Advertisement
MIRROR FOCUS

ತಮಿಳುನಾಡಿನಿಂದ ಮತ್ತೆ ‘ಕಾವೇರಿ’ ಕಾಟ : ನಿತ್ಯ 1 ಟಿಎಂಸಿ ನೀರು ಹರಿಸಿ : ಕಾವೇರಿ ನೀರು ನಿಯಂತ್ರಣಾ ಸಮಿತಿ ಸೂಚನೆ

Share

ಇತ್ತ ಮಳೆ(Rain) ಬಂದು ಇನ್ನೇನು KRS ಅಣೆಕಟ್ಟು(KRS Dam) ಭರ್ತಿಯಾಗಿ, ರೈತರ(Farmers) ಅನುಕೂಲಕ್ಕಾಗಿ ನಾಲೆಗೆ(Cannel) ನೀರು ಬಿಡಬೇಕು ಅನ್ನುವಾಗಲೇ ಶತ್ರುಗಳಂತೆ ಕಾಡಲು ಆರಂಭಿಸಿದೆ ತಮಿಳುನಾಡು(Tamilnadu). ನಮ್ಮ ರೈತರಿಗೆ ದಕ್ಕಿದ ಪಾಲನ್ನು ಎಂದೂ ಈ ತಮಿಳುನಾಡು ಅನುಭವಿಸಲು ಬಿಡುವುದಿಲ್ಲ. ಅದಕ್ಕೆ ತಕ್ಕಂತೆ ನಮ್ಮ ಸರ್ಕಾರವೂ ನಮ್ಮ ರೈತರ ಹಿತ ನೋಡದೇ ಪಕ್ಕದ ರಾಜ್ಯದ ಹಿತದೃಷ್ಟಿಯನ್ನೇ ಕಾಪಾಡುತ್ತಿದೆ. ತಮಿಳುನಾಡಿಗೆ ಪ್ರತಿನಿತ್ಯ 1 ಟಿಎಂಸಿ ನೀರು ಹರಿಸುವಂತೆ ಕರ್ನಾಟಕಕ್ಕೆ (Karnataka) ಕಾವೇರಿ ನೀರು ನಿಯಂತ್ರಣಾ ಸಮಿತಿ(CWRC) ಸೂಚನೆ ನೀಡಿದೆ. ಗುರುವಾರ ನಡೆದ ಕಾವೇರಿ ನೀರು ನಿಯಂತ್ರಣ ಸಮಿತಿ ಸಭೆಯಲ್ಲಿ ತಮಿಳುನಾಡಿಗೆ ನೀರು ಹರಿಸುವಂತೆ ಶಿಫಾರಸು ಮಾಡಿದೆ. ಜುಲೈ 12 ರಿಂದ 31ರ ವರೆಗೆ ಪ್ರತಿನಿತ್ಯ 1 ಟಿಎಂಸಿ ಹರಿಸವಂತೆ ಶಿಫಾರಸು ಮಾಡಲಾಗಿದೆ.

 

 

ಕರ್ನಾಟಕದ ಡ್ಯಾಂಗಳಲ್ಲಿ ಒಳಹರಿವು 41 ಟಿಎಂಸಿ ಇದೆ. ಜೂ.1 ರಿಂದ ಇಲ್ಲಿಯವರಗೆ 41 ಟಿಎಂಸಿ ನೀರು ಸೇರಿದೆ. ಈ ಮಾನ್ಸೂನ್ ಸಾಮಾನ್ಯವಾಗಿಲ್ಲ, 28% ಮಳೆ ಕೊರತೆಯಾಗಿದೆ. ಕಾವೇರಿ ಕೊಳ್ಳದ ನಾಲ್ಕು ಜಲಾಶಯಗಳಲ್ಲಿ ಒಟ್ಟು 58 ಟಿಎಂಸಿ ನೀರಿದೆ. ತಮಿಳುನಾಡಿನ ಮೂರು ಜಲಾಶಯಗಳಲ್ಲಿ 24.705 ಟಿಎಂಸಿ ಸಂಗ್ರಹವಿದೆ. ಸಧ್ಯಕ್ಕೆ ನೀರು ಬಿಡುವ ಬಗ್ಗೆ ಯಾವುದೇ ಶಿಫಾರಸು ಮಾಡಬೇಡಿ. ಜು.25 ರ ವರೆಗೆ ಮಳೆಯ ಪ್ರಮಾಣ ನೋಡಿಕೊಂಡು ಶಿಫಾರಸು ಮಾಡಿ. ಈಗಲೇ ನೀರು ಬಿಡುವಂತೆ ಶಿಫಾರಸು ಮಾಡಬೇಡಿ ಎಂದು CWRC ಸಭೆಯಲ್ಲಿ ಕರ್ನಾಟಕ ಮನವಿ ಮಾಡಿತು.

ಕಳೆದ ಜಲವರ್ಷದಲ್ಲಿ ಕರ್ನಾಟಕ ನೀರು ಸರಿಯಾಗಿ ಹರಿಸಿಲ್ಲ. ಪ್ರಸಕ್ತ ಜಲವರ್ಷದಲ್ಲಿ ಮನ್ಸೂನ್ ಸಾಮಾನ್ಯವಾಗಿದೆ. ಕಾವೇರಿ ಕೊಳ್ಳದ ಡ್ಯಾಂಗಳಲ್ಲಿ ಸಾಕಷ್ಟು ನೀರು ಸಂಗ್ರಹವಾಗಿದೆ. ನೀರು ಬಿಡುವಂತೆ ಶಿಫಾರಸು ಮಾಡಬೇಕು ಎಂದು ತಮಿಳುನಾಡು ಮನವಿ ಮಾಡಿತು.  ಎರಡು ರಾಜ್ಯಗಳ ವಾದ ಆಲಿಸಿದ CWRC, ನೀರು ಹರಿಸುವಂತೆ ಶಿಫಾರಸು ಮಾಡಿದೆ. ಪ್ರತಿನಿತ್ಯ 1 ಟಿಎಂಸಿ ನೀರು ಹರಿಸುವಂತೆ ಕರ್ನಾಟಕಕ್ಕೆ ಸೂಚನೆ ನೀಡಿದೆ. ಬಿಳಿಗುಂಡ್ಳುವಿನಲ್ಲಿ ಪ್ರತಿನಿತ್ಯ 1 ಟಿಎಂಸಿ ನೀರಿನ ಹರಿವು ದಾಖಲಿಸುವಂತೆ ಸೂಚಿಸಿದೆ.

  • ಅಂತರ್ಜಾಲ ಮಾಹಿತಿ

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಹೆಸರಘಟ್ಟ ಹಕ್ಕಿಜ್ವರ ನಿಯಂತ್ರಣದಲ್ಲಿ | ಜನರಿಗೆ ಯಾವುದೇ ಆತಂಕ ಬೇಡ ಎಂದ ಆರೋಗ್ಯ ಇಲಾಖೆ

ಹೆಸರಘಟ್ಟದಲ್ಲಿ ಕಂಡುಬಂದ ಹಕ್ಕಿಜ್ವರವನ್ನು ಆರೋಗ್ಯ ಇಲಾಖೆ ಸಂಪೂರ್ಣ ನಿಯಂತ್ರಣಕ್ಕೆ ತಂದಿದೆ. ಮಾನವ ಸೋಂಕಿನ…

5 hours ago

ಬಿಸಿಲಿನ ಬೇಗೆಯಲ್ಲಿ ಕಾಡಿಗೆ ಜೀವಜಲ..! ವನ್ಯಜೀವಿಗಳಿಗಾಗಿ ಕೃತಕ ನೀರಿನ ತೊಟ್ಟಿಗಳ ಮಹಾಯೋಜನೆ

ಬೇಸಿಗೆಯಲ್ಲಿ ವನ್ಯಜೀವಿಗಳಿಗೆ ನೀರಿನ ಕೊರತೆಯನ್ನು ತಡೆಯಲು ಅರಣ್ಯ ಇಲಾಖೆ ಕೃತಕ ನೀರಿನ ತೊಟ್ಟಿಗಳನ್ನು…

5 hours ago

ಹವಾಮಾನ ವರದಿ | 26-04-2026 | ಸದ್ಯ ಸೆಖೆಯ ಉಗ್ರ ರೂಪ…! ಏಪ್ರಿಲ್ 28 ರಿಂದ ರಾಜ್ಯಾದ್ಯಂತ ಮಳೆ ಸಾಧ್ಯತೆ

ರಾಜ್ಯದಲ್ಲಿ ಭಾರಿ ಬಿಸಿಲು ಮುಂದುವರಿದಿದ್ದು, ಕೆಲವೆಡೆ ಗುಡುಗು ಸಹಿತ ಮಳೆಯ ಲಕ್ಷಣಗಳಿವೆ. ಏಪ್ರಿಲ್…

1 day ago

ಅಡಿಕೆ ಎಲೆಚುಕ್ಕೆರೋಗ – ಸಿಪಿಸಿಆರ್‌ಐ ನೇತೃತ್ವದಲ್ಲಿ ಸುಳ್ಯದ ಗುತ್ತಿಗಾರಿನಲ್ಲಿ ಸಂವಾದ

ಅಡಿಕೆ ಎಲೆಚುಕ್ಕೆ ರೋಗ ನಿಯಂತ್ರಣಕ್ಕೆ ಸಮೂಹ ಕ್ರಮಗಳು ಫಲ ನೀಡುತ್ತಿವೆ. ಗುತ್ತಿಗಾರಿನಲ್ಲಿ ಸಂವಾದ…

1 day ago

2026 ಎಲ್ ನಿನೊ ಎಚ್ಚರಿಕೆ..! ಭಾರತ ಸೇರಿ ಏಷ್ಯಾದಲ್ಲಿ ಬರ-ಬಿಸಿಲಿನ ಡಬಲ್ ಶಾಕ್

2026ರಲ್ಲಿ ಎಲ್ ನಿನೊ ಪರಿಣಾಮದಿಂದ ಭಾರತ ಸೇರಿ ಏಷ್ಯಾದಲ್ಲಿ ಕಡಿಮೆ ಮಳೆ ಮತ್ತು…

2 days ago

ಭಾರೀ ಬಿಸಿ ಹೊಡೆತ..! ಜಗತ್ತಿನ 1 ಬಿಲಿಯನ್ ಜನರ ಬದುಕಿಗೆ ಬಿಸಿ ಹೊಡೆತ

ಹೆಚ್ಚುತ್ತಿರುವ ಉಷ್ಣತೆ ಕೃಷಿ, ಜಾನುವಾರು ಮತ್ತು ಕಾರ್ಮಿಕರ ಮೇಲೆ ತೀವ್ರ ಪರಿಣಾಮ ಬೀರುತ್ತಿದ್ದು,…

2 days ago