ತಮಿಳುನಾಡಿಗೆ ಕಾವೇರಿ ನೀರು ಬಿಡಲು ಒತ್ತಾಯ | ಮುಕ್ಕೊಂಬು ಅಣೆಕಟ್ಟೆಯಲ್ಲಿ ರೈತರ ಪ್ರತಿಭಟನೆ | ಕೇಂದ್ರ, ಕರ್ನಾಟಕ ಸರ್ಕಾರಕ್ಕೆ ತಮಿಳುನಾಡು ರೈತರ ಆಗ್ರಹ |

May 30, 2024
12:39 PM

ಕಳೆದ ಬಾರಿ ಮುಂಗಾರು(Mansoon) ಕೈಕೊಟ್ಟ ಹಿನ್ನೆಲೆ ಈ ಬಾರಿ ಬರಗಾಲ(Drought) ಆವರಿಸಿದೆ. ಅದರಲ್ಲೂ ಕಾವೇರಿ ಜಲಾನಯನ(Cauvery belt) ಪ್ರದೇಶದಲ್ಲಿ ಮಳೆ(Rain) ಕಡಿಮೆಯಾದ ಹಿನ್ನೆಲೆ ಕೆಆರ್‌ಎಸ್‌ ಡ್ಯಾಂನಲ್ಲಿ(KRS Dam) ನೀರಿನ ಪ್ರಮಾಣ ಬಹಳ ಕಡಿಮೆಯಾಗಿತ್ತು. ಕುಡಿಯಲು ಹಾಗೂ ಕೃಷಿಗೆ ನೀರು ಇಲ್ಲದಂತಾಗಿದೆ. ಈ ಮಧ್ಯೆ ತಮಿಳುನಾಡಿನಿಂದ ನೀರು ಬಿಡಿ ಅನ್ನುವ ಖ್ಯಾತೆ. ಇದೀಗ ಮತ್ತೆ  ಕಾವೇರಿ ನೀರನ್ನು (Cauvery Water) ತಮಿಳುನಾಡಿಗೆ (Tamil Nadu Farmers) ಬಿಡುವಂತೆ ಆಗ್ರಹಿಸಿ ರೈತರು ತಿರುಚಿರಾಪಳ್ಳಿಯಲ್ಲಿ ಪ್ರತಿಭಟನೆ ನಡೆಸಿದ್ದಾರೆ.   

ತಮಿಳುನಾಡಿಗೆ ಕಾವೇರಿ ನೀರು ಬಿಡುವಂತೆ ಕೇಂದ್ರ ಮತ್ತು ಕರ್ನಾಟಕ ಸರ್ಕಾರಗಳಿಗೆ ಒತ್ತಾಯಿಸಿ ರೈತ ಅಯ್ಯಕಣ್ಣು ನೇತೃತ್ವದಲ್ಲಿ ರೈತರ ಗುಂಪು ಮುಕ್ಕೊಂಬು ಅಣೆಕಟ್ಟೆಯಲ್ಲಿ ಪ್ರತಿಭಟನೆ ನಡೆಸಿತು. ರೈತರ ಆದಾಯವನ್ನು ದ್ವಿಗುಣಗೊಳಿಸುವುದು ಮತ್ತು ಕನಿಷ್ಠ ಬೆಂಬಲ ಬೆಲೆಯನ್ನು ಖಾತರಿಪಡಿಸುವುದು ಮುಂತಾದ ಭರವಸೆಗಳನ್ನು ಈಡೇರಿಸುವಂತೆ ಪ್ರಧಾನಿ ನರೇಂದ್ರ ಮೋದಿ ಅವರನ್ನು ಇದೇ ವೇಳೆ ಒತ್ತಾಯಿಸಿದರು.

ತಮಿಳುನಾಡಿಗೆ 2.5 ಟಿಎಂಸಿ ನೀರು ಹರಿಸುವಂತೆ ಕರ್ನಾಟಕಕ್ಕೆ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ ವಾರದ ಹಿಂದೆಯಷ್ಟೇ ಸೂಚನೆ ನೀಡಿತ್ತು. ಮೇ ತಿಂಗಳ ಭಾಗವಾಗಿ 2.5 ಟಿಎಂಸಿ ನೀರು ಹರಿಸಲು ಪ್ರಾಧಿಕಾರ ನಿರ್ದೇಶನ ನೀಡಿತ್ತು. ಈ ಹಿಂದೆ ಕಾವೇರಿ ನೀರು ನಿರ್ವಹಣಾ ಸಮಿತಿಯೂ 2.5 ಟಿಎಂಸಿ ನೀರು ಬಿಡಲು ಶಿಫಾರಸು ಮಾಡಿತ್ತು.

  • ಅಂತರ್ಜಾಲ ಮಾಹಿತಿ

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಹವಾಮಾನ ವರದಿ | 13- 08-2026 | ಕರ್ನಾಟಕದಲ್ಲಿ ಮಳೆ ಮುಂದುವರಿಕೆ| ಸುಳ್ಯ, ಘಟ್ಟದ ಕೆಳಭಾಗದಲ್ಲಿ ಮಧ್ಯಾಹ್ನದ ಬಳಿಕ ಹೆಚ್ಚು ಮಳೆ ಸಾಧ್ಯತೆ
August 13, 2026
2:01 PM
by: ಸಾಯಿಶೇಖರ್ ಕರಿಕಳ
ಎಲ್ ನಿನೊ ಪರಿಣಾಮ 15 ರಾಜ್ಯಗಳ 342 ಜಿಲ್ಲೆಗಳಲ್ಲಿ ಮಳೆ ಕೊರತೆ
August 13, 2026
6:59 AM
by: ದ ರೂರಲ್ ಮಿರರ್.ಕಾಂ
ಇನ್ನೊಂದು ಮನೆಯ ಸಮಸ್ಯೆ ನಮಗೆ ಸುದ್ದಿ ; ನಮ್ಮ ಮನೆಯ ನೋವು ಮಾತ್ರ ನಮಗೆ ಸಂಕಟ..! ಯಾಕೆ ?
August 13, 2026
6:50 AM
by: ಮಹೇಶ್ ಪುಚ್ಚಪ್ಪಾಡಿ
ಕೈಗಾರಿಕಾ ಕೋಳಿ ಸಾಕಾಣಿಕೆ ಆಹಾರ ವಿಷಬಾಧೆಗೆ ಕಾರಣವಾಗುತ್ತಿದೆಯೇ? – ಹೊಸ ಅಧ್ಯಯನದ ಎಚ್ಚರಿಕೆ
August 13, 2026
6:35 AM
by: ದ ರೂರಲ್ ಮಿರರ್.ಕಾಂ

You cannot copy content of this page - Copyright -The Rural Mirror