ಕೆಂಪು ಮೆಣಸಿನಕಾಯಿ ಬೆಳೆಗಾರರಿಗೆ ಸಂಕಷ್ಟ | ಬೆಂಬಲ ಬೆಲೆ ಯೋಜನೆ ರಾಜ್ಯಕ್ಕೂ ವಿಸ್ತರಿಸುವಂತೆ ಮುಖ್ಯಮಂತ್ರಿ ಪತ್ರ | ಕೇಂದ್ರದ ಗಮನ ಸೆಳೆದ ಸಚಿವರು |

March 12, 2025
7:10 AM

ಕೆಂಪು ಮೆಣಸಿನಕಾಯಿಗೆ ಮಾರುಕಟ್ಟೆ ಮಧ್ಯಸ್ಥಿಕೆ ಯೋಜನೆ-ಎಂಐಎಸ್ ಅಡಿಯಲ್ಲಿ ಬೆಲೆ ಕೊರತೆ ಪಾವತಿ-ಪಿಡಿಪಿ ಯೋಜನೆಯನ್ನು ಕರ್ನಾಟಕಕ್ಕೂ ಕೂಡಲೇ ವಿಸ್ತರಿಸಬೇಕೆಂದು ಒತ್ತಾಯಿಸಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಪ್ರಧಾನಿ ನರೇಂದ್ರ ಮೋದಿ ಹಾಗೂ ಕೇಂದ್ರ ಕೃಷಿ ಮತ್ತು ರೈತ ಕಲ್ಯಾಣ ಸಚಿವ ಶಿವರಾಜ್ ಸಿಂಗ್ ಚೌವ್ಹಾಣ್ ಅವರಿಗೆ ಪತ್ರ ಬರೆದಿದ್ದಾರೆ.  ಕರ್ನಾಟಕದಲ್ಲಿ, ವಿಶೇಷವಾಗಿ ಕಲ್ಯಾಣ ಕರ್ನಾಟಕ ಪ್ರದೇಶದಲ್ಲಿ, ಮೆಣಸಿನಕಾಯಿ ಬೆಲೆ ಉತ್ಪಾದನಾ ವೆಚ್ಚಕ್ಕಿಂತ ಕಡಿಮೆ ಕುಸಿದಿರುವುದರಿಂದ ನಮ್ಮ ರೈತರು ಸಂಕಷ್ಟದಲ್ಲಿದ್ದಾರೆ. ಕೇಂದ್ರ ಸರ್ಕಾರ ಈಗಲೇ ಕ್ರಮ ಕೈಗೊಳ್ಳಬೇಕುಎಂದು ಸಿಎಂ ಪತ್ರದಲ್ಲಿ ಬರೆದಿದ್ದಾರೆ.………ಮುಂದೆ ಓದಿ……..

ಈ ನಡುವೆ  ಕೆಂಪು ಮೆಣಸಿನಕಾಯಿ ಬೆಲೆ ಕುಸಿತದಿಂದ ಕಂಗೆಟ್ಟಿರುವ ರೈತರ ನೆರವಿಗಾಗಿ ಕರ್ನಾಟಕಕ್ಕೂ ಬೆಂಬಲ ಬೆಲೆ ಯೋಜನೆ ವಿಸ್ತರಿಸುವಂತೆ ಕೇಂದ್ರ ಆಹಾರ, ಗ್ರಾಹಕ ವ್ಯವಹಾರಗಳ ಸಚಿವ ಪ್ರಲ್ಹಾದ ಜೋಶಿ ಕೇಂದ್ರ ಸರ್ಕಾರದ ಗಮನ ಸೆಳೆದಿದ್ದಾರೆ. ದೆಹಲಿಯಲ್ಲಿ ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ಸಚಿವ ಶಿವರಾಜ್ ಸಿಂಗ್ ಚೌಹಾಣ್ ಅವರನ್ನು ಭೇಟಿ ಮಾಡಿ ಮನವಿ ಪತ್ರ ಸಲ್ಲಿಸಿದರಲ್ಲದೆ, ರಾಜ್ಯದ ಕೆಂಪು ಮೆಣಸಿನಕಾಯಿ ಹಿತ ರಕ್ಷಣೆ ಬಗ್ಗೆ  ಮಹತ್ವದ ಸಮಾಲೋಚನೆ ಸಹ ನಡೆಸಿದರು.ರಾಜ್ಯದಲ್ಲಿ ಕೆಂಪು ಮೆಣಸಿನಕಾಯಿ ಬೆಳೆಗಾರರು ಸದ್ಯದ ಪರಿಸ್ಥಿತಿಯಲ್ಲಿ ಬೆಲೆ ಕುಸಿತದಿಂದಾಗಿ ತೀವ್ರ ಸಂಕಷ್ಟ ಎದುರಿಸುತ್ತಿದ್ದಾರೆ. ಖರೀದಿದಾರರು ಕೇಳುವಂತಹ ಕನಿಷ್ಠ ಬೆಲೆಗೆ ಮಾರಿ ರೈತರು ಕೈ ಸುಟ್ಟುಕೊಳ್ಳುತ್ತಿದ್ದಾರೆ. ಹಾಗಾಗಿ  ಇದಕ್ಕೆ ಪರಿಹಾರ ಮಾರ್ಗ ಕಲ್ಪಿಸಿ ಎಂದು ಕೃಷಿ ಸಚಿವರ ಗಮನ ಸೆಳೆದರು ಪ್ರಲ್ಹಾದ ಜೋಶಿ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಹವಾಮಾನ ವರದಿ | 06-09-2026 | ಕರ್ನಾಟಕದಲ್ಲಿ ಮಳೆ ಇಳಿಮುಖದ ಲಕ್ಷಣ
September 6, 2026
2:52 PM
by: ಸಾಯಿಶೇಖರ್ ಕರಿಕಳ
ಭಾರತದ ಹಸಿರು ಯೋಜನೆಗಳಿಗೆ ಜಪಾನ್‌ನ ಕಾರ್ಬನ್ ಕ್ರೆಡಿಟ್ ಅವಕಾಶ – ರೈತರೂ ಪಡೆಯಬಹುದೇ ಇದರ ಲಾಭ?
September 6, 2026
12:28 PM
by: ದ ರೂರಲ್ ಮಿರರ್.ಕಾಂ
ಹಿಮಾಲಯದಲ್ಲಿ ಮತ್ತೊಂದು ಅಪಾಯದ ಎಚ್ಚರಿಕೆ..!
September 6, 2026
11:11 AM
by: ದ ರೂರಲ್ ಮಿರರ್.ಕಾಂ
ಎಲ್ ನಿನೊ ಮತ್ತಷ್ಟು ಬಲಗೊಳ್ಳುವ ಮುನ್ಸೂಚನೆ..!
September 6, 2026
10:01 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror