ಹಿಂದೂಗಳ ಪವಿತ್ರ ಯಾತ್ರಾಸ್ಥಳ, ವಾರ್ಷಿಕ ಪವಿತ್ರ ಅಮರನಾಥ ಯಾತ್ರೆ ಜೂನ್ 29 ರಿಂದ, ಆಗಸ್ಟ್ 19 ರವರೆಗೆ ನಡೆಯಲಿದ್ದು, ನೋಂದಣಿ ಪ್ರಕ್ರಿಯೆ ಆರಂಭಗೊಂಡಿದೆ.ಯಾತ್ರಿಕರು ಅಮರನಾಥ ದೇವಾಲಯ ಮಂಡಳಿಯ ಅಧಿಕೃತ ವೆಬ್ಸೈಟ್ ಮೂಲಕ, ಆನ್ಲೈನ್ನಲ್ಲಿ ಅಥವಾ ದೇಶಾದ್ಯಂತ ಗೊತ್ತುಪಡಿಸಿದ 540 ಬ್ಯಾಂಕ್ ಶಾಖೆಗಳ ಮೂಲಕ ಆಫ್ಲೈನ್ನಲ್ಲಿ ನೋಂದಾಯಿಸಿಕೊಳ್ಳಬಹುದು. ವೈಯಕ್ತಿಕವಾಗಿ ನೋಂದಾಯಿಸುವಾಗ, ಮೂಲ ದಾಖಲೆಗಳು ಮತ್ತು ಕಡ್ಡಾಯವಾಗಿ ಆರೋಗ್ಯ ಪ್ರಮಾಣಪತ್ರವನ್ನು ಕೊಂಡೊಯ್ಯಬೇಕು. ಅಧಿಕೃತವಾಗಿ ವೈದ್ಯರು ಅಥವಾ ಸಂಸ್ಥೆಗಳು ನೀಡುವ ಕಡ್ಡಾಯ ಆರೋಗ್ಯ ಪ್ರಮಾಣಪತ್ರವಿಲ್ಲದೆ, ಯಾರಿಗೂ ಯಾತ್ರೆಗೆ ತೆರಳಲು ಅವಕಾಶವಿರುವುದಿಲ್ಲ. ಈ ಪ್ರಮಾಣಪತ್ರ, ನೀವು ಎತ್ತರದ ಚಾರಣವನ್ನು ತಡೆದುಕೊಳ್ಳಲು ದೈಹಿಕವಾಗಿ ಸದೃಢರಾಗಿದ್ದೀರಿ ಎಂಬುವುದನ್ನು ಖಚಿತಪಡಿಸುತ್ತದೆ. ಸಮುದ್ರಮಟ್ಟದಿಂದ 12,756 ಅಡಿ ಎತ್ತರದ ಗುಹೆಯಲ್ಲಿ, ನೈಸರ್ಗಿಕವಾಗಿ ರಚನೆಯಾಗುವ ಹಿಮಲಿಂಗ ದರ್ಶನಕ್ಕೆ ಪ್ರತಿ ವರ್ಷ ಲಕ್ಷಾಂತರ ಭಕ್ತರು ಆಗಮಿಸುತ್ತಾರೆ.
ಕರ್ನಾಟಕದಲ್ಲಿ ಫೆಬ್ರುವರಿ 27ರವರೆಗೆ ಬಿಸಿಲಿನ ಜೊತೆಗೆ ತುಂತುರು ಮತ್ತು ಗುಡುಗು ಮಳೆಯ ಮುನ್ಸೂಚನೆ.…
ಮಲೆನಾಡಿನಲ್ಲಿ ಅಡಿಕೆ ರೈತರು ಮಿಶ್ರ ಕೃಷಿಯತ್ತ ಮುಖ ಮಾಡುತ್ತಿದ್ದಾರೆ. ಹವಾಮಾನ ಬದಲಾವಣೆ, ಬೆಲೆ…
ನಂದಿನಿ ಹಾಲು ಮತ್ತು ಉತ್ಪನ್ನಗಳು ಸೇವನೆಗೆ ಸಂಪೂರ್ಣ ಸುರಕ್ಷಿತವೆಂದು ಕೆಎಂಎಫ್ ಸ್ಪಷ್ಟನೆ ನೀಡಿದೆ.…
ರೈತರಿಗೆ ಗನ್ ಪರವಾನಗಿ ಹಾಗೂ ನವೀಕರಣ ಪ್ರಕ್ರಿಯೆಯನ್ನು ಸುಲಭಗೊಳಿಸಲು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ…
ಮಂಗಳೂರಿನ ಅಡಿಕೆ ಮಾರುಕಟ್ಟೆಯು ಪ್ರಸ್ತುತ ಕೇವಲ ಬೆಲೆ ಏರಿಳಿತದ ಕೇಂದ್ರವಾಗಿ ಉಳಿದಿಲ್ಲ; ಬದಲಾಗಿ…
ಪುತ್ತೂರಿನ ICAR–ಗೇರು ಸಂಶೋಧನಾ ನಿರ್ದೇಶನಾಲಯದಲ್ಲಿ ಮಾರ್ಚ್ 11ರಂದು ಗೋಡಂಬಿ ಹಣ್ಣಿನ ಮೌಲ್ಯವರ್ಧನೆ ಕುರಿತು…