ಹಿಂದೂಗಳ ಪವಿತ್ರ ಯಾತ್ರಾಸ್ಥಳ, ವಾರ್ಷಿಕ ಪವಿತ್ರ ಅಮರನಾಥ ಯಾತ್ರೆ ಜೂನ್ 29 ರಿಂದ, ಆಗಸ್ಟ್ 19 ರವರೆಗೆ ನಡೆಯಲಿದ್ದು, ನೋಂದಣಿ ಪ್ರಕ್ರಿಯೆ ಆರಂಭಗೊಂಡಿದೆ.ಯಾತ್ರಿಕರು ಅಮರನಾಥ ದೇವಾಲಯ ಮಂಡಳಿಯ ಅಧಿಕೃತ ವೆಬ್ಸೈಟ್ ಮೂಲಕ, ಆನ್ಲೈನ್ನಲ್ಲಿ ಅಥವಾ ದೇಶಾದ್ಯಂತ ಗೊತ್ತುಪಡಿಸಿದ 540 ಬ್ಯಾಂಕ್ ಶಾಖೆಗಳ ಮೂಲಕ ಆಫ್ಲೈನ್ನಲ್ಲಿ ನೋಂದಾಯಿಸಿಕೊಳ್ಳಬಹುದು. ವೈಯಕ್ತಿಕವಾಗಿ ನೋಂದಾಯಿಸುವಾಗ, ಮೂಲ ದಾಖಲೆಗಳು ಮತ್ತು ಕಡ್ಡಾಯವಾಗಿ ಆರೋಗ್ಯ ಪ್ರಮಾಣಪತ್ರವನ್ನು ಕೊಂಡೊಯ್ಯಬೇಕು. ಅಧಿಕೃತವಾಗಿ ವೈದ್ಯರು ಅಥವಾ ಸಂಸ್ಥೆಗಳು ನೀಡುವ ಕಡ್ಡಾಯ ಆರೋಗ್ಯ ಪ್ರಮಾಣಪತ್ರವಿಲ್ಲದೆ, ಯಾರಿಗೂ ಯಾತ್ರೆಗೆ ತೆರಳಲು ಅವಕಾಶವಿರುವುದಿಲ್ಲ. ಈ ಪ್ರಮಾಣಪತ್ರ, ನೀವು ಎತ್ತರದ ಚಾರಣವನ್ನು ತಡೆದುಕೊಳ್ಳಲು ದೈಹಿಕವಾಗಿ ಸದೃಢರಾಗಿದ್ದೀರಿ ಎಂಬುವುದನ್ನು ಖಚಿತಪಡಿಸುತ್ತದೆ. ಸಮುದ್ರಮಟ್ಟದಿಂದ 12,756 ಅಡಿ ಎತ್ತರದ ಗುಹೆಯಲ್ಲಿ, ನೈಸರ್ಗಿಕವಾಗಿ ರಚನೆಯಾಗುವ ಹಿಮಲಿಂಗ ದರ್ಶನಕ್ಕೆ ಪ್ರತಿ ವರ್ಷ ಲಕ್ಷಾಂತರ ಭಕ್ತರು ಆಗಮಿಸುತ್ತಾರೆ.
ನೀರಿನ ಕೊರತೆ ಮತ್ತು ಹವಾಮಾನ ಬದಲಾವಣೆಯ ನಡುವೆ ಭತ್ತ–ಗೋಧಿಯಂತಹ ಹೆಚ್ಚಿನ ನೀರು ಮತ್ತು…
ಕರ್ನಾಟಕದ ಬಹುತೇಕ ಭಾಗಗಳಲ್ಲಿ ಸದ್ಯ ಬಿಸಿಲು ಹಾಗೂ ಅಲ್ಲಲ್ಲಿ ಮೋಡದ ವಾತಾವರಣ ಮುಂದುವರಿಯುವ…
ಇಂಪೀರಿಯಲ್ ಕಾಲೇಜ್ ಲಂಡನ್ನ ಅಧ್ಯಯನದ ಪ್ರಕಾರ, precision fermentation ಮೂಲಕ ತಯಾರಿಸುವ ಹಾಲಿಗೆ…
ಅಡಿಕೆ ಧಾರಣೆ ಏರಿಳಿತ ಅಡಿಕೆ ಬೆಳೆಗಾರರನ್ನು ಚಿಂತೆಗೀಡು ಮಾಡುತ್ತಿದೆ. ಇದಕ್ಕೆ ಭಾರತ ಮಾತ್ರವಲ್ಲ…
ವಾಯುಭಾರ ಕುಸಿತಗಳು ಚಂಡಮಾರುತವಾಗಿ ಬಲಗೊಳ್ಳಲು ಸಮುದ್ರದ ಉಷ್ಣತೆ ಮಾತ್ರವಲ್ಲದೆ ತೇವಾಂಶ, ವಿಂಡ್ ಶಿಯರ್…
ಕರ್ನಾಟಕದ ಕರಾವಳಿ ಹಾಗೂ ಮಲೆನಾಡಿನಲ್ಲಿ ಮುಂದಿನ ಕೆಲವು ದಿನ ಬಿಸಿಲಿನ ವಾತಾವರಣ ಹೆಚ್ಚಾಗುವ…