ ತಂತ್ರ. ಇಲ್ಲಿ ವ್ಯವಹಾರ ಮಾಡುವವರು ಬೆಳೆಗಾರರೊಂದಿಗೆ ಆತ್ಮೀಯ ಸಂಬಂಧ ಇಟ್ಟುಕೊಂಡು ಅವರ ಆಗು ಹೋಗುಗಳ ಬಗ್ಗೆ ತಿಳಿದುಕೊಂಡು ಅವಕಾಶ ಬಳಸಿಕೊಂಡು ಧಾರಣೆಯಲ್ಲಿ ಏರು ಪೇರು ಮಾಡುವುದು.ಇದರೊಂದಿಗೆ ಹೆಚ್ಚು ಧಾರಣೆಯ ಆಸೆ ತೋರಿಸಿ ಹಣದ ಪಾವತಿ ಸರಿಯಾಗಿ ಮಾಡದೆ ಕೊನೆಗೆ ಹಣ ಕೊಡದೆ ಇರುವುದು.

ಕೃಷಿ ಮಾರುಕಟ್ಟೆಯ Update ಗಳಿಗಾಗಿ ” ದ‌ ರೂರಲ್ ಮಿರರ್.ಕಾಂ” WhatsApp ಚಾನೆಲ್‌ ಫಾಲೋ ಮಾಡಿ | ಚಾನೆಲ್‌ ಫಾಲೋ ಮಾಡಲು ಇಲ್ಲಿ ಕ್ಲಿಕ್‌ ಮಾಡಿರಿ…

ಮೇಲೆ ತಿಳಿಸಿದ ಹಲವು ಸಿದ್ಧಾಂತಗಳು ಬಹು ಪಾಲು ಎಲ್ಲಾ ಕೃಷಿ ಉತ್ಪನ್ನಗಳ ಮಾರುಕಟ್ಟೆಯಲ್ಲಿ ಸರ್ವೇ ಸಾಮಾನ್ಯ.ಇದರಿಂದಾಗಿ ಕೃಷಿಕರು ಸೋಲನ್ನು ಅನುಭವಿಸುತ್ತಾರೆ. ಈ ರೀತಿಯ ಸೋಲನ್ನು ತಪ್ಪಿಸಲು ಅಡಿಕೆ ಕ್ಷೇತ್ರಕ್ಕೆ ಇಂದು ಉತ್ಪಾದನೆ ಪೂರೈಕೆ ಬೇಡಿಕೆ ಮಾರುಕಟ್ಟೆಯ ಸ್ಥಿತಿ ಗತಿ ಇತ್ಯಾದಿಗಳ ಮಾಹಿತಿ ಅತ್ಯಗತ್ಯ. ಇವನ್ನು ಕಾಲಕಾಲಕ್ಕೆ ಒದಗಿಸಲು ಕ್ಷೇತ್ರಕ್ಕೊಬ್ಬ ವಕ್ತಾರ ಅನಿವಾರ್ಯ.ಈ ನಿಟ್ಟಿನಲ್ಲಿ ನಮ್ಮ ಪ್ರಯತ್ನಗಳು ಬಲವಾದ ಸಂಘಟನೆ ಮೂಲಕ ಆಗಲೇ ಬೇಕು. ನಮ್ಮಲ್ಲಿ ಇಂದು ಅಡಿಕೆ ಮಾರುಕಟ್ಟೆಯಲ್ಲಿ ಕ್ಯಾಂಪ್ಕೊ ಇರುವ ಕಾರಣ ಮೇಲೆ ಹೆಸರಿಸಿದ ಸಿದ್ಧಾಂತಗಳು ಅತಿರೇಕಕ್ಕೆ ತಲಪಿಲ್ಲ. ಈ ಸಂಸ್ಥೆ ಒಂದಿಗೆ ನಮ್ಮದಾದ ಪ್ರಭಲ ಸಂಘಟನೆ ಇದ್ದಲ್ಲಿ ಮುಂದಿನ ದಿನಗಳಲ್ಲಿ ಅಡಿಕೆ ಬೆಳೆಗಾರರು ನೆಮ್ಮದಿ ಕಂಡುಕೊಳ್ಳಬಹುದು.

ಬರಹ :
ಡಾ|ವಿಘ್ನೇಶ್ವರ ಭಟ್‌ ವರ್ಮುಡಿ

ಡಾ|ವಿಘ್ನಶ್ವರ ಭಟ್ ವರ್ಮುಡಿ ಅವರು ಕೃಷಿಕರು. ಪುತ್ತೂರಿನ ವಿವೇಕಾನಂದ ಮಹಾವಿದ್ಯಾಲಯದ ಅರ್ಥಶಾಸ್ತ್ರ ವಿಭಾಗದ ಪ್ರಾಧ್ಯಾಪಕರಾಗಿದ್ದವರು. ವಿವೇಕಾನಂದ ವಿದ್ಯಾವರ್ಧಕ ಸಂಘದ ಅಧೀನ ಸಂಸ್ಥೆಯದ ಪೆರ್ಲದ ನಲಂದಾ ಮಹಾವಿದ್ಯಾಲಯದ ಪ್ರಾಂಶುಪಾಲರಾಗಿ ಕರ್ತವ್ಯ ನಿರ್ವಹಿಸಿದ್ದಾರೆ. ಅಂತಾರಾಷ್ಟ್ರೀಯ ಮಟ್ಟದಲ್ಲಿ ಕೃಷಿ ಅರ್ಥಶಾಸ್ತ್ರಜ್ಞರಾಗಿ ಗುರುತಿಸಿಕೊಂಡಿದ್ದಾರೆ. ಹಲವು ಸಂಶೋಧನಾ ಬರಹಗಳು ಪ್ರಕಟವಾಗಿದೆ. ಅಡಿಕೆ ಮಾರುಕಟ್ಟೆ ಬಗ್ಗೆ ಅಧಿಕೃತವಾಗಿ ಮಾತನಾಡುವ ವ್ಯಕ್ತಿಯಾಗಿದ್ದಾರೆ.

ಕೃಷಿ ಮಾರುಕಟ್ಟೆಯ Update ಗಳಿಗಾಗಿ ” ದ‌ ರೂರಲ್ ಮಿರರ್.ಕಾಂ” WhatsApp ಚಾನೆಲ್‌ ಫಾಲೋ ಮಾಡಿ | ಚಾನೆಲ್‌ ಫಾಲೋ ಮಾಡಲು ಇಲ್ಲಿ ಕ್ಲಿಕ್‌ ಮಾಡಿರಿ…

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ಡಾ|ವಿಘ್ನೇಶ್ವರ ಭಟ್‌ ವರ್ಮುಡಿ

ಡಾ|ವಿಘ್ನಶ್ವರ ಭಟ್ ವರ್ಮುಡಿ ಅವರು ಕೃಷಿಕರು. ಪುತ್ತೂರಿನ ವಿವೇಕಾನಂದ ಮಹಾವಿದ್ಯಾಲಯದ ಅರ್ಥಶಾಸ್ತ್ರ ವಿಭಾಗದ ಪ್ರಾಧ್ಯಾಪಕರಾಗಿದ್ದವರು. ವಿವೇಕಾನಂದ ವಿದ್ಯಾವರ್ಧಕ ಸಂಘದ ಅಧೀನ ಸಂಸ್ಥೆಯದ ಪೆರ್ಲದ ನಲಂದಾ ಮಹಾವಿದ್ಯಾಲಯದ ಪ್ರಾಂಶುಪಾಲರಾಗಿ ಕರ್ತವ್ಯ ನಿರ್ವಹಿಸಿದ್ದಾರೆ. ಅಂತಾರಾಷ್ಟ್ರೀಯ ಮಟ್ಟದಲ್ಲಿ ಕೃಷಿ ಅರ್ಥಶಾಸ್ತ್ರಜ್ಞರಾಗಿ ಗುರುತಿಸಿಕೊಂಡಿದ್ದಾರೆ. ಹಲವು ಸಂಶೋಧನಾ ಬರಹಗಳು ಪ್ರಕಟವಾಗಿದೆ. ಅಡಿಕೆ ಮಾರುಕಟ್ಟೆ ಬಗ್ಗೆ ಅಧಿಕೃತವಾಗಿ ಮಾತನಾಡುವ ವ್ಯಕ್ತಿಯಾಗಿದ್ದಾರೆ. ಹಲವು ಸಂಘಟನೆಗಳಲ್ಲಿ ಸಕ್ರಿಯವಾಗಿ ಕೆಲಸ ಮಾಡಿದ್ದಾರೆ. ಅಡಿಕೆಯ ಬಗ್ಗೆ ವಿವಿಧ ಬರಹಗಳನ್ನು ಪ್ರಕಟಿಸಿದ್ದಾರೆ.

Published by
ಡಾ|ವಿಘ್ನೇಶ್ವರ ಭಟ್‌ ವರ್ಮುಡಿ

Recent Posts

ಹವಾಮಾನ ವರದಿ | 22.07.2026 | ಉತ್ತರ ಕನ್ನಡ, ಉಡುಪಿಯಲ್ಲಿ ಉತ್ತಮ ಮಳೆಯ ಸಾಧ್ಯತೆ; ರಾಜ್ಯದಲ್ಲಿ ಮಳೆ ಚಟುವಟಿಕೆ ಮುಂದುವರಿಕೆ

23.07.2026ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ ಕರಾವಳಿ: ಕಾಸರಗೋಡು, ದಕ್ಷಿಣ…

12 hours ago

ಆಮದು ಕಳಪೆ ಅಡಿಕೆ ಮಿಶ್ರಣದ ಎಚ್ಚರಿಕೆ- ಬೆಳೆಗಾರರಿಗೆ ಕ್ಯಾಂಪ್ಕೊ ಮನವಿ

ಆಮದುಗೊಂಡ ಕಳಪೆ ಅಡಿಕೆಯನ್ನು ದೇಶೀಯ ಅಡಿಕೆಯೊಂದಿಗೆ ಮಿಶ್ರಣ ಮಾಡಲಾಗುತ್ತಿದೆ ಎಂಬ ವರದಿಗಳ ಹಿನ್ನೆಲೆಯಲ್ಲಿ…

1 day ago

ಹವಾಮಾನ ವರದಿ | 21-07-2026 | ಕರಾವಳಿ-ಮಲೆನಾಡಿನಲ್ಲಿ ಸಾಧಾರಣ ಮಳೆ ಮುಂದುವರಿಕೆ, ಭಾರೀ ಮಳೆ ಸಾಧ್ಯತೆ ಕಡಿಮೆ

ಕರಾವಳಿ ಮತ್ತು ಮಲೆನಾಡಿನಲ್ಲಿ ಮುಂದಿನ 10 ದಿನಗಳವರೆಗೆ ಬಿಟ್ಟು ಬಿಟ್ಟು ಸಾಧಾರಣ ಮಳೆ…

1 day ago

ಅಡಿಕೆ ರೋಗ ಸಂಕಷ್ಟಕ್ಕೆ ಸಂಸತ್ತಿನಲ್ಲಿ ಧ್ವನಿ : ನಿಯಮ 377ರಡಿ ಕ್ಯಾ. ಬ್ರಿಜೇಶ್ ಚೌಟ ಒತ್ತಾಯ

ಅಡಿಕೆ ತೋಟಗಳಲ್ಲಿ ಹೆಚ್ಚುತ್ತಿರುವ ಎಲೆ ಚುಕ್ಕೆ, ಹಳದಿ ಎಲೆ ಮತ್ತು ಕೊಳೆ ರೋಗಗಳಿಗೆ…

2 days ago

ದೇಶಾದ್ಯಂತ ಮುಂಗಾರು ಅಬ್ಬರ : ಹಲವು ರಾಜ್ಯಗಳಿಗೆ ಭಾರೀ ಮಳೆ ಎಚ್ಚರಿಕೆ, ಹಿಮಾಲಯ ತಪ್ಪಲಿನಲ್ಲಿ ರೆಡ್ ಅಲರ್ಟ್

ದೇಶಾದ್ಯಂತ ಮುಂಗಾರು ಮತ್ತಷ್ಟು ತೀವ್ರಗೊಂಡಿದ್ದು, ಉತ್ತರ ಭಾರತದ ಹಲವು ಭಾಗಗಳಿಗೆ ರೆಡ್ ಅಲರ್ಟ್…

3 days ago

ರಾಜ್ಯದಲ್ಲಿ ಬರದ ಛಾಯೆ | 178 ತಾಲ್ಲೂಕುಗಳಲ್ಲಿ ತೀವ್ರ ಮಳೆ ಕೊರತೆ, ಜಲಾಶಯಗಳ ನೀರಿನ ಮಟ್ಟ ಶೇ.40ಕ್ಕೆ ಕುಸಿತ

ರಾಜ್ಯದಲ್ಲಿ ಮುಂಗಾರು ಮಳೆ 39% ಕೊರತೆಯಾಗಿದ್ದು, 26 ಜಿಲ್ಲೆಗಳ 178 ತಾಲ್ಲೂಕುಗಳಲ್ಲಿ ಬರದ…

3 days ago