ದಾಖಲೆ ಪ್ರಮಾಣದ ಬ್ಯಾಡಗಿ ಮೆಣಸಿನಕಾಯಿ ಮಾರುಕಟ್ಟೆಗೆ ಆವಕ | ಒಂದೇ ದಿನ ಬರೋಬ್ಬರಿ 4 ಲಕ್ಷ ಮೆಣಸಿನಕಾಯಿ ಚೀಲ ಮಾರುಕಟ್ಟೆಗೆ |

March 1, 2024
1:39 PM

ಕಳೆದ ಬಾರಿ ಕೆಂಪು ಮೆಣಸಿನಕಾಯಿ ಬೆಲೆಯ(Red Chilly Price) ಘಾಟು ಗ್ರಾಹಕರಿಗೆ(Customer) ಬಾರಿ ಹೊಡೆದಿತ್ತು. 500ರಿಂದ 600 ರವರೆಗೆ ಕೆಜಿ ಬ್ಯಾಡಗಿ ಮೆಣಸಿನ ಬೆಲೆ ಏರಿತ್ತು. ಆದರೆ ಈ ಬಾರಿ ಹಾವೇರಿ(Haveri) ಜಿಲ್ಲೆಯ ಬ್ಯಾಡಗಿ ಮೆಣಸಿನಕಾಯಿ ಮಾರುಕಟ್ಟೆಗೆ(Byadagi mirchi Market) ಈ ವಾರ ದಾಖಲೆ ಪ್ರಮಾಣದ ಮೆಣಸಿನಕಾಯಿ ಆವಕವಾಗಿದೆ. ಮಾರುಕಟ್ಟೆಗೆ ಒಂದೇ ದಿನ ಸುಮಾರು ನಾಲ್ಕು ಲಕ್ಷ ಚೀಲಗಳ ಆವಕವಾಗಿದ್ದು, ಮಾರುಕಟ್ಟೆಯಲ್ಲಿ ಜಾಗ ಸಾಲದೇ ಮೆಣಸಿನಕಾಯಿ ಚೀಲಗಳನ್ನು ಇಳಿಸಿಕೊಳ್ಳಲಾರದ ಪರಿಸ್ಥಿತಿ ಉಂಟಾಗಿದೆ. ಆವಕ ಜಾಸ್ತಿಯಾದ ಹಿನ್ನೆಲೆ ಬೆಲೆಯಲ್ಲಿ ಕೊಂಚ ಇಳಿಕೆ ಕಾಣಬಹುದೇನೋ ಅನ್ನುವ ನಿರೀಕ್ಷೆ ಗ್ರಾಹಕರದ್ದು.

Advertisement
Advertisement

ಸುಮಾರು 3 ಲಕ್ಷ ಮೂವತ್ತು ಸಾವಿರ ಚೀಲಗಳನ್ನು ಮಾರುಕಟ್ಟೆಯಲ್ಲಿ ಇಳಿಸಿಕೊಂಡರೆ, ಉಳಿದ 60 ಸಾವಿರಕ್ಕೂ ಅಧಿಕ ಮೆಣಸಿನಕಾಯಿ ಚೀಲಗಳನ್ನು ಬ್ಯಾಡಗಿ ತಾಲೂಕು ಕ್ರೀಡಾಂಗಣದಲ್ಲಿ ಇಳಿಸಿಕೊಳ್ಳಲಾಯಿತು. ಎರಡು ದಿನಗಳ ಕಾಲ ರೈತರ ಮೆಣಸಿನಕಾಯಿಗೆ ಲಾಟ್​ ನಿರ್ಮಿಸಿ ದರ ನಿಗದಿ ಮಾಡಲಾಗಿತ್ತು.

ಮಾರುಕಟ್ಟೆ ವರ್ತಕರು ಮಾತನಾಡುತ್ತಾ, ‘ಇಷ್ಟು ಪ್ರಮಾಣದ ಆವಕವನ್ನು ಮಾರುಕಟ್ಟೆ ಆರಂಭವಾದಾಗಿನಿಂದ ನೋಡಿರಲಿಲ್ಲಾ. ಕಳೆದ ವರ್ಷ ಏಪ್ರಿಲ್​ನಲ್ಲಿ 3 ಲಕ್ಷ 26 ಸಾವಿರ ಮೆಣಸಿನಕಾಯಿ ಚೀಲಗಳು ಆವಕವಾಗಿತ್ತು. ಆದರೆ ಈ ವರ್ಷ 3 ಲಕ್ಷ 36 ಸಾವಿರ ಚೀಲಗಳನ್ನು ಮಾರುಕಟ್ಟೆಯಲ್ಲಿ ಮತ್ತು ಉಳಿದ 60 ಸಾವಿರಕ್ಕೂ ಅಧಿಕ ಚೀಲಗಳನ್ನು ಕ್ರೀಡಾಂಗಣದಲ್ಲಿ ಇಳಿಸಿಕೊಂಡಿದ್ದೇವೆ. ಈ ರೀತಿ ನಾಲ್ಕು ಲಕ್ಷ ಮೆಣಸಿನಕಾಯಿ ಚೀಲಗಳು ಆವಕವಾಗಿದೆ. ಬ್ಯಾಡಗಿ ಮೆಣಸಿನಕಾಯಿ ಮಾರುಕಟ್ಟೆ ಆರಂಭವಾದಾಗಿನಿಂದ ಇಷ್ಟು ನೋಡಿರಲಿಲ್ಲಾ. ಇದೊಂದು ದಾಖಲೆ’. ಇನ್ನು ‘ಮೆಣಸಿನಕಾಯಿ ಈ ರೀತಿ ಅಧಿಕ ಪ್ರಮಾಣದಲ್ಲಿ ಮಾರುಕಟ್ಟೆಗೆ ಬರಲು ಕಾರಣ ಮೆಣಸಿನಕಾಯಿ ಬೆಳೆಯುವ ರೈತರ ಸಂಖ್ಯೆ ಅಧಿಕವಾಗಿರುವುದು. ಅಲ್ಲದೆ ಮೆಣಸಿನಕಾಯಿ ಇಳುವರಿಯಲ್ಲಿ ಏರಿಕೆಯಾಗಿರುವುದು ಈ ರೀತಿಯ ಆವಕ ಏರಿಕೆಗೆ ಕಾರಣ’ ಎಂದು ಹೇಳಿದ್ದಾರೆ.

Badagi Chilli Market

ಇನ್ನು ಆಂಧ್ರಪ್ರದೇಶದ ಗುಂಟೂರು ಮೆಣಸಿನಕಾಯಿ ಮಾರುಕಟ್ಟೆಗಿಂತ ಇಲ್ಲಿ ಅಧಿಕ ದರ ಸಿಗುವ ಕಾರಣ ಸುಮಾರು 600, 700 ಕೀಲೋಮೀಟರ್​ ದೂರದಿಂದ ಬ್ಯಾಡಗಿ ಮೆಣಸಿನಕಾಯಿ ಮಾರುಕಟ್ಟೆಗೆ ರೈತರು ತಮ್ಮ ಉತ್ಪನ್ನ ತಂದು ಮಾರಾಟ ಮಾಡುತ್ತಾರೆ. ಮತ್ತೊಂದು ಪ್ರಮುಖ ಕಾರಣ ಎಂದರೆ ಬ್ಯಾಡಗಿ ಮೆಣಸಿನಕಾಯಿ ಮಾರುಕಟ್ಟೆಯ ಪಾರದರ್ಶಕತೆ ಮತ್ತು ಇ ಟೆಂಡರ್ ವ್ಯವಸ್ಥೆ. ಇಲ್ಲಿಯ ವರ್ತಕರು ಯಾವುದೇ ಕಾರಣಕ್ಕೂ ರೈತರಿಗೆ ಮೋಸವಾಗಲು ಬಿಡುವುದಿಲ್ಲಾ. ಅಲ್ಲದೆ ಯಾವುದೇ ರೀತಿಯ ವಂಚನೆಯನ್ನು ಇಲ್ಲಿ ವರ್ತಕರು ಸಹಿಸುವುದಿಲ್ಲಾ. ಈ ನಂಬಿಕೆಯಿಂದ ಈ ಮಾರುಕಟ್ಟೆಗೆ ವರ್ಷದಿಂದ ವರ್ಷಕ್ಕೆ ಮೆಣಸಿನಕಾಯಿ ಮಾರಾಟ ಮಾಡಲು ರೈತರು ಬರುತ್ತಿದ್ದಾರೆ ಎಂದು ವರ್ತಕ ಎಸ್.ಆರ್.ಪಾಟೀಲ್ ಹೇಳಿದ್ದಾರೆ.

ಈ ವರ್ಷ ಅಧಿಕ ಮಳೆಯಾಗದ ಕಾರಣ ಮೆಣಸಿನಕಾಯಿ ಬೆಳೆಗೆ ಫಂಗಸ್ ಸೇರಿದಂತೆ ಯಾವುದೇ ರೋಗಗಳು ಬಂದಿಲ್ಲಾ. ಅಲ್ಲದೆ ತುಂಗಭದ್ರಾ ಜಲಾಯಶ ಹಾಗೂ ಆಲಮಟ್ಟಿ ಡ್ಯಾಂ ನೀರು ಮೆಣಸಿನಕಾಯಿ ಬೆಳೆಯುವ ರೈತರಿಗೆ ಹೆಚ್ಚು ಉಪಯೋಗವಾಗಿದ್ದು ಇದರಿಂದ ಮೆಣಸಿನಕಾಯಿ ಬೆಳೆಯುವ ರೈತರಿಗೆ ಯಾವುದೇ ಬರಗಾಲದ ಬಿಸಿ ತಟ್ಟಲಿಲ್ಲಾ ಎಂದು ವರ್ತಕ ಎಸ್.ಆರ್.ಪಾಟೀಲ್ ತಿಳಿಸಿದ್ದಾರೆ.

Advertisement

ಉತ್ತರಕರ್ನಾಟಕದ ಪ್ರಮುಖ ಜಿಲ್ಲೆಗಳು ಮತ್ತು ಬಾದಾಮಿ ಬಾಗಲಕೋಟೆ ಮೆಣಸಿನಕಾಯಿ ಬೆಳೆಯು ಅಧಿಕವಾಗಿದ್ದರಿಂದ ಮಾರುಕಟ್ಟೆಗೆ ದಾಖಲೆ ಪ್ರಮಾಣದ ಮೆಣಸಿನಕಾಯಿ ಆವಕವಾಗಿದೆ. ಈ ವರ್ಷ ಮಳೆ ಇನ್ನು ಸ್ವಲ್ಪ ಬಂದಿದ್ದರೆ ಐದು ಲಕ್ಷ ಚೀಲದವರೆಗೆ ಹೋಗುತ್ತಿತ್ತು. ಮೆಣಸಿನಕಾಯಿ ಬೆಳೆಯಲ್ಲಿನ ಹೊಸ ಹೊಸ ತಳಿಗಳು ಪರಿಚಯವಾಗಿದ್ದು ಅಧಿಕ ಪ್ರಮಾಣದಲ್ಲಿ ಇಳುವರಿ ಬಿಡಲಾರಂಭಿಸಿದ್ದು, ಇದು ಸಹ ಮಾರುಕಟ್ಟೆಗೆ ಅಧಿಕ ಪ್ರಮಾಣದ ಆವಕಕ್ಕೆ ಕಾರಣ. ಬ್ಯಾಡಗಿ ಮೆಣಸಿನಕಾಯಿ ಮಾರುಕಟ್ಟೆ ಪ್ರತಿವರ್ಷ ಎರಡು ಸಾವಿರ ಕೋಟಿ ರೂಪಾಯಿಗಿಂತ ಅಧಿಕ ಪ್ರಮಾಣದ ವಹಿವಾಟು ನಡೆಸುತ್ತಿದೆ. ಆದರೆ ಈ ವರ್ಷ ಮಾರುಕಟ್ಟೆಯ ವಹಿವಾಟು ಎರಡು ಸಾವಿರ 500 ಕೋಟಿ ರೂಪಾಯಿ ದಾಟುವ ಸಾಧ್ಯತೆ ಇದೆ ಎಂದು ಪಾಟೀಲ್ ಮಾಹಿತಿ ನೀಡಿದ್ದಾರೆ.

– ಅಂತರ್ಜಾಲ ಮಾಹಿತಿ

Byadagi mirchi market of Haveri district has received a record amount of chillies this week. Around four lakh bags are available in the market in a single day, and there is a situation where the market cannot unload the bags of chilli without running out of space. Consumers are expecting a slight decrease in the price against the background of increased demand.

Advertisement

Advertisement

Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಎರಡು ದಿನಗಳಿಂದ ಸಾಮಾನ್ಯ ಮಳೆ | ಗಾಳಿಯೊಂದಿಗೆ ಮಳೆ ಸಾಧ್ಯತೆ
July 29, 2025
6:47 AM
by: ದ ರೂರಲ್ ಮಿರರ್.ಕಾಂ
ಕಾಡಾನೆ ಹಾವಳಿ | ಆನೆಗಳನ್ನು ಕಾಡಿಗಟ್ಟಲು  ಅರಣ್ಯಾಧಿಕಾರಿಗಳು ತುರ್ತು ಕ್ರಮವಹಿಸುವಂತೆ ಸೂಚನೆ
July 29, 2025
6:40 AM
by: The Rural Mirror ಸುದ್ದಿಜಾಲ
ಮಾಂಗಲ್ಯ ದೋಷದ ಭೀತಿ | ವಿವಾಹ ಜೀವನದ ರಕ್ಷಣೆಗೆ ಜ್ಯೋತಿಷ್ಯ ಉಪಾಯಗಳು | ಮಾಂಗಲ್ಯ ದೋಷದ ಜ್ಯೋತಿಷ್ಯ ಮಹತ್ವ
July 29, 2025
6:18 AM
by: ದ ರೂರಲ್ ಮಿರರ್.ಕಾಂ
ಜಾನುವಾರುಗಳನ್ನು ಅರಣ್ಯದಲ್ಲಿ ಮೇವು | ಆದೇಶವನ್ನು ಹಿಂಪಡೆಯುವಂತೆ ರೈತರು ಒತ್ತಾಯ
July 28, 2025
10:30 PM
by: The Rural Mirror ಸುದ್ದಿಜಾಲ
ರಾಜ್ಯದಲ್ಲಿ ರಸಗೊಬ್ಬರ ಕೊರತೆ ನೀಗಿಸಲು ಅಗತ್ಯ ಕ್ರಮ

ಪ್ರಮುಖ ಸುದ್ದಿ

MIRROR FOCUS

ಕಾಡಾನೆ ಹಾವಳಿ | ಆನೆಗಳನ್ನು ಕಾಡಿಗಟ್ಟಲು  ಅರಣ್ಯಾಧಿಕಾರಿಗಳು ತುರ್ತು ಕ್ರಮವಹಿಸುವಂತೆ ಸೂಚನೆ
July 29, 2025
6:40 AM
by: The Rural Mirror ಸುದ್ದಿಜಾಲ
ಕಾಡಾನೆ ಹಾವಳಿ | ಆನೆಗಳನ್ನು ಕಾಡಿಗಟ್ಟಲು  ಅರಣ್ಯಾಧಿಕಾರಿಗಳು ತುರ್ತು ಕ್ರಮವಹಿಸುವಂತೆ ಸೂಚನೆ
July 29, 2025
6:40 AM
by: The Rural Mirror ಸುದ್ದಿಜಾಲ
ಜಾನುವಾರುಗಳನ್ನು ಅರಣ್ಯದಲ್ಲಿ ಮೇವು | ಆದೇಶವನ್ನು ಹಿಂಪಡೆಯುವಂತೆ ರೈತರು ಒತ್ತಾಯ
July 28, 2025
10:30 PM
by: The Rural Mirror ಸುದ್ದಿಜಾಲ
ರಾಜ್ಯದಲ್ಲಿ ಅರಣ್ಯ ಇಲಾಖೆಯಿಂದ 11.50 ಕೋಟಿ ಸಸಿ ನೆಡುವ ಗುರಿ
July 28, 2025
10:23 PM
by: ದ ರೂರಲ್ ಮಿರರ್.ಕಾಂ
ರಾಜ್ಯದಲ್ಲಿ ರಸಗೊಬ್ಬರ ಕೊರತೆ ನೀಗಿಸಲು ಅಗತ್ಯ ಕ್ರಮ
July 28, 2025
8:10 PM
by: The Rural Mirror ಸುದ್ದಿಜಾಲ

Editorial pick

ಹವಾಮಾನ ಸಂಕಷ್ಟ | ಆಹಾರ ಬೆಲೆಗಳ ಏರಿಳಿತಕ್ಕೆ ಕಾರಣ ಏನು ? – ಅಧ್ಯಯನ ವರದಿ
July 26, 2025
8:18 AM
by: ದ ರೂರಲ್ ಮಿರರ್.ಕಾಂ
ಅಡಿಕೆಗೆ ಕೊಳೆರೋಗ ಇದೆಯೇ…? | ಮಾಹಿತಿ ದಾಖಲಿಸಬಹುದೇ…?
July 24, 2025
5:20 PM
by: ದ ರೂರಲ್ ಮಿರರ್.ಕಾಂ
ಅಡಿಕೆಗೆ ಕೊಳೆರೋಗ | ಮಳೆಯಲ್ಲೂ ಇವರು ಔಷಧಿ ಸಿಂಪಡಿಸುತ್ತಾರೆ..!
July 24, 2025
4:42 PM
by: The Rural Mirror ಸುದ್ದಿಜಾಲ

ವಿಡಿಯೋ

60 ಸೆಕೆಂಡುಗಳಲ್ಲಿ 10 ಆಸನಗಳ ಪ್ರದರ್ಶಿಸಿದ ಋತ್ವಿ | ಯೋಗದಲ್ಲಿ ಚನ್ನರಾಯಪಟ್ಟಣದ ಬಾಲಕಿ ಸಾಧನೆ
June 19, 2025
11:21 PM
by: The Rural Mirror ಸುದ್ದಿಜಾಲ
ಇದು ಬರೀ ಚಿಪ್ಪಿಯಲ್ಲ..!
June 14, 2025
8:17 AM
by: ದ ರೂರಲ್ ಮಿರರ್.ಕಾಂ
ಅಡಿಕೆಯ ನಾಡಿಗೆ ಬೇಕು ತರಕಾರಿ
April 5, 2025
8:14 AM
by: ದ ರೂರಲ್ ಮಿರರ್.ಕಾಂ
ಪಪ್ಪಾಯಿ ಕೃಷಿ ಕಲಿಸಿದ ಪಾಠ
March 30, 2025
11:29 PM
by: ದ ರೂರಲ್ ಮಿರರ್.ಕಾಂ

ಸುದ್ದಿಗಳು

ಎರಡು ದಿನಗಳಿಂದ ಸಾಮಾನ್ಯ ಮಳೆ | ಗಾಳಿಯೊಂದಿಗೆ ಮಳೆ ಸಾಧ್ಯತೆ
July 29, 2025
6:47 AM
by: ದ ರೂರಲ್ ಮಿರರ್.ಕಾಂ
ಕಾಡಾನೆ ಹಾವಳಿ | ಆನೆಗಳನ್ನು ಕಾಡಿಗಟ್ಟಲು  ಅರಣ್ಯಾಧಿಕಾರಿಗಳು ತುರ್ತು ಕ್ರಮವಹಿಸುವಂತೆ ಸೂಚನೆ
July 29, 2025
6:40 AM
by: The Rural Mirror ಸುದ್ದಿಜಾಲ
ಮಾಂಗಲ್ಯ ದೋಷದ ಭೀತಿ | ವಿವಾಹ ಜೀವನದ ರಕ್ಷಣೆಗೆ ಜ್ಯೋತಿಷ್ಯ ಉಪಾಯಗಳು | ಮಾಂಗಲ್ಯ ದೋಷದ ಜ್ಯೋತಿಷ್ಯ ಮಹತ್ವ
July 29, 2025
6:18 AM
by: ದ ರೂರಲ್ ಮಿರರ್.ಕಾಂ
ಜಾನುವಾರುಗಳನ್ನು ಅರಣ್ಯದಲ್ಲಿ ಮೇವು | ಆದೇಶವನ್ನು ಹಿಂಪಡೆಯುವಂತೆ ರೈತರು ಒತ್ತಾಯ
July 28, 2025
10:30 PM
by: The Rural Mirror ಸುದ್ದಿಜಾಲ
ರಾಜ್ಯದಲ್ಲಿ ಅರಣ್ಯ ಇಲಾಖೆಯಿಂದ 11.50 ಕೋಟಿ ಸಸಿ ನೆಡುವ ಗುರಿ
July 28, 2025
10:23 PM
by: ದ ರೂರಲ್ ಮಿರರ್.ಕಾಂ
ರಾಮನ ಆದರ್ಶ ಸರ್ವಕಾಲಿಕ : ರಾಘವೇಶ್ವರ ಶ್ರೀ
July 28, 2025
8:34 PM
by: The Rural Mirror ಸುದ್ದಿಜಾಲ
ಕೇಂದ್ರ ಸರ್ಕಾರದಿಂದ ದಕ್ಷಿಣ ಕನ್ನಡ ಜಿಲ್ಲೆಗೆ ಕ್ಯಾನ್ಸರ್ ಡೇ ಕೇರ್ ಸೆಂಟರ್ ಮಂಜೂರು
July 28, 2025
8:24 PM
by: The Rural Mirror ಸುದ್ದಿಜಾಲ
ರಾಜ್ಯದಲ್ಲಿ ರಸಗೊಬ್ಬರ ಕೊರತೆ ನೀಗಿಸಲು ಅಗತ್ಯ ಕ್ರಮ
July 28, 2025
8:10 PM
by: The Rural Mirror ಸುದ್ದಿಜಾಲ
2025ರ ನಾಗರಪಂಚಮಿಯಲ್ಲಿ ಈ ರಾಶಿಗಳಿಗೆ ಅದೃಷ್ಟ! :ನಾಗದೇವರ ಕೃಪೆಗಾಗಿ ಹೀಗೆ ಮಾಡಿ…
July 28, 2025
3:01 PM
by: ದ ರೂರಲ್ ಮಿರರ್.ಕಾಂ
ಬದುಕು ಪುರಾಣ | ಯಕ್ಷಪ್ರಶ್ನೆಯೊಳಗೆ ಧರ್ಮ ಗೂಢತೆಯ ಗೊಂಚಲು
July 27, 2025
8:16 PM
by: ನಾ.ಕಾರಂತ ಪೆರಾಜೆ

ವಿಶೇಷ ವರದಿ

ಹವಾಮಾನ ಸಂಕಷ್ಟ | ಆಹಾರ ಬೆಲೆಗಳ ಏರಿಳಿತಕ್ಕೆ ಕಾರಣ ಏನು ? – ಅಧ್ಯಯನ ವರದಿ
July 26, 2025
8:18 AM
by: ದ ರೂರಲ್ ಮಿರರ್.ಕಾಂ
ಕೃಷಿಕರಿಗೆ ಕೈಕೊಟ್ಟ ಹವಾಮಾನ | ಅಡಿಕೆಗೆ ವ್ಯಾಪಕವಾಗಿ ಹರಡಿದ ಕೊಳೆರೋಗ | ರೋಗನಿಯಂತ್ರಣಕ್ಕೆ ಇನ್ನಿಲ್ಲದ ಪ್ರಯತ್ನದಲ್ಲಿ ಅಡಿಕೆ ಬೆಳೆಗಾರರು |
July 24, 2025
10:48 AM
by: ವಿಶೇಷ ಪ್ರತಿನಿಧಿ
ಆಟಿ ಅಂದರೇ ಪರಿಸರ….! ; ತುಳುನಾಡಿನ ವಿಶೇಷ ಆಚರಣೆ
July 24, 2025
6:39 AM
by: ಅಶ್ವಿನಿ ಮೂರ್ತಿ, ಅಯ್ಯನಕಟ್ಟೆ
ಜಾಗತಿಕವಾಗಿ ಹವಾಮಾನ ವೈಪರೀತ್ಯ | ಒಂದೆಡೆ ಭಾರೀ ಮಳೆ- ಇನ್ನೊಂದೆಡೆ ಪ್ರವಾಹ – ಮತ್ತೊಂದೆಡೆ ಕಾಡ್ಗಿಚ್ಚು
July 19, 2025
9:40 PM
by: ದ ರೂರಲ್ ಮಿರರ್.ಕಾಂ

OPINION

ಕಾಡೆಂದರೇನು…? , ಅರಣ್ಯ ಸಚಿವರಿಗೆ ಇದೊಂದು ಮನವಿ..
July 24, 2025
12:43 PM
by: ಪ್ರಬಂಧ ಅಂಬುತೀರ್ಥ
ಕಾಡೆಂದರೇನು…? , ಅರಣ್ಯ ಸಚಿವರಿಗೆ ಇದೊಂದು ಮನವಿ..
July 24, 2025
12:43 PM
by: ಪ್ರಬಂಧ ಅಂಬುತೀರ್ಥ
ಹಸುರೆಂಬ ಉಸಿರಿನ ಮಹತ್ವ ಇದು…
July 13, 2025
10:55 PM
by: ಎ ಪಿ ಸದಾಶಿವ ಮರಿಕೆ
ಹಲಸಿನ ಬೀಜದ ಖಾರಾ ಸೇವ್‌ – ನೀವೂ ಮಾಡಿನೋಡಿ
July 13, 2025
10:15 PM
by: The Rural Mirror ಸುದ್ದಿಜಾಲ
ಸಾಮಾಜಿಕ ಕಾರ್ಯಕರ್ತ ಧನಂಜಯ ವಾಗ್ಲೆ ಇನ್ನಿಲ್ಲ | ಅವರು ಬರೆದಿರುವ ಓದಲೇಬೇಕಾದ ಬರಹ ಇಲ್ಲಿದೆ…
July 13, 2025
5:09 PM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror

Join Our Group