Advertisement
ಸುದ್ದಿಗಳು

ಭತ್ತ ಬೆಳೆಯಯುವ ರೈತರು ವಿಮೆಗೆ ನೋಂದಾಯಿಸಲು ಸೂಚನೆ

Share

2024-25ನೇ ಸಾಲಿನ ಮುಂಗಾರು ಹಂಗಾಮಿನಲ್ಲಿ ಕರ್ನಾಟಕ ರೈತ ಸುರಕ್ಷಾ ಪ್ರಧಾನಮಂತ್ರಿ ಫಸಲ್ ಬಿಮಾ ಯೋಜನೆಯಡಿ ರೈತರು ತಮ್ಮ ಹೆಸರನ್ನು ನೊಂದಾಯಿಸಿಕೊಳ್ಳಬಹುದಾಗಿದೆ. ಪ್ರಸಕ್ತ ಸಾಲಿನಲ್ಲಿ ದಕ್ಷಿಣ ಕನ್ನಡ ಜಿಲ್ಲೆಗೆ ಈ ಯೋಜನೆಯನ್ನು ಅನುಷ್ಠಾನ ಮಾಡಲು ಅಗ್ರಿಕಲ್ಚರ್ ಇನ್ಸೂರೆನ್ಸ್ ಕಂಪೆನಿಯನ್ನು ನಿಗದಿಪಡಿಸಲಾಗಿದೆ.

ಪ್ರಸಕ್ತ ಸಾಲಿನಲ್ಲಿ ಜಿಲ್ಲೆಯಲ್ಲಿ ಕೃಷಿ ಬೆಳೆಗೆ ಸಂಬಂಧಿಸಿದಂತೆ, ಭತ್ತವು ನೊಂದಾಯಿತ ಬೆಳೆಯಾಗಿದ್ದು ಭತ್ತ ಬೆಳೆಯುವ ರೈತರು ಈ ಯೋಜನೆಗೆ ತಮ್ಮ ಹೆಸರನ್ನು ನೊಂದಾಯಿಸಿಕೊಳ್ಳಬಹುದು, ಈ ಯೋಜನೆಯಡಿ ಮುಂಗಾರು ಹಂಗಾಮಿನಲ್ಲಿ ಅಧಿಸೂಚಿತ ಘಟಕದಲ್ಲಿ ಯಾವುದೇ ಪ್ರಕೃತಿ ವಿಕೋಪಗಳಿಂದ/ ಹವಾಮಾನ ವೈಪರೀತ್ಯದಿಂದಾಗಿ ಶೇ.75ಕ್ಕಿಂತ ಹೆಚ್ಚಿನ ಕ್ಷೇತ್ರದಲ್ಲಿ ಬಿತ್ತನೆ ವಿಫಲಗೊಂಡಲ್ಲಿ ವಿಮಾಮೊತ್ತದ ಗರಿಷ್ಠ ಶೇ.25ರ ಭಾಗವನ್ನು, ಬಿತ್ತನೆಯಿಂದ ಕಟಾವು ಹಂತದವರೆಗಿನ ಮಧ್ಯದ ಅವಧಿಯಲ್ಲಿ ಶೇ.50ಕ್ಕಿಂತ ಹೆಚ್ಚು ಬೆಳೆ ನಷ್ಟ ಸಂಭವಿಸಿದರೆ ಮುಂಚಿತವಾಗಿ ಅಂದಾಜು ಮಾಡಲಾದ ಬೆಳೆವಿಮಾ ನಷ್ಟ ಪರಿಹಾರದಲ್ಲಿ ಶೇ.25ರಷ್ಟು ಹಣವನ್ನು ಪರಿಹಾರವಾಗಿ ನೀಡಲಾಗುತ್ತದೆ.

ಕಟಾವಿನ ನಂತರದ ಸಮಯದಲ್ಲಿ ಬೆಳೆಯನ್ನು ಒಣಗಿಸಲು ಬಿಟ್ಟಂತ ಸಂದರ್ಭದಲ್ಲಿ 2 ವಾರದೊಳಗೆ ಅಕಾಲಿಕ ಮಳೆ/ಚಂಡಮಾರುತ ಸಹಿತ ಮಳೆಯಿಂದಾಗಿ ಕಟಾವು ಮಾಡಲಾದ ಬೆಳೆಯು ನಾಶವಾದರೆ ವಿಮಾ ಸಂಸ್ಥೆಯು ವೈಯಕ್ತಿಕವಾಗಿ ಬೆಳೆ ನಷ್ಟ ನಿರ್ಧಾರ ಮಾಡಿ ಬೆಳೆ ನಷ್ಟ ಪರಿಹಾರವನ್ನು ಇತ್ಯರ್ಥ ಪಡಿಸುತ್ತದೆ.

ಸ್ಥಳ ನಿರ್ದಿಷ್ಟ ಪ್ರಕೃತಿ ವಿಕೋಪಗಳಾದ ಭೂಕುಸಿತ, ಬೆಳೆ ಮುಳುಗಡೆ, ಆಲಿಕಲ್ಲು ಮಳೆಯಿಂದುಂಟಾಗುವ ನಷ್ಟವನ್ನು ವೈಯಕ್ತಿಕ ಕ್ಷೇತ್ರವಾರು ನಿರ್ಧರಿಸಿ ರೈತರಿಗೆ ಬೆಳೆವಿಮಾ ನಷ್ಟ ಪರಿಹಾರವನ್ನು ನೀಡಲಾಗುವುದು. ರೈತರು ಕರ್ನಾಟಕ ರೈತ ಸುರಕ್ಷಾ ಪ್ರಧಾನಮಂತ್ರಿ ಫಸಲ್ ಬಿಮಾ ಯೋಜನೆಯಡಿ ಭತ್ತದ ಬೆಳೆಗೆ ನೊಂದಾಯಿಸಲು ಆಗಸ್ಟ್ 16 ಕೊನೆಯ ದಿನಾಂಕವಾಗಿದೆ.

ವಿಮಾ ಕಂತು ಒಂದು ಎಕರೆಗೆ ರೂ. 516/- ಇರುತ್ತದೆ ಹಾಗೂ ಒಟ್ಟು ವಿಮಾ ಮೊತ್ತ ಎಕರೆಗೆ ರೂ.25,800/-ವಾಗಿರುತ್ತದೆ. ಅರ್ಹ ರೈತರು ಹೆಚ್ಚಿನ ಸಂಖ್ಯೆಯಲ್ಲಿ ಹತ್ತಿರದ ಬ್ಯಾಂಕುಗಳಲ್ಲಿ ನಿಗದಿತ ದಿನಾಂಕದೊಳಗೆ ವಿಮಾಕಂತಿನ ಮೊತ್ತವನ್ನು ಪಾವತಿಸಬೇಕಾಗಿ ಮತ್ತು ವಿಮೆ ಮಾಡಿಸಿದ ರೈತರು ಬೆಳೆ ನಷ್ಟದ ಬಗ್ಗೆ ಸಂಬಂಧಿಸಿದ ಹಣಕಾಸು ಸಂಸ್ಥೆ ಅಥವಾ ವಿಮಾಸಂಸ್ಥೆ ಕಛೇರಿಗಳಿಗೆ ನಷ್ಟ ಸಂಭವಿಸಿದ 72 ಗಂಟೆಯೊಳಗೆ ವಿಮೆ ಮಾಡಿಸಲಾದ ಬೆಳೆ ವಿವರ, ಹಾನಿಯ ವ್ಯಾಪ್ತಿ ಹಾಗೂ ಹಾನಿಯ ಕಾರಣವನ್ನು ತಿಳಿಸಬೇಕಾಗುತ್ತದೆ.

ಬೆಳೆ ಸಾಲ ಪಡೆದ/ಪಡೆಯದ ರೈತರಿಗೆ ಬೆಳೆ ವಿಮೆ ಐಚ್ಛಿಕ. ರೈತರು ನೋಂದಣಿಗಾಗಿ ಕಡ್ಡಾಯವಾಗಿ ಫ್ರೂಟ್ಸ್ ಐ.ಡಿ.(FID) ಹೊಂದಿರಬೇಕು. ಬೆಳೆ ಸಾಲ ಪಡೆದ ರೈತರು ಬೆಳೆ ವಿಮೆಯಲ್ಲಿ ಭಾಗವಹಿಸಲು ಇಚ್ಚಿಸದಿದ್ದಲ್ಲಿ ಬ್ಯಾಂಕಿನ ವ್ಯವಸ್ಥಾಪಕರಿಗೆ ಕೊನೆಯ ದಿನಾಂಕದ ಒಂದು ವಾರದ ಮೊದಲು ಈ ಕುರಿತು ಮುಚ್ಚಳಿಕೆ ಪತ್ರ ನೀಡಿ ಬೆಳೆ ವಿಮೆಯಿಂದ ಕೈಬಿಡಲು ಕೋರಬಹುದು, ಹೆಚ್ಚಿನ ಮಾಹಿತಿಗಾಗಿ ಹತ್ತಿರದ ರೈತ ಸಂಪರ್ಕ ಕೇಂದ್ರಗಳನ್ನು ಸಂಪರ್ಕಿಸುವಂತೆ ಜಿಲ್ಲಾ ಜಂಟಿ ಕೃಷಿ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Attention to all paddy farmers: Registration for insurance is now open. Please ensure to register at your earliest convenience.

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

E20 ಎಫೆಕ್ಟ್‌ – ಪಶು ಆಹಾರದ ಬೆಲೆ ಏರಿಕೆ, ಹೈನುಗಾರರ ಲೆಕ್ಕಾಚಾರವೇ ಬದಲು..!

E20 ನೀತಿಯಡಿ ಎಥನಾಲ್ ಉತ್ಪಾದನೆಗೆ ಜೋಳ ಸೇರಿದಂತೆ ಧಾನ್ಯಗಳ ಬೇಡಿಕೆ ಹೆಚ್ಚುತ್ತಿರುವ ನಡುವೆ…

8 hours ago

ಬರದ ನಡುವೆ ರೈತರ ಜಮೀನಿಗೆ ಸಿಎಂ ಭೇಟಿ – ಬೆಳೆ ಹಾನಿ ಪರಿಶೀಲನೆ

ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಗದಗ ಜಿಲ್ಲೆಯ ವಿವಿಧ ಗ್ರಾಮಗಳಿಗೆ ಭೇಟಿ ನೀಡಿ…

15 hours ago

ಹವಾಮಾನ ವರದಿ | 01-09-2026 | ಯಾವ ಜಿಲ್ಲೆಗಳಲ್ಲಿ ಇನ್ನೂ ಮಳೆಯ ಸಾಧ್ಯತೆ…?

ಕರ್ನಾಟಕದಲ್ಲಿ ಮಳೆಯ ತೀವ್ರತೆ ಕ್ರಮೇಣ ಕಡಿಮೆಯಾಗುವ ಲಕ್ಷಣಗಳಿದ್ದು, ಸೆಪ್ಟೆಂಬರ್ 4ರಿಂದ ಕರಾವಳಿ ಮತ್ತು…

15 hours ago

ಬೆಂಗಳೂರಿನಲ್ಲಿ ಭಾರತದ ಅತಿದೊಡ್ಡ ಕಾಫಿ ಉತ್ಸವ- ತೋಟದಿಂದ ಕಪ್‌ವರೆಗೆ ಭಾರತದ ಕಾಫಿಯ ಹೊಸ ಪಯಣ

ಭಾರತದ ಅತಿದೊಡ್ಡ ಕಾಫಿ ಉತ್ಸವ 2027 ಫೆಬ್ರವರಿ 26ರಿಂದ 28ರವರೆಗೆ ಬೆಂಗಳೂರಿನಲ್ಲಿ ನಡೆಯಲಿದ್ದು,…

23 hours ago

‘ಅರ್ಥ’ ಮತ್ತು ‘ಅಪಾರ್ಥ’ದ ನಡುವೆ ಇರುವ ‘ಪಾ’ ಯಾವುದು?

ಅಪಾರ್ಥವಾಗುವುದು ಮಾನವ ಸಹಜ; ಆದರೆ ಅಪಾರ್ಥವಾಯಿತೆಂಬ ಅರಿವು ಬಂದ ನಂತರ ಮತ್ತೆ ‘ಅರ್ಥ’ದೆಡೆಗೆ…

24 hours ago

ಹವಾಮಾನ ವರದಿ | 31-08-2026 | ಸೆ.3ರಿಂದ ದಕ್ಷಿಣ ಒಳನಾಡಿನಲ್ಲಿ ಗುಡುಗು ಸಹಿತ ಮಳೆ ಸಾಧ್ಯತೆ

ಕರ್ನಾಟಕದಲ್ಲಿ ಸದ್ಯ ವ್ಯಾಪಕ ಭಾರಿ ಮಳೆಯ ಸಾಧ್ಯತೆ ಕಡಿಮೆಯಾಗಿದ್ದು, ಕರಾವಳಿಯಲ್ಲಿ ಮುಂದಿನ 10…

2 days ago