Advertisement
ಸುದ್ದಿಗಳು

ಜನನ-ಮರಣ 21 ದಿನಗಳೊಳಗೆ  ನೋಂದಣಿ ಕಡ್ಡಾಯ – ದ ಕ ಜಿಲ್ಲಾ ಅಪರ ಜಿಲ್ಲಾಧಿಕಾರಿ

Share

ಪ್ರತಿಯೊಂದು ಜನನ ಮರಣದ ನೋಂದಣಿ ಕಡ್ಡಾಯವಾಗಿದ್ದು, ಘಟನೆ ಸಂಭವಿಸಿದ 21 ದಿನಗಳೊಳಗೆ ನಗರ/ ಗ್ರಾಮ ಪಂಚಾಯತ್ ನೋಂದಣಾಧಿಕಾರಿಗಳ ಮೂಲಕ ನೋಂದಣಿ ಮಾಡಿಸಬೇಕು   ಎಂದು ಅಪರ ಜಿಲ್ಲಾಧಿಕಾರಿ ಡಾ. ಜಿ. ಸಂತೋಷ್ ಕುಮಾರ್ ಸೂಚಿಸಿದ್ದಾರೆ.

Advertisement

ದಕ ಜಿಲ್ಲಾಧಿಕಾರಿ ಕಚೇರಿಯಲ್ಲಿ  ಮಂಗಳವಾರ ನಡೆದ ಜನನ-ಮರಣ ನೋಂದಣಿ ಜಿಲ್ಲಾ ಮಟ್ಟದ ಸಮನ್ವಯ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ  ಅವರು ಮಾತನಾಡಿದರು. ನಗರ ವ್ಯಾಪ್ತಿಯಲ್ಲಿ  ಬೇರೆ ಜಿಲ್ಲೆಯ ವ್ಯಕ್ತಿಯು ಅಪಘಾತ ಅಥವಾ ಇನ್ನಿತರ ಅಪರಾಧ  ಕೃತ್ಯಗಳ ಮೂಲಕ  ಸಾವನ್ನಪ್ಪಿದ್ದರೆ    ಮರಣ ನೋಂದಣಿಯನ್ನು ಮಾಡಲು ಸಂಬಂಧಿಸಿದ ಅಧಿಕಾರಿಗಳಿಗೆ ನಿಖರ ಮಾಹಿತಿ ಮತ್ತು ಅಗತ್ಯ ದಾಖಲೆಗಳನ್ನು ನೀಡಬೇಕು ಎಂದು   ಪೊಲೀಸ್ ಇಲಾಖೆ ಅಧಿಕಾರಿಗಳಿಗೆ ಅವರು ಸೂಚಿಸಿದರು.

ಗ್ರಾಮಾಂತರ  ಮತ್ತು ನಗರ ಪ್ರದೇಶದಲ್ಲಿ  678 ನೋಂದಣಿ ಘಟಕಗಳು ಕಾರ್ಯನಿರ್ವಹಿಸುತ್ತಿದ್ದು, ಜನನ ಮತ್ತು ಮರಣ ನೋಂದಣಿಯನ್ನು ಯಾವುದೇ ಕಾರಣಕ್ಕೂ  ವಿಳಂಬವಾಗಿ ಮಾಡಬಾರದು. ಜನನ ಮತ್ತು ಮರಣ  ಘಟನೆಗಳು ನಡೆದ 21 ದಿನದ  ನಂತರ  ನೋಂದಾಯಿಸಿದರೆ ಅದನ್ನು ತಡನೋಂದಣಿ ಎಂದು ಪರಿಗಣಿಸಿ,   ವಿಳಂಬ ಶುಲ್ಕ ರೂ. 20  ನ್ನು ಪಡೆಯಲಾಗುತ್ತದೆ.  ತಡ ನೋಂದಣಿಯನ್ನು ಕಡಿಮೆಗೊಳಿಸಲು ಅಗತ್ಯ ಕ್ರಮವಹಿಸಬೇಕು ಎಂದು ಅವರು ತಿಳಿಸಿದರು. ತಾಲೂಕು ಮಟ್ಟದಲ್ಲಿ ಜನನ ಮರಣ ನೋಂದಣಿ ಸಮನ್ವಯ ಸಮಿತಿ ಸಭೆಯನ್ನು ನಡೆಸಬೇಕು ಎಂದು ತಾಲೂಕು ಮಟ್ಟದ ಅಧಿಕಾರಿಗಳಿಗೆ ಅವರು  ಸೂಚಿಸಿದರು.  ಜನನ ಮತ್ತು ಮರಣದ ದಾಖಲೆಗಳನ್ನು ಹಾಳಾಗದಂತೆ ಸಮರ್ಪಕವಾಗಿ ನಿರ್ವಹಿಸಬೇಕು ಎಂದು   ಪಟ್ಟಣ ಪಂಚಾಯತ್ ಅಧಿಕಾರಿಗಳಿಗೆ ಹಾಗೂ ಸಂಬಂಧ ಪಟ್ಟ ಇಲಾಖೆಗಳಿಗೆ ಅವರು ಸೂಚಿಸಿದರು.

ಜಿಲ್ಲಾ ಸಂಖ್ಯಾ ಸಂಗ್ರಹಣಾಧಿಕಾರಿ  ಎ. ಆರ್ ಶ್ರೀಧರ್ ಮಾತನಾಡಿ, ಸರಕಾರಿ ಮತ್ತು ಖಾಸಗಿ ಆಸ್ಪತ್ರೆಯಲ್ಲಿ ಸಂಭವಿಸುವ ಎಲ್ಲಾ ಜನನ ಮತ್ತು ಮರಣ ಘಟನೆಗಳನ್ನು  ನೊಂದಣಾಧಿಕಾರಿಗಳಿಗೆ ವರದಿ ಮಾಡಬೇಕು. ನೋಂದಣಾಧಿಕಾರಿಗಳು  ಅಥವಾ ಉಪ ನೋಂದಣಾಧಿಕಾರಿಗಳು  ವರದಿ ಮಾಡಿದ ಘಟನೆಗಳನ್ನು ನೋಂದಣಿ ಮಾಡಿ ಪ್ರಕ್ರಿಯೆ ಮುಗಿದ ನಂತರ ಮಾಹಿತಿದಾರರಿಗೆ ಜನನ ಪ್ರಮಾಣ ಪತ್ರವನ್ನು ಒದಗಿಸಬೇಕು. ಗ್ರಾಮ ಒನ್ ಕಚೇರಿಯಲ್ಲಿ ಸಾರ್ವಜನಿಕರು ಜನನ ಮರಣ ನೋಂದಣಿಗೆ  ಅರ್ಜಿ ಸಲ್ಲಿಸಬಹುದು  ಎಂದು ಹೇಳಿದರು.   ಇ-ಜನ್ಮ ತಂತ್ರಾಂಶದಲ್ಲಿ ಜನನ ಮರಣ ಘಟನೆಗಳನ್ನು ನೋಂದಾಯಿಸುವಾಗ  ಆಧಾರ್ ಸಂಖ್ಯೆಯನ್ನು ಅಥವಾ  ಇತರೆ ದಾಖಲೆಗಳನ್ನು ಅಪ್ಡೇಟ್‌  ಮಾಡಬೇಕು. ಮರಣ  ಘಟನೆಗಳ  ಸಂದರ್ಭದಲ್ಲಿ ಮೃತರ ಆಧಾರ್ ನಂಬರ್ ಬದಲು ಅರ್ಜಿದಾರರ ಆಧಾರ್ ನಂಬರ್ ನಮೂದಿಸಿದರೆ,  ಸರಕಾರದಿಂದ ಸವಲತ್ತುಗಳು ಸಿಗುವುದಿಲ್ಲ ಎಂದು  ಹೇಳಿದರು.  ಜಿಲ್ಲೆಯ ಎಲ್ಲಾ ನೋಂದಣಿ ಘಟಕವು ನಿಯಮಾನುಸಾರ ನೋಂದಣಿ ಚಟುವಟಿಕೆ ನಡೆಸುತ್ತಿರುವ ಬಗ್ಗೆ  ಹಾಗೂ ಶೇಖಡ 100 ರಷ್ಟು ಘಟನೆಗಳು ದಾಖಲಾತಿಯಾಗಿರುವ ಬಗ್ಗೆ ಪರಿಶೀಲನೆಯನ್ನು ತಾಂತ್ರಿಕ ಇಲಾಖೆಯ ಅಧಿಕಾರಿಗಳ ನೇತೃತ್ವದಲ್ಲಿ ನಡೆಸಲಾಗುತ್ತದೆ  ಎಂದು    ಅವರು ಸಭೆಗೆ ಮಾಹಿತಿ ನೀಡಿದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಹವಾಮಾನ ವರದಿ | 21-02-2026 | ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತದ ಲಕ್ಷಣ | ಎಲ್ಲೆಲ್ಲಾ ಮಳೆ ಇದೆ…? ಎಷ್ಟು ದಿನ ಮಳೆ ಸಾಧ್ಯತೆ…?

ಕರ್ನಾಟಕದಲ್ಲಿ ಫೆಬ್ರುವರಿ 27ರವರೆಗೆ ಬಿಸಿಲಿನ ಜೊತೆಗೆ ತುಂತುರು ಮತ್ತು ಗುಡುಗು ಮಳೆಯ ಮುನ್ಸೂಚನೆ.…

3 hours ago

ಮಿಶ್ರ ಕೃಷಿಯತ್ತ ಮಲೆನಾಡಿನ ರೈತನ ಹೆಜ್ಜೆ ಅನಿವಾರ್ಯ

ಮಲೆನಾಡಿನಲ್ಲಿ ಅಡಿಕೆ ರೈತರು ಮಿಶ್ರ ಕೃಷಿಯತ್ತ ಮುಖ ಮಾಡುತ್ತಿದ್ದಾರೆ. ಹವಾಮಾನ ಬದಲಾವಣೆ, ಬೆಲೆ…

7 hours ago

ನಂದಿನಿ ಉತ್ಪನ್ನಗಳ ವಿರುದ್ಧದ ವದಂತಿ ನಂಬಬೇಡಿ : ಗ್ರಾಹಕರಿಗೆ ಕೆಎಂಎಫ್ ಮನವಿ

ನಂದಿನಿ ಹಾಲು ಮತ್ತು ಉತ್ಪನ್ನಗಳು ಸೇವನೆಗೆ ಸಂಪೂರ್ಣ ಸುರಕ್ಷಿತವೆಂದು ಕೆಎಂಎಫ್ ಸ್ಪಷ್ಟನೆ ನೀಡಿದೆ.…

7 hours ago

ರೈತರಿಗೆ ಗನ್ ಪರವಾನಗಿ : ಶೀಘ್ರದಲ್ಲೇ ಆನ್ಲೈನ್ ವ್ಯವಸ್ಥೆ ಜಾರಿ – ಜಿಲ್ಲಾಧಿಕಾರಿ ದರ್ಶನ್ ಎಚ್.ವಿ

ರೈತರಿಗೆ ಗನ್ ಪರವಾನಗಿ ಹಾಗೂ ನವೀಕರಣ ಪ್ರಕ್ರಿಯೆಯನ್ನು ಸುಲಭಗೊಳಿಸಲು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ…

7 hours ago

ಮಂಗಳೂರು ಅಡಿಕೆ ಮಾರುಕಟ್ಟೆ ‘ಸೈಕಲಾಜಿಕಲ್ ಬಫರ್’ ಹಂತಕ್ಕೆ…!

ಮಂಗಳೂರಿನ ಅಡಿಕೆ ಮಾರುಕಟ್ಟೆಯು ಪ್ರಸ್ತುತ ಕೇವಲ ಬೆಲೆ ಏರಿಳಿತದ ಕೇಂದ್ರವಾಗಿ ಉಳಿದಿಲ್ಲ; ಬದಲಾಗಿ…

19 hours ago

ಗೇರು ಹಣ್ಣಿನಿಂದ ಆದಾಯಕ್ಕೆ ಹೊಸ ದಾರಿ | ಮಾ.11 ರಂದು ICAR–ಗೇರು ಸಂಶೋಧನಾ ನಿರ್ದೇಶನಾಲಯದಲ್ಲಿ ಉದ್ಯಮ–ವಿಜ್ಞಾನಿಗಳ ಸಂವಾದ

ಪುತ್ತೂರಿನ ICAR–ಗೇರು ಸಂಶೋಧನಾ ನಿರ್ದೇಶನಾಲಯದಲ್ಲಿ ಮಾರ್ಚ್‌ 11ರಂದು ಗೋಡಂಬಿ ಹಣ್ಣಿನ ಮೌಲ್ಯವರ್ಧನೆ ಕುರಿತು…

1 day ago