ಹಿಂದೂಗಳ ಪವಿತ್ರ ಯಾತ್ರಾಸ್ಥಳ, ವಾರ್ಷಿಕ ಪವಿತ್ರ ಅಮರನಾಥ ಯಾತ್ರೆ ಜೂನ್ 29 ರಿಂದ, ಆಗಸ್ಟ್ 19 ರವರೆಗೆ ನಡೆಯಲಿದ್ದು, ನೋಂದಣಿ ಪ್ರಕ್ರಿಯೆ ಆರಂಭಗೊಂಡಿದೆ.ಯಾತ್ರಿಕರು ಅಮರನಾಥ ದೇವಾಲಯ ಮಂಡಳಿಯ ಅಧಿಕೃತ ವೆಬ್ಸೈಟ್ ಮೂಲಕ, ಆನ್ಲೈನ್ನಲ್ಲಿ ಅಥವಾ ದೇಶಾದ್ಯಂತ ಗೊತ್ತುಪಡಿಸಿದ 540 ಬ್ಯಾಂಕ್ ಶಾಖೆಗಳ ಮೂಲಕ ಆಫ್ಲೈನ್ನಲ್ಲಿ ನೋಂದಾಯಿಸಿಕೊಳ್ಳಬಹುದು. ವೈಯಕ್ತಿಕವಾಗಿ ನೋಂದಾಯಿಸುವಾಗ, ಮೂಲ ದಾಖಲೆಗಳು ಮತ್ತು ಕಡ್ಡಾಯವಾಗಿ ಆರೋಗ್ಯ ಪ್ರಮಾಣಪತ್ರವನ್ನು ಕೊಂಡೊಯ್ಯಬೇಕು. ಅಧಿಕೃತವಾಗಿ ವೈದ್ಯರು ಅಥವಾ ಸಂಸ್ಥೆಗಳು ನೀಡುವ ಕಡ್ಡಾಯ ಆರೋಗ್ಯ ಪ್ರಮಾಣಪತ್ರವಿಲ್ಲದೆ, ಯಾರಿಗೂ ಯಾತ್ರೆಗೆ ತೆರಳಲು ಅವಕಾಶವಿರುವುದಿಲ್ಲ. ಈ ಪ್ರಮಾಣಪತ್ರ, ನೀವು ಎತ್ತರದ ಚಾರಣವನ್ನು ತಡೆದುಕೊಳ್ಳಲು ದೈಹಿಕವಾಗಿ ಸದೃಢರಾಗಿದ್ದೀರಿ ಎಂಬುವುದನ್ನು ಖಚಿತಪಡಿಸುತ್ತದೆ. ಸಮುದ್ರಮಟ್ಟದಿಂದ 12,756 ಅಡಿ ಎತ್ತರದ ಗುಹೆಯಲ್ಲಿ, ನೈಸರ್ಗಿಕವಾಗಿ ರಚನೆಯಾಗುವ ಹಿಮಲಿಂಗ ದರ್ಶನಕ್ಕೆ ಪ್ರತಿ ವರ್ಷ ಲಕ್ಷಾಂತರ ಭಕ್ತರು ಆಗಮಿಸುತ್ತಾರೆ.
ಕರಾವಳಿ ಮತ್ತು ಮಲೆನಾಡಿನಲ್ಲಿ ಮುಂದಿನ 10 ದಿನಗಳವರೆಗೆ ಸಾಮಾನ್ಯ ಮಳೆ ಮುಂದುವರಿಯುವ ನಿರೀಕ್ಷೆಯಿದ್ದು,…
ಉತ್ತರ ಪ್ರದೇಶದಲ್ಲಿ 200 ಹಸುಗಳನ್ನು ಆಧರಿಸಿದ ಸಮಗ್ರ ಗೋ ಆರ್ಥಿಕತೆ ಮಾದರಿಯಲ್ಲಿ ಗೋಮಯದಿಂದ…
ರಬ್ಬರ್ ತೋಟಗಳು ಹಸಿರಾಗಿದ್ದರೂ ಅವು ನೈಸರ್ಗಿಕ ಮಳೆಕಾಡಿನ ಜೀವವೈವಿಧ್ಯವನ್ನು ಉಳಿಸಿಕೊಳ್ಳಲು ಸಾಧ್ಯವಿಲ್ಲ ಎಂದು…
ಭಾರತದ ಅಡುಗೆ ಎಣ್ಣೆ ಆಮದು ಎಂಟು ತಿಂಗಳಲ್ಲಿ ಶೇ.7ರಷ್ಟು ಏರಿಕೆಯಾಗಿದೆ. ಜೂನ್ನಲ್ಲಿ ಆಮದು…
ಕೇರಳದಲ್ಲಿ ಉತ್ಪಾದನೆಯಾಗುವ ಬಹುತೇಕ ಹಲಸು ಬಳಕೆಯಾಗದೆ ವ್ಯರ್ಥವಾಗುತ್ತಿದ್ದು, ವರ್ಷಕ್ಕೆ ಸುಮಾರು ₹1,200 ಕೋಟಿ…
ಅವೈಜ್ಞಾನಿಕ ಮಳೆ ಮುನ್ಸೂಚನೆಗಳ ಆಧಾರದ ಮೇಲೆ ಪದೇ ಪದೇ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸುವುದು…