Advertisement
MIRROR FOCUS

ತಮಿಳುನಾಡಿನಿಂದ ಮತ್ತೆ ‘ಕಾವೇರಿ’ ಕಾಟ : ನಿತ್ಯ 1 ಟಿಎಂಸಿ ನೀರು ಹರಿಸಿ : ಕಾವೇರಿ ನೀರು ನಿಯಂತ್ರಣಾ ಸಮಿತಿ ಸೂಚನೆ

Share

ಇತ್ತ ಮಳೆ(Rain) ಬಂದು ಇನ್ನೇನು KRS ಅಣೆಕಟ್ಟು(KRS Dam) ಭರ್ತಿಯಾಗಿ, ರೈತರ(Farmers) ಅನುಕೂಲಕ್ಕಾಗಿ ನಾಲೆಗೆ(Cannel) ನೀರು ಬಿಡಬೇಕು ಅನ್ನುವಾಗಲೇ ಶತ್ರುಗಳಂತೆ ಕಾಡಲು ಆರಂಭಿಸಿದೆ ತಮಿಳುನಾಡು(Tamilnadu). ನಮ್ಮ ರೈತರಿಗೆ ದಕ್ಕಿದ ಪಾಲನ್ನು ಎಂದೂ ಈ ತಮಿಳುನಾಡು ಅನುಭವಿಸಲು ಬಿಡುವುದಿಲ್ಲ. ಅದಕ್ಕೆ ತಕ್ಕಂತೆ ನಮ್ಮ ಸರ್ಕಾರವೂ ನಮ್ಮ ರೈತರ ಹಿತ ನೋಡದೇ ಪಕ್ಕದ ರಾಜ್ಯದ ಹಿತದೃಷ್ಟಿಯನ್ನೇ ಕಾಪಾಡುತ್ತಿದೆ. ತಮಿಳುನಾಡಿಗೆ ಪ್ರತಿನಿತ್ಯ 1 ಟಿಎಂಸಿ ನೀರು ಹರಿಸುವಂತೆ ಕರ್ನಾಟಕಕ್ಕೆ (Karnataka) ಕಾವೇರಿ ನೀರು ನಿಯಂತ್ರಣಾ ಸಮಿತಿ(CWRC) ಸೂಚನೆ ನೀಡಿದೆ. ಗುರುವಾರ ನಡೆದ ಕಾವೇರಿ ನೀರು ನಿಯಂತ್ರಣ ಸಮಿತಿ ಸಭೆಯಲ್ಲಿ ತಮಿಳುನಾಡಿಗೆ ನೀರು ಹರಿಸುವಂತೆ ಶಿಫಾರಸು ಮಾಡಿದೆ. ಜುಲೈ 12 ರಿಂದ 31ರ ವರೆಗೆ ಪ್ರತಿನಿತ್ಯ 1 ಟಿಎಂಸಿ ಹರಿಸವಂತೆ ಶಿಫಾರಸು ಮಾಡಲಾಗಿದೆ.

 

 

ಕರ್ನಾಟಕದ ಡ್ಯಾಂಗಳಲ್ಲಿ ಒಳಹರಿವು 41 ಟಿಎಂಸಿ ಇದೆ. ಜೂ.1 ರಿಂದ ಇಲ್ಲಿಯವರಗೆ 41 ಟಿಎಂಸಿ ನೀರು ಸೇರಿದೆ. ಈ ಮಾನ್ಸೂನ್ ಸಾಮಾನ್ಯವಾಗಿಲ್ಲ, 28% ಮಳೆ ಕೊರತೆಯಾಗಿದೆ. ಕಾವೇರಿ ಕೊಳ್ಳದ ನಾಲ್ಕು ಜಲಾಶಯಗಳಲ್ಲಿ ಒಟ್ಟು 58 ಟಿಎಂಸಿ ನೀರಿದೆ. ತಮಿಳುನಾಡಿನ ಮೂರು ಜಲಾಶಯಗಳಲ್ಲಿ 24.705 ಟಿಎಂಸಿ ಸಂಗ್ರಹವಿದೆ. ಸಧ್ಯಕ್ಕೆ ನೀರು ಬಿಡುವ ಬಗ್ಗೆ ಯಾವುದೇ ಶಿಫಾರಸು ಮಾಡಬೇಡಿ. ಜು.25 ರ ವರೆಗೆ ಮಳೆಯ ಪ್ರಮಾಣ ನೋಡಿಕೊಂಡು ಶಿಫಾರಸು ಮಾಡಿ. ಈಗಲೇ ನೀರು ಬಿಡುವಂತೆ ಶಿಫಾರಸು ಮಾಡಬೇಡಿ ಎಂದು CWRC ಸಭೆಯಲ್ಲಿ ಕರ್ನಾಟಕ ಮನವಿ ಮಾಡಿತು.

ಕಳೆದ ಜಲವರ್ಷದಲ್ಲಿ ಕರ್ನಾಟಕ ನೀರು ಸರಿಯಾಗಿ ಹರಿಸಿಲ್ಲ. ಪ್ರಸಕ್ತ ಜಲವರ್ಷದಲ್ಲಿ ಮನ್ಸೂನ್ ಸಾಮಾನ್ಯವಾಗಿದೆ. ಕಾವೇರಿ ಕೊಳ್ಳದ ಡ್ಯಾಂಗಳಲ್ಲಿ ಸಾಕಷ್ಟು ನೀರು ಸಂಗ್ರಹವಾಗಿದೆ. ನೀರು ಬಿಡುವಂತೆ ಶಿಫಾರಸು ಮಾಡಬೇಕು ಎಂದು ತಮಿಳುನಾಡು ಮನವಿ ಮಾಡಿತು.  ಎರಡು ರಾಜ್ಯಗಳ ವಾದ ಆಲಿಸಿದ CWRC, ನೀರು ಹರಿಸುವಂತೆ ಶಿಫಾರಸು ಮಾಡಿದೆ. ಪ್ರತಿನಿತ್ಯ 1 ಟಿಎಂಸಿ ನೀರು ಹರಿಸುವಂತೆ ಕರ್ನಾಟಕಕ್ಕೆ ಸೂಚನೆ ನೀಡಿದೆ. ಬಿಳಿಗುಂಡ್ಳುವಿನಲ್ಲಿ ಪ್ರತಿನಿತ್ಯ 1 ಟಿಎಂಸಿ ನೀರಿನ ಹರಿವು ದಾಖಲಿಸುವಂತೆ ಸೂಚಿಸಿದೆ.

  • ಅಂತರ್ಜಾಲ ಮಾಹಿತಿ

 

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಆಮದು ಕಳಪೆ ಅಡಿಕೆ ಮಿಶ್ರಣದ ಎಚ್ಚರಿಕೆ- ಬೆಳೆಗಾರರಿಗೆ ಕ್ಯಾಂಪ್ಕೊ ಮನವಿ

ಆಮದುಗೊಂಡ ಕಳಪೆ ಅಡಿಕೆಯನ್ನು ದೇಶೀಯ ಅಡಿಕೆಯೊಂದಿಗೆ ಮಿಶ್ರಣ ಮಾಡಲಾಗುತ್ತಿದೆ ಎಂಬ ವರದಿಗಳ ಹಿನ್ನೆಲೆಯಲ್ಲಿ…

12 hours ago

ಹವಾಮಾನ ವರದಿ | 21-07-2026 | ಕರಾವಳಿ-ಮಲೆನಾಡಿನಲ್ಲಿ ಸಾಧಾರಣ ಮಳೆ ಮುಂದುವರಿಕೆ, ಭಾರೀ ಮಳೆ ಸಾಧ್ಯತೆ ಕಡಿಮೆ

ಕರಾವಳಿ ಮತ್ತು ಮಲೆನಾಡಿನಲ್ಲಿ ಮುಂದಿನ 10 ದಿನಗಳವರೆಗೆ ಬಿಟ್ಟು ಬಿಟ್ಟು ಸಾಧಾರಣ ಮಳೆ…

20 hours ago

ಅಡಿಕೆ ರೋಗ ಸಂಕಷ್ಟಕ್ಕೆ ಸಂಸತ್ತಿನಲ್ಲಿ ಧ್ವನಿ : ನಿಯಮ 377ರಡಿ ಕ್ಯಾ. ಬ್ರಿಜೇಶ್ ಚೌಟ ಒತ್ತಾಯ

ಅಡಿಕೆ ತೋಟಗಳಲ್ಲಿ ಹೆಚ್ಚುತ್ತಿರುವ ಎಲೆ ಚುಕ್ಕೆ, ಹಳದಿ ಎಲೆ ಮತ್ತು ಕೊಳೆ ರೋಗಗಳಿಗೆ…

2 days ago

ದೇಶಾದ್ಯಂತ ಮುಂಗಾರು ಅಬ್ಬರ : ಹಲವು ರಾಜ್ಯಗಳಿಗೆ ಭಾರೀ ಮಳೆ ಎಚ್ಚರಿಕೆ, ಹಿಮಾಲಯ ತಪ್ಪಲಿನಲ್ಲಿ ರೆಡ್ ಅಲರ್ಟ್

ದೇಶಾದ್ಯಂತ ಮುಂಗಾರು ಮತ್ತಷ್ಟು ತೀವ್ರಗೊಂಡಿದ್ದು, ಉತ್ತರ ಭಾರತದ ಹಲವು ಭಾಗಗಳಿಗೆ ರೆಡ್ ಅಲರ್ಟ್…

2 days ago

ರಾಜ್ಯದಲ್ಲಿ ಬರದ ಛಾಯೆ | 178 ತಾಲ್ಲೂಕುಗಳಲ್ಲಿ ತೀವ್ರ ಮಳೆ ಕೊರತೆ, ಜಲಾಶಯಗಳ ನೀರಿನ ಮಟ್ಟ ಶೇ.40ಕ್ಕೆ ಕುಸಿತ

ರಾಜ್ಯದಲ್ಲಿ ಮುಂಗಾರು ಮಳೆ 39% ಕೊರತೆಯಾಗಿದ್ದು, 26 ಜಿಲ್ಲೆಗಳ 178 ತಾಲ್ಲೂಕುಗಳಲ್ಲಿ ಬರದ…

3 days ago

ಪುತ್ತೂರಿಗೆ ಪುತ್ತಿಲ? ಪುತ್ತೂರಿನ ರಾಜಕೀಯದ ಹೊಸ ವ್ಯಾಕರಣ

ಪುತ್ತೂರಿನ ರಾಜಕೀಯದಲ್ಲಿ ವ್ಯಕ್ತಿತ್ವದ ಪ್ರಭಾವ ಹೆಚ್ಚುತ್ತಿರುವ ಕುರಿತು ಈ ವಿಶ್ಲೇಷಣೆ ಬೆಳಕು ಚೆಲ್ಲುತ್ತದೆ.…

3 days ago