ಮಲೇರಿಯಾದಿಂದ ಮರಣ ಸಂಖ್ಯೆ ಶೇ 80ರಷ್ಟು ಇಳಿಕೆ

December 30, 2024
6:41 AM

ವಿಶ್ವ ಆರೋಗ್ಯ ಸಂಸ್ಥೆ ಪ್ರಕಾರ ಭಾರತದಲ್ಲಿ 2015-2023  ರ ನಡುವೆ ಮಲೇರಿಯಾ ರೋಗ ಮತ್ತು ಅದರಿಂದ ಸಂಭವಿಸುವ ಸಾವುಗಳ ಸಂಖ್ಯೆಯಲ್ಲಿ ಶೇಕಡಾ 80 ರಷ್ಟು ಕಡಿಮೆಯಾಗಿದೆ. ಇದು ಒಂದು ಸಣ್ಣ ಸಾಧನೆಯಲ್ಲ. ಈ ಯಶಸ್ಸು ಜನರ ಭಾಗವಹಿಸುವಿಕೆಯಿಂದ ದೊರೆತಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.

ಮಲೇರಿಯಾ ನಾಲ್ಕು ಸಾವಿರ ವರ್ಷಗಳಿಂದ ಮಾನವಕುಲಕ್ಕೆ ದೊಡ್ಡ ಸವಾಲಾಗಿದೆ. ಒಂದು ತಿಂಗಳ ಶಿಶುವಿನಿಂದ ಹಿಡಿದು ಐದು ವರ್ಷ ವಯಸ್ಸಿನ ಮಕ್ಕಳ ಪ್ರಾಣ ಹರಣ ಮಾಡುವ ಎಲ್ಲಾ ಸಾಂಕ್ರಾಮಿಕ ರೋಗಗಳ ಪೈಕಿ ಮಲೇರಿಯಾ ರೋಗಕ್ಕೆ ಮೂರನೇ ಸ್ಥಾನವಿದೆ. ಹೀಗಾಗಿ ಸಾಂಕ್ರಾಮಿಕ ರೋಗ ನಿಯಂತ್ರಣಗಳಲ್ಲಿ ಸಾರ್ವಜನಿಕರ ಪಾಲ್ಗೊಳ್ಳುವಿಕೆಯೂ ಬಹುಮುಖ್ಯ ಎಂದರು.

ಕ್ಯಾನ್ಸರ್ ರೋಗಿಗಳಿಗೆ 30 ದಿನಗಳಲ್ಲಿ ಸಕಾಲದಲ್ಲಿ ಚಿಕಿತ್ಸೆ ನೀಡುವಲ್ಲಿ ಆಯುಷ್ಮಾನ್ ಭಾರತ್ ಯೋಜನೆಯ ಕೆಲಸವನ್ನೂ ಪ್ರಧಾನಿ ನರೇಂದ್ರ ಮೋದಿ ಉಲ್ಲೇಖಿಸಿದರು.  ಈ ಯೋಜನೆಯಿಂದಾಗಿ 90 ಶೇಕಡಾ ಕ್ಯಾನ್ಸರ್ ರೋಗಿಗಳು ಸಮಯಕ್ಕೆ ಸರಿಯಾಗಿ ಚಿಕಿತ್ಸೆಯನ್ನು ಪ್ರಾರಂಭಿಸಲು ಸಾಧ್ಯವಾಯಿತು ಎಂದು ಅವರು ಹೇಳಿದರು. ಈ ಹಿಂದೆ ಹಣದ ಕೊರತೆಯಿಂದ ಬಡ ರೋಗಿಗಳು ಕ್ಯಾನ್ಸರ್ ಪರೀಕ್ಷೆ ಮತ್ತು ಚಿಕಿತ್ಸೆಯಿಂದ ಹಿಂದೆ ಸರಿಯುತ್ತಿದ್ದರು. ಈಗ ಆಯುಷ್ಮಾನ್ ಭಾರತ್ ಯೋಜನೆ ಅವರಿಗೆ ದೊಡ್ಡ ಬೆಂಬಲವಾಗಿ ಪರಿಣಮಿಸಿದೆ. ಈಗ ಅವರು ಚಿಕಿತ್ಸೆ ಪಡೆಯಲು ಮುಂದೆ ಬರುತ್ತಿದ್ದಾರೆ. ಆಯುಷ್ಮಾನ್ ಭಾರತ್ ಯೋಜನೆಯು ಕ್ಯಾನ್ಸರ್ ಚಿಕಿತ್ಸೆಯಲ್ಲಿ ಆರ್ಥಿಕ ಸಮಸ್ಯೆಗಳನ್ನು ದೊಡ್ಡ ಪ್ರಮಾಣದಲ್ಲಿ ಕಡಿಮೆ ಮಾಡಿದೆ ಎಂದು ಅವರು ಹೇಳಿದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

Advertisement

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ದೇಶೀಯ ಗ್ರಾಹಕರಿಗೆ ಇಂಧನ ಕೊರತೆ ಇಲ್ಲ: CNG – PNG ಪೂರೈಕೆ ನಿರಂತರ – ಸಚಿವ ಹರ್ದೀಪ್ ಸಿಂಗ್ ಪುರಿ
March 12, 2026
7:20 AM
by: ಮಿರರ್‌ ಡೆಸ್ಕ್
ಪೆಟ್ರೋಲಿಯಂಗೆ ಪರ್ಯಾಯದತ್ತ : ಕೃಷಿ ಸಂಪನ್ಮೂಲಗಳಿಂದ ಬಯೋ ಉತ್ಪನ್ನಗಳತ್ತ ಆದ್ಯತೆ
March 12, 2026
7:16 AM
by: ಮಿರರ್‌ ಡೆಸ್ಕ್
ಗೋವಾದಲ್ಲಿ ಹಲಸು ಉತ್ಪಾದನೆ ಕುಸಿತ ಇಲ್ಲ | ಉತ್ತಮ ದರಕ್ಕಾಗಿ ಓಪನ್‌ ಮಾರ್ಕೆಟ್‌ಗೆ ರೈತರ ಒಲವು
March 12, 2026
7:11 AM
by: ಮಿರರ್‌ ಡೆಸ್ಕ್
ರಾಜ್ಯದಲ್ಲಿ ಅಡುಗೆ ಅನಿಲ ಕೊರತೆ ಇಲ್ಲ | ಪ್ರತಿ 25 ದಿನಕ್ಕೊಂದು ಸಿಲಿಂಡರ್‌ ಪೂರೈಕೆ – ಸಚಿವ ಮುನಿಯಪ್ಪ ಭರವಸೆ
March 12, 2026
7:08 AM
by: ಮಿರರ್‌ ಡೆಸ್ಕ್

You cannot copy content of this page - Copyright -The Rural Mirror