Advertisement
MIRROR FOCUS

ಏಕೆ ಇಷ್ಟೂ ಅಡಿಕೆ ಆಮದಾಗುತ್ತಿದೆ…?

Share

ಆಗಾಗ ಅಡಿಕೆ ಆಮದು ಪ್ರಕರಣಗಳು ಪತ್ತೆಯಾಗುತ್ತಿದೆ. ಭಾರತಕ್ಕೆ ಏಕೆ ಇಷ್ಟೂ ಅಡಿಕೆ ಆಮದಾಗುತ್ತಿದೆ..? ಇಲಾಖೆಗಳು ಆಗಾಗ ಪತ್ತೆ ಮಾಡಿದರೂ, ಇನ್ನೂ ಏಕೆ ಅಡಿಕೆ ಆಮದಾಗುತ್ತಲೇ ಇದೆ..?. ಈ ನಡುವೆಯೂ ಅನಧಿಕೃತವಾಗಿ ಅಡಿಕೆ ಸಾಗಾಟದ ಪ್ರಕರಣಗಳು ದಾಖಲಾಗುತ್ತಲೇ ಇದೆ. ಇದೆಲ್ಲಾ ಪ್ರಕರಣಗಳು ಆ ಬಳಿಕ ಏನಾಗುತ್ತಿದೆ..? 

ಈಚೆಗೆ “ಪೈನಾನ್ಸಿಯಲ್‌ ಎಕ್ಸ್‌ಪ್ರೆಸ್‌ ” ವರದಿಯನ್ನು ಮಾಡಿದೆ. ಮುಂಬೈ ಬಂದರಿನಲ್ಲಿ ಕಸ್ಟಮ್ಸ್‌ ಅಧಿಕಾರಿಗಳು  5.7 ಕೋಟಿ ರೂಪಾಯಿ ಮೌಲ್ಯದ  112.14 ಮೆಟ್ರಿಕ್ ಟನ್ ಅಡಿಕೆಯನ್ನು ವಶಪಡಿಸಿಕೊಂಡಿದ್ದರು.  ಸುಮಾರು 6.27 ಕೋಟಿ ಆಮದು ತೆರಿಗೆಯನ್ನು ತಪ್ಪಿಸಲಾಗಿದೆ ಎಂದು ಇಲಾಖೆ ಮಾಹಿತಿ ನೀಡಿದೆ. ಪ್ರತೀ ಬಾರಿ ಕೂಡಾ ಅಡಿಕೆಯ ಬದಲಾಗಿ ತಪ್ಪು ಮಾಹಿತಿ ನೀಡಿ ಅಡಿಕೆಯನ್ನು ಸಾಗಾಟ ಮಾಡಲಾಗುತ್ತದೆ. ಈ ಬಾರಿಯೂ ಅದೇ ಮಾದರಿಯಲ್ಲಿ ಅಡಿಕೆ ಕಳ್ಳಸಾಗಾಣಿಕೆ ಮಾಡಲಾಗಿದೆ. ಮಾಹಿತಿ ಪ್ರಕಾರ ಇದುವರೆಗೆ ದೇಶದಲ್ಲಿ 416 ಅಕ್ರಮ ಅಡಿಕೆ ಕಳ್ಳಸಾಗಣೆ ಪ್ರಕರಣಗಳು ದಾಖಲಾಗಿವೆ, 6760.8 ಮೆಟ್ರಿಕ್ ಟನ್‌ಗಳಷ್ಟು ಅಡಿಕೆ ವಶಪಡಿಸಿಕೊಳ್ಳಲಾಗಿದೆ.

ಭಾರತದಲ್ಲಿ ಸಾಕಷ್ಟು ಪ್ರಮಾಣದ ಅಡಿಕೆ ಬೆಳೆಯುತ್ತಿದ್ದರೂ ಅಕ್ರಮವಾಗಿ ಪದೇ ಪದೇ ಅಡಿಕೆ ಸಾಗಾಟ ಏಕೆ ಮಾಡಲಾಗುತ್ತಿದೆ..? ಯಾರು ಮಾಡುತ್ತಿದ್ದಾರೆ..? ಅಷ್ಟೊಂದು ಧೈರ್ಯವಾಗಿ ಅಡಿಕೆ ಆಮಾದು ಮಾಡುವವರು ಯಾರು..? ಇವರ ಹಿಂದೆ ಇರುವವರು ಯಾರು..? ಈ ಎಲ್ಲಾ ಪ್ರಶ್ನೆಗಳು ಸಹಜವಾಗಿಯೇ ಈಗ ಉದ್ಭವಿಸಿದೆ.

ಭಾರತದಲ್ಲಿ ಅಡಿಕೆ ಬಳೆಕೆ ಹೆಚ್ಚಾಗಿದೆ‌, ಅದೇ ರೀತಿ ಅಡಿಕೆ ಬಳಕೆಯೂ ಹೆಚ್ಚಿದೆ. ಗುಟ್ಕಾ ಉತ್ಪಾದನೆ ಹಾಗೂ ಬಳಕೆ ಎರಡೂ ಕೂಡಾ ಇಲ್ಲಿ ಪ್ರಮುಖ ಉದ್ಯಮ. ಗುಟ್ಕಾಕ್ಕೆ ಕಡಿಮೆ ದರ್ಜೆಯ ಅಡಿಕೆ ಹೆಚ್ಚಾಗಿ ಬಳಕೆ ಮಾಡುತ್ತಿರುವುದು ಈಗ ಕಂಡುಬಂದಿದೆ. ಹೀಗಾಗಿ ವಿದೇಶದ ಕಳಪೆ ಗುಣಮಟ್ಟದ ಅಡಿಕೆಯನ್ನು ಕಳ್ಳಸಾಗಾಣಿಕೆಯ ಮೂಲಕ ತಂದು ಗುಟ್ಕಾ ಉದ್ಯಮ ಸಹಿತ ಇತರ ಅಡಿಕೆಯ ಜೊತೆ ಮಿಶ್ರಣ ಮಾಡಲಾಗುತ್ತಿದೆ ಎನ್ನುವುದು ಮೇಲ್ನೋಟದ ಅಧ್ಯಯನ.

ಕಳೆದ ಹಲವಾರು ಸಮಯಗಳಿಂದ ತಪ್ಪು ಮಾಹಿತಿ ನೀಡಿ ಗುಜರಾತ್‌ ಬಂದರು ಸೇರಿದಂತೆ ಮುಂಬಯಿ ಬಂದರಿಗೆ ಅಡಿಕೆ ಆಮದಾಗುತ್ತಿದೆ. ಅಡಿಕೆ ಅಕ್ರಮವಾಗಿ ಆಮದಾಗುತ್ತಿರುವುದನ್ನು ಪತ್ತೆ ಮಾಡಿ ಕ್ರಮ ಕೈಗೊಂಡ ಬಳಿಕವೂ ಪದೇ ಪದೇ ಅಡಿಕೆ ಆಮದಾಗುತ್ತಿರುವುದರ ಬಗ್ಗೆ ಕಠಿಣ ಕ್ರಮ ಹಾಗೂ ತನಿಖೆಯಾಗಬೇಕು ಎಂದು ಅಡಿಕೆ ಬೆಳೆಗಾರರು ಒತ್ತಾಯಿಸುತ್ತಾರೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ದೇಶೀಯ ಗ್ರಾಹಕರಿಗೆ ಇಂಧನ ಕೊರತೆ ಇಲ್ಲ: CNG – PNG ಪೂರೈಕೆ ನಿರಂತರ – ಸಚಿವ ಹರ್ದೀಪ್ ಸಿಂಗ್ ಪುರಿ

ದೇಶೀಯ ಗ್ರಾಹಕರಿಗೆ ಸಿಎನ್ಜಿ, ಪಿಎನ್ಜಿ ಹಾಗೂ ಎಲ್‌ಪಿಜಿ ಇಂಧನ ಪೂರೈಕೆಯಲ್ಲಿ ಯಾವುದೇ ಕೊರತೆ…

3 hours ago

ಪೆಟ್ರೋಲಿಯಂಗೆ ಪರ್ಯಾಯದತ್ತ : ಕೃಷಿ ಸಂಪನ್ಮೂಲಗಳಿಂದ ಬಯೋ ಉತ್ಪನ್ನಗಳತ್ತ ಆದ್ಯತೆ

Bio Innovations APAC 2026 ಸಮಾವೇಶದಲ್ಲಿ ಗೋಡಾವರಿ ಬಯೋರೆಫೈನರೀಸ್ ತನ್ನ ಜೈವಿಕ ಉತ್ಪಾದನಾ…

3 hours ago

ಗೋವಾದಲ್ಲಿ ಹಲಸು ಉತ್ಪಾದನೆ ಕುಸಿತ ಇಲ್ಲ | ಉತ್ತಮ ದರಕ್ಕಾಗಿ ಓಪನ್‌ ಮಾರ್ಕೆಟ್‌ಗೆ ರೈತರ ಒಲವು

ಗೋವಾದಲ್ಲಿ ಹಲಸು ಉತ್ಪಾದನೆ ಕುಸಿತವಾಗಿಲ್ಲ ಎಂದು ಸರ್ಕಾರ ಸ್ಪಷ್ಟಪಡಿಸಿದೆ. ಉತ್ತಮ ದರದ ಕಾರಣ…

3 hours ago

ರಾಜ್ಯದಲ್ಲಿ ಅಡುಗೆ ಅನಿಲ ಕೊರತೆ ಇಲ್ಲ | ಪ್ರತಿ 25 ದಿನಕ್ಕೊಂದು ಸಿಲಿಂಡರ್‌ ಪೂರೈಕೆ – ಸಚಿವ ಮುನಿಯಪ್ಪ ಭರವಸೆ

ರಾಜ್ಯದಲ್ಲಿ ಗೃಹಬಳಕೆಯ ಅಡುಗೆ ಅನಿಲ ಪೂರೈಕೆಯಲ್ಲಿ ಯಾವುದೇ ಕೊರತೆ ಇಲ್ಲ ಎಂದು ಸಚಿವ…

3 hours ago

ಅಡಿಕೆ ಬೆಳೆಗಾರರಿಗೆ ಎಚ್ಚರಿಕೆ | ರೋಗ ನಿರ್ವಹಣೆ ತಪ್ಪಿದರೆ ಇಳುವರಿ ಕುಸಿತ..! – ಅಡಿಕೆ ಸಮೀಕ್ಷೆ ವರದಿ

ಅಡಿಕೆ ಇಳುವರಿ ಕುಸಿತಕ್ಕೆ ಎಲೆಚುಕ್ಕೆ, ಕೊಳೆ ರೋಗ ಹಾಗೂ ಹವಾಮಾನ ವೈಪರೀತ್ಯ ಪ್ರಮುಖ…

3 hours ago

ಬಿಸಿ ಆಹಾರ ಪಾರ್ಸೆಲ್‌ಗೆ ಪ್ಲಾಸ್ಟಿಕ್‌, ಪತ್ರಿಕೆ ನಿಷೇಧ…! : ಸಾರ್ವಜನಿಕ ಧೂಮಪಾನಕ್ಕೆ ₹1000 ದಂಡ ಎಚ್ಚರಿಕೆ

ಹೋಟೆಲ್‌ಗಳಲ್ಲಿ ಪ್ಲಾಸ್ಟಿಕ್ ಹಾಗೂ ಪತ್ರಿಕೆಗಳಲ್ಲಿ ಬಿಸಿ ಆಹಾರ ಪಾರ್ಸೆಲ್‌ ಮಾಡುವುದನ್ನು ನಿಷೇಧಿಸಲು ಅಧಿಕಾರಿಗಳಿಗೆ…

13 hours ago