Advertisement
MIRROR FOCUS

ಏಕೆ ಇಷ್ಟೂ ಅಡಿಕೆ ಆಮದಾಗುತ್ತಿದೆ…?

Share

ಆಗಾಗ ಅಡಿಕೆ ಆಮದು ಪ್ರಕರಣಗಳು ಪತ್ತೆಯಾಗುತ್ತಿದೆ. ಭಾರತಕ್ಕೆ ಏಕೆ ಇಷ್ಟೂ ಅಡಿಕೆ ಆಮದಾಗುತ್ತಿದೆ..? ಇಲಾಖೆಗಳು ಆಗಾಗ ಪತ್ತೆ ಮಾಡಿದರೂ, ಇನ್ನೂ ಏಕೆ ಅಡಿಕೆ ಆಮದಾಗುತ್ತಲೇ ಇದೆ..?. ಈ ನಡುವೆಯೂ ಅನಧಿಕೃತವಾಗಿ ಅಡಿಕೆ ಸಾಗಾಟದ ಪ್ರಕರಣಗಳು ದಾಖಲಾಗುತ್ತಲೇ ಇದೆ. ಇದೆಲ್ಲಾ ಪ್ರಕರಣಗಳು ಆ ಬಳಿಕ ಏನಾಗುತ್ತಿದೆ..? 

ಈಚೆಗೆ “ಪೈನಾನ್ಸಿಯಲ್‌ ಎಕ್ಸ್‌ಪ್ರೆಸ್‌ ” ವರದಿಯನ್ನು ಮಾಡಿದೆ. ಮುಂಬೈ ಬಂದರಿನಲ್ಲಿ ಕಸ್ಟಮ್ಸ್‌ ಅಧಿಕಾರಿಗಳು  5.7 ಕೋಟಿ ರೂಪಾಯಿ ಮೌಲ್ಯದ  112.14 ಮೆಟ್ರಿಕ್ ಟನ್ ಅಡಿಕೆಯನ್ನು ವಶಪಡಿಸಿಕೊಂಡಿದ್ದರು.  ಸುಮಾರು 6.27 ಕೋಟಿ ಆಮದು ತೆರಿಗೆಯನ್ನು ತಪ್ಪಿಸಲಾಗಿದೆ ಎಂದು ಇಲಾಖೆ ಮಾಹಿತಿ ನೀಡಿದೆ. ಪ್ರತೀ ಬಾರಿ ಕೂಡಾ ಅಡಿಕೆಯ ಬದಲಾಗಿ ತಪ್ಪು ಮಾಹಿತಿ ನೀಡಿ ಅಡಿಕೆಯನ್ನು ಸಾಗಾಟ ಮಾಡಲಾಗುತ್ತದೆ. ಈ ಬಾರಿಯೂ ಅದೇ ಮಾದರಿಯಲ್ಲಿ ಅಡಿಕೆ ಕಳ್ಳಸಾಗಾಣಿಕೆ ಮಾಡಲಾಗಿದೆ. ಮಾಹಿತಿ ಪ್ರಕಾರ ಇದುವರೆಗೆ ದೇಶದಲ್ಲಿ 416 ಅಕ್ರಮ ಅಡಿಕೆ ಕಳ್ಳಸಾಗಣೆ ಪ್ರಕರಣಗಳು ದಾಖಲಾಗಿವೆ, 6760.8 ಮೆಟ್ರಿಕ್ ಟನ್‌ಗಳಷ್ಟು ಅಡಿಕೆ ವಶಪಡಿಸಿಕೊಳ್ಳಲಾಗಿದೆ.

ಭಾರತದಲ್ಲಿ ಸಾಕಷ್ಟು ಪ್ರಮಾಣದ ಅಡಿಕೆ ಬೆಳೆಯುತ್ತಿದ್ದರೂ ಅಕ್ರಮವಾಗಿ ಪದೇ ಪದೇ ಅಡಿಕೆ ಸಾಗಾಟ ಏಕೆ ಮಾಡಲಾಗುತ್ತಿದೆ..? ಯಾರು ಮಾಡುತ್ತಿದ್ದಾರೆ..? ಅಷ್ಟೊಂದು ಧೈರ್ಯವಾಗಿ ಅಡಿಕೆ ಆಮಾದು ಮಾಡುವವರು ಯಾರು..? ಇವರ ಹಿಂದೆ ಇರುವವರು ಯಾರು..? ಈ ಎಲ್ಲಾ ಪ್ರಶ್ನೆಗಳು ಸಹಜವಾಗಿಯೇ ಈಗ ಉದ್ಭವಿಸಿದೆ.

ಭಾರತದಲ್ಲಿ ಅಡಿಕೆ ಬಳೆಕೆ ಹೆಚ್ಚಾಗಿದೆ‌, ಅದೇ ರೀತಿ ಅಡಿಕೆ ಬಳಕೆಯೂ ಹೆಚ್ಚಿದೆ. ಗುಟ್ಕಾ ಉತ್ಪಾದನೆ ಹಾಗೂ ಬಳಕೆ ಎರಡೂ ಕೂಡಾ ಇಲ್ಲಿ ಪ್ರಮುಖ ಉದ್ಯಮ. ಗುಟ್ಕಾಕ್ಕೆ ಕಡಿಮೆ ದರ್ಜೆಯ ಅಡಿಕೆ ಹೆಚ್ಚಾಗಿ ಬಳಕೆ ಮಾಡುತ್ತಿರುವುದು ಈಗ ಕಂಡುಬಂದಿದೆ. ಹೀಗಾಗಿ ವಿದೇಶದ ಕಳಪೆ ಗುಣಮಟ್ಟದ ಅಡಿಕೆಯನ್ನು ಕಳ್ಳಸಾಗಾಣಿಕೆಯ ಮೂಲಕ ತಂದು ಗುಟ್ಕಾ ಉದ್ಯಮ ಸಹಿತ ಇತರ ಅಡಿಕೆಯ ಜೊತೆ ಮಿಶ್ರಣ ಮಾಡಲಾಗುತ್ತಿದೆ ಎನ್ನುವುದು ಮೇಲ್ನೋಟದ ಅಧ್ಯಯನ.

ಕಳೆದ ಹಲವಾರು ಸಮಯಗಳಿಂದ ತಪ್ಪು ಮಾಹಿತಿ ನೀಡಿ ಗುಜರಾತ್‌ ಬಂದರು ಸೇರಿದಂತೆ ಮುಂಬಯಿ ಬಂದರಿಗೆ ಅಡಿಕೆ ಆಮದಾಗುತ್ತಿದೆ. ಅಡಿಕೆ ಅಕ್ರಮವಾಗಿ ಆಮದಾಗುತ್ತಿರುವುದನ್ನು ಪತ್ತೆ ಮಾಡಿ ಕ್ರಮ ಕೈಗೊಂಡ ಬಳಿಕವೂ ಪದೇ ಪದೇ ಅಡಿಕೆ ಆಮದಾಗುತ್ತಿರುವುದರ ಬಗ್ಗೆ ಕಠಿಣ ಕ್ರಮ ಹಾಗೂ ತನಿಖೆಯಾಗಬೇಕು ಎಂದು ಅಡಿಕೆ ಬೆಳೆಗಾರರು ಒತ್ತಾಯಿಸುತ್ತಾರೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಮಳೆ ಎಚ್ಚರಿಕೆ – ಉಡುಪಿ, ದಕ್ಷಿಣ ಕನ್ನಡ ಸೇರಿ ನಾಲ್ಕು ಜಿಲ್ಲೆಗಳಲ್ಲಿ ಭಾರೀ ಮಳೆ, ಗಂಟೆಗೆ 50 ಕಿ.ಮೀ. ವೇಗದ ಗಾಳಿ ಸಾಧ್ಯತೆ

ಮುಂದಿನ 3 ಗಂಟೆಗಳ ಕಾಲ ಉಡುಪಿ, ದಕ್ಷಿಣ ಕನ್ನಡ ಸೇರಿದಂತೆ ನಾಲ್ಕು ಜಿಲ್ಲೆಗಳಲ್ಲಿ…

52 minutes ago

ಯುವಕರ ಮೊದಲ ಆದ್ಯತೆ ಏನಿರಬೇಕು? ರಾಜಕೀಯವಲ್ಲ, ಆರ್ಥಿಕ ಸ್ವಾವಲಂಬನೆ!

ಯುವಕರ ಮೊದಲ ಆದ್ಯತೆ ರಾಜಕೀಯವಲ್ಲ, ಕೌಶಲ್ಯ ಮತ್ತು ಆರ್ಥಿಕ ಸ್ವಾವಲಂಬನೆ ಆಗಿರಬೇಕು ಎಂಬುದು…

2 days ago

ಹವಾಮಾನ ವರದಿ | 15-07-2026 | ರಾಜ್ಯದಲ್ಲಿ ಮಳೆ ಯಾಕೆ ಕಡಿಮೆಯಾಗಿದೆ ? ಜುಲೈ 16 ರಿಂದ ಎಲ್ಲೆಲ್ಲಿ ಮಳೆ ಆರಂಭವಾಗಲಿದೆ?

ಜುಲೈ 16ರಿಂದ ಕರಾವಳಿ ಹಾಗೂ ಮಲೆನಾಡಿನ ಕೆಲವು ಭಾಗಗಳಲ್ಲಿ ಅಲ್ಲಲ್ಲಿ ಸಾಮಾನ್ಯ ಮಳೆ…

3 days ago

ಕರ್ನಾಟಕದ ಹಲವು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್…! ಕಾರಣ..?

ರಾಜ್ಯದ ಕರಾವಳಿ ಹಾಗೂ ಒಳನಾಡಿನ ಕೆಲವು ಜಿಲ್ಲೆಗಳಿಗೆ IMD ಯೆಲ್ಲೋ ಅಲರ್ಟ್ ಘೋಷಿಸಿದೆ.…

3 days ago

ಕಸದ ತೆಂಗಿನಕಾಯಿಯೂ ಈಗ ರೈತರ ಸಂಪತ್ತು…! ಭುವನೇಶ್ವರದ ‘ವೇಸ್ಟ್ ಟು ವೆಲ್ತ್’ ಮಾದರಿ

ಭುವನೇಶ್ವರದಲ್ಲಿ ಪ್ರತಿದಿನ ಸಾವಿರಾರು ತೆಂಗಿನಕಾಯಿ ತ್ಯಾಜ್ಯವನ್ನು ಕೊಕೊಪೀಟ್, ಹಗ್ಗ ಹಾಗೂ ಚಾಪೆಗಳಾಗಿ ಪರಿವರ್ತಿಸಿ…

4 days ago

ರಾಜ್ಯದಲ್ಲಿ ಬರದ ಛಾಯೆ- ರೈತರಿಗೆ ಎಕರೆಗೆ ₹50 ಸಾವಿರ ಪರಿಹಾರ ನೀಡಿ

ರಾಜ್ಯದಲ್ಲಿ ಮಳೆಯ ಕೊರತೆಯಿಂದ ಬರದಂತಹ ಪರಿಸ್ಥಿತಿ ನಿರ್ಮಾಣವಾಗಿದ್ದು, ರೈತರಿಗೆ ಎಕರೆಗೆ ₹50 ಸಾವಿರ…

4 days ago