ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಕರ್ನಾಟಕ ರಾಜ್ಯ ಏಡ್ಸ್ ನಿಯಂತ್ರಣಾ ಮಂಡಳಿ ವತಿಯಿಂದ ಬೆಂಗಳೂರಿನ ದೇವರಾಜ ಅರಸು ಟ್ರಕ್ ಟರ್ಮಿನಲ್ ನಲ್ಲಿ ವಿಶ್ವ ಏಡ್ಸ್ ದಿನಾಚರಣೆ ಆಯೋಜಿಸಲಾಗಿತ್ತು. ಕಾರ್ಯಕ್ರಮಕ್ಕೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಚಿವ ದಿನೇಶ್ ಗುಂಡೂರಾವ್ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಮಾತನಾಡಿದ ದಿನೇಶ್ ಗುಂಡೂರಾವ್, ರಾಜ್ಯದಲ್ಲಿ ಏಡ್ಸ್ ಸೋಂಕಿತರ ಪ್ರಮಾಣ ವರ್ಷದಿಂದ ವರ್ಷಕ್ಕೆ ಗಣನೀಯವಾಗಿ ತಗ್ಗುತ್ತಿದೆ. ಸಾವಿನ ಪ್ರಮಾಣವೂ ಗಣನೀಯ ಪ್ರಮಾಣದಲ್ಲಿ ಕಡಿತವಾಗಿದೆ ಎಂದು ತಿಳಿಸಿದರು. ಆರೋಗ್ಯ ಇಲಾಖೆ ಎಆರ್ ಟಿ ಸೇರಿದಂತೆ ಹಲವು ರೀತಿಯ ಅಗತ್ಯ ಚಿಕಿತ್ಸಾ ಕ್ರಮಗಳನ್ನು ಕೈಗೊಂಡಿದ್ದು, ರೋಗ ಪ್ರಮಾಣವನ್ನು ಶೂನ್ಯಕ್ಕೆ ತರುವುದು ಇಲಾಖೆಯ ಉದ್ದೇಶವಾಗಿದೆ ಎಂದು ಹೇಳಿದರು. ಕಾರ್ಯಕ್ರಮದಲ್ಲಿ ಏಡ್ಸ್ ತಡೆಗಾಗಿ ಗಣನೀಯ ಕೊಡುಗೆ ನೀಡಿದ ಕಾರ್ಯಕರ್ತರನ್ನು ಸನ್ಮಾನಿಸಲಾಯಿತು.
ಸೆ.18ರಿಂದ ಕರ್ನಾಟಕದ ಹಲವು ಭಾಗಗಳಲ್ಲಿ ಮಳೆ ಚುರುಕಾಗುವ ಸೂಚನೆ ಇದ್ದು, ಸೆ.19ರಿಂದ ಉತ್ತರ…
ಬರಪೀಡಿತ ಎಂದು ಘೋಷಿಸಿರುವ ರಾಜ್ಯದ 101 ತಾಲೂಕುಗಳ ರೈತರಿಗೆ ಸಾಲ ಮರುಪಾವತಿ ಅವಧಿಯನ್ನು…
ಇಂಡೋನೇಷ್ಯಾದ ಸುಲವೆಸಿಯಲ್ಲಿ ಪತ್ತೆಯಾದ ಸುಮಾರು 25,000 ವರ್ಷಗಳ ಹಿಂದಿನ ಮಾನವ ಹಲ್ಲುಗಳಲ್ಲಿ ಅಡಿಕೆ…
‘ಹನುಮಾನ್ ಅಂಶ್’ ಸಿನಿಮಾ 40ನೇ ದಿನವೂ ₹8.25 ಕೋಟಿ ಗಳಿಸಿ ಬಾಕ್ಸ್ ಆಫೀಸ್ನಲ್ಲಿ…
ನೈಋತ್ಯ ಮುಂಗಾರು ಹಿಂದೆ ಸರಿಯಲು ಪೂರಕ ಪರಿಸ್ಥಿತಿಗಳು ನಿರ್ಮಾಣವಾಗುತ್ತಿದ್ದು, ಸೆ.17ರ ವೇಳೆಗೆ ಪಶ್ಚಿಮ…
ಕರ್ನಾಟಕದ ಹಲವು ಭಾಗಗಳಲ್ಲಿ ಸೆ.17ರಂದು ಸಂಜೆ ಹಾಗೂ ರಾತ್ರಿ ಅಲ್ಲಲ್ಲಿ ಸಾಮಾನ್ಯ ಮಳೆಯ…