MIRROR FOCUS

ಅಮರನಾಥ ಯಾತ್ರೆಗೆ ನೋಂದಣಿ ಪ್ರಕ್ರಿಯೆ ಆರಂಭ | ಜೂನ್‌ 29 ರಿಂದ ಯಾತ್ರೆ ಆರಂಭ |

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ಹಿಂದೂಗಳ ಪವಿತ್ರ ಯಾತ್ರಾಸ್ಥಳ, ವಾರ್ಷಿಕ ಪವಿತ್ರ ಅಮರನಾಥ ಯಾತ್ರೆ  ಜೂನ್‌ 29 ರಿಂದ,  ಆಗಸ್ಟ್‌ 19 ರವರೆಗೆ ನಡೆಯಲಿದ್ದು, ನೋಂದಣಿ ಪ್ರಕ್ರಿಯೆ  ಆರಂಭಗೊಂಡಿದೆ.ಯಾತ್ರಿಕರು  ಅಮರನಾಥ ದೇವಾಲಯ ಮಂಡಳಿಯ ಅಧಿಕೃತ ವೆಬ್‌ಸೈಟ್ ಮೂಲಕ, ಆನ್‌ಲೈನ್‌ನಲ್ಲಿ ಅಥವಾ ದೇಶಾದ್ಯಂತ ಗೊತ್ತುಪಡಿಸಿದ 540 ಬ್ಯಾಂಕ್ ಶಾಖೆಗಳ ಮೂಲಕ ಆಫ್‌ಲೈನ್‌ನಲ್ಲಿ ನೋಂದಾಯಿಸಿಕೊಳ್ಳಬಹುದು. ವೈಯಕ್ತಿಕವಾಗಿ ನೋಂದಾಯಿಸುವಾಗ, ಮೂಲ ದಾಖಲೆಗಳು ಮತ್ತು ಕಡ್ಡಾಯವಾಗಿ ಆರೋಗ್ಯ ಪ್ರಮಾಣಪತ್ರವನ್ನು ಕೊಂಡೊಯ್ಯಬೇಕು. ಅಧಿಕೃತವಾಗಿ ವೈದ್ಯರು ಅಥವಾ ಸಂಸ್ಥೆಗಳು ನೀಡುವ ಕಡ್ಡಾಯ ಆರೋಗ್ಯ ಪ್ರಮಾಣಪತ್ರವಿಲ್ಲದೆ, ಯಾರಿಗೂ ಯಾತ್ರೆಗೆ ತೆರಳಲು ಅವಕಾಶವಿರುವುದಿಲ್ಲ. ಈ ಪ್ರಮಾಣಪತ್ರ, ನೀವು ಎತ್ತರದ ಚಾರಣವನ್ನು ತಡೆದುಕೊಳ್ಳಲು ದೈಹಿಕವಾಗಿ ಸದೃಢರಾಗಿದ್ದೀರಿ ಎಂಬುವುದನ್ನು ಖಚಿತಪಡಿಸುತ್ತದೆ.  ಸಮುದ್ರಮಟ್ಟದಿಂದ 12,756 ಅಡಿ ಎತ್ತರದ ಗುಹೆಯಲ್ಲಿ,  ನೈಸರ್ಗಿಕವಾಗಿ ರಚನೆಯಾಗುವ ಹಿಮಲಿಂಗ ದರ್ಶನಕ್ಕೆ ಪ್ರತಿ ವರ್ಷ ಲಕ್ಷಾಂತರ ಭಕ್ತರು ಆಗಮಿಸುತ್ತಾರೆ.

Advertisement
Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಹವಾಮಾನ ಬದಲಾವಣೆ | ತಾಪಮಾನವು ಬೆಳೆಗಳ ಉತ್ಪಾದಕತೆಯ ಮೇಲೆ ಪರಿಣಾಮ ಸಾಧ್ಯತೆ | ಅಡಿಕೆ ಬೆಳೆಗಾರರೂ ಗಮನಿಸಬೇಕಾದ ಅಂಶ ಇದು |

ಹವಾಮಾನ ಬದಲಾವಣೆಯು 2050 ರ ದಶಕದಲ್ಲಿ ಮಳೆಯಾಶ್ರಿತ ಅಕ್ಕಿ ಇಳುವರಿಯನ್ನು 20% ಮತ್ತು…

37 minutes ago

ದೈವ ಶಾಪ ದೋಷ | ಗತ ಜನ್ಮದ ಕರ್ಮದ ಪ್ರಭಾವವನ್ನು ಜಯಿಸುವ ಮಾರ್ಗ

ವೈದಿಕ ಜ್ಯೋತಿಷ್ಯ ಶಾಸ್ತ್ರದಲ್ಲಿ ದೈವ ಶಾಪ ದೋಷ ಎಂಬುದು ಗತ ಜನ್ಮದ ಕರ್ಮದಿಂದ…

52 minutes ago

ರಾಜ್ಯದ ವಿವಿಧೆಡೆ ಮಳೆ –  ಬಹುತೇಕ ಜಲಾಶಯಗಳು ಭರ್ತಿ

ರಾಜ್ಯದ ವಿವಿಧೆಡೆ ಮಳೆಯಾಗುತ್ತಿದ್ದು ನದಿಗಳು ತುಂಬಿ ಹರಿಯುತ್ತಿವೆ. ಬಹುತೇಕ ಜಲಾಶಯಗಳು ಭರ್ತಿಯಾಗಿವೆ.  ಕೊಡಗಿನ…

11 hours ago

ನಿರಂತರ 170 ಗಂಟೆಗಳ ಕಾಲ ಭರತನಾಟ್ಯ ಪ್ರದರ್ಶನ | ವಿಶ್ವ ದಾಖಲೆ ಸಾಧನೆ ಮಾಡಿದ ಮಂಗಳೂರಿನ ರೆಮೋನಾ ಪಿರೇರಾ

ನಿರಂತರ 170 ಗಂಟೆಗಳ ಕಾಲ ಭರತನಾಟ್ಯ ಪ್ರದರ್ಶನ ನೀಡಿದ ಮಂಗಳೂರಿನ ರೆಮೋನಾ ಪಿರೇರಾ,…

12 hours ago

ಕಳೆದ 11 ವರ್ಷಗಳಲ್ಲಿ ಕೃಷಿ ಕ್ಷೇತ್ರದಲ್ಲಿ ಅಗಾಧ ಬೆಳವಣಿಗೆ | ಲೋಕಸಭೆಯಲ್ಲಿ ಕೇಂದ್ರ ಕೃಷಿ  ಸಚಿವರ  ಹೇಳಿಕೆ

ಕಳೆದ 11 ವರ್ಷಗಳಲ್ಲಿ ಕೃಷಿ ಕ್ಷೇತ್ರದಲ್ಲಿ ಅಗಾಧ ಬೆಳವಣಿಗೆಯಾಗಿದ್ದು, ಕೃಷಿಕರ ಹಿತದೃಷ್ಟಿಯಿಂದ ಕೇಂದ್ರ…

12 hours ago

ಬಿಎಸ್ ಎನ್ ಎಲ್  ಪರಿಶೀಲನಾ ಸಭೆ | ʻಬಿಎಸ್ಎನ್ಎಲ್‌ʼ ಸೇವೆಗಳ ಸುಧಾರಣೆಗೆ ಕ್ರಮ

ಕೇಂದ್ರ ಸಂವಹನ ಸಚಿವ ಜ್ಯೋತಿರಾದಿತ್ಯ ಸಿಂಧಿಯಾ, ದೆಹಲಿಯಲ್ಲಿ ʻಭಾರತ್ ಸಂಚಾರ್ ನಿಗಮ್ ಲಿಮಿಟೆಡ್ʼನ-…

12 hours ago