Advertisement
MIRROR FOCUS

ಕೆಂಪು ಮೆಣಸಿನಕಾಯಿ ಬೆಳೆಗಾರರಿಗೆ ಸಂಕಷ್ಟ | ಬೆಂಬಲ ಬೆಲೆ ಯೋಜನೆ ರಾಜ್ಯಕ್ಕೂ ವಿಸ್ತರಿಸುವಂತೆ ಮುಖ್ಯಮಂತ್ರಿ ಪತ್ರ | ಕೇಂದ್ರದ ಗಮನ ಸೆಳೆದ ಸಚಿವರು |

Share

ಕೆಂಪು ಮೆಣಸಿನಕಾಯಿಗೆ ಮಾರುಕಟ್ಟೆ ಮಧ್ಯಸ್ಥಿಕೆ ಯೋಜನೆ-ಎಂಐಎಸ್ ಅಡಿಯಲ್ಲಿ ಬೆಲೆ ಕೊರತೆ ಪಾವತಿ-ಪಿಡಿಪಿ ಯೋಜನೆಯನ್ನು ಕರ್ನಾಟಕಕ್ಕೂ ಕೂಡಲೇ ವಿಸ್ತರಿಸಬೇಕೆಂದು ಒತ್ತಾಯಿಸಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಪ್ರಧಾನಿ ನರೇಂದ್ರ ಮೋದಿ ಹಾಗೂ ಕೇಂದ್ರ ಕೃಷಿ ಮತ್ತು ರೈತ ಕಲ್ಯಾಣ ಸಚಿವ ಶಿವರಾಜ್ ಸಿಂಗ್ ಚೌವ್ಹಾಣ್ ಅವರಿಗೆ ಪತ್ರ ಬರೆದಿದ್ದಾರೆ.  ಕರ್ನಾಟಕದಲ್ಲಿ, ವಿಶೇಷವಾಗಿ ಕಲ್ಯಾಣ ಕರ್ನಾಟಕ ಪ್ರದೇಶದಲ್ಲಿ, ಮೆಣಸಿನಕಾಯಿ ಬೆಲೆ ಉತ್ಪಾದನಾ ವೆಚ್ಚಕ್ಕಿಂತ ಕಡಿಮೆ ಕುಸಿದಿರುವುದರಿಂದ ನಮ್ಮ ರೈತರು ಸಂಕಷ್ಟದಲ್ಲಿದ್ದಾರೆ. ಕೇಂದ್ರ ಸರ್ಕಾರ ಈಗಲೇ ಕ್ರಮ ಕೈಗೊಳ್ಳಬೇಕುಎಂದು ಸಿಎಂ ಪತ್ರದಲ್ಲಿ ಬರೆದಿದ್ದಾರೆ.………ಮುಂದೆ ಓದಿ……..

ಈ ನಡುವೆ  ಕೆಂಪು ಮೆಣಸಿನಕಾಯಿ ಬೆಲೆ ಕುಸಿತದಿಂದ ಕಂಗೆಟ್ಟಿರುವ ರೈತರ ನೆರವಿಗಾಗಿ ಕರ್ನಾಟಕಕ್ಕೂ ಬೆಂಬಲ ಬೆಲೆ ಯೋಜನೆ ವಿಸ್ತರಿಸುವಂತೆ ಕೇಂದ್ರ ಆಹಾರ, ಗ್ರಾಹಕ ವ್ಯವಹಾರಗಳ ಸಚಿವ ಪ್ರಲ್ಹಾದ ಜೋಶಿ ಕೇಂದ್ರ ಸರ್ಕಾರದ ಗಮನ ಸೆಳೆದಿದ್ದಾರೆ. ದೆಹಲಿಯಲ್ಲಿ ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ಸಚಿವ ಶಿವರಾಜ್ ಸಿಂಗ್ ಚೌಹಾಣ್ ಅವರನ್ನು ಭೇಟಿ ಮಾಡಿ ಮನವಿ ಪತ್ರ ಸಲ್ಲಿಸಿದರಲ್ಲದೆ, ರಾಜ್ಯದ ಕೆಂಪು ಮೆಣಸಿನಕಾಯಿ ಹಿತ ರಕ್ಷಣೆ ಬಗ್ಗೆ  ಮಹತ್ವದ ಸಮಾಲೋಚನೆ ಸಹ ನಡೆಸಿದರು.ರಾಜ್ಯದಲ್ಲಿ ಕೆಂಪು ಮೆಣಸಿನಕಾಯಿ ಬೆಳೆಗಾರರು ಸದ್ಯದ ಪರಿಸ್ಥಿತಿಯಲ್ಲಿ ಬೆಲೆ ಕುಸಿತದಿಂದಾಗಿ ತೀವ್ರ ಸಂಕಷ್ಟ ಎದುರಿಸುತ್ತಿದ್ದಾರೆ. ಖರೀದಿದಾರರು ಕೇಳುವಂತಹ ಕನಿಷ್ಠ ಬೆಲೆಗೆ ಮಾರಿ ರೈತರು ಕೈ ಸುಟ್ಟುಕೊಳ್ಳುತ್ತಿದ್ದಾರೆ. ಹಾಗಾಗಿ  ಇದಕ್ಕೆ ಪರಿಹಾರ ಮಾರ್ಗ ಕಲ್ಪಿಸಿ ಎಂದು ಕೃಷಿ ಸಚಿವರ ಗಮನ ಸೆಳೆದರು ಪ್ರಲ್ಹಾದ ಜೋಶಿ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

₹2,500 ಕೋಟಿಗೂ ಅಧಿಕ ತೆರಿಗೆ ವಂಚನೆ ಪತ್ತೆ..! ಅಡಿಕೆ ಆಮದು ಜಾಲದ ಹಿಂದೆ ಏನಿತ್ತು?

ದಕ್ಷಿಣ-ಪೂರ್ವ ಏಷ್ಯಾದಿಂದ ಆಮದು ಮಾಡಿದ ಅಡಿಕೆಯನ್ನು ಬಾಂಗ್ಲಾದೇಶ ಮೂಲದ ಅಡಿಕೆಯೆಂದು ತಪ್ಪಾಗಿ ಘೋಷಿಸಿ…

7 hours ago

ಹವಾಮಾನ ವರದಿ | 16-08-2026 | ಕರಾವಳಿ–ಮಲೆನಾಡಿನಲ್ಲಿ ಮಳೆ ಕಡಿಮೆ – ಉತ್ತರ ಒಳನಾಡಿನಲ್ಲಿ 19 ರಿಂದ ಮಳೆ ಹೆಚ್ಚಳ ಸಾಧ್ಯತೆ

ಕರಾವಳಿ ಮತ್ತು ಮಲೆನಾಡಿನಲ್ಲಿ ಆಗಸ್ಟ್ 24ರವರೆಗೂ ಬಿಸಿಲು, ಮೋಡ ಹಾಗೂ ಅಲ್ಲಲ್ಲಿ ಸಾಮಾನ್ಯ…

1 day ago

ಗ್ರಾಮೀಣ ಸಂಪರ್ಕಕ್ಕೆ 15 ಸಾವಿರ ಹೊಸ ಬಸ್‌ಗಳು: ಸಾರಿಗೆ ಸಚಿವ

ಗ್ರಾಮೀಣ ಹಾಗೂ ಸಾರಿಗೆ ಸಂಪರ್ಕದಿಂದ ವಂಚಿತ ಪ್ರದೇಶಗಳಿಗೆ ಸಾರ್ವಜನಿಕ ಸಾರಿಗೆ ಸೇವೆ ಹೆಚ್ಚಿಸುವ…

1 day ago

ಹವಾಮಾನ ವರದಿ | 15-08-2026 | ಕರಾವಳಿಯಲ್ಲಿ ಮುಂದಿನ 10 ದಿನವೂ ಮಳೆ ಚದುರಿಕೆ; ಒಳನಾಡಿನಲ್ಲಿ ಆಗಸ್ಟ್ 18–19ರಿಂದ ಮಳೆ ಸಾಧ್ಯತೆ

ಕರ್ನಾಟಕದಲ್ಲಿ ಮಳೆ ಚಟುವಟಿಕೆ ಸದ್ಯಕ್ಕೆ ಇಳಿಕೆಯಾಗಿದ್ದು, ಕರಾವಳಿಯಲ್ಲಿ ಮುಂದಿನ 10 ದಿನವೂ ಚದುರಿದ…

2 days ago

ಎತ್ತುಗಳಿಂದ ಡ್ರೋನ್‌ವರೆಗೆ… ಇದು ಭಾರತದ ಕೃಷಿಯ 79 ವರ್ಷಗಳ ಪಯಣ..!

ಸ್ವಾತಂತ್ರ್ಯದ 79 ವರ್ಷಗಳ ಭಾರತದ ಪಯಣದಲ್ಲಿ ಕೃಷಿ -ಎತ್ತು-ನೇಗಿಲಿನಿಂದ ಡ್ರೋನ್, ಡಿಜಿಟಲ್ ಮಾಹಿತಿ…

2 days ago

ತೀವ್ರ ವಿರೋಧದ ಹಿನ್ನೆಲೆ – ರಾಜ್ಯದಲ್ಲಿ ಗುಟ್ಕಾ ನಿಷೇಧ ಹಿಂತೆಗೆದುಕೊಳ್ಳಲು ಸರ್ಕಾರ ನಿರ್ಧಾರ – ಹೊರಬೀಳದ ಅಧಿಕೃತ ಆದೇಶ..!

ತೀವ್ರ ವಿರೋಧ ಹಾಗೂ ಅಡಿಕೆ ಬೆಳೆಗಾರರ ಮೇಲಿನ ಪರಿಣಾಮದ ಆತಂಕದ ಹಿನ್ನೆಲೆಯಲ್ಲಿ ರಾಜ್ಯದ…

2 days ago