Advertisement
MIRROR FOCUS

ಏಕೆ ಇಷ್ಟೂ ಅಡಿಕೆ ಆಮದಾಗುತ್ತಿದೆ…?

Share

ಆಗಾಗ ಅಡಿಕೆ ಆಮದು ಪ್ರಕರಣಗಳು ಪತ್ತೆಯಾಗುತ್ತಿದೆ. ಭಾರತಕ್ಕೆ ಏಕೆ ಇಷ್ಟೂ ಅಡಿಕೆ ಆಮದಾಗುತ್ತಿದೆ..? ಇಲಾಖೆಗಳು ಆಗಾಗ ಪತ್ತೆ ಮಾಡಿದರೂ, ಇನ್ನೂ ಏಕೆ ಅಡಿಕೆ ಆಮದಾಗುತ್ತಲೇ ಇದೆ..?. ಈ ನಡುವೆಯೂ ಅನಧಿಕೃತವಾಗಿ ಅಡಿಕೆ ಸಾಗಾಟದ ಪ್ರಕರಣಗಳು ದಾಖಲಾಗುತ್ತಲೇ ಇದೆ. ಇದೆಲ್ಲಾ ಪ್ರಕರಣಗಳು ಆ ಬಳಿಕ ಏನಾಗುತ್ತಿದೆ..? 

Advertisement

ಈಚೆಗೆ “ಪೈನಾನ್ಸಿಯಲ್‌ ಎಕ್ಸ್‌ಪ್ರೆಸ್‌ ” ವರದಿಯನ್ನು ಮಾಡಿದೆ. ಮುಂಬೈ ಬಂದರಿನಲ್ಲಿ ಕಸ್ಟಮ್ಸ್‌ ಅಧಿಕಾರಿಗಳು  5.7 ಕೋಟಿ ರೂಪಾಯಿ ಮೌಲ್ಯದ  112.14 ಮೆಟ್ರಿಕ್ ಟನ್ ಅಡಿಕೆಯನ್ನು ವಶಪಡಿಸಿಕೊಂಡಿದ್ದರು.  ಸುಮಾರು 6.27 ಕೋಟಿ ಆಮದು ತೆರಿಗೆಯನ್ನು ತಪ್ಪಿಸಲಾಗಿದೆ ಎಂದು ಇಲಾಖೆ ಮಾಹಿತಿ ನೀಡಿದೆ. ಪ್ರತೀ ಬಾರಿ ಕೂಡಾ ಅಡಿಕೆಯ ಬದಲಾಗಿ ತಪ್ಪು ಮಾಹಿತಿ ನೀಡಿ ಅಡಿಕೆಯನ್ನು ಸಾಗಾಟ ಮಾಡಲಾಗುತ್ತದೆ. ಈ ಬಾರಿಯೂ ಅದೇ ಮಾದರಿಯಲ್ಲಿ ಅಡಿಕೆ ಕಳ್ಳಸಾಗಾಣಿಕೆ ಮಾಡಲಾಗಿದೆ. ಮಾಹಿತಿ ಪ್ರಕಾರ ಇದುವರೆಗೆ ದೇಶದಲ್ಲಿ 416 ಅಕ್ರಮ ಅಡಿಕೆ ಕಳ್ಳಸಾಗಣೆ ಪ್ರಕರಣಗಳು ದಾಖಲಾಗಿವೆ, 6760.8 ಮೆಟ್ರಿಕ್ ಟನ್‌ಗಳಷ್ಟು ಅಡಿಕೆ ವಶಪಡಿಸಿಕೊಳ್ಳಲಾಗಿದೆ.

ಭಾರತದಲ್ಲಿ ಸಾಕಷ್ಟು ಪ್ರಮಾಣದ ಅಡಿಕೆ ಬೆಳೆಯುತ್ತಿದ್ದರೂ ಅಕ್ರಮವಾಗಿ ಪದೇ ಪದೇ ಅಡಿಕೆ ಸಾಗಾಟ ಏಕೆ ಮಾಡಲಾಗುತ್ತಿದೆ..? ಯಾರು ಮಾಡುತ್ತಿದ್ದಾರೆ..? ಅಷ್ಟೊಂದು ಧೈರ್ಯವಾಗಿ ಅಡಿಕೆ ಆಮಾದು ಮಾಡುವವರು ಯಾರು..? ಇವರ ಹಿಂದೆ ಇರುವವರು ಯಾರು..? ಈ ಎಲ್ಲಾ ಪ್ರಶ್ನೆಗಳು ಸಹಜವಾಗಿಯೇ ಈಗ ಉದ್ಭವಿಸಿದೆ.

ಭಾರತದಲ್ಲಿ ಅಡಿಕೆ ಬಳೆಕೆ ಹೆಚ್ಚಾಗಿದೆ‌, ಅದೇ ರೀತಿ ಅಡಿಕೆ ಬಳಕೆಯೂ ಹೆಚ್ಚಿದೆ. ಗುಟ್ಕಾ ಉತ್ಪಾದನೆ ಹಾಗೂ ಬಳಕೆ ಎರಡೂ ಕೂಡಾ ಇಲ್ಲಿ ಪ್ರಮುಖ ಉದ್ಯಮ. ಗುಟ್ಕಾಕ್ಕೆ ಕಡಿಮೆ ದರ್ಜೆಯ ಅಡಿಕೆ ಹೆಚ್ಚಾಗಿ ಬಳಕೆ ಮಾಡುತ್ತಿರುವುದು ಈಗ ಕಂಡುಬಂದಿದೆ. ಹೀಗಾಗಿ ವಿದೇಶದ ಕಳಪೆ ಗುಣಮಟ್ಟದ ಅಡಿಕೆಯನ್ನು ಕಳ್ಳಸಾಗಾಣಿಕೆಯ ಮೂಲಕ ತಂದು ಗುಟ್ಕಾ ಉದ್ಯಮ ಸಹಿತ ಇತರ ಅಡಿಕೆಯ ಜೊತೆ ಮಿಶ್ರಣ ಮಾಡಲಾಗುತ್ತಿದೆ ಎನ್ನುವುದು ಮೇಲ್ನೋಟದ ಅಧ್ಯಯನ.

ಕಳೆದ ಹಲವಾರು ಸಮಯಗಳಿಂದ ತಪ್ಪು ಮಾಹಿತಿ ನೀಡಿ ಗುಜರಾತ್‌ ಬಂದರು ಸೇರಿದಂತೆ ಮುಂಬಯಿ ಬಂದರಿಗೆ ಅಡಿಕೆ ಆಮದಾಗುತ್ತಿದೆ. ಅಡಿಕೆ ಅಕ್ರಮವಾಗಿ ಆಮದಾಗುತ್ತಿರುವುದನ್ನು ಪತ್ತೆ ಮಾಡಿ ಕ್ರಮ ಕೈಗೊಂಡ ಬಳಿಕವೂ ಪದೇ ಪದೇ ಅಡಿಕೆ ಆಮದಾಗುತ್ತಿರುವುದರ ಬಗ್ಗೆ ಕಠಿಣ ಕ್ರಮ ಹಾಗೂ ತನಿಖೆಯಾಗಬೇಕು ಎಂದು ಅಡಿಕೆ ಬೆಳೆಗಾರರು ಒತ್ತಾಯಿಸುತ್ತಾರೆ.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
ದ ರೂರಲ್ ಮಿರರ್.ಕಾಂ

ರೂರಲ್‌ ಮಿರರ್‌ ಪ್ರಕಾಶನದ ವತಿಯಿಂದ ನಡೆಸಲ್ಪಡುವ ಡಿಜಿಟಲ್‌ ಮಾಧ್ಯಮ ಇದಾಗಿದೆ.  ಕೃಷಿ, ಗ್ರಾಮೀಣ ಸಹಿತ ಸಮಗ್ರವಾದ ಸುದ್ದಿಗಳನ್ನು "ದಿ ರೂರಲ್‌ ಮಿರರ್‌.ಕಾಂ" ನಲ್ಲಿ ನೀವು ಓದಬಹುದು. ಯಾವುದೇ ಸುದ್ದಿಗಳು ಇದ್ದರೆ sullianews@gmail.com / theruralmirror@gmail.com ಮೈಲ್ ಅಥವಾ 9449125447 ನಂಬರ್ ಗೆ ವ್ಯಾಟ್ಸಪ್ ಮೂಲಕ ಕಳುಹಿಸಬಹುದು.

Published by
ದ ರೂರಲ್ ಮಿರರ್.ಕಾಂ

Recent Posts

ಹವಾಮಾನ ವರದಿ | 22-04-2026 | ಎ.25ರಿಂದ ಮತ್ತೆ ಮಳೆ – ಯಾವ ಭಾಗಕ್ಕೆ ಏನು ಮುನ್ಸೂಚನೆ?

ರಾಜ್ಯದಲ್ಲಿ ಮುಂದಿನ ಎರಡು ದಿನ ಮಳೆಯ ಪ್ರಮಾಣ ಕಡಿಮೆ ಇರಲಿದ್ದು, ಏಪ್ರಿಲ್ 25ರಿಂದ…

22 hours ago

ಹವಾಮಾನ ವರದಿ | 21-04-2026 | ಕರಾವಳಿ-ಮಲೆನಾಡಿನಲ್ಲಿ ಮಳೆ ಜೋರಾಗಲಿದೆ, ಉತ್ತರ ಒಳನಾಡಿಗೂ ಗುಡುಗು ಮಳೆ..!

ರಾಜ್ಯದ ಕರಾವಳಿ ಮತ್ತು ಮಲೆನಾಡಿನಲ್ಲಿ ಮಳೆ ಮುಂದುವರಿಯಲಿದ್ದು, ಉತ್ತರ ಒಳನಾಡಿನಲ್ಲಿ ಏಪ್ರಿಲ್ 25ರವರೆಗೆ…

2 days ago

ವಿದ್ಯುತ್ ದರ ಶಾಕ್..! ಸಣ್ಣ ಕೈಗಾರಿಕೆಗಳಿಗೆ ಭಾರೀ ಹೊರೆ – ಉಮಾ ರೆಡ್ಡಿ ಎಚ್ಚರಿಕೆ

ವಿದ್ಯುತ್ ದರ ಏರಿಕೆ ಮತ್ತು ಹಿಂಬದಿ ಬಿಲ್ಲಿಂಗ್ ಕ್ರಮದಿಂದ ಸಣ್ಣ ಮತ್ತು ಮಧ್ಯಮ…

2 days ago

ಮುಳಬಾಗಿಲಿನಲ್ಲಿ ಹೋಟೆಲ್ ಮೇಲೆ ದಾಳಿ : 30 ಲೀಟರ್ ಹಳೆಯ ತುಪ್ಪ ಜಪ್ತಿ, ದಂಡ

ಮುಳಬಾಗಿಲಿನ ಹೋಟೆಲ್ ಮೇಲೆ ದಾಳಿ ನಡೆಸಿ 30 ಲೀಟರ್ ಅವಧಿ ಮೀರಿದ ತುಪ್ಪ…

2 days ago

ರೈತರಿಗೆ ಗುಡ್ ನ್ಯೂಸ್..! ತೊಗರಿ ಖರೀದಿ ಅವಧಿ ಮೇ 15ರವರೆಗೆ ವಿಸ್ತರಣೆ

ತೊಗರಿ ಬೆಳೆಗಾರರ ಹಿತಕ್ಕಾಗಿ ಖರೀದಿ ಅವಧಿಯನ್ನು ಮೇ 15ರವರೆಗೆ ವಿಸ್ತರಿಸಲಾಗಿದೆ. ಇದರಿಂದ ರೈತರಿಗೆ…

2 days ago

ವಿಜಯಪುರದಲ್ಲಿ ತಾಪಮಾನ ಹೆಚ್ಚಳ : ಜಿಲ್ಲಾಸ್ಪತ್ರೆಯಲ್ಲಿ 10 ಬೆಡ್ AC ವಾರ್ಡ್ ಸಿದ್ಧ

ವಿಜಯಪುರದಲ್ಲಿ ಬಿಸಿಲಿನ ತೀವ್ರತೆ ಹೆಚ್ಚಳ ಹಿನ್ನೆಲೆ ಜಿಲ್ಲಾಸ್ಪತ್ರೆಯಲ್ಲಿ 10 ಬೆಡ್ ವಿಶೇಷ ವಾರ್ಡ್…

2 days ago