Advertisement
MIRROR FOCUS

ಮರುಭೂಮಿ ನಾಡು ದುಬೈನಲ್ಲಿ 75 ವರ್ಷಗಳಲ್ಲೇ ದಾಖಲೆ ಮಳೆ…! | ಪ್ರವಾಹಕ್ಕೆ UAE ತತ್ತರ |

Share

ದುಬೈಯಂತಹ ಮರುಭೂಮಿ(Desert) ನಾಡಿನಲ್ಲಿ ಮಳೆ(Rain) ಅನ್ನೋದೇ ಅಪರೂಪ. ಎತ್ತ ನೋಡಿದರು ಮರಳುಗಾಡು. ಅದು ಬಿಟ್ಟರೆ ಸಮುದ್ರ(Ocean). ಮರಗಳೇ(Tree) ಇಲ್ಲದ ನಾಡಲ್ಲಿ ಮಳೆ ಅನ್ನೋದು ವಿರಳ. ಆದರೆ ಈಗ ದುಬೈಯಲ್ಲಿ (Dubai Rain) ಎತ್ತ ನೋಡಿದರೂ ಜಲರಾಶಿ. ಐಷಾರಾಮಿ ನಗರ ದುಬೈನಲ್ಲಿರುವ ಮಾಲ್, ವಿಮಾನ ನಿಲ್ದಾಣಗಳು (Airport) ಸಂಪೂರ್ಣ ಜಲಾವೃತವಾಗಿದೆ. ಭಾರೀ ಗುಡುಗು ಸಹಿತ ಅಬ್ಬರಿಸಿದ ಮಳೆರಾಯನ(Heavy Rain) ಪ್ರತಾಪಕ್ಕೆ UAE ಯ ಕೆಲವು ಭಾಗಗಳಲ್ಲಿ ಪ್ರವಾಹ (Flood) ಸೃಷ್ಟಿಯಾಗಿದೆ. ಪ್ರಮುಖ ರಸ್ತೆಮಾರ್ಗಗಳು, ವಿಮಾನ ನಿಲ್ದಾಣಗಳು, ಮೆಟ್ರೋ ಮಾರ್ಗಗಳು ಸಂಪೂರ್ಣ ಜಲಮಯವಾಗಿದೆ. ಸುದ್ದಿ ಸಂಸ್ಥೆಗಳ ವರದಿ ಪ್ರಕಾರ, ಮಂಗಳವಾರ ಯುಎಇಗೆ ಅಪ್ಪಳಿಸಿದ ಚಂಡಮಾರುತಗಳು ದುಬೈನಲ್ಲಿ ಒಂದೂವರೆ ವರ್ಷಗಳ ನಂತರ ಭಾರೀ ಮಳೆಯಾಗಿದೆ. ದುಬೈ ನಗರಕ್ಕಿಂತ ಯುಎಇಯ ಪೂರ್ವ ಕರಾವಳಿಯಲ್ಲಿರುವ ಎಮಿರೇಟ್ ಫುಜೈರಾದಲ್ಲಿ ಹೆಚ್ಚು ಮಳೆಯಾಗಿದೆ. ಮಂಗಳವಾರ 145 ಮಿಲಿಮೀಟರ್‌ಗಳಷ್ಟು (5.7 ಇಂಚುಗಳು) ಮಳೆ ಬಿದ್ದಿದೆ.

75 ವರ್ಷಗಳಲ್ಲೇ ಹೆಚ್ಚು ಮಳೆ: ಪ್ರವಾಹದ ಆರ್ಭಟಕ್ಕೆ ಉತ್ತರದ ಎಮಿರೇಟ್ ರಾಸ್ ಅಲ್-ಖೈಮಾದಲ್ಲಿ ಒಬ್ಬರು ಸಾವನ್ನಪ್ಪಿದ್ದಾರೆ. ಪ್ರವಾಹದ ನೀರಲ್ಲಿ ವಾಹನ ಸಿಲುಕಿ 70 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿದ್ದಾರೆ ಎಂದು ಅಲ್ಲಿನ ಪೊಲೀಸರು ತಿಳಿಸಿದ್ದಾರೆ. ವಿಶ್ವದ ಅತಿದೊಡ್ಡ ಶಾಪಿಂಗ್ ಕೇಂದ್ರಗಳಲ್ಲಿ ಒಂದಾದ ಮಾಲ್ ಆಫ್ ಎಮಿರೇಟ್ಸ್‌ನಲ್ಲಿ ಪ್ರವಾಹ ನೀರು ತುಂಬಿಕೊಂಡಿದೆ. ಮಾಲ್ ನಲ್ಲಿರುವ ಶಾಪ್ ಗಳ ಸೀಲಿಂಗ್ ನಲ್ಲಿ ನಿರಂತರ ಮಳೆಯಿಂದ ನೀರು ಹರಿದಿದೆ. 75 ವರ್ಷಗಳ ನಂತರ ಹೆಚ್ಚು ಮಳೆಯಾಗಿದೆ ಎಂದು ಕೆಲವರು ಅಚ್ಚರಿ ವ್ಯಕ್ತಪಡಿಸಿದ್ದಾರೆ.

ಶಾರ್ಜಾ ಸಿಟಿ ಜಲಾವೃತ: ನಿರಂತರ ಮಳೆಯಿಂದಾಗಿ ಶಾರ್ಜಾ ಸಿಟಿ ಸೆಂಟರ್ ಮತ್ತು ದೇರಾ ಸಿಟಿ ಸೆಂಟರ್ ಕೂಡ ಸಂಪೂರ್ಣ ಜಲಾವೃತವಾಗಿದ್ದು, ಜನರು ಪ್ರವಾಹದ ನೀರಲ್ಲಿ ಸಿಲುಕಿದ್ದಾರೆ. ವಿಮಾನ ನಿಲ್ದಾಣಗಳಲ್ಲೂ ನೀರು ನಿಂತಿದ್ದು, ವಿಮಾನಗಳ ಹಾರಾಟದಲ್ಲೂ ತೊಂದರೆಯಾಗಿದೆ. ಟ್ಯಾಕ್ಸಿ ವೇನಲ್ಲೂ ಅತಿ ಹೆಚ್ಚು ನೀರು ತುಂಬಿಕೊಂಡು ಪ್ರವಾಹದ ಮೂಲಕ ಟರ್ಮಿನಲ್‌ಗಳನ್ನು ತಲುಪಲು ಪ್ರಯಾಣಿಕರು ಹೆಣಗಾಡಿದ್ದಾರೆ. ಕೆಲವು ರಸ್ತೆಗಳು ಪ್ರವಾಹ ನೀರಿನಿಂದ ಕಣ್ಮರೆಯಾಗಿದ್ದು, ವಾಹನ ಸವಾರರು ತಮ್ಮ ವಾಹನಗಳನ್ನು ಹೊರ ತೆಗೆಯಲು ಹರಸಾಹಸ ಪಟ್ಟಿದ್ದಾರೆ. ಅಧಿಕಾರಿಗಳು ನೀರನ್ನು ಪಂಪ್ ಮಾಡಲು ರಸ್ತೆಗಳು ಮತ್ತು ಹೆದ್ದಾರಿಗಳಿಗೆ ಟ್ಯಾಂಕರ್ ಲಾರಿಗಳನ್ನು ಕಳುಹಿಸಿದ್ದಾರೆ. ಕೆಲ ಮನೆಗಳಿಗೂ ನೀರು ನುಗ್ಗಿದೆ.

24 ಗಂಟೆಗಳ ಅವಧಿಯಲ್ಲಿ 142 ಮಿಲಿಮೀಟರ್‌ ಮಳೆ: ದುಬೈನಲ್ಲಿ 24 ಗಂಟೆಗಳ ಅವಧಿಯಲ್ಲಿ 142 ಮಿಲಿಮೀಟರ್‌ಗಿಂತಲೂ ಹೆಚ್ಚು ಮಳೆಯಾಗಿದೆ. ದುಬೈ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಮಾಹಿತಿಯ ಪ್ರಕಾರ ಎಮಿರೇಟ್ ಸರಾಸರಿ ವರ್ಷದಲ್ಲಿ 94.7 ಮಿಲಿಮೀಟರ್ ಮಳೆಯಾಗಿದೆ. ಮಿಂಚು, ಗುಡುಗು ಸಹಿತ ಭಾರೀ ಮಳೆಯಾಗುತ್ತಿದ್ದು, ವಿಶ್ವದ ಅತಿ ಎತ್ತರದ ಕಟ್ಟಡವಾದ ಬುರ್ಜ್ ಖಲೀಫಾದ ತುದಿಯಲ್ಲಿ ಮಿಂಚಿನ ಸ್ಪರ್ಶ ತಾಗಿದೆ. UAEನಲ್ಲಿ ಸಾಮಾನ್ಯವಾಗಿ ಹೆಚ್ಚು ಮಳೆಯಾಗುವುದಿಲ್ಲ. ಮಳೆಗಾಲದಲ್ಲಿ ಮಾತ್ರ ಕೊಂಚ ಮಳೆಯಾಗುತ್ತಿತ್ತು. ಮಳೆ ಸರಿಯಾಗದ ಕಾರಣ ಅಲ್ಲಿನ ಒಳಚರಂಡಿ ವ್ಯವಸ್ಥೆಗಳು ಸಹ ಸರಿಯಾಗಿಲ್ಲ. ಈಗ ಸಂಭವಿಸಿರುವ ದಿಢೀರ್ ಪ್ರವಾಹದಿಂದ ಮನೆ, ರಸ್ತೆಗಳು, ವಾಣಿಜ್ಯ ಕಟ್ಟಡಗಳು ಸೇರಿದಂತೆ ಎಲ್ಲಾ ಕಡೆ ಮಳೆ ನೀರು ತುಂಬಿದೆ. ಬಹ್ರೇನ್, ಕತಾರ್ ಮತ್ತು ಸೌದಿ ಅರೇಬಿಯಾದಲ್ಲೂ ಮಳೆಯಾಗಿದೆ.

18 ಮಂದಿ ಸಾವು : ವಿಮಾನಗಳ ಮಾಹಿತಿ ನೀಡುವ ಫ್ಲೈಟ್ ರಾಡರ್ 24 ವೆಬ್ ಸೈಟ್ ವರದಿ ಪ್ರಕಾರ, ದುಬೈ ವಿಮಾನನಿಲ್ದಾಣದಲ್ಲಿ 5 ಅಂಶಗಳಿಂದ ಹಾರಾಟಗಳಲ್ಲಿ ಏರುಪೇರಾಗಿದೆ ಎಂದು ಮಂಗಳವಾರ ತಿಳಿಸಿದೆ. ಹವಾಮಾನದಲ್ಲಿನ ವಿಪರೀತ ಬದಲಾವಣೆಯಿಂದ ವಿಮಾನಗಳಲ್ಲಿ ವಿಳಂಬ, ಹಾರಾಟ ರದ್ದು ಪರಿಸ್ಥಿತಿಗಳು ಎದುರಾಗಿತ್ತು. ನ್ಯಾಷನಲ್ ಕಮಿಟಿ ಫಾರ್ ಎಮರ್ಜೆನ್ಸಿ ಮ್ಯಾನೇಜ್ಮೆಂಟ್ ತಿಳಿಸಿರುವಂತೆ, ಇತ್ತೀಚೆಗೆ ಸುರಿದ ಭಾರೀ ಮಳೆಯಿಂದ ಸುಮಾರು 18 ಜನ ಸಾವನ್ನಪ್ಪಿದ್ದಾರೆ. ಇದರಲ್ಲಿ 10 ಶಾಲಾ ಮಕ್ಕಳೇ ಇದ್ದಾರೆ ಎಂದು ತಿಳಿದು ಬಂದಿದೆ. ಶಾಲಾ ವಾಹನ ನೀರಲ್ಲಿ ಕೊಚ್ಚಿ ಹೋದ ಕಾರಣ ಅದರಲ್ಲಿದ್ದ 10 ಮಕ್ಕಳು ಸಾವನ್ನಪ್ಪಿರುವುದಾಗಿ ತಿಳಿಸಿದೆ.
– ಅಂತರ್ಜಾಲ ಮಾಹಿತಿ
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಕೀಟನಾಶಕವೇ ರೈತರ ಜೀವಕ್ಕೆ ಕಂಟಕ…? ರಾಜಸ್ಥಾನದಲ್ಲಿ 2 ವರ್ಷದಲ್ಲಿ 535 ರೈತರ ಸಾವು – ಬೆಚ್ಚಿಬೀಳಿಸಿದ ವರದಿ..!

ರಾಜಸ್ಥಾನದಲ್ಲಿ ಕಳೆದ ಎರಡು ವರ್ಷಗಳಲ್ಲಿ ಕೀಟನಾಶಕ ಬಳಕೆಯಿಂದ 535 ರೈತರು ಮೃತಪಟ್ಟಿರುವುದು ಬಹಿರಂಗವಾಗಿದೆ.…

2 hours ago

ಕೊಟ್ಟಿಯೂರು ದೇವಸ್ಥಾನದಲ್ಲಿ ‘ಬಾವಳಿಕೆಟ್ಟು’ ವಿವಾದ – ಮುಸ್ಲಿಂ ಕುಟುಂಬದ ವಿರುದ್ಧ ಸಾಮಾಜಿಕ ಜಾಲತಾಣಗಳಲ್ಲಿ ಆರೋಪ, ನಿಜಾಂಶವೇನು?

ಕೊಟ್ಟಿಯೂರು ದೇವಸ್ಥಾನದಲ್ಲಿ ‘ಬಾವಳಿಕೆಟ್ಟು’ ಆಚರಣೆಗೆ ಸಂಬಂಧಿಸಿದಂತೆ ಸಾಮಾಜಿಕ ಜಾಲತಾಣಗಳಲ್ಲಿ ಹೊಸ ವಿವಾದ ಹುಟ್ಟಿಕೊಂಡಿದೆ.…

4 hours ago

ಹವಾಮಾನ ವರದಿ | 07.06.2026 | ಜೂನ್ 8ರಿಂದ ರಾಜ್ಯದಲ್ಲಿ ಮುಂಗಾರು ಚುರುಕು| ಕರಾವಳಿ-ಮಲೆನಾಡಿನಲ್ಲಿ ಉತ್ತಮ ಮಳೆ, ಹಲವು ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯ ಮುನ್ಸೂಚನೆ

ಕರ್ನಾಟಕದಲ್ಲಿ ಮುಂಗಾರು ಚಟುವಟಿಕೆಗಳು ಜೂ. 8ರಿಂದ ಮತ್ತಷ್ಟು ಚುರುಕುಗೊಳ್ಳುವ ಲಕ್ಷಣಗಳು ಕಂಡುಬಂದಿದ್ದು, ಕರಾವಳಿ…

10 hours ago

“ಜಾಕ್‌ಫ್ರೂಟ್‌ ಹಬ್ಬ”ಕ್ಕೆ ಜನಸಾಗರ – 50 ಕ್ಕೂ ಹೆಚ್ಚು ಹಲಸಿನ ಮೌಲ್ಯವರ್ಧಿತ ಉತ್ಪನ್ನಗಳ ಪ್ರದರ್ಶನ

ಜೋಯಿಡಾದಲ್ಲಿ ನಡೆದ ಹಲಸು ಉತ್ಸವದಲ್ಲಿ 50ಕ್ಕೂ ಹೆಚ್ಚು ಮೌಲ್ಯವರ್ಧಿತ ಹಲಸಿನ ಉತ್ಪನ್ನಗಳು ಪ್ರದರ್ಶನಗೊಂಡು…

1 day ago

ಕ್ಯಾಂಪ್ಕೋ ಬ್ರಹ್ಮ ವಾರಣಾಶಿ ಸುಬ್ರಾಯ ಭಟ್‌ ಜನ್ಮಶತಮಾನೋತ್ಸವ ವರ್ಷ – ಅಡಿಕೆ ಬೆಳೆಗಾರರ ಬದುಕು ಬದಲಿಸಿದ ಮಹಾನ್ ದಾರ್ಶನಿಕ

ಕ್ಯಾಂಪ್ಕೋ ಸಂಸ್ಥಾಪಕ ವಾರಣಾಶಿ ಸುಬ್ರಾಯ ಭಟ್‌ ಅವರ ಜನ್ಮಕ್ಕೆ 99 ವರ್ಷಗಳು ಪೂರ್ಣಗೊಂಡಿದ್ದು,…

1 day ago

ಹವಾಮಾನ ವರದಿ | 06-06-2026 | ಮುಂಗಾರು ಬಂದರೂ ಮಳೆ ಇಲ್ಲ! – ಕರ್ನಾಟಕದಲ್ಲಿ ಮುಂದಿನ ವಾರದ ಹವಾಮಾನ ಹೇಗಿರಲಿದೆ?

ರಾಜ್ಯಕ್ಕೆ ಮುಂಗಾರು ಪ್ರವೇಶಿಸಿದರೂ ಅದರ ಬಲ ಇನ್ನೂ ದುರ್ಬಲವಾಗಿದೆ. ಕರಾವಳಿಯಲ್ಲಿ ಜೂನ್ 8ರಿಂದ…

1 day ago