Advertisement
ವೈರಲ್ ಸುದ್ದಿ

ಹಂಪಿ ಸ್ಮಾರಕದ ಮೇಲೆ ಹತ್ತಿ ಡ್ಯಾನ್ಸ್ ಮಾಡಿದ ಯುವಕ: ಭಾರತೀಯ ಪುರಾತತ್ವ ಸಮೀಕ್ಷೆ ನಿಯಮ ಉಲ್ಲಂಘನೆ : ಕೇಸ್ ದಾಖಲು

Share

ಹಂಪಿಯು  ಭಾರತದ ಅತ್ಯಂತ ಪ್ರಸಿದ್ಧ ಪುರಾತತ್ವ ಕೇಂದ್ರಗಳಲ್ಲಿ ಒಂದಾಗಿದ್ದು ಇಲ್ಲಿಗೆ ಪ್ರತಿವರ್ಷ ಲಕ್ಷಾಂತರ ಪ್ರವಾಸಿಗರು, ಇತಿಹಾಸ ಪ್ರಿಯರು ಭೇಟಿ ನೀಡುತ್ತಾರೆ. ಹಂಪಿ ಪಟ್ಟಣ ಅತ್ಯಾಧುನಿಕ ಪಟ್ಟಗಳಿಂದ ದೂರದಲ್ಲಿರುವ ಒಂದು ಏಕಾಂತದ  ನಗರ ಎಂದರೂ ತಪ್ಪಾಗಲಾರದು. ಹಂಪಿ ಎಂದ ಕೂಡಲೇ ನಮ್ಮ ಕಣ್ಮುಂದೆ ಸುಳಿಯುವುದು ಅಲ್ಲಿನ ಪ್ರಸಿದ್ಧ ವಿಜಯ ನಗರ     ರಾಜಮನೆತನ, ಕಲ್ಲಿನಲ್ಲಿ ಅರಳಿ ನಿಂತ  ದೇವಾಲಯಗಳು, ಕಲಾ ಕುಸುರಿಯಿಂದಲೇ ಕಣ್ಮನ ಸೆಳೆಯುವ   ಗೋಪುರಗಳು, ವಿಶಾಲ   ರಸ್ತೆಗಳು ಮತ್ತು ಪ್ರತಿಮೆಗಳು. ಇವೆಲ್ಲವೂ   ಈ ನಗರದಾದ್ಯಂತ  ಪಸರಿಸಿ ನಿಂತಿವೆ.

ಆದರೆ ಇತ್ತೀಚೆಗೆ ಹಂಪಿಯ ಮಹತ್ವವನ್ನು ಅರಿಯದ ಕೆಲಕಿಡಿಗೇಡಿಗಳು ತಮ್ಮ ಮೋಜು ಮಸ್ತಿಗಾಗಿ ಈ ಪಾರಂಪರಿಕ ಕಟ್ಟಡವನ್ನು ಬಳಸಿಕೊಳ್ಳುತ್ತಿದ್ದಾರೆ. ಇತ್ತೀಚೆಗೆ ಹಂಪಿಯ ಹೇಮಕೂಟ ಬೆಟ್ಟದಲ್ಲಿ ಯುವಕರು ಕುಣಿದು ಕುಪ್ಪಳಿಸುವ ದೃಶ್ಯ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.  14ನೇ ಶತಮಾನದ ಪುರಾತನ ಸ್ಮಾರಕದ ಮಂಟಪಕ್ಕೆ ಹತ್ತುತ್ತಿರುವ ದೃಶ್ಯ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿ ವ್ಯಾಪಕ ವಿರೋಧ ವ್ಯಕ್ತವಾಗಿ ಹಂಪಿ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.

ವಿಡಿಯೋ ಆಧರಿಸಿ ಪೊಲೀಸರು ಸ್ವಯಂಪ್ರೇರಿತ ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದಾರೆ. ಕಳೆದ ವಾರ ಹಂಪಿಯ ಪವಿತ್ರ ಪುರಂದರ ಮಂಟಪದಲ್ಲಿ ವಿದೇಶಿಗರ ಗುಂಪು ಪಾರ್ಟಿ ಮಾಡುತ್ತಿರುವುದು ಕಂಡು ಬಂದಿತ್ತು. ಇಂತಹ ಘಟನೆಗಳು ನಡೆಯದಂತೆ ಹೆಚ್ಚುವರಿ ಸಿಬಂದಿಗಳನ್ನು ನಿಯೋಜಿಸಬೇಕು ಎಂಬುದು ಸ್ಥಳೀಯರ ಆಗ್ರಹವಾಗಿದೆ.

ಭಾರತೀಯ ಪುರಾತತ್ವ ಸಮೀಕ್ಷೆ (ASI) ಮತ್ತು ಹಂಪಿ ವಿಶ್ವ ಪರಂಪರೆಯ ಪ್ರದೇಶ ನಿರ್ವಹಣಾ ಪ್ರಾಧಿಕಾರ (HWHAMA) ನಿಯಮಗಳ ಪ್ರಕಾರ ಹಂಪಿಯಲ್ಲಿರುವ ಸ್ಮಾರಕಗಳ ಮೇಲೆ ಬ್ಲಿಂಬ್ ಮಾಡುವುದನ್ನು ಕಟ್ಟುನಿಟ್ಟಾಗಿ ನಿಷೇಧಿಸಲಾಗಿದೆ. ಹಲವು ಬಾರಿ ರೀಲ್ಸ್ ತಯಾರಕರ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.

ಘಟನೆ ನಡೆದ ಕೂಡಲೇ ಹಂಪಿಗೆ ಭೇಟಿ ನೀಡಿ ಸ್ಥಳೀಯರನ್ನು ವಿಚಾರಿಸಿರುವುದಾಗಿ ವಿಜಯನಗರ ಜಿಲ್ಲಾಧಿಕಾರಿ ಟಿ ವೆಂಕಟೇಶ್ ತಿಳಿಸಿದ್ದಾರೆ. “ಎಎಸ್‌ಐ ಮಾರ್ಗಸೂಚಿಗಳನ್ನು ಉಲ್ಲಂಘಿಸುವುದು ಶಿಕ್ಷಾರ್ಹ ಅಪರಾಧವಾಗಿದೆ, ಪ್ರವಾಸಿಗರು ಸ್ಮಾರಕಗಳ ಸೌಂದರ್ಯವನ್ನು ಸ್ಪರ್ಶಿಸದೆ ಅಥವಾ ಸ್ಮಾರಕಗಳಿಗೆ ಹಾನಿ ಮಾಡದೆ ಆನಂದಿಸಬೇಕು. ಪ್ರವಾಸಿಗರಿಗೆ ಮಾರ್ಗದರ್ಶನ ನೀಡಲು ಹಂಪಿಯಲ್ಲಿ ಹಲವು ಕಡೆ ಸೂಚನಾ ಫಲಕಗಳನ್ನು ಅಳವಡಿಸಲಾಗುವುದು. ಭದ್ರತಾ ಸಿಬ್ಬಂದಿಯನ್ನು ಹೆಚ್ಚಿಸಲು ನಾವು ಕ್ರಮಗಳನ್ನು ತೆಗೆದುಕೊಳ್ಳುತ್ತೇವೆ ಎಂದು ಹೇಳಿದರು.

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಒಂದೇ ತೆಂಗಿನ ಮರದಿಂದ ₹10,000 ಆದಾಯ? ಮೌಲ್ಯವರ್ಧನೆಗೆ ಹೊಸ ದಾರಿ ತೋರಿದ ವಿಶ್ವ ತೆಂಗು ದಿನ

ಕಾಸರಗೋಡಿನ ICAR-CPCRIನಲ್ಲಿ ವಿಶ್ವ ತೆಂಗು ದಿನ–2026 ಆಚರಿಸಿ, ಹವಾಮಾನ ಅನಿಶ್ಚಿತತೆಯ ನಡುವೆ ತೆಂಗು…

3 hours ago

ಹವಾಮಾನ ವರದಿ | 02-09-2026 | ಉತ್ತರ ಭಾರತದ ವಾಯುಭಾರ ಕುಸಿತ ದುರ್ಬಲವಾಗುವ ಸಾಧ್ಯತೆ

ಕರಾವಳಿಯಲ್ಲಿ ಮುಂದಿನ ಎರಡು ದಿನ ಅಲ್ಲಲ್ಲಿ ಸಾಮಾನ್ಯ ಮಳೆಯಾದರೂ ಜೋರು ಮಳೆಯ ಸಾಧ್ಯತೆ…

8 hours ago

ಕೃಷಿಗೆ ಸಾಲ ಹೆಚ್ಚಿಸಿ – ಅಲ್ಪಾವಧಿ ಮಾತ್ರವಲ್ಲ, ದೀರ್ಘಾವಧಿ ಸಾಲವೂ ಬೇಕು – ಬ್ಯಾಂಕ್‌ಗಳಿಗೆ ನಿರ್ಮಲಾ ಸೀತಾರಾಮನ್ ಸೂಚನೆ

ಕೃಷಿ ಉತ್ಪಾದನೆ ಹೆಚ್ಚಿಸಲು ಬ್ಯಾಂಕ್‌ಗಳು ರೈತರಿಗೆ ಹೆಚ್ಚಿನ ಸಾಂಸ್ಥಿಕ ಸಾಲ ನೀಡಬೇಕು ಎಂದು…

14 hours ago

E20 ಎಫೆಕ್ಟ್‌ – ಪಶು ಆಹಾರದ ಬೆಲೆ ಏರಿಕೆ, ಹೈನುಗಾರರ ಲೆಕ್ಕಾಚಾರವೇ ಬದಲು..!

E20 ನೀತಿಯಡಿ ಎಥನಾಲ್ ಉತ್ಪಾದನೆಗೆ ಜೋಳ ಸೇರಿದಂತೆ ಧಾನ್ಯಗಳ ಬೇಡಿಕೆ ಹೆಚ್ಚುತ್ತಿರುವ ನಡುವೆ…

23 hours ago

ಬರದ ನಡುವೆ ರೈತರ ಜಮೀನಿಗೆ ಸಿಎಂ ಭೇಟಿ – ಬೆಳೆ ಹಾನಿ ಪರಿಶೀಲನೆ

ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಗದಗ ಜಿಲ್ಲೆಯ ವಿವಿಧ ಗ್ರಾಮಗಳಿಗೆ ಭೇಟಿ ನೀಡಿ…

1 day ago

ಹವಾಮಾನ ವರದಿ | 01-09-2026 | ಯಾವ ಜಿಲ್ಲೆಗಳಲ್ಲಿ ಇನ್ನೂ ಮಳೆಯ ಸಾಧ್ಯತೆ…?

ಕರ್ನಾಟಕದಲ್ಲಿ ಮಳೆಯ ತೀವ್ರತೆ ಕ್ರಮೇಣ ಕಡಿಮೆಯಾಗುವ ಲಕ್ಷಣಗಳಿದ್ದು, ಸೆಪ್ಟೆಂಬರ್ 4ರಿಂದ ಕರಾವಳಿ ಮತ್ತು…

1 day ago