Karnakata Weather | 23-06-2024 | ಕೆಲವು ಜಿಲ್ಲೆಗಳಿಗೆ ರೆಡ್‌ ಎಲರ್ಟ್…|‌ ಜೂ.28ರ ತನಕ ಮಳೆ ಮುಂದುವರಿಯುವ ಲಕ್ಷಣ |

June 23, 2024
11:48 AM
ಜುಲೈನಲ್ಲಿ ಉತ್ತಮ ಮಳೆಯ ನಿರೀಕ್ಷೆ ಇದೆ. ರಾಜ್ಯದ ಈಗಿನ ಈ ಮಳೆಯ ವಾತಾವರಣವು ಜೂನ್ 28ರ ತನಕ ಮುಂದುವರಿಯುವ ಲಕ್ಷಣಗಳಿವೆ. ಜೂನ್ 29ರಿಂದ ಉತ್ತರ ಭಾರತದಲ್ಲಿ ಮಳೆ ಹೆಚ್ಚಾಗುವ ಸೂಚನೆ ಇದೆ. 

24.06.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ :

ಉಡುಪಿ ಜಿಲ್ಲೆಯಾದ್ಯಂತ ಭಾರಿ (red alert) ಮಳೆಯ ಮುನ್ಸೂಚನೆ ಇದೆ. ಕಾಸರಗೋಡು ಹಾಗೂ ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಉತ್ತಮ ಮಳೆಯ ಮುನ್ಸೂಚನೆ ಇದೆ ಉಡುಪಿ ಜಿಲ್ಲೆಯ ಕರಾವಳಿ ಭಾಗಗಳಲ್ಲಿ ಉತ್ತಮ ಮಳೆ ಇದ್ದರೆ ಉಳಿದ ಭಾಗಗಳಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದೆ. ಶಿವಮೊಗ್ಗ ಜಿಲ್ಲೆಯಾದ್ಯಂತ ಭಾರಿ (red alert) ಮಳೆಯ ಮುನ್ಸೂಚನೆ ಇದೆ. ಕೊಡಗು ಸಹ ಭಾರಿ ಮಳೆಯ ಮುನ್ಸೂಚೆನೆ ಇದೆ. ಹಾಸನ ಹಾಗೂ ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಉತ್ತಮ ಮಳೆಯ ಮುನ್ಸೂಚನೆ ಇದೆ.

ಮೈಸೂರು, ಚಾಮರಾಜನಗರ, ಮಂಡ್ಯ, ಬೆಂಗಳೂರು ಗ್ರಾಮಾಂತರ ಹಾಗೂ ನಗರ, ಚಿಕ್ಕಬಳ್ಳಾಪುರ, ತುಮಕೂರು, ಚಿತ್ರದುರ್ಗ, ದಾವಣಗೆರೆ, ಹಾವೇರಿ, ಧಾರವಾಡ, ಬೆಳಗಾವಿ ಜಿಲ್ಲೆಗಳ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ. ಉಳಿದ ಕರ್ನಾಟಕದ ಭಾಗಗಳಲ್ಲಿ ಮೋಡ ಹಾಗೂ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚನೆ ಇದೆ.

ಅರಬ್ಬಿ ಸಮುದ್ರದಲ್ಲಿ ಮುಂಗಾರು ಮಾರುತಗಳು ಉತ್ತಮವಾಗಿ ಬೀಸುತ್ತಿದ್ದರೂ ಕರಾವಳಿಯಿಂದ ಈಚೆ ಬರುತ್ತಿದ್ದಂತೆ ದುರ್ಬಲಗೊಳ್ಳುತ್ತಿದೆ. ಆ ಕಾರಣದಿಂದ ನಿರೀಕ್ಷಿತ ಪ್ರಮಾಣದಲ್ಲಿ ಅಥವಾ ಮುನ್ಸೂಚನೆಯಲ್ಲಿ ಕಾಣಿಸುವಷ್ಟು ಮಳೆಯಾಗುತ್ತಿಲ್ಲ. ಜುಲೈನಲ್ಲಿ ಉತ್ತಮ ಮಳೆಯ ನಿರೀಕ್ಷೆ ಇದೆ. ರಾಜ್ಯದ ಈಗಿನ ಈ ಮಳೆಯ ವಾತಾವರಣವು ಜೂನ್ 28ರ ತನಕ ಮುಂದುವರಿಯುವ ಲಕ್ಷಣಗಳಿವೆ. ಜೂನ್ 29ರಿಂದ ಉತ್ತರ ಭಾರತದಲ್ಲಿ ಮಳೆ ಹೆಚ್ಚಾಗುವ ಸೂಚನೆ ಇದೆ. 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

ಸಾಯಿಶೇಖರ್ ಕರಿಕಳ

ಕೃಷಿಕ, ಹವಾಮಾನ ಆಸಕ್ತ

ಇದನ್ನೂ ಓದಿ

ಯುವಕರ ಮೊದಲ ಆದ್ಯತೆ ಏನಿರಬೇಕು? ರಾಜಕೀಯವಲ್ಲ, ಆರ್ಥಿಕ ಸ್ವಾವಲಂಬನೆ!
July 15, 2026
9:49 PM
by: ಅರುಣ್‌ ಕುಮಾರ್ ಕಾಂಚೋಡು
ಹವಾಮಾನ ವರದಿ | 15-07-2026 | ರಾಜ್ಯದಲ್ಲಿ ಮಳೆ ಯಾಕೆ ಕಡಿಮೆಯಾಗಿದೆ ? ಜುಲೈ 16 ರಿಂದ ಎಲ್ಲೆಲ್ಲಿ ಮಳೆ ಆರಂಭವಾಗಲಿದೆ?
July 15, 2026
2:10 PM
by: ಸಾಯಿಶೇಖರ್ ಕರಿಕಳ
ಕರ್ನಾಟಕದ ಹಲವು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್…! ಕಾರಣ..?
July 15, 2026
7:02 AM
by: ದ ರೂರಲ್ ಮಿರರ್.ಕಾಂ
ಕಸದ ತೆಂಗಿನಕಾಯಿಯೂ ಈಗ ರೈತರ ಸಂಪತ್ತು…! ಭುವನೇಶ್ವರದ ‘ವೇಸ್ಟ್ ಟು ವೆಲ್ತ್’ ಮಾದರಿ
July 14, 2026
7:12 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror