Advertisement
MIRROR FOCUS

ತಮಿಳುನಾಡಿನಿಂದ ಮತ್ತೆ ‘ಕಾವೇರಿ’ ಕಾಟ : ನಿತ್ಯ 1 ಟಿಎಂಸಿ ನೀರು ಹರಿಸಿ : ಕಾವೇರಿ ನೀರು ನಿಯಂತ್ರಣಾ ಸಮಿತಿ ಸೂಚನೆ

Share

ಇತ್ತ ಮಳೆ(Rain) ಬಂದು ಇನ್ನೇನು KRS ಅಣೆಕಟ್ಟು(KRS Dam) ಭರ್ತಿಯಾಗಿ, ರೈತರ(Farmers) ಅನುಕೂಲಕ್ಕಾಗಿ ನಾಲೆಗೆ(Cannel) ನೀರು ಬಿಡಬೇಕು ಅನ್ನುವಾಗಲೇ ಶತ್ರುಗಳಂತೆ ಕಾಡಲು ಆರಂಭಿಸಿದೆ ತಮಿಳುನಾಡು(Tamilnadu). ನಮ್ಮ ರೈತರಿಗೆ ದಕ್ಕಿದ ಪಾಲನ್ನು ಎಂದೂ ಈ ತಮಿಳುನಾಡು ಅನುಭವಿಸಲು ಬಿಡುವುದಿಲ್ಲ. ಅದಕ್ಕೆ ತಕ್ಕಂತೆ ನಮ್ಮ ಸರ್ಕಾರವೂ ನಮ್ಮ ರೈತರ ಹಿತ ನೋಡದೇ ಪಕ್ಕದ ರಾಜ್ಯದ ಹಿತದೃಷ್ಟಿಯನ್ನೇ ಕಾಪಾಡುತ್ತಿದೆ. ತಮಿಳುನಾಡಿಗೆ ಪ್ರತಿನಿತ್ಯ 1 ಟಿಎಂಸಿ ನೀರು ಹರಿಸುವಂತೆ ಕರ್ನಾಟಕಕ್ಕೆ (Karnataka) ಕಾವೇರಿ ನೀರು ನಿಯಂತ್ರಣಾ ಸಮಿತಿ(CWRC) ಸೂಚನೆ ನೀಡಿದೆ. ಗುರುವಾರ ನಡೆದ ಕಾವೇರಿ ನೀರು ನಿಯಂತ್ರಣ ಸಮಿತಿ ಸಭೆಯಲ್ಲಿ ತಮಿಳುನಾಡಿಗೆ ನೀರು ಹರಿಸುವಂತೆ ಶಿಫಾರಸು ಮಾಡಿದೆ. ಜುಲೈ 12 ರಿಂದ 31ರ ವರೆಗೆ ಪ್ರತಿನಿತ್ಯ 1 ಟಿಎಂಸಿ ಹರಿಸವಂತೆ ಶಿಫಾರಸು ಮಾಡಲಾಗಿದೆ.

 

 

ಕರ್ನಾಟಕದ ಡ್ಯಾಂಗಳಲ್ಲಿ ಒಳಹರಿವು 41 ಟಿಎಂಸಿ ಇದೆ. ಜೂ.1 ರಿಂದ ಇಲ್ಲಿಯವರಗೆ 41 ಟಿಎಂಸಿ ನೀರು ಸೇರಿದೆ. ಈ ಮಾನ್ಸೂನ್ ಸಾಮಾನ್ಯವಾಗಿಲ್ಲ, 28% ಮಳೆ ಕೊರತೆಯಾಗಿದೆ. ಕಾವೇರಿ ಕೊಳ್ಳದ ನಾಲ್ಕು ಜಲಾಶಯಗಳಲ್ಲಿ ಒಟ್ಟು 58 ಟಿಎಂಸಿ ನೀರಿದೆ. ತಮಿಳುನಾಡಿನ ಮೂರು ಜಲಾಶಯಗಳಲ್ಲಿ 24.705 ಟಿಎಂಸಿ ಸಂಗ್ರಹವಿದೆ. ಸಧ್ಯಕ್ಕೆ ನೀರು ಬಿಡುವ ಬಗ್ಗೆ ಯಾವುದೇ ಶಿಫಾರಸು ಮಾಡಬೇಡಿ. ಜು.25 ರ ವರೆಗೆ ಮಳೆಯ ಪ್ರಮಾಣ ನೋಡಿಕೊಂಡು ಶಿಫಾರಸು ಮಾಡಿ. ಈಗಲೇ ನೀರು ಬಿಡುವಂತೆ ಶಿಫಾರಸು ಮಾಡಬೇಡಿ ಎಂದು CWRC ಸಭೆಯಲ್ಲಿ ಕರ್ನಾಟಕ ಮನವಿ ಮಾಡಿತು.

ಕಳೆದ ಜಲವರ್ಷದಲ್ಲಿ ಕರ್ನಾಟಕ ನೀರು ಸರಿಯಾಗಿ ಹರಿಸಿಲ್ಲ. ಪ್ರಸಕ್ತ ಜಲವರ್ಷದಲ್ಲಿ ಮನ್ಸೂನ್ ಸಾಮಾನ್ಯವಾಗಿದೆ. ಕಾವೇರಿ ಕೊಳ್ಳದ ಡ್ಯಾಂಗಳಲ್ಲಿ ಸಾಕಷ್ಟು ನೀರು ಸಂಗ್ರಹವಾಗಿದೆ. ನೀರು ಬಿಡುವಂತೆ ಶಿಫಾರಸು ಮಾಡಬೇಕು ಎಂದು ತಮಿಳುನಾಡು ಮನವಿ ಮಾಡಿತು.  ಎರಡು ರಾಜ್ಯಗಳ ವಾದ ಆಲಿಸಿದ CWRC, ನೀರು ಹರಿಸುವಂತೆ ಶಿಫಾರಸು ಮಾಡಿದೆ. ಪ್ರತಿನಿತ್ಯ 1 ಟಿಎಂಸಿ ನೀರು ಹರಿಸುವಂತೆ ಕರ್ನಾಟಕಕ್ಕೆ ಸೂಚನೆ ನೀಡಿದೆ. ಬಿಳಿಗುಂಡ್ಳುವಿನಲ್ಲಿ ಪ್ರತಿನಿತ್ಯ 1 ಟಿಎಂಸಿ ನೀರಿನ ಹರಿವು ದಾಖಲಿಸುವಂತೆ ಸೂಚಿಸಿದೆ.

  • ಅಂತರ್ಜಾಲ ಮಾಹಿತಿ

 

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ತೆಂಗು–ಅಡಿಕೆ ನಡುವೆ ಏಲಕ್ಕಿ, ಮೆಣಸು, ಅರಿಶಿಣ | ತುಮಕೂರಿನಲ್ಲೂ ಬೆಳೆಗಾರರು ಪರ್ಯಾಯ ಆದಾಯದ ಕಡೆಗೆ ಹೆಜ್ಜೆ

ತೆಂಗು–ಅಡಿಕೆ ತೋಟಗಳ ನಡುವೆ ಅರಿಶಿಣ, ಏಲಕ್ಕಿ, ಮೆಣಸು ಬೆಳೆದು ತುಮಕೂರು ಜಿಲ್ಲೆಯ ರೈತರು…

19 hours ago

ಮಳೆ ಕೊರತೆ ನೀಗಿಸಲು ಕರ್ನಾಟಕದಲ್ಲಿ ಮೋಡ ಬಿತ್ತನೆ

ಮುಂಗಾರು ಮಳೆಯ ಕೊರತೆ ಎದುರಿಸುತ್ತಿರುವ ರಾಜ್ಯದ ಹಲವು ಭಾಗಗಳಲ್ಲಿ ಮಳೆ ಹೆಚ್ಚಿಸಲು ಸರ್ಕಾರ…

20 hours ago

ಕಸ್ತೂರಿ ರಂಗನ್ ವರದಿ ಜಾರಿಗೆ ಅವಕಾಶವಿಲ್ಲ

ಕಸ್ತೂರಿ ರಂಗನ್ ವರದಿ ಜಾರಿಗೆ ಕರ್ನಾಟಕ ಸರ್ಕಾರ ಅವಕಾಶ ನೀಡುವುದಿಲ್ಲ ಎಂದು ಶಿಕ್ಷಣ…

20 hours ago

ಪ್ರತೀ ವರ್ಷ “ಕ್ಲೈಮೇಟ್ ರಿಪೋರ್ಟ್ ಕಾರ್ಡ್” ಏಕೆ ಬೇಕು..? ನಮ್ಮ ನಗರ-ಹಳ್ಳಿಗಳು ಹವಾಮಾನ ಬದಲಾವಣೆಗೆ ಎಷ್ಟು ಸಿದ್ಧ?

ಭಾರತದ 126 ಪ್ರಮುಖ ನಗರಗಳ ಹವಾಮಾನ ಸಿದ್ಧತೆಯನ್ನು ಅಳೆಯಲಾಗಿದ್ದರೂ, 2021ರ ಮೌಲ್ಯಮಾಪನದಲ್ಲಿ ರಾಷ್ಟ್ರೀಯ…

1 day ago

ಭಾರತದ ಕಾಫಿಗೆ ಜಾಗತಿಕ ಬೇಡಿಕೆ ಹೆಚ್ಚಳ : ‘ಇಂಡಿ ಕಾಫಿ’ಗೆ ಹೊಸ ಬ್ರ್ಯಾಂಡ್‌ ಒತ್ತು

ಭಾರತದ ಕಾಫಿ ರಫ್ತು ಗಳಿಕೆ 2021-22ರ ಸುಮಾರು 1 ಶತಕೋಟಿ ಡಾಲರ್‌ನಿಂದ 2025-26ರಲ್ಲಿ…

1 day ago

ಕಸವೆಂದು ಎಸೆಯುವ ಮೀನಿನ ಮುಳ್ಳು–ಹುರುಪೆಯಲ್ಲಿ ‘ಸಂಜೀವಿನಿ’!

ಮೀನಿನ ಮುಳ್ಳು ಮತ್ತು ಹುರುಪೆಯನ್ನು ವೈಜ್ಞಾನಿಕವಾಗಿ ಸಂಸ್ಕರಿಸಿ ಹಲ್ಲುಗಳ ಪುನರ್ ನಿರ್ಮಾಣ ಹಾಗೂ…

2 days ago