Advertisement
MIRROR FOCUS

ಏಕೆ ಇಷ್ಟೂ ಅಡಿಕೆ ಆಮದಾಗುತ್ತಿದೆ…?

Share

ಆಗಾಗ ಅಡಿಕೆ ಆಮದು ಪ್ರಕರಣಗಳು ಪತ್ತೆಯಾಗುತ್ತಿದೆ. ಭಾರತಕ್ಕೆ ಏಕೆ ಇಷ್ಟೂ ಅಡಿಕೆ ಆಮದಾಗುತ್ತಿದೆ..? ಇಲಾಖೆಗಳು ಆಗಾಗ ಪತ್ತೆ ಮಾಡಿದರೂ, ಇನ್ನೂ ಏಕೆ ಅಡಿಕೆ ಆಮದಾಗುತ್ತಲೇ ಇದೆ..?. ಈ ನಡುವೆಯೂ ಅನಧಿಕೃತವಾಗಿ ಅಡಿಕೆ ಸಾಗಾಟದ ಪ್ರಕರಣಗಳು ದಾಖಲಾಗುತ್ತಲೇ ಇದೆ. ಇದೆಲ್ಲಾ ಪ್ರಕರಣಗಳು ಆ ಬಳಿಕ ಏನಾಗುತ್ತಿದೆ..? 

ಈಚೆಗೆ “ಪೈನಾನ್ಸಿಯಲ್‌ ಎಕ್ಸ್‌ಪ್ರೆಸ್‌ ” ವರದಿಯನ್ನು ಮಾಡಿದೆ. ಮುಂಬೈ ಬಂದರಿನಲ್ಲಿ ಕಸ್ಟಮ್ಸ್‌ ಅಧಿಕಾರಿಗಳು  5.7 ಕೋಟಿ ರೂಪಾಯಿ ಮೌಲ್ಯದ  112.14 ಮೆಟ್ರಿಕ್ ಟನ್ ಅಡಿಕೆಯನ್ನು ವಶಪಡಿಸಿಕೊಂಡಿದ್ದರು.  ಸುಮಾರು 6.27 ಕೋಟಿ ಆಮದು ತೆರಿಗೆಯನ್ನು ತಪ್ಪಿಸಲಾಗಿದೆ ಎಂದು ಇಲಾಖೆ ಮಾಹಿತಿ ನೀಡಿದೆ. ಪ್ರತೀ ಬಾರಿ ಕೂಡಾ ಅಡಿಕೆಯ ಬದಲಾಗಿ ತಪ್ಪು ಮಾಹಿತಿ ನೀಡಿ ಅಡಿಕೆಯನ್ನು ಸಾಗಾಟ ಮಾಡಲಾಗುತ್ತದೆ. ಈ ಬಾರಿಯೂ ಅದೇ ಮಾದರಿಯಲ್ಲಿ ಅಡಿಕೆ ಕಳ್ಳಸಾಗಾಣಿಕೆ ಮಾಡಲಾಗಿದೆ. ಮಾಹಿತಿ ಪ್ರಕಾರ ಇದುವರೆಗೆ ದೇಶದಲ್ಲಿ 416 ಅಕ್ರಮ ಅಡಿಕೆ ಕಳ್ಳಸಾಗಣೆ ಪ್ರಕರಣಗಳು ದಾಖಲಾಗಿವೆ, 6760.8 ಮೆಟ್ರಿಕ್ ಟನ್‌ಗಳಷ್ಟು ಅಡಿಕೆ ವಶಪಡಿಸಿಕೊಳ್ಳಲಾಗಿದೆ.

ಭಾರತದಲ್ಲಿ ಸಾಕಷ್ಟು ಪ್ರಮಾಣದ ಅಡಿಕೆ ಬೆಳೆಯುತ್ತಿದ್ದರೂ ಅಕ್ರಮವಾಗಿ ಪದೇ ಪದೇ ಅಡಿಕೆ ಸಾಗಾಟ ಏಕೆ ಮಾಡಲಾಗುತ್ತಿದೆ..? ಯಾರು ಮಾಡುತ್ತಿದ್ದಾರೆ..? ಅಷ್ಟೊಂದು ಧೈರ್ಯವಾಗಿ ಅಡಿಕೆ ಆಮಾದು ಮಾಡುವವರು ಯಾರು..? ಇವರ ಹಿಂದೆ ಇರುವವರು ಯಾರು..? ಈ ಎಲ್ಲಾ ಪ್ರಶ್ನೆಗಳು ಸಹಜವಾಗಿಯೇ ಈಗ ಉದ್ಭವಿಸಿದೆ.

ಭಾರತದಲ್ಲಿ ಅಡಿಕೆ ಬಳೆಕೆ ಹೆಚ್ಚಾಗಿದೆ‌, ಅದೇ ರೀತಿ ಅಡಿಕೆ ಬಳಕೆಯೂ ಹೆಚ್ಚಿದೆ. ಗುಟ್ಕಾ ಉತ್ಪಾದನೆ ಹಾಗೂ ಬಳಕೆ ಎರಡೂ ಕೂಡಾ ಇಲ್ಲಿ ಪ್ರಮುಖ ಉದ್ಯಮ. ಗುಟ್ಕಾಕ್ಕೆ ಕಡಿಮೆ ದರ್ಜೆಯ ಅಡಿಕೆ ಹೆಚ್ಚಾಗಿ ಬಳಕೆ ಮಾಡುತ್ತಿರುವುದು ಈಗ ಕಂಡುಬಂದಿದೆ. ಹೀಗಾಗಿ ವಿದೇಶದ ಕಳಪೆ ಗುಣಮಟ್ಟದ ಅಡಿಕೆಯನ್ನು ಕಳ್ಳಸಾಗಾಣಿಕೆಯ ಮೂಲಕ ತಂದು ಗುಟ್ಕಾ ಉದ್ಯಮ ಸಹಿತ ಇತರ ಅಡಿಕೆಯ ಜೊತೆ ಮಿಶ್ರಣ ಮಾಡಲಾಗುತ್ತಿದೆ ಎನ್ನುವುದು ಮೇಲ್ನೋಟದ ಅಧ್ಯಯನ.

ಕಳೆದ ಹಲವಾರು ಸಮಯಗಳಿಂದ ತಪ್ಪು ಮಾಹಿತಿ ನೀಡಿ ಗುಜರಾತ್‌ ಬಂದರು ಸೇರಿದಂತೆ ಮುಂಬಯಿ ಬಂದರಿಗೆ ಅಡಿಕೆ ಆಮದಾಗುತ್ತಿದೆ. ಅಡಿಕೆ ಅಕ್ರಮವಾಗಿ ಆಮದಾಗುತ್ತಿರುವುದನ್ನು ಪತ್ತೆ ಮಾಡಿ ಕ್ರಮ ಕೈಗೊಂಡ ಬಳಿಕವೂ ಪದೇ ಪದೇ ಅಡಿಕೆ ಆಮದಾಗುತ್ತಿರುವುದರ ಬಗ್ಗೆ ಕಠಿಣ ಕ್ರಮ ಹಾಗೂ ತನಿಖೆಯಾಗಬೇಕು ಎಂದು ಅಡಿಕೆ ಬೆಳೆಗಾರರು ಒತ್ತಾಯಿಸುತ್ತಾರೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹವಾಮಾನ ವರದಿ | 08-07-2026 | ರಾಜ್ಯದಲ್ಲಿ ಮುಂಗಾರು ಪರಿಸ್ಥಿತಿ ಹೇಗಿದೆ…? ಕರಾವಳಿಯಲ್ಲಿ ಮಳೆ ಕಡಿಮೆಯಾಗುತ್ತಿದೆಯೇ?

ಆಗಸ್ಟ್‌ 8ರಿಂದ ಕರಾವಳಿ ಹಾಗೂ ಮಲೆನಾಡಿನಲ್ಲಿ ಮಳೆಯ ಪ್ರಮಾಣ ಇಳಿಕೆಯಾಗುವ ಲಕ್ಷಣಗಳಿವೆ. ಆಗಸ್ಟ್‌…

5 hours ago

ಮ್ಯಾನ್ಮಾರ್‌ನಿಂದ ಭಾರತಕ್ಕೆ ಅಕ್ರಮ ಅಡಿಕೆ ಜಾಲ | ಮೂರು ಹಂತದ ಕಳ್ಳಸಾಗಣೆ ಜಾಲವನ್ನು ಬಯಲಿಗೆಳೆದ ಇಡಿ

ಮ್ಯಾನ್ಮಾರ್‌ನಿಂದ ಭಾರತಕ್ಕೆ ಅಕ್ರಮವಾಗಿ ಅಡಿಕೆ ಸಾಗಿಸುತ್ತಿದ್ದ ಮೂರು ಹಂತದ ಜಾಲವನ್ನು ಇಡಿ ತನಿಖೆಯಲ್ಲಿ…

9 hours ago

‘ಅನ್ನಂ ಬ್ರಹ್ಮ’ ಭಾವದಿಂದ ಆಹಾರ ಸೇವಿಸಿದರೆ ಮುಕ್ತಿಯ ಸಾಧನ – ರಾಘವೇಶ್ವರ ಶ್ರೀ

ಗೋಕರ್ಣದಲ್ಲಿ ನಡೆದ 'ಅನ್ನಂ ಬ್ರಹ್ಮ' ಪ್ರವಚನದಲ್ಲಿ ರಾಘವೇಶ್ವರ ಭಾರತೀ ಶ್ರೀಗಳು ಭೋಜನವೇ ಅದ್ವೈತ…

17 hours ago

ಕೃಷಿ ಅಧಿಕಾರಿ ನೇಮಕಾತಿ ಪರೀಕ್ಷೆ ತಾತ್ಕಾಲಿಕ ಮುಂದೂಡಿಕೆ | ಪ್ರತಿಭಟನಾನಿರತ ವಿದ್ಯಾರ್ಥಿಗಳಿಗೆ ಸಚಿವ ಪ್ರಿಯಾಂಕ್ ಖರ್ಗೆ ಭರವಸೆ

ಕೃಷಿ ಅಧಿಕಾರಿ ನೇಮಕಾತಿ ಪರೀಕ್ಷೆಯನ್ನು ತಾತ್ಕಾಲಿಕವಾಗಿ ಮುಂದೂಡಲಾಗಿದೆ. ಪ್ರತಿಭಟನಾನಿರತ ಕೃಷಿ ವಿದ್ಯಾರ್ಥಿಗಳಿಗೆ ಸರ್ಕಾರ…

19 hours ago

ಬರ್ಮಾ ಅಡಿಕೆ ಕಳ್ಳಸಾಗಣೆ ವಿರುದ್ಧ ಇಡಿ ಬಿಗಿ ಕ್ರಮ – ಇಬ್ಬರು ಉದ್ಯಮಿಗಳ ಮನೆಗಳ ಮೇಲೆ ದಾಳಿ

ಬರ್ಮಾ ಅಡಿಕೆ ಕಳ್ಳಸಾಗಣೆ ಮತ್ತು ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿ ಇಡಿ ಸಿಲ್ಚಾರ್‌ನ…

20 hours ago