Advertisement
MIRROR FOCUS

ಮಲೇರಿಯಾದಿಂದ ಮರಣ ಸಂಖ್ಯೆ ಶೇ 80ರಷ್ಟು ಇಳಿಕೆ

Share

ವಿಶ್ವ ಆರೋಗ್ಯ ಸಂಸ್ಥೆ ಪ್ರಕಾರ ಭಾರತದಲ್ಲಿ 2015-2023  ರ ನಡುವೆ ಮಲೇರಿಯಾ ರೋಗ ಮತ್ತು ಅದರಿಂದ ಸಂಭವಿಸುವ ಸಾವುಗಳ ಸಂಖ್ಯೆಯಲ್ಲಿ ಶೇಕಡಾ 80 ರಷ್ಟು ಕಡಿಮೆಯಾಗಿದೆ. ಇದು ಒಂದು ಸಣ್ಣ ಸಾಧನೆಯಲ್ಲ. ಈ ಯಶಸ್ಸು ಜನರ ಭಾಗವಹಿಸುವಿಕೆಯಿಂದ ದೊರೆತಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.

ಮಲೇರಿಯಾ ನಾಲ್ಕು ಸಾವಿರ ವರ್ಷಗಳಿಂದ ಮಾನವಕುಲಕ್ಕೆ ದೊಡ್ಡ ಸವಾಲಾಗಿದೆ. ಒಂದು ತಿಂಗಳ ಶಿಶುವಿನಿಂದ ಹಿಡಿದು ಐದು ವರ್ಷ ವಯಸ್ಸಿನ ಮಕ್ಕಳ ಪ್ರಾಣ ಹರಣ ಮಾಡುವ ಎಲ್ಲಾ ಸಾಂಕ್ರಾಮಿಕ ರೋಗಗಳ ಪೈಕಿ ಮಲೇರಿಯಾ ರೋಗಕ್ಕೆ ಮೂರನೇ ಸ್ಥಾನವಿದೆ. ಹೀಗಾಗಿ ಸಾಂಕ್ರಾಮಿಕ ರೋಗ ನಿಯಂತ್ರಣಗಳಲ್ಲಿ ಸಾರ್ವಜನಿಕರ ಪಾಲ್ಗೊಳ್ಳುವಿಕೆಯೂ ಬಹುಮುಖ್ಯ ಎಂದರು.

ಕ್ಯಾನ್ಸರ್ ರೋಗಿಗಳಿಗೆ 30 ದಿನಗಳಲ್ಲಿ ಸಕಾಲದಲ್ಲಿ ಚಿಕಿತ್ಸೆ ನೀಡುವಲ್ಲಿ ಆಯುಷ್ಮಾನ್ ಭಾರತ್ ಯೋಜನೆಯ ಕೆಲಸವನ್ನೂ ಪ್ರಧಾನಿ ನರೇಂದ್ರ ಮೋದಿ ಉಲ್ಲೇಖಿಸಿದರು.  ಈ ಯೋಜನೆಯಿಂದಾಗಿ 90 ಶೇಕಡಾ ಕ್ಯಾನ್ಸರ್ ರೋಗಿಗಳು ಸಮಯಕ್ಕೆ ಸರಿಯಾಗಿ ಚಿಕಿತ್ಸೆಯನ್ನು ಪ್ರಾರಂಭಿಸಲು ಸಾಧ್ಯವಾಯಿತು ಎಂದು ಅವರು ಹೇಳಿದರು. ಈ ಹಿಂದೆ ಹಣದ ಕೊರತೆಯಿಂದ ಬಡ ರೋಗಿಗಳು ಕ್ಯಾನ್ಸರ್ ಪರೀಕ್ಷೆ ಮತ್ತು ಚಿಕಿತ್ಸೆಯಿಂದ ಹಿಂದೆ ಸರಿಯುತ್ತಿದ್ದರು. ಈಗ ಆಯುಷ್ಮಾನ್ ಭಾರತ್ ಯೋಜನೆ ಅವರಿಗೆ ದೊಡ್ಡ ಬೆಂಬಲವಾಗಿ ಪರಿಣಮಿಸಿದೆ. ಈಗ ಅವರು ಚಿಕಿತ್ಸೆ ಪಡೆಯಲು ಮುಂದೆ ಬರುತ್ತಿದ್ದಾರೆ. ಆಯುಷ್ಮಾನ್ ಭಾರತ್ ಯೋಜನೆಯು ಕ್ಯಾನ್ಸರ್ ಚಿಕಿತ್ಸೆಯಲ್ಲಿ ಆರ್ಥಿಕ ಸಮಸ್ಯೆಗಳನ್ನು ದೊಡ್ಡ ಪ್ರಮಾಣದಲ್ಲಿ ಕಡಿಮೆ ಮಾಡಿದೆ ಎಂದು ಅವರು ಹೇಳಿದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಒಡಿಶಾ ಕರಾವಳಿಯಲ್ಲಿ ಅಕ್ರಮ ಅಡಿಕೆ ಸಾಗಣೆ ಪತ್ತೆ – 700 ಕ್ಕೂ ಹೆಚ್ಚು ಗೋಣಿ ಚೀಲ ವಶಕ್ಕೆ

ಒಡಿಶಾ ಕರಾವಳಿಯಲ್ಲಿ ಅಕ್ರಮವಾಗಿ ಸಾಗಿಸಲಾಗುತ್ತಿದ್ದ 700 ಕ್ಕೂ ಹೆಚ್ಚು ಗೋಣಿ ಚೀಲಗಳ ಅಡಿಕೆ…

1 day ago

ರಾಸಾಯನಿಕ ಮುಕ್ತ ಕೃಷಿಗೆ ಪ್ರಧಾನಿ ಮೋದಿ ಕರೆ

ಆದಿಚುಂಚನಗಿರಿಯಲ್ಲಿ ಭೈರವೈಕ್ಯ ಮಂದಿರವನ್ನು ಪ್ರಧಾನಿ ಮೋದಿ ಲೋಕಾರ್ಪಣೆಗೊಳಿಸಿದರು. ರಾಸಾಯನಿಕ ಮುಕ್ತ ಕೃಷಿಗೆ ಆದ್ಯತೆ…

1 day ago

ವಳಲಂಬೆಯಲ್ಲಿ ಎ.19 ರಂದು ‘ಸಂಗೀತ ಸಂಭ್ರಮ’

ಸುಳ್ಯದ ವಳಲಂಬೆಯಲ್ಲಿ ಏಪ್ರಿಲ್ 19ರಂದು ‘ಸಂಗೀತ ಸಂಭ್ರಮ’ ಕಾರ್ಯಕ್ರಮ ನಡೆಯಲಿದೆ. ಖ್ಯಾತ ಕಲಾವಿದರಿಂದ…

2 days ago

ಹವಾಮಾನ ವರದಿ | 15-04-2026 | ಕರ್ನಾಟಕದಲ್ಲಿ ಬಿಸಿಗಾಳಿಯ ನಡುವೆ ಮಳೆಯ ಸುಳಿವು – ಏಪ್ರಿಲ್ 18 ರಿಂದ ಮಳೆ…!

ಕರ್ನಾಟಕದಲ್ಲಿ ಏಪ್ರಿಲ್ 18ರಿಂದ ಹಂತ ಹಂತವಾಗಿ ಮಳೆಯ ಚಟುವಟಿಕೆ ಆರಂಭವಾಗುವ ಸಾಧ್ಯತೆ ಇದೆ.…

2 days ago

ವಿಷು ಹಬ್ಬದ ಅರ್ಥವೇನು ಗೊತ್ತಾ..? ಸೂರ್ಯ ಸಂಕ್ರಮಣದ ಈ ರಹಸ್ಯ ನಿಮ್ಮ ಜೀವನವೇ ಬದಲಾಯಿಸಬಹುದು..!

ವಿಷು ಹಬ್ಬವು ಸೂರ್ಯನ ಮೇಷ ಸಂಕ್ರಮಣದೊಂದಿಗೆ ಸಂಬಂಧಿಸಿದ ಆಧ್ಯಾತ್ಮಿಕ ಹಬ್ಬವಾಗಿದೆ. ವಿಷು ಕಣಿ…

2 days ago

ಬೇಸಿಗೆ ಬಿತ್ತನೆ ಭರ್ಜರಿ ಏರಿಕೆ..! 64 ಲಕ್ಷ ಹೆಕ್ಟೇರ್ ದಾಟಿದ ಕೃಷಿ ವ್ಯಾಪ್ತಿ, 0.77 ಲಕ್ಷ ಹೆಕ್ಟೇರ್ ಹೆಚ್ಚಳ

ಈ ವರ್ಷ ಬೇಸಿಗೆ ಬಿತ್ತನೆ 64 ಲಕ್ಷ ಹೆಕ್ಟೇರ್ ದಾಟಿದ್ದು, ಕಳೆದ ವರ್ಷಕ್ಕಿಂತ…

2 days ago