ಆಗಾಗ ಅಡಿಕೆ ಆಮದು ಪ್ರಕರಣಗಳು ಪತ್ತೆಯಾಗುತ್ತಿದೆ. ಭಾರತಕ್ಕೆ ಏಕೆ ಇಷ್ಟೂ ಅಡಿಕೆ ಆಮದಾಗುತ್ತಿದೆ..? ಇಲಾಖೆಗಳು ಆಗಾಗ ಪತ್ತೆ ಮಾಡಿದರೂ, ಇನ್ನೂ ಏಕೆ ಅಡಿಕೆ ಆಮದಾಗುತ್ತಲೇ ಇದೆ..?. ಈ ನಡುವೆಯೂ ಅನಧಿಕೃತವಾಗಿ ಅಡಿಕೆ ಸಾಗಾಟದ ಪ್ರಕರಣಗಳು ದಾಖಲಾಗುತ್ತಲೇ ಇದೆ. ಇದೆಲ್ಲಾ ಪ್ರಕರಣಗಳು ಆ ಬಳಿಕ ಏನಾಗುತ್ತಿದೆ..?
ಈಚೆಗೆ “ಪೈನಾನ್ಸಿಯಲ್ ಎಕ್ಸ್ಪ್ರೆಸ್ ” ವರದಿಯನ್ನು ಮಾಡಿದೆ. ಮುಂಬೈ ಬಂದರಿನಲ್ಲಿ ಕಸ್ಟಮ್ಸ್ ಅಧಿಕಾರಿಗಳು 5.7 ಕೋಟಿ ರೂಪಾಯಿ ಮೌಲ್ಯದ 112.14 ಮೆಟ್ರಿಕ್ ಟನ್ ಅಡಿಕೆಯನ್ನು ವಶಪಡಿಸಿಕೊಂಡಿದ್ದರು. ಸುಮಾರು 6.27 ಕೋಟಿ ಆಮದು ತೆರಿಗೆಯನ್ನು ತಪ್ಪಿಸಲಾಗಿದೆ ಎಂದು ಇಲಾಖೆ ಮಾಹಿತಿ ನೀಡಿದೆ. ಪ್ರತೀ ಬಾರಿ ಕೂಡಾ ಅಡಿಕೆಯ ಬದಲಾಗಿ ತಪ್ಪು ಮಾಹಿತಿ ನೀಡಿ ಅಡಿಕೆಯನ್ನು ಸಾಗಾಟ ಮಾಡಲಾಗುತ್ತದೆ. ಈ ಬಾರಿಯೂ ಅದೇ ಮಾದರಿಯಲ್ಲಿ ಅಡಿಕೆ ಕಳ್ಳಸಾಗಾಣಿಕೆ ಮಾಡಲಾಗಿದೆ. ಮಾಹಿತಿ ಪ್ರಕಾರ ಇದುವರೆಗೆ ದೇಶದಲ್ಲಿ 416 ಅಕ್ರಮ ಅಡಿಕೆ ಕಳ್ಳಸಾಗಣೆ ಪ್ರಕರಣಗಳು ದಾಖಲಾಗಿವೆ, 6760.8 ಮೆಟ್ರಿಕ್ ಟನ್ಗಳಷ್ಟು ಅಡಿಕೆ ವಶಪಡಿಸಿಕೊಳ್ಳಲಾಗಿದೆ.
ಭಾರತದಲ್ಲಿ ಸಾಕಷ್ಟು ಪ್ರಮಾಣದ ಅಡಿಕೆ ಬೆಳೆಯುತ್ತಿದ್ದರೂ ಅಕ್ರಮವಾಗಿ ಪದೇ ಪದೇ ಅಡಿಕೆ ಸಾಗಾಟ ಏಕೆ ಮಾಡಲಾಗುತ್ತಿದೆ..? ಯಾರು ಮಾಡುತ್ತಿದ್ದಾರೆ..? ಅಷ್ಟೊಂದು ಧೈರ್ಯವಾಗಿ ಅಡಿಕೆ ಆಮಾದು ಮಾಡುವವರು ಯಾರು..? ಇವರ ಹಿಂದೆ ಇರುವವರು ಯಾರು..? ಈ ಎಲ್ಲಾ ಪ್ರಶ್ನೆಗಳು ಸಹಜವಾಗಿಯೇ ಈಗ ಉದ್ಭವಿಸಿದೆ.
ಭಾರತದಲ್ಲಿ ಅಡಿಕೆ ಬಳೆಕೆ ಹೆಚ್ಚಾಗಿದೆ, ಅದೇ ರೀತಿ ಅಡಿಕೆ ಬಳಕೆಯೂ ಹೆಚ್ಚಿದೆ. ಗುಟ್ಕಾ ಉತ್ಪಾದನೆ ಹಾಗೂ ಬಳಕೆ ಎರಡೂ ಕೂಡಾ ಇಲ್ಲಿ ಪ್ರಮುಖ ಉದ್ಯಮ. ಗುಟ್ಕಾಕ್ಕೆ ಕಡಿಮೆ ದರ್ಜೆಯ ಅಡಿಕೆ ಹೆಚ್ಚಾಗಿ ಬಳಕೆ ಮಾಡುತ್ತಿರುವುದು ಈಗ ಕಂಡುಬಂದಿದೆ. ಹೀಗಾಗಿ ವಿದೇಶದ ಕಳಪೆ ಗುಣಮಟ್ಟದ ಅಡಿಕೆಯನ್ನು ಕಳ್ಳಸಾಗಾಣಿಕೆಯ ಮೂಲಕ ತಂದು ಗುಟ್ಕಾ ಉದ್ಯಮ ಸಹಿತ ಇತರ ಅಡಿಕೆಯ ಜೊತೆ ಮಿಶ್ರಣ ಮಾಡಲಾಗುತ್ತಿದೆ ಎನ್ನುವುದು ಮೇಲ್ನೋಟದ ಅಧ್ಯಯನ.
ಕಳೆದ ಹಲವಾರು ಸಮಯಗಳಿಂದ ತಪ್ಪು ಮಾಹಿತಿ ನೀಡಿ ಗುಜರಾತ್ ಬಂದರು ಸೇರಿದಂತೆ ಮುಂಬಯಿ ಬಂದರಿಗೆ ಅಡಿಕೆ ಆಮದಾಗುತ್ತಿದೆ. ಅಡಿಕೆ ಅಕ್ರಮವಾಗಿ ಆಮದಾಗುತ್ತಿರುವುದನ್ನು ಪತ್ತೆ ಮಾಡಿ ಕ್ರಮ ಕೈಗೊಂಡ ಬಳಿಕವೂ ಪದೇ ಪದೇ ಅಡಿಕೆ ಆಮದಾಗುತ್ತಿರುವುದರ ಬಗ್ಗೆ ಕಠಿಣ ಕ್ರಮ ಹಾಗೂ ತನಿಖೆಯಾಗಬೇಕು ಎಂದು ಅಡಿಕೆ ಬೆಳೆಗಾರರು ಒತ್ತಾಯಿಸುತ್ತಾರೆ.
ಇಂಡೋನೇಷ್ಯಾದ ಸುಲವೆಸಿಯಲ್ಲಿ ಪತ್ತೆಯಾದ ಸುಮಾರು 25,000 ವರ್ಷಗಳ ಹಿಂದಿನ ಮಾನವ ಹಲ್ಲುಗಳಲ್ಲಿ ಅಡಿಕೆ…
‘ಹನುಮಾನ್ ಅಂಶ್’ ಸಿನಿಮಾ 40ನೇ ದಿನವೂ ₹8.25 ಕೋಟಿ ಗಳಿಸಿ ಬಾಕ್ಸ್ ಆಫೀಸ್ನಲ್ಲಿ…
ನೈಋತ್ಯ ಮುಂಗಾರು ಹಿಂದೆ ಸರಿಯಲು ಪೂರಕ ಪರಿಸ್ಥಿತಿಗಳು ನಿರ್ಮಾಣವಾಗುತ್ತಿದ್ದು, ಸೆ.17ರ ವೇಳೆಗೆ ಪಶ್ಚಿಮ…
ಕರ್ನಾಟಕದ ಹಲವು ಭಾಗಗಳಲ್ಲಿ ಸೆ.17ರಂದು ಸಂಜೆ ಹಾಗೂ ರಾತ್ರಿ ಅಲ್ಲಲ್ಲಿ ಸಾಮಾನ್ಯ ಮಳೆಯ…
ಕೋಲಾರದಿಂದ ಬೆಂಗಳೂರಿಗೆ ಸಾಗಿಸಲಾಗುತ್ತಿದ್ದ ಸುಮಾರು 10 ಟನ್ ಸಿಂಥೆಟಿಕ್ ಅಡಿಕೆಯನ್ನು ಅಧಿಕಾರಿಗಳು ವಶಪಡಿಸಿಕೊಂಡಿರುವುದಾಗಿ…
ಮಂಗಳೂರಿನಲ್ಲಿ ಸೆ.18ರಂದು ನಡೆಯಲಿರುವ ವಿಶೇಷ ಸಚಿವ ಸಂಪುಟ ಸಭೆಯಲ್ಲಿ ಅಡಿಕೆ ಬೆಳೆಗಾರರ ಸಮಸ್ಯೆಗಳಿಗೆ…