Advertisement
MIRROR FOCUS

ಏಕೆ ಇಷ್ಟೂ ಅಡಿಕೆ ಆಮದಾಗುತ್ತಿದೆ…?

Share

ಆಗಾಗ ಅಡಿಕೆ ಆಮದು ಪ್ರಕರಣಗಳು ಪತ್ತೆಯಾಗುತ್ತಿದೆ. ಭಾರತಕ್ಕೆ ಏಕೆ ಇಷ್ಟೂ ಅಡಿಕೆ ಆಮದಾಗುತ್ತಿದೆ..? ಇಲಾಖೆಗಳು ಆಗಾಗ ಪತ್ತೆ ಮಾಡಿದರೂ, ಇನ್ನೂ ಏಕೆ ಅಡಿಕೆ ಆಮದಾಗುತ್ತಲೇ ಇದೆ..?. ಈ ನಡುವೆಯೂ ಅನಧಿಕೃತವಾಗಿ ಅಡಿಕೆ ಸಾಗಾಟದ ಪ್ರಕರಣಗಳು ದಾಖಲಾಗುತ್ತಲೇ ಇದೆ. ಇದೆಲ್ಲಾ ಪ್ರಕರಣಗಳು ಆ ಬಳಿಕ ಏನಾಗುತ್ತಿದೆ..? 

Advertisement
Advertisement

ಈಚೆಗೆ “ಪೈನಾನ್ಸಿಯಲ್‌ ಎಕ್ಸ್‌ಪ್ರೆಸ್‌ ” ವರದಿಯನ್ನು ಮಾಡಿದೆ. ಮುಂಬೈ ಬಂದರಿನಲ್ಲಿ ಕಸ್ಟಮ್ಸ್‌ ಅಧಿಕಾರಿಗಳು  5.7 ಕೋಟಿ ರೂಪಾಯಿ ಮೌಲ್ಯದ  112.14 ಮೆಟ್ರಿಕ್ ಟನ್ ಅಡಿಕೆಯನ್ನು ವಶಪಡಿಸಿಕೊಂಡಿದ್ದರು.  ಸುಮಾರು 6.27 ಕೋಟಿ ಆಮದು ತೆರಿಗೆಯನ್ನು ತಪ್ಪಿಸಲಾಗಿದೆ ಎಂದು ಇಲಾಖೆ ಮಾಹಿತಿ ನೀಡಿದೆ. ಪ್ರತೀ ಬಾರಿ ಕೂಡಾ ಅಡಿಕೆಯ ಬದಲಾಗಿ ತಪ್ಪು ಮಾಹಿತಿ ನೀಡಿ ಅಡಿಕೆಯನ್ನು ಸಾಗಾಟ ಮಾಡಲಾಗುತ್ತದೆ. ಈ ಬಾರಿಯೂ ಅದೇ ಮಾದರಿಯಲ್ಲಿ ಅಡಿಕೆ ಕಳ್ಳಸಾಗಾಣಿಕೆ ಮಾಡಲಾಗಿದೆ. ಮಾಹಿತಿ ಪ್ರಕಾರ ಇದುವರೆಗೆ ದೇಶದಲ್ಲಿ 416 ಅಕ್ರಮ ಅಡಿಕೆ ಕಳ್ಳಸಾಗಣೆ ಪ್ರಕರಣಗಳು ದಾಖಲಾಗಿವೆ, 6760.8 ಮೆಟ್ರಿಕ್ ಟನ್‌ಗಳಷ್ಟು ಅಡಿಕೆ ವಶಪಡಿಸಿಕೊಳ್ಳಲಾಗಿದೆ.

Advertisement

ಭಾರತದಲ್ಲಿ ಸಾಕಷ್ಟು ಪ್ರಮಾಣದ ಅಡಿಕೆ ಬೆಳೆಯುತ್ತಿದ್ದರೂ ಅಕ್ರಮವಾಗಿ ಪದೇ ಪದೇ ಅಡಿಕೆ ಸಾಗಾಟ ಏಕೆ ಮಾಡಲಾಗುತ್ತಿದೆ..? ಯಾರು ಮಾಡುತ್ತಿದ್ದಾರೆ..? ಅಷ್ಟೊಂದು ಧೈರ್ಯವಾಗಿ ಅಡಿಕೆ ಆಮಾದು ಮಾಡುವವರು ಯಾರು..? ಇವರ ಹಿಂದೆ ಇರುವವರು ಯಾರು..? ಈ ಎಲ್ಲಾ ಪ್ರಶ್ನೆಗಳು ಸಹಜವಾಗಿಯೇ ಈಗ ಉದ್ಭವಿಸಿದೆ.

ಭಾರತದಲ್ಲಿ ಅಡಿಕೆ ಬಳೆಕೆ ಹೆಚ್ಚಾಗಿದೆ‌, ಅದೇ ರೀತಿ ಅಡಿಕೆ ಬಳಕೆಯೂ ಹೆಚ್ಚಿದೆ. ಗುಟ್ಕಾ ಉತ್ಪಾದನೆ ಹಾಗೂ ಬಳಕೆ ಎರಡೂ ಕೂಡಾ ಇಲ್ಲಿ ಪ್ರಮುಖ ಉದ್ಯಮ. ಗುಟ್ಕಾಕ್ಕೆ ಕಡಿಮೆ ದರ್ಜೆಯ ಅಡಿಕೆ ಹೆಚ್ಚಾಗಿ ಬಳಕೆ ಮಾಡುತ್ತಿರುವುದು ಈಗ ಕಂಡುಬಂದಿದೆ. ಹೀಗಾಗಿ ವಿದೇಶದ ಕಳಪೆ ಗುಣಮಟ್ಟದ ಅಡಿಕೆಯನ್ನು ಕಳ್ಳಸಾಗಾಣಿಕೆಯ ಮೂಲಕ ತಂದು ಗುಟ್ಕಾ ಉದ್ಯಮ ಸಹಿತ ಇತರ ಅಡಿಕೆಯ ಜೊತೆ ಮಿಶ್ರಣ ಮಾಡಲಾಗುತ್ತಿದೆ ಎನ್ನುವುದು ಮೇಲ್ನೋಟದ ಅಧ್ಯಯನ.

Advertisement

ಕಳೆದ ಹಲವಾರು ಸಮಯಗಳಿಂದ ತಪ್ಪು ಮಾಹಿತಿ ನೀಡಿ ಗುಜರಾತ್‌ ಬಂದರು ಸೇರಿದಂತೆ ಮುಂಬಯಿ ಬಂದರಿಗೆ ಅಡಿಕೆ ಆಮದಾಗುತ್ತಿದೆ. ಅಡಿಕೆ ಅಕ್ರಮವಾಗಿ ಆಮದಾಗುತ್ತಿರುವುದನ್ನು ಪತ್ತೆ ಮಾಡಿ ಕ್ರಮ ಕೈಗೊಂಡ ಬಳಿಕವೂ ಪದೇ ಪದೇ ಅಡಿಕೆ ಆಮದಾಗುತ್ತಿರುವುದರ ಬಗ್ಗೆ ಕಠಿಣ ಕ್ರಮ ಹಾಗೂ ತನಿಖೆಯಾಗಬೇಕು ಎಂದು ಅಡಿಕೆ ಬೆಳೆಗಾರರು ಒತ್ತಾಯಿಸುತ್ತಾರೆ.

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಕುತ್ಲೂರು ಗ್ರಾಮಕ್ಕೆ ಅತ್ಯುತ್ತಮ ಪ್ರವಾಸೋದ್ಯಮ ರಾಷ್ಟ್ರೀಯ ಪ್ರಶಸ್ತಿ ಪ್ರದಾನ | ಗ್ರಾಮೀಣ ಭಾಗಕ್ಕೆ ಹೆಮ್ಮೆಯ ಗರಿ |

ಪಶ್ಚಿಮ ಘಟ್ಟಗಳ ತಪ್ಪಲಿನಲ್ಲಿರುವ ಕುತ್ಲೂರು ಗ್ರಾಮ ಪ್ರಾಕೃತಿಕ ಸೌ೦ದರ್ಯವನ್ನೇ ಹೊದ್ದು ಮಲಗಿದೆ. ಇಂತಹ…

7 hours ago

ಇಂಗುಗುಂಡಿ ನಿರ್ಮಿಸಿದ ಮಹಿಳಾ ತಂಡ | 6 ಮಂದಿ ಮಹಿಳೆಯರಿಂದ 236 ಕ್ಕೂ ಹೆಚ್ಚು ಇಂಗುಗುಂಡಿ |

ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ವಿಟ್ಲಮುಡ್ನೂರು ಗ್ರಾಮ ಪಂಚಾಯಿತಿಯ ಚಿಗುರು ಸಂಜೀವಿನಿ…

8 hours ago

ಜವಳಿ ಕ್ಷೇತ್ರದಲ್ಲಿ ಉದ್ಯೋಗ ಸೃಷ್ಟಿಗೆ ಆದ್ಯತೆ

ಕೃಷಿ ಕ್ಷೇತ್ರದ ನಂತರ ಜವಳಿ ಕ್ಷೇತ್ರದಲ್ಲಿ ಅತಿ ಹೆಚ್ಚು ಉದ್ಯೋಗ ಸೃಷ್ಟಿಗೆ ಅವಕಾಶವಿದ್ದು,…

9 hours ago

ದೇವಾಲಯಗಳಲ್ಲಿ ನಂದಿನಿ ತುಪ್ಪ ಬಳಸಲು ನಿರ್ಧಾರ | ನಂದಿನಿ ತುಪ್ಪಕ್ಕೆ ಬೇಡಿಕೆ

ರಾಜ್ಯ ಮತ್ತು ಹೊರರಾಜ್ಯದ ದೇವಾಲಯಗಳಲ್ಲಿ ನಂದಿನ ತುಪ್ಪ ಬಳಸಲು ನಿರ್ಧರಿಸಿರುವ ಹಿನ್ನೆಲೆಯಲ್ಲಿ ನಂದಿನಿ…

9 hours ago

ಹವಾಮಾನ ವರದಿ | 27-09-2024 | ಸೆ. 29 ರಿಂದ ಗುಡುಗು ಸಹಿತ ಮಳೆ ನಿರೀಕ್ಷೆ |

28.09.2024ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕರಾವಳಿ :…

15 hours ago