ಹಿಂದೂಗಳ ಪವಿತ್ರ ಯಾತ್ರಾಸ್ಥಳ, ವಾರ್ಷಿಕ ಪವಿತ್ರ ಅಮರನಾಥ ಯಾತ್ರೆ ಜೂನ್ 29 ರಿಂದ, ಆಗಸ್ಟ್ 19 ರವರೆಗೆ ನಡೆಯಲಿದ್ದು, ನೋಂದಣಿ ಪ್ರಕ್ರಿಯೆ ಆರಂಭಗೊಂಡಿದೆ.ಯಾತ್ರಿಕರು ಅಮರನಾಥ ದೇವಾಲಯ ಮಂಡಳಿಯ ಅಧಿಕೃತ ವೆಬ್ಸೈಟ್ ಮೂಲಕ, ಆನ್ಲೈನ್ನಲ್ಲಿ ಅಥವಾ ದೇಶಾದ್ಯಂತ ಗೊತ್ತುಪಡಿಸಿದ 540 ಬ್ಯಾಂಕ್ ಶಾಖೆಗಳ ಮೂಲಕ ಆಫ್ಲೈನ್ನಲ್ಲಿ ನೋಂದಾಯಿಸಿಕೊಳ್ಳಬಹುದು. ವೈಯಕ್ತಿಕವಾಗಿ ನೋಂದಾಯಿಸುವಾಗ, ಮೂಲ ದಾಖಲೆಗಳು ಮತ್ತು ಕಡ್ಡಾಯವಾಗಿ ಆರೋಗ್ಯ ಪ್ರಮಾಣಪತ್ರವನ್ನು ಕೊಂಡೊಯ್ಯಬೇಕು. ಅಧಿಕೃತವಾಗಿ ವೈದ್ಯರು ಅಥವಾ ಸಂಸ್ಥೆಗಳು ನೀಡುವ ಕಡ್ಡಾಯ ಆರೋಗ್ಯ ಪ್ರಮಾಣಪತ್ರವಿಲ್ಲದೆ, ಯಾರಿಗೂ ಯಾತ್ರೆಗೆ ತೆರಳಲು ಅವಕಾಶವಿರುವುದಿಲ್ಲ. ಈ ಪ್ರಮಾಣಪತ್ರ, ನೀವು ಎತ್ತರದ ಚಾರಣವನ್ನು ತಡೆದುಕೊಳ್ಳಲು ದೈಹಿಕವಾಗಿ ಸದೃಢರಾಗಿದ್ದೀರಿ ಎಂಬುವುದನ್ನು ಖಚಿತಪಡಿಸುತ್ತದೆ. ಸಮುದ್ರಮಟ್ಟದಿಂದ 12,756 ಅಡಿ ಎತ್ತರದ ಗುಹೆಯಲ್ಲಿ, ನೈಸರ್ಗಿಕವಾಗಿ ರಚನೆಯಾಗುವ ಹಿಮಲಿಂಗ ದರ್ಶನಕ್ಕೆ ಪ್ರತಿ ವರ್ಷ ಲಕ್ಷಾಂತರ ಭಕ್ತರು ಆಗಮಿಸುತ್ತಾರೆ.
ದಕ್ಷಿಣ ಏಷ್ಯಾ ರಾಷ್ಟ್ರಗಳಲ್ಲಿ ಅಡಿಕೆ ಬಳಕೆಯಿಂದ ಹೆಚ್ಚುತ್ತಿರುವ ಬಾಯಿ ಕ್ಯಾನ್ಸರ್ ಸೇರಿದಂತೆ ಮಾರಣಾಂತಿಕ…
ಅರೆಕಾನಟ್ ಚಾಲೆಂಜ್ : ಟರ್ನಿಂಗ್ ಪಾಲಿಸಿ ಇನ್ಟು ಇಂಪ್ಯಾಕ್ಟ್ ಇನ್ ದ ಸೌತ್…
ಸಣ್ಣ ರೈತರ ಕೃಷಿಯಲ್ಲಿ ಕಾರ್ಮಿಕ ಕೊರತೆ, ವೆಚ್ಚ ಏರಿಕೆ ಸಮಸ್ಯೆ ನಿವಾರಣೆಗೆ ರೋಬೋಟಿಕ್ಸ್,…
ಕ್ಯಾನ್ಸರ್ ವಿರುದ್ಧ ಹೋರಾಟ ಎಂದರೆ ಕೇವಲ ಆಸ್ಪತ್ರೆಗಳಲ್ಲಿ ಚಿಕಿತ್ಸೆ ನೀಡುವುದು ಮಾತ್ರವಲ್ಲ. ರೋಗ…
ರಾಜ್ಯದಲ್ಲಿ ಅಕ್ರಮ ವಲಸಿಗರು ಹಾಗೂ ಬಾಂಗ್ಲಾ ಅಕ್ರಮ ವಲಸಿಗರ ಬಗ್ಗೆ ಮಾಹಿತಿಯನ್ನು ವಿಧಾನಪರಿಷತ್…
ಪ್ರಯತ್ನ, ಪರಿಶ್ರಮ, ಛಲ ಇದ್ದರೂ ಸೋಲು ಬೆನ್ನತ್ತಿದರೆ ಕಾರಣವೇನು? ಹಿರಿಯರ ಪಾಪದ ಫಲ,…