ದಕ್ಷಿಣ ಕನ್ನಡ ಸೇರಿದಂತೆ ವಿವಿದೆಡೆ ಕಳೆದ ಹಲವು ಸಮಯಗಳಿಂದ ಅಕ್ರಮವಾಗಿ ಗಣಿಗಾರಿಕೆ ನಡೆಯುತ್ತಿದೆ. ಈಚೆಗೆ ಮರಳುಗಾರಿಕೆ, ಕೆಂಪು ಕಲ್ಲು ಗಣಿಗಾರಿಕೆಯೂ ಸತತವಾಗಿ ಅಕ್ರಮವಾಗಿ ನಡೆಯುತ್ತಿದೆ. ಈ ಬಗ್ಗೆ ಅಧಿಕಾರಿಗಳು ಮೌನ ವಹಿಸಿರುವುದು ಬೆಳಕಿಗೆ ಬಂದಿದೆ. ಇದೀಗ ಈ ಘಟನೆಗಳು ಹೈಕೋರ್ಟ್ ಗಮನಕ್ಕೆ ಬಂದಿದೆ. ಸುಳ್ಯ ತಾಲೂಕಿನ ಗುತ್ತಿಗಾರು ಗ್ರಾಮದ ಪ್ರದೇಶದಲ್ಲಿ ನಡೆಯುತ್ತಿದ್ದ ಕೆಂಪು ಕಲ್ಲು ಗಣಿಗಾರಿಕೆ ಬಗ್ಗೆ ಸ್ಥಳ ಪರಿಶೀಲನೆ ನಡೆಸಿ ವರದಿ ನೀಡುವಂತೆ ಹೈಕೋರ್ಟ್ ಲೋಕೋಪಯೋಗಿ ಇಲಾಖೆಗೆ ನಿರ್ದೇಶನ ನೀಡಿತ್ತು. ಇದರಂತೆ ಆ.6 ರಂದು ಗುತ್ತಿಗಾರು ಗ್ರಾಮದಲ್ಲಿ ಅಧಿಕಾರಿಗಳಿಂದ ಪರಿಶೀಲನೆ ನಡೆಯಲಿದೆ.
ಗಣಿಗಾರಿಕೆ ನಡೆಯುವುದರಿಂದ ಪಶ್ಚಿಮ ಘಟ್ಟದ ಪ್ರದೇಶದ ಮೇಲೆ ಇದರಿಂದ ಪರಿಸರದ ಮೇಲೆ ತೀವ್ರ ಹಾನಿಯಾಗುತ್ತಿದೆ ಎಂದು ಹಲವಾರು ಸಮಯಗಳಿಂದ ಆಕ್ಷೇಪ ಇತ್ತು. ಪರಿಸರ ಪ್ರೇಮಿಗಳು ಈ ಬಗ್ಗೆ ಹಲವು ಸಮಯಗಳಿಂದ ಒತ್ತಾಯ ಮಾಡುತ್ತಿದ್ದರು. ಬಳ್ಳಾರಿ ಪ್ರದೇಶದಲ್ಲಿ ಕಂಡುಬಂದಂತೆ ಗಣಿಗಾರಿಕೆಯಿಂದ ವ್ಯಾಪಕ ಪರಿಸರ ನಾಶವಾಗಿದೆ ಎಂಬುದು ಪರಿಸರವಾದಿಗಳ ಆರೋಪವಾಗಿತ್ತು. ಆದರೆ ಯಾವುದೂ ಪ್ರಯೋಜನ ಆಗಿರಲಿಲ್ಲ. ಈಚೆಗೆ ಸುಳ್ಯ ತಾಲೂಕಿನ ಗುತ್ತಿಗಾರು ಗ್ರಾಮದ ಪ್ರಕರಣವೊಂದರ ಆಧಾರದಲ್ಲಿ ಸುಳ್ಯದ ಜಾಲ್ಸೂರು ಬಳಿಯ ಬೋಜಪ್ಪ ನಾಯ್ಕ್ ಎಂಬವರು ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಹೈಕೋರ್ಟ್ ಗೆ ಸಲ್ಲಿಸಿದ್ದರು ಈ ಅರ್ಜಿಯನ್ನು ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿ ಎ ಎಸ್ ಓಕ್ ನೇತೃತ್ವದ ವಿಭಾಗೀಯ ಪೀಠ ವಿಚಾರಣೆ ನಡೆಸಿ ಕೆಂಪು ಕಲ್ಲು ಗಣಿಗಾರಿಕೆ ಬಗ್ಗೆ ಸ್ಥಳ ಪರಿಶೀಲನೆ ನಡೆಸಿ ವರದಿ ನೀಡುವಂತೆ ಲೋಕೋಪಯೋಗಿ ಇಲಾಖೆಗೆ ನಿರ್ದೇಶನ ನೀಡಿದ್ದವು. ಅನೇಕ ಸಮಯಗಳಿಂದ ಗಣಿಗಾರಿಕೆ ನಡೆಯುತ್ತಿದ್ದರೂ ಇಲಾಖೆಗಳು ಏಕೆ ಗಂಭೀರವಾಗಿ ಪರಿಗಣಿಸಲಿಲ್ಲ ಎಂಬುದು ಅರ್ಜಿದಾರರ ಪ್ರಶ್ನೆಯಾಗಿತ್ತು. ಇದೀಗ ಈ ಪ್ರಕರಣವನ್ನು ನ್ಯಾಯಾಲಯವು ಗಂಭೀರವಾಗಿ ಪರಿಗಣಿಸಿದೆ.
ದೇಶದ ಅಡಿಕೆ ಉತ್ಪಾದನೆ ಹಾಗೂ ಬೆಳೆ ವಿಸ್ತೀರ್ಣದಲ್ಲಿ ಕರ್ನಾಟಕವೇ ಅಗ್ರಸ್ಥಾನದಲ್ಲಿದೆ ಎಂದು ಕೇಂದ್ರ…
ವಿದೇಶದಿಂದ ಕಳಪೆ ಅಡಿಕೆ ಆಮದು ನಿಯಂತ್ರಿಸಿ ದೇಶೀಯ ಅಡಿಕೆ ಬೆಳೆಗಾರರನ್ನು ರಕ್ಷಿಸುವಂತೆ ಸಂಸದ…
ಕರಾವಳಿ ಜಿಲ್ಲೆಗಳಲ್ಲಿ ಆಗಸ್ಟ್ 12ರವರೆಗೆ ಬಿಟ್ಟುಬಿಟ್ಟು ಮಳೆಯಾಗುವ ಸಾಧ್ಯತೆ ಇದೆ. ಜಪಾನ್ ಸಮೀಪದ…
ನಬಾರ್ಡ್ ಸಮೀಕ್ಷೆಯ ಪ್ರಕಾರ, ಭಾರತದ ಗ್ರಾಮೀಣ ಕುಟುಂಬಗಳ ಪೈಕಿ ಶೇ.53ರಷ್ಟು ಕುಟುಂಬಗಳ ಆದಾಯ…
ಭಾರಿ ಮಳೆಯ ಹಿನ್ನೆಲೆಯಲ್ಲಿ ಆಗಸ್ಟ್ 4ರಂದು ದಕ್ಷಿಣ ಕನ್ನಡ, ಉಡುಪಿ ಹಾಗೂ ಕಾಸರಗೋಡು…
ಯಡಕುಮೇರಿ ಭೂಕುಸಿತ ಪ್ರದೇಶದಲ್ಲಿ ಮಣ್ಣು ತೆರವು ಹಾಗೂ ಹಳಿ ದುರಸ್ತಿ ಕಾಮಗಾರಿ ಪೂರ್ಣಗೊಂಡಿದ್ದು,…