Advertisement
MIRROR FOCUS

ತಮಿಳುನಾಡಿನಿಂದ ಮತ್ತೆ ‘ಕಾವೇರಿ’ ಕಾಟ : ನಿತ್ಯ 1 ಟಿಎಂಸಿ ನೀರು ಹರಿಸಿ : ಕಾವೇರಿ ನೀರು ನಿಯಂತ್ರಣಾ ಸಮಿತಿ ಸೂಚನೆ

Share

ಇತ್ತ ಮಳೆ(Rain) ಬಂದು ಇನ್ನೇನು KRS ಅಣೆಕಟ್ಟು(KRS Dam) ಭರ್ತಿಯಾಗಿ, ರೈತರ(Farmers) ಅನುಕೂಲಕ್ಕಾಗಿ ನಾಲೆಗೆ(Cannel) ನೀರು ಬಿಡಬೇಕು ಅನ್ನುವಾಗಲೇ ಶತ್ರುಗಳಂತೆ ಕಾಡಲು ಆರಂಭಿಸಿದೆ ತಮಿಳುನಾಡು(Tamilnadu). ನಮ್ಮ ರೈತರಿಗೆ ದಕ್ಕಿದ ಪಾಲನ್ನು ಎಂದೂ ಈ ತಮಿಳುನಾಡು ಅನುಭವಿಸಲು ಬಿಡುವುದಿಲ್ಲ. ಅದಕ್ಕೆ ತಕ್ಕಂತೆ ನಮ್ಮ ಸರ್ಕಾರವೂ ನಮ್ಮ ರೈತರ ಹಿತ ನೋಡದೇ ಪಕ್ಕದ ರಾಜ್ಯದ ಹಿತದೃಷ್ಟಿಯನ್ನೇ ಕಾಪಾಡುತ್ತಿದೆ. ತಮಿಳುನಾಡಿಗೆ ಪ್ರತಿನಿತ್ಯ 1 ಟಿಎಂಸಿ ನೀರು ಹರಿಸುವಂತೆ ಕರ್ನಾಟಕಕ್ಕೆ (Karnataka) ಕಾವೇರಿ ನೀರು ನಿಯಂತ್ರಣಾ ಸಮಿತಿ(CWRC) ಸೂಚನೆ ನೀಡಿದೆ. ಗುರುವಾರ ನಡೆದ ಕಾವೇರಿ ನೀರು ನಿಯಂತ್ರಣ ಸಮಿತಿ ಸಭೆಯಲ್ಲಿ ತಮಿಳುನಾಡಿಗೆ ನೀರು ಹರಿಸುವಂತೆ ಶಿಫಾರಸು ಮಾಡಿದೆ. ಜುಲೈ 12 ರಿಂದ 31ರ ವರೆಗೆ ಪ್ರತಿನಿತ್ಯ 1 ಟಿಎಂಸಿ ಹರಿಸವಂತೆ ಶಿಫಾರಸು ಮಾಡಲಾಗಿದೆ.

 

 

ಕರ್ನಾಟಕದ ಡ್ಯಾಂಗಳಲ್ಲಿ ಒಳಹರಿವು 41 ಟಿಎಂಸಿ ಇದೆ. ಜೂ.1 ರಿಂದ ಇಲ್ಲಿಯವರಗೆ 41 ಟಿಎಂಸಿ ನೀರು ಸೇರಿದೆ. ಈ ಮಾನ್ಸೂನ್ ಸಾಮಾನ್ಯವಾಗಿಲ್ಲ, 28% ಮಳೆ ಕೊರತೆಯಾಗಿದೆ. ಕಾವೇರಿ ಕೊಳ್ಳದ ನಾಲ್ಕು ಜಲಾಶಯಗಳಲ್ಲಿ ಒಟ್ಟು 58 ಟಿಎಂಸಿ ನೀರಿದೆ. ತಮಿಳುನಾಡಿನ ಮೂರು ಜಲಾಶಯಗಳಲ್ಲಿ 24.705 ಟಿಎಂಸಿ ಸಂಗ್ರಹವಿದೆ. ಸಧ್ಯಕ್ಕೆ ನೀರು ಬಿಡುವ ಬಗ್ಗೆ ಯಾವುದೇ ಶಿಫಾರಸು ಮಾಡಬೇಡಿ. ಜು.25 ರ ವರೆಗೆ ಮಳೆಯ ಪ್ರಮಾಣ ನೋಡಿಕೊಂಡು ಶಿಫಾರಸು ಮಾಡಿ. ಈಗಲೇ ನೀರು ಬಿಡುವಂತೆ ಶಿಫಾರಸು ಮಾಡಬೇಡಿ ಎಂದು CWRC ಸಭೆಯಲ್ಲಿ ಕರ್ನಾಟಕ ಮನವಿ ಮಾಡಿತು.

ಕಳೆದ ಜಲವರ್ಷದಲ್ಲಿ ಕರ್ನಾಟಕ ನೀರು ಸರಿಯಾಗಿ ಹರಿಸಿಲ್ಲ. ಪ್ರಸಕ್ತ ಜಲವರ್ಷದಲ್ಲಿ ಮನ್ಸೂನ್ ಸಾಮಾನ್ಯವಾಗಿದೆ. ಕಾವೇರಿ ಕೊಳ್ಳದ ಡ್ಯಾಂಗಳಲ್ಲಿ ಸಾಕಷ್ಟು ನೀರು ಸಂಗ್ರಹವಾಗಿದೆ. ನೀರು ಬಿಡುವಂತೆ ಶಿಫಾರಸು ಮಾಡಬೇಕು ಎಂದು ತಮಿಳುನಾಡು ಮನವಿ ಮಾಡಿತು.  ಎರಡು ರಾಜ್ಯಗಳ ವಾದ ಆಲಿಸಿದ CWRC, ನೀರು ಹರಿಸುವಂತೆ ಶಿಫಾರಸು ಮಾಡಿದೆ. ಪ್ರತಿನಿತ್ಯ 1 ಟಿಎಂಸಿ ನೀರು ಹರಿಸುವಂತೆ ಕರ್ನಾಟಕಕ್ಕೆ ಸೂಚನೆ ನೀಡಿದೆ. ಬಿಳಿಗುಂಡ್ಳುವಿನಲ್ಲಿ ಪ್ರತಿನಿತ್ಯ 1 ಟಿಎಂಸಿ ನೀರಿನ ಹರಿವು ದಾಖಲಿಸುವಂತೆ ಸೂಚಿಸಿದೆ.

  • ಅಂತರ್ಜಾಲ ಮಾಹಿತಿ

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಹವಾಮಾನ ವರದಿ | 05-04-2026 | ರಾಜ್ಯದಲ್ಲಿ ಮಳೆ ಕಡಿಮೆಯ ಸೂಚನೆ – ಕರಾವಳಿ-ಮಲೆನಾಡಿನಲ್ಲಿ ತುಂತುರು ಮಳೆ, ರಾಜ್ಯಾದ್ಯಂತ ಬಿಸಿಲು ಏರಿಕೆ..!

ಕರ್ನಾಟಕದಲ್ಲಿ ಏಪ್ರಿಲ್ 6ರಿಂದ ಮಳೆ ಕಡಿಮೆಯಾಗಲಿದೆ. ರಾಜ್ಯಾದ್ಯಂತ ಬಿಸಿಲು ಮತ್ತು ತಾಪಮಾನ ಏರಿಕೆ…

11 hours ago

ಮಕ್ಕಳ ಆಟದ ಹಿಂದೆ ಅಡಗಿರುವ ಅಪಾಯ ಗೊತ್ತಾ? ಬೇಸಿಗೆ ರಜೆಯಲ್ಲಿ ಮಕ್ಕಳ ಸುರಕ್ಷತೆ ಬಗ್ಗೆ ಇರಲಿ ಎಚ್ಚರಿಕೆ

ಬೇಸಿಗೆ ರಜೆಯಲ್ಲಿ ಮಕ್ಕಳ ಸುರಕ್ಷತೆ ಬಗ್ಗೆ ಪೋಷಕರಿಗೆ ತುಮಕೂರು ಪೊಲೀಸ್ ಎಚ್ಚರಿಕೆ ನೀಡಿದೆ.…

2 days ago

ಹವಾಮಾನ ವರದಿ | 03-04-2026 | ಕರ್ನಾಟಕದಲ್ಲಿ ಗುಡುಗು-ಮಳೆಯ ಸರಣಿ | ಎ.5 ರಿಂದ ವಿರಾಮ, 10 ರಿಂದ ಮಳೆ ವಾಪಸ್..!

ಕರ್ನಾಟಕದಲ್ಲಿ ಏಪ್ರಿಲ್ 5ರವರೆಗೆ ಗುಡುಗು ಸಹಿತ ಮಳೆಯ ಚಟುವಟಿಕೆ ಮುಂದುವರಿಯಲಿದೆ. ಏಪ್ರಿಲ್ 10ರಿಂದ…

2 days ago

ರೈತರ ಮಕ್ಕಳಿಗೆ 10 ತಿಂಗಳ ತೋಟಗಾರಿಕಾ ತರಬೇತಿ – ಅರ್ಜಿ ಆಹ್ವಾನ

ರೈತರ ಮಕ್ಕಳಿಗೆ 10 ತಿಂಗಳ ತೋಟಗಾರಿಕೆ ತರಬೇತಿಗೆ ಅರ್ಜಿ ಆಹ್ವಾನಿಸಲಾಗಿದೆ. ದಕ್ಷಿಣ ಕನ್ನಡ…

2 days ago

ಅಡಿಕೆ ಮಾರುಕಟ್ಟೆ ಜಿಗಿತ | ಮಂಗಳೂರು ಹೊಸ ಚಾಲಿ ₹500 ದಾಟಿತು – ಏಪ್ರಿಲ್‌ನಲ್ಲಿ ಮತ್ತಷ್ಟು ಏರಿಕೆ ಸೂಚನೆ!

ಮಂಗಳೂರು ಅಡಿಕೆ ಮಾರುಕಟ್ಟೆಯಲ್ಲಿ ಹೊಸ ಅಡಿಕೆ ₹500 ಮತ್ತು ಹಳೆ ಅಡಿಕೆ ₹555…

3 days ago