MIRROR FOCUS

ತಮಿಳುನಾಡಿನಿಂದ ಮತ್ತೆ ‘ಕಾವೇರಿ’ ಕಾಟ : ನಿತ್ಯ 1 ಟಿಎಂಸಿ ನೀರು ಹರಿಸಿ : ಕಾವೇರಿ ನೀರು ನಿಯಂತ್ರಣಾ ಸಮಿತಿ ಸೂಚನೆ

Share

ಇತ್ತ ಮಳೆ(Rain) ಬಂದು ಇನ್ನೇನು KRS ಅಣೆಕಟ್ಟು(KRS Dam) ಭರ್ತಿಯಾಗಿ, ರೈತರ(Farmers) ಅನುಕೂಲಕ್ಕಾಗಿ ನಾಲೆಗೆ(Cannel) ನೀರು ಬಿಡಬೇಕು ಅನ್ನುವಾಗಲೇ ಶತ್ರುಗಳಂತೆ ಕಾಡಲು ಆರಂಭಿಸಿದೆ ತಮಿಳುನಾಡು(Tamilnadu). ನಮ್ಮ ರೈತರಿಗೆ ದಕ್ಕಿದ ಪಾಲನ್ನು ಎಂದೂ ಈ ತಮಿಳುನಾಡು ಅನುಭವಿಸಲು ಬಿಡುವುದಿಲ್ಲ. ಅದಕ್ಕೆ ತಕ್ಕಂತೆ ನಮ್ಮ ಸರ್ಕಾರವೂ ನಮ್ಮ ರೈತರ ಹಿತ ನೋಡದೇ ಪಕ್ಕದ ರಾಜ್ಯದ ಹಿತದೃಷ್ಟಿಯನ್ನೇ ಕಾಪಾಡುತ್ತಿದೆ. ತಮಿಳುನಾಡಿಗೆ ಪ್ರತಿನಿತ್ಯ 1 ಟಿಎಂಸಿ ನೀರು ಹರಿಸುವಂತೆ ಕರ್ನಾಟಕಕ್ಕೆ (Karnataka) ಕಾವೇರಿ ನೀರು ನಿಯಂತ್ರಣಾ ಸಮಿತಿ(CWRC) ಸೂಚನೆ ನೀಡಿದೆ. ಗುರುವಾರ ನಡೆದ ಕಾವೇರಿ ನೀರು ನಿಯಂತ್ರಣ ಸಮಿತಿ ಸಭೆಯಲ್ಲಿ ತಮಿಳುನಾಡಿಗೆ ನೀರು ಹರಿಸುವಂತೆ ಶಿಫಾರಸು ಮಾಡಿದೆ. ಜುಲೈ 12 ರಿಂದ 31ರ ವರೆಗೆ ಪ್ರತಿನಿತ್ಯ 1 ಟಿಎಂಸಿ ಹರಿಸವಂತೆ ಶಿಫಾರಸು ಮಾಡಲಾಗಿದೆ.

 

Advertisement

 

ಕರ್ನಾಟಕದ ಡ್ಯಾಂಗಳಲ್ಲಿ ಒಳಹರಿವು 41 ಟಿಎಂಸಿ ಇದೆ. ಜೂ.1 ರಿಂದ ಇಲ್ಲಿಯವರಗೆ 41 ಟಿಎಂಸಿ ನೀರು ಸೇರಿದೆ. ಈ ಮಾನ್ಸೂನ್ ಸಾಮಾನ್ಯವಾಗಿಲ್ಲ, 28% ಮಳೆ ಕೊರತೆಯಾಗಿದೆ. ಕಾವೇರಿ ಕೊಳ್ಳದ ನಾಲ್ಕು ಜಲಾಶಯಗಳಲ್ಲಿ ಒಟ್ಟು 58 ಟಿಎಂಸಿ ನೀರಿದೆ. ತಮಿಳುನಾಡಿನ ಮೂರು ಜಲಾಶಯಗಳಲ್ಲಿ 24.705 ಟಿಎಂಸಿ ಸಂಗ್ರಹವಿದೆ. ಸಧ್ಯಕ್ಕೆ ನೀರು ಬಿಡುವ ಬಗ್ಗೆ ಯಾವುದೇ ಶಿಫಾರಸು ಮಾಡಬೇಡಿ. ಜು.25 ರ ವರೆಗೆ ಮಳೆಯ ಪ್ರಮಾಣ ನೋಡಿಕೊಂಡು ಶಿಫಾರಸು ಮಾಡಿ. ಈಗಲೇ ನೀರು ಬಿಡುವಂತೆ ಶಿಫಾರಸು ಮಾಡಬೇಡಿ ಎಂದು CWRC ಸಭೆಯಲ್ಲಿ ಕರ್ನಾಟಕ ಮನವಿ ಮಾಡಿತು.

ಕಳೆದ ಜಲವರ್ಷದಲ್ಲಿ ಕರ್ನಾಟಕ ನೀರು ಸರಿಯಾಗಿ ಹರಿಸಿಲ್ಲ. ಪ್ರಸಕ್ತ ಜಲವರ್ಷದಲ್ಲಿ ಮನ್ಸೂನ್ ಸಾಮಾನ್ಯವಾಗಿದೆ. ಕಾವೇರಿ ಕೊಳ್ಳದ ಡ್ಯಾಂಗಳಲ್ಲಿ ಸಾಕಷ್ಟು ನೀರು ಸಂಗ್ರಹವಾಗಿದೆ. ನೀರು ಬಿಡುವಂತೆ ಶಿಫಾರಸು ಮಾಡಬೇಕು ಎಂದು ತಮಿಳುನಾಡು ಮನವಿ ಮಾಡಿತು.  ಎರಡು ರಾಜ್ಯಗಳ ವಾದ ಆಲಿಸಿದ CWRC, ನೀರು ಹರಿಸುವಂತೆ ಶಿಫಾರಸು ಮಾಡಿದೆ. ಪ್ರತಿನಿತ್ಯ 1 ಟಿಎಂಸಿ ನೀರು ಹರಿಸುವಂತೆ ಕರ್ನಾಟಕಕ್ಕೆ ಸೂಚನೆ ನೀಡಿದೆ. ಬಿಳಿಗುಂಡ್ಳುವಿನಲ್ಲಿ ಪ್ರತಿನಿತ್ಯ 1 ಟಿಎಂಸಿ ನೀರಿನ ಹರಿವು ದಾಖಲಿಸುವಂತೆ ಸೂಚಿಸಿದೆ.

  • ಅಂತರ್ಜಾಲ ಮಾಹಿತಿ

 

Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಪರಿಸರಕ್ಕೆ ಕೊಡುಗೆಯಾಗಬಹುದು ಅಡಿಕೆ ಮರ | ಅಡಿಕೆ ಮರಕ್ಕೆ ಮೌಲ್ಯ ತರಲು ಒಂದು ದಾರಿ | ಒಂದು ಮರಕ್ಕೆ ಕನಿಷ್ಟ 700 ರೂಪಾಯಿ ಪಡೆಯಬಹುದು ಹೇಗೆ ?

ಪರಿಸರ ಪ್ರೇಮಿಗಳಿಗೆ, ನಗರದಲ್ಲಿ ಹೂವು, ಸಣ್ಣ ಸಣ್ಣ ಗಿಡ ಬೆಳೆಸುವವರಿಗೆ ಹೂಕುಂಡವಾಗಿ ಅಡಿಕೆಯ…

2 hours ago

2026 ರ ವೇಳೆಗೆ ತುಮಕೂರಿಗೆ ಎತ್ತಿನಹೊಳೆ ನೀರು

2026 ಜೂನ್ ವೇಳೆಗೆ ಎತ್ತಿನಹೊಳೆ ನೀರು ತುಮಕೂರು ತಲುಪಲಿದೆ ಎಂದು ಗೃಹ ಸಚಿವ…

2 hours ago

ಕರಾವಳಿ ಸೇರಿದಂತೆ ರಾಜ್ಯದ ಹಲವೆಡೆ ಗುಡುಗು ಸಹಿತ ಮಳೆ ಸಂಭವ | ಹವಾಮಾನ ಇಲಾಖೆ ಮುನ್ಸೂಚನೆ

ರಾಜ್ಯದ ಕರಾವಳಿ ಹಾಗೂ ಒಳನಾಡಿನ ಒಂದೆರೆಡು ಕಡೆ ಮಳೆಯಾಗಿದೆ. ಉತ್ತರ ಕನ್ನಡ, ಉಡುಪಿ,…

3 hours ago

ಹಾವೇರಿ ಜಿಲ್ಲೆಯಲ್ಲಿ ಬಾಡಿಗೆ ಕೊಳವೆಬಾವಿಗಳಿಂದ ನೀರು ಪೂರೈಕೆ

ಹಾವೇರಿ ಜಿಲ್ಲೆಯಲ್ಲಿರುವ 17 ಗ್ರಾಮ ಪಂಚಾಯಿತಿ ವ್ಯಾಪ್ತಿಯ 18 ಗ್ರಾಮಗಳಿಗೆ 21 ಬಾಡಿಗೆ…

3 hours ago

ಶುಕ್ರ ನೇರ ಸಂಚಾರದ ಪರಿಣಾಮ : ಕೆಲ ರಾಶಿಗಳ ಮೇಲೆ ಪ್ರಭಾವ

ಹೆಚ್ಚಿನ ಮಾಹಿತಿಗಾಗಿ ರಾಯರ ಪರಮ ಭಕ್ತರದ ಜ್ಯೋತಿಷಿಗಳನ್ನು ಸಂಪರ್ಕಿಸಿ 9535156490

4 hours ago

ಹವಾಮಾನ ವರದಿ | 10-04-2025 | ಎ.18 ರ ತನಕವೂ ಕರಾವಳಿ ಭಾಗಗಳಲ್ಲಿ ಅಲ್ಲಲ್ಲಿ ಮಳೆ

11.04.2025ರ ಬೆಳಿಗ್ಗೆ 8 ಗಂಟೆವರೆಗಿನ ಕರ್ನಾಟಕದ ಹವಾಮಾನ ಮುನ್ಸೂಚನೆ : ಕರಾವಳಿ :…

18 hours ago