MIRROR FOCUS

ಏಕೆ ಇಷ್ಟೂ ಅಡಿಕೆ ಆಮದಾಗುತ್ತಿದೆ…?

Share
FacebookFacebookTwitterTwitterWhatsAppWhatsAppLinkedInLinkedInTelegramTelegramMessengerMessengerGmailGmail

ಆಗಾಗ ಅಡಿಕೆ ಆಮದು ಪ್ರಕರಣಗಳು ಪತ್ತೆಯಾಗುತ್ತಿದೆ. ಭಾರತಕ್ಕೆ ಏಕೆ ಇಷ್ಟೂ ಅಡಿಕೆ ಆಮದಾಗುತ್ತಿದೆ..? ಇಲಾಖೆಗಳು ಆಗಾಗ ಪತ್ತೆ ಮಾಡಿದರೂ, ಇನ್ನೂ ಏಕೆ ಅಡಿಕೆ ಆಮದಾಗುತ್ತಲೇ ಇದೆ..?. ಈ ನಡುವೆಯೂ ಅನಧಿಕೃತವಾಗಿ ಅಡಿಕೆ ಸಾಗಾಟದ ಪ್ರಕರಣಗಳು ದಾಖಲಾಗುತ್ತಲೇ ಇದೆ. ಇದೆಲ್ಲಾ ಪ್ರಕರಣಗಳು ಆ ಬಳಿಕ ಏನಾಗುತ್ತಿದೆ..? 

Advertisement

ಈಚೆಗೆ “ಪೈನಾನ್ಸಿಯಲ್‌ ಎಕ್ಸ್‌ಪ್ರೆಸ್‌ ” ವರದಿಯನ್ನು ಮಾಡಿದೆ. ಮುಂಬೈ ಬಂದರಿನಲ್ಲಿ ಕಸ್ಟಮ್ಸ್‌ ಅಧಿಕಾರಿಗಳು  5.7 ಕೋಟಿ ರೂಪಾಯಿ ಮೌಲ್ಯದ  112.14 ಮೆಟ್ರಿಕ್ ಟನ್ ಅಡಿಕೆಯನ್ನು ವಶಪಡಿಸಿಕೊಂಡಿದ್ದರು.  ಸುಮಾರು 6.27 ಕೋಟಿ ಆಮದು ತೆರಿಗೆಯನ್ನು ತಪ್ಪಿಸಲಾಗಿದೆ ಎಂದು ಇಲಾಖೆ ಮಾಹಿತಿ ನೀಡಿದೆ. ಪ್ರತೀ ಬಾರಿ ಕೂಡಾ ಅಡಿಕೆಯ ಬದಲಾಗಿ ತಪ್ಪು ಮಾಹಿತಿ ನೀಡಿ ಅಡಿಕೆಯನ್ನು ಸಾಗಾಟ ಮಾಡಲಾಗುತ್ತದೆ. ಈ ಬಾರಿಯೂ ಅದೇ ಮಾದರಿಯಲ್ಲಿ ಅಡಿಕೆ ಕಳ್ಳಸಾಗಾಣಿಕೆ ಮಾಡಲಾಗಿದೆ. ಮಾಹಿತಿ ಪ್ರಕಾರ ಇದುವರೆಗೆ ದೇಶದಲ್ಲಿ 416 ಅಕ್ರಮ ಅಡಿಕೆ ಕಳ್ಳಸಾಗಣೆ ಪ್ರಕರಣಗಳು ದಾಖಲಾಗಿವೆ, 6760.8 ಮೆಟ್ರಿಕ್ ಟನ್‌ಗಳಷ್ಟು ಅಡಿಕೆ ವಶಪಡಿಸಿಕೊಳ್ಳಲಾಗಿದೆ.

ಭಾರತದಲ್ಲಿ ಸಾಕಷ್ಟು ಪ್ರಮಾಣದ ಅಡಿಕೆ ಬೆಳೆಯುತ್ತಿದ್ದರೂ ಅಕ್ರಮವಾಗಿ ಪದೇ ಪದೇ ಅಡಿಕೆ ಸಾಗಾಟ ಏಕೆ ಮಾಡಲಾಗುತ್ತಿದೆ..? ಯಾರು ಮಾಡುತ್ತಿದ್ದಾರೆ..? ಅಷ್ಟೊಂದು ಧೈರ್ಯವಾಗಿ ಅಡಿಕೆ ಆಮಾದು ಮಾಡುವವರು ಯಾರು..? ಇವರ ಹಿಂದೆ ಇರುವವರು ಯಾರು..? ಈ ಎಲ್ಲಾ ಪ್ರಶ್ನೆಗಳು ಸಹಜವಾಗಿಯೇ ಈಗ ಉದ್ಭವಿಸಿದೆ.

ಭಾರತದಲ್ಲಿ ಅಡಿಕೆ ಬಳೆಕೆ ಹೆಚ್ಚಾಗಿದೆ‌, ಅದೇ ರೀತಿ ಅಡಿಕೆ ಬಳಕೆಯೂ ಹೆಚ್ಚಿದೆ. ಗುಟ್ಕಾ ಉತ್ಪಾದನೆ ಹಾಗೂ ಬಳಕೆ ಎರಡೂ ಕೂಡಾ ಇಲ್ಲಿ ಪ್ರಮುಖ ಉದ್ಯಮ. ಗುಟ್ಕಾಕ್ಕೆ ಕಡಿಮೆ ದರ್ಜೆಯ ಅಡಿಕೆ ಹೆಚ್ಚಾಗಿ ಬಳಕೆ ಮಾಡುತ್ತಿರುವುದು ಈಗ ಕಂಡುಬಂದಿದೆ. ಹೀಗಾಗಿ ವಿದೇಶದ ಕಳಪೆ ಗುಣಮಟ್ಟದ ಅಡಿಕೆಯನ್ನು ಕಳ್ಳಸಾಗಾಣಿಕೆಯ ಮೂಲಕ ತಂದು ಗುಟ್ಕಾ ಉದ್ಯಮ ಸಹಿತ ಇತರ ಅಡಿಕೆಯ ಜೊತೆ ಮಿಶ್ರಣ ಮಾಡಲಾಗುತ್ತಿದೆ ಎನ್ನುವುದು ಮೇಲ್ನೋಟದ ಅಧ್ಯಯನ.

ಕಳೆದ ಹಲವಾರು ಸಮಯಗಳಿಂದ ತಪ್ಪು ಮಾಹಿತಿ ನೀಡಿ ಗುಜರಾತ್‌ ಬಂದರು ಸೇರಿದಂತೆ ಮುಂಬಯಿ ಬಂದರಿಗೆ ಅಡಿಕೆ ಆಮದಾಗುತ್ತಿದೆ. ಅಡಿಕೆ ಅಕ್ರಮವಾಗಿ ಆಮದಾಗುತ್ತಿರುವುದನ್ನು ಪತ್ತೆ ಮಾಡಿ ಕ್ರಮ ಕೈಗೊಂಡ ಬಳಿಕವೂ ಪದೇ ಪದೇ ಅಡಿಕೆ ಆಮದಾಗುತ್ತಿರುವುದರ ಬಗ್ಗೆ ಕಠಿಣ ಕ್ರಮ ಹಾಗೂ ತನಿಖೆಯಾಗಬೇಕು ಎಂದು ಅಡಿಕೆ ಬೆಳೆಗಾರರು ಒತ್ತಾಯಿಸುತ್ತಾರೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹವಾಮಾನ ವರದಿ | 21-07-2025 | ನಾಳೆಯಿಂದ ಮಳೆ ಕಡಿಮೆ ನಿರೀಕ್ಷೆ | ಹಲವು ದಿನಗಳ ಬಳಿಕ ರೈತರಿಗೆ ಆಶಾದಾಯಕ ಹವಾಮಾನ |

ಆಂದ್ರಾ ಕರಾವಳಿಯಲ್ಲಿ ಸಣ್ಣ ಪ್ರಮಾಣದ ವಾಯುಭಾರ ಕುಸಿತದಂತಹ ತಿರುವಿಕೆ ಉಂಟಾಗಿದ್ದು, ಮುಂದಿನ ಪರಿಣಾಮ…

1 hour ago

ಕಬ್ಬಿಗೆ ದರ ನಿಗದಿ ಮಾಡುವಂತೆ ಭಾಕಿಸಂ ಒತ್ತಾಯ

ಕಬ್ಬಿನ ದರ ನಿಗದಿ ಮಾಡುವ ಸಂದರ್ಭದಲ್ಲಿ  ಉತ್ತರ ಕರ್ನಾಟಕ ಹಾಗೂ  ದಕ್ಷಿಣ ಕರ್ನಾಟಕದಲ್ಲಿ …

7 hours ago

ಹರಳು ರೂಪದ ಯೂರಿಯ ಬದಲಾಗಿ ನ್ಯಾನೋ ಯೂರಿಯಾ ಬಳಕೆಗೆ ರೈತರಿಗೆ ಸಲಹೆ

ಕೇಂದ್ರ ಸರ್ಕಾರ ಹರಳು ರೂಪದ ಯೂರಿಯ ಬದಲಾಗಿ ನ್ಯಾನೋ ಯೂರಿಯಾ ಬಳಕೆಗೆ ಹೆಚ್ಚು…

7 hours ago

ಲಕ್ ಪತಿ ದೀದಿ ಯೋಜನೆ | ಮಹಿಳೆಯರ ಸ್ವಾವಲಂಬಿ ಬದುಕಿಗೆ ದಾರಿ

ಮಹಿಳೆಯರನ್ನು ಆರ್ಥಿಕ ಸ್ವಾವಲಂಬಿಗಳನ್ನಾಗಿ ಮಾಡುವ  ಕೇಂದ್ರ ಸರ್ಕಾರದ  ಮಹತ್ವಕಾಂಕ್ಷಿ ಯೋಜನೆ ‘ಲಕ್ ಪತಿ …

7 hours ago

ಆರೋಗ್ಯದಲ್ಲಿ ಈ ರಾಶಿಯವರಿಗೆ ಆಹಾರದ ಕ್ರಮದಿಂದ ಲಾಭ

ಆರೋಗ್ಯವು ಜೀವನದ ಮೂಲಾಧಾರವಾಗಿದ್ದು, ವೈದಿಕ ಜ್ಯೋತಿಷ್ಯದ ಪ್ರಕಾರ ಗ್ರಹಗಳ ಚಲನೆಯು ಆರೋಗ್ಯ ಮತ್ತು…

8 hours ago

ಭಾರೀ ಮಳೆ ಮುನ್ಸೂಚನೆ ಹಿನ್ನೆಲೆ | ರಾಜ್ಯದ ಕರಾವಳಿಯಲ್ಲಿ ರೆಡ್ ಅಲರ್ಟ್

ಭಾರೀ ಮಳೆ ಮುನ್ಸೂಚನೆ ಹಿನ್ನೆಲೆಯಲ್ಲಿ ಭಾರತೀಯ ಹವಾಮಾನ ಇಲಾಖೆ ರಾಜ್ಯದ ಕರಾವಳಿ ಹಾಗೂ…

15 hours ago