Advertisement
ವೈರಲ್ ಸುದ್ದಿ

ಹಂಪಿ ಸ್ಮಾರಕದ ಮೇಲೆ ಹತ್ತಿ ಡ್ಯಾನ್ಸ್ ಮಾಡಿದ ಯುವಕ: ಭಾರತೀಯ ಪುರಾತತ್ವ ಸಮೀಕ್ಷೆ ನಿಯಮ ಉಲ್ಲಂಘನೆ : ಕೇಸ್ ದಾಖಲು

Share

ಹಂಪಿಯು  ಭಾರತದ ಅತ್ಯಂತ ಪ್ರಸಿದ್ಧ ಪುರಾತತ್ವ ಕೇಂದ್ರಗಳಲ್ಲಿ ಒಂದಾಗಿದ್ದು ಇಲ್ಲಿಗೆ ಪ್ರತಿವರ್ಷ ಲಕ್ಷಾಂತರ ಪ್ರವಾಸಿಗರು, ಇತಿಹಾಸ ಪ್ರಿಯರು ಭೇಟಿ ನೀಡುತ್ತಾರೆ. ಹಂಪಿ ಪಟ್ಟಣ ಅತ್ಯಾಧುನಿಕ ಪಟ್ಟಗಳಿಂದ ದೂರದಲ್ಲಿರುವ ಒಂದು ಏಕಾಂತದ  ನಗರ ಎಂದರೂ ತಪ್ಪಾಗಲಾರದು. ಹಂಪಿ ಎಂದ ಕೂಡಲೇ ನಮ್ಮ ಕಣ್ಮುಂದೆ ಸುಳಿಯುವುದು ಅಲ್ಲಿನ ಪ್ರಸಿದ್ಧ ವಿಜಯ ನಗರ     ರಾಜಮನೆತನ, ಕಲ್ಲಿನಲ್ಲಿ ಅರಳಿ ನಿಂತ  ದೇವಾಲಯಗಳು, ಕಲಾ ಕುಸುರಿಯಿಂದಲೇ ಕಣ್ಮನ ಸೆಳೆಯುವ   ಗೋಪುರಗಳು, ವಿಶಾಲ   ರಸ್ತೆಗಳು ಮತ್ತು ಪ್ರತಿಮೆಗಳು. ಇವೆಲ್ಲವೂ   ಈ ನಗರದಾದ್ಯಂತ  ಪಸರಿಸಿ ನಿಂತಿವೆ.

ಆದರೆ ಇತ್ತೀಚೆಗೆ ಹಂಪಿಯ ಮಹತ್ವವನ್ನು ಅರಿಯದ ಕೆಲಕಿಡಿಗೇಡಿಗಳು ತಮ್ಮ ಮೋಜು ಮಸ್ತಿಗಾಗಿ ಈ ಪಾರಂಪರಿಕ ಕಟ್ಟಡವನ್ನು ಬಳಸಿಕೊಳ್ಳುತ್ತಿದ್ದಾರೆ. ಇತ್ತೀಚೆಗೆ ಹಂಪಿಯ ಹೇಮಕೂಟ ಬೆಟ್ಟದಲ್ಲಿ ಯುವಕರು ಕುಣಿದು ಕುಪ್ಪಳಿಸುವ ದೃಶ್ಯ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.  14ನೇ ಶತಮಾನದ ಪುರಾತನ ಸ್ಮಾರಕದ ಮಂಟಪಕ್ಕೆ ಹತ್ತುತ್ತಿರುವ ದೃಶ್ಯ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿ ವ್ಯಾಪಕ ವಿರೋಧ ವ್ಯಕ್ತವಾಗಿ ಹಂಪಿ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.

ವಿಡಿಯೋ ಆಧರಿಸಿ ಪೊಲೀಸರು ಸ್ವಯಂಪ್ರೇರಿತ ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದಾರೆ. ಕಳೆದ ವಾರ ಹಂಪಿಯ ಪವಿತ್ರ ಪುರಂದರ ಮಂಟಪದಲ್ಲಿ ವಿದೇಶಿಗರ ಗುಂಪು ಪಾರ್ಟಿ ಮಾಡುತ್ತಿರುವುದು ಕಂಡು ಬಂದಿತ್ತು. ಇಂತಹ ಘಟನೆಗಳು ನಡೆಯದಂತೆ ಹೆಚ್ಚುವರಿ ಸಿಬಂದಿಗಳನ್ನು ನಿಯೋಜಿಸಬೇಕು ಎಂಬುದು ಸ್ಥಳೀಯರ ಆಗ್ರಹವಾಗಿದೆ.

ಭಾರತೀಯ ಪುರಾತತ್ವ ಸಮೀಕ್ಷೆ (ASI) ಮತ್ತು ಹಂಪಿ ವಿಶ್ವ ಪರಂಪರೆಯ ಪ್ರದೇಶ ನಿರ್ವಹಣಾ ಪ್ರಾಧಿಕಾರ (HWHAMA) ನಿಯಮಗಳ ಪ್ರಕಾರ ಹಂಪಿಯಲ್ಲಿರುವ ಸ್ಮಾರಕಗಳ ಮೇಲೆ ಬ್ಲಿಂಬ್ ಮಾಡುವುದನ್ನು ಕಟ್ಟುನಿಟ್ಟಾಗಿ ನಿಷೇಧಿಸಲಾಗಿದೆ. ಹಲವು ಬಾರಿ ರೀಲ್ಸ್ ತಯಾರಕರ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.

ಘಟನೆ ನಡೆದ ಕೂಡಲೇ ಹಂಪಿಗೆ ಭೇಟಿ ನೀಡಿ ಸ್ಥಳೀಯರನ್ನು ವಿಚಾರಿಸಿರುವುದಾಗಿ ವಿಜಯನಗರ ಜಿಲ್ಲಾಧಿಕಾರಿ ಟಿ ವೆಂಕಟೇಶ್ ತಿಳಿಸಿದ್ದಾರೆ. “ಎಎಸ್‌ಐ ಮಾರ್ಗಸೂಚಿಗಳನ್ನು ಉಲ್ಲಂಘಿಸುವುದು ಶಿಕ್ಷಾರ್ಹ ಅಪರಾಧವಾಗಿದೆ, ಪ್ರವಾಸಿಗರು ಸ್ಮಾರಕಗಳ ಸೌಂದರ್ಯವನ್ನು ಸ್ಪರ್ಶಿಸದೆ ಅಥವಾ ಸ್ಮಾರಕಗಳಿಗೆ ಹಾನಿ ಮಾಡದೆ ಆನಂದಿಸಬೇಕು. ಪ್ರವಾಸಿಗರಿಗೆ ಮಾರ್ಗದರ್ಶನ ನೀಡಲು ಹಂಪಿಯಲ್ಲಿ ಹಲವು ಕಡೆ ಸೂಚನಾ ಫಲಕಗಳನ್ನು ಅಳವಡಿಸಲಾಗುವುದು. ಭದ್ರತಾ ಸಿಬ್ಬಂದಿಯನ್ನು ಹೆಚ್ಚಿಸಲು ನಾವು ಕ್ರಮಗಳನ್ನು ತೆಗೆದುಕೊಳ್ಳುತ್ತೇವೆ ಎಂದು ಹೇಳಿದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಹವಾಮಾನ ವರದಿ | 13- 08-2026 | ಕರ್ನಾಟಕದಲ್ಲಿ ಮಳೆ ಮುಂದುವರಿಕೆ| ಸುಳ್ಯ, ಘಟ್ಟದ ಕೆಳಭಾಗದಲ್ಲಿ ಮಧ್ಯಾಹ್ನದ ಬಳಿಕ ಹೆಚ್ಚು ಮಳೆ ಸಾಧ್ಯತೆ

ಕರ್ನಾಟಕದ ಕರಾವಳಿ, ಮಲೆನಾಡು ಹಾಗೂ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಮುಂದಿನ ದಿನಗಳಲ್ಲೂ ಮಳೆ…

4 hours ago

ಎಲ್ ನಿನೊ ಪರಿಣಾಮ 15 ರಾಜ್ಯಗಳ 342 ಜಿಲ್ಲೆಗಳಲ್ಲಿ ಮಳೆ ಕೊರತೆ

ಎಲ್ ನಿನೊದ ಸಂಭಾವ್ಯ ಪರಿಣಾಮಗಳ ಹಿನ್ನೆಲೆಯಲ್ಲಿ ದೇಶದ ಹವಾಮಾನ, ಮುಂಗಾರು ಮತ್ತು ಕೃಷಿ…

12 hours ago

ಇನ್ನೊಂದು ಮನೆಯ ಸಮಸ್ಯೆ ನಮಗೆ ಸುದ್ದಿ ; ನಮ್ಮ ಮನೆಯ ನೋವು ಮಾತ್ರ ನಮಗೆ ಸಂಕಟ..! ಯಾಕೆ ?

ಇತರರ ಮನೆಯ ಸಮಸ್ಯೆ ನಮಗೆ ಕುತೂಹಲದ ಸುದ್ದಿಯಾಗಬಹುದು. ಆದರೆ ಆ ಮನೆಯವರಿಗೆ ಅದು…

12 hours ago

ಕೈಗಾರಿಕಾ ಕೋಳಿ ಸಾಕಾಣಿಕೆ ಆಹಾರ ವಿಷಬಾಧೆಗೆ ಕಾರಣವಾಗುತ್ತಿದೆಯೇ? – ಹೊಸ ಅಧ್ಯಯನದ ಎಚ್ಚರಿಕೆ

ಕೈಗಾರಿಕಾ ಕೋಳಿ ಸಾಕಾಣಿಕೆ ಆಹಾರ ವಿಷಬಾಧೆಗೆ ಕಾರಣವಾಗುವ ಕ್ಯಾಂಪಿಲೋಬ್ಯಾಕ್ಟರ್ ಬ್ಯಾಕ್ಟೀರಿಯಾದ ಹರಡುವಿಕೆಯನ್ನು ವೇಗಗೊಳಿಸುತ್ತಿದೆ…

12 hours ago

ಹವಾಮಾನ ಬದಲಾವಣೆಯಿಂದ ರೈತರ ರಕ್ಷಣೆಗೆ ಸರ್ಕಾರದ ತಂತ್ರ – 310 ಜಿಲ್ಲೆಗಳು ಅಪಾಯದಲ್ಲಿ, 2,661 ಸಹಿಷ್ಣು ತಳಿಗಳ ಅಭಿವೃದ್ಧಿ

ದೇಶದ 651 ಕೃಷಿ ಜಿಲ್ಲೆಗಳ ಹವಾಮಾನ ಅಪಾಯ ಮೌಲ್ಯಮಾಪನದಲ್ಲಿ 310 ಜಿಲ್ಲೆಗಳು ದುರ್ಬಲವೆಂದು…

22 hours ago

ಗುಟ್ಕಾ ನಿಷೇಧದ ಹೆಸರಿನಲ್ಲಿ ಅಡಿಕೆ ಬೆಳೆಗಾರರಿಗೆ ತೊಂದರೆ ಆಗದಂತೆ ಸರ್ಕಾರ ಸ್ಪಷ್ಟ ಮಾರ್ಗಸೂಚಿ ನೀಡಲಿ

ಗುಟ್ಕಾ ಮತ್ತು ಪಾನ್‌ಮಸಾಲಾ ನಿಷೇಧವನ್ನು ಅಡಿಕೆ ನಿಷೇಧದೊಂದಿಗೆ ಸಂಬಂಧಿಸಬಾರದು, ಅಡಿಕೆ ಬೆಳೆಗಾರರು ಗಾಬರಿಯಾಗಬಾರದು…

22 hours ago