ಕಳೆದ ಬಾರಿ ಮುಂಗಾರು(Mansoon) ಕೈಕೊಟ್ಟ ಹಿನ್ನೆಲೆ ಈ ಬಾರಿ ಬರಗಾಲ(Drought) ಆವರಿಸಿದೆ. ಅದರಲ್ಲೂ ಕಾವೇರಿ ಜಲಾನಯನ(Cauvery belt) ಪ್ರದೇಶದಲ್ಲಿ ಮಳೆ(Rain) ಕಡಿಮೆಯಾದ ಹಿನ್ನೆಲೆ ಕೆಆರ್ಎಸ್ ಡ್ಯಾಂನಲ್ಲಿ(KRS Dam) ನೀರಿನ ಪ್ರಮಾಣ ಬಹಳ ಕಡಿಮೆಯಾಗಿತ್ತು. ಕುಡಿಯಲು ಹಾಗೂ ಕೃಷಿಗೆ ನೀರು ಇಲ್ಲದಂತಾಗಿದೆ. ಈ ಮಧ್ಯೆ ತಮಿಳುನಾಡಿನಿಂದ ನೀರು ಬಿಡಿ ಅನ್ನುವ ಖ್ಯಾತೆ. ಇದೀಗ ಮತ್ತೆ ಕಾವೇರಿ ನೀರನ್ನು (Cauvery Water) ತಮಿಳುನಾಡಿಗೆ (Tamil Nadu Farmers) ಬಿಡುವಂತೆ ಆಗ್ರಹಿಸಿ ರೈತರು ತಿರುಚಿರಾಪಳ್ಳಿಯಲ್ಲಿ ಪ್ರತಿಭಟನೆ ನಡೆಸಿದ್ದಾರೆ.
ತಮಿಳುನಾಡಿಗೆ ಕಾವೇರಿ ನೀರು ಬಿಡುವಂತೆ ಕೇಂದ್ರ ಮತ್ತು ಕರ್ನಾಟಕ ಸರ್ಕಾರಗಳಿಗೆ ಒತ್ತಾಯಿಸಿ ರೈತ ಅಯ್ಯಕಣ್ಣು ನೇತೃತ್ವದಲ್ಲಿ ರೈತರ ಗುಂಪು ಮುಕ್ಕೊಂಬು ಅಣೆಕಟ್ಟೆಯಲ್ಲಿ ಪ್ರತಿಭಟನೆ ನಡೆಸಿತು. ರೈತರ ಆದಾಯವನ್ನು ದ್ವಿಗುಣಗೊಳಿಸುವುದು ಮತ್ತು ಕನಿಷ್ಠ ಬೆಂಬಲ ಬೆಲೆಯನ್ನು ಖಾತರಿಪಡಿಸುವುದು ಮುಂತಾದ ಭರವಸೆಗಳನ್ನು ಈಡೇರಿಸುವಂತೆ ಪ್ರಧಾನಿ ನರೇಂದ್ರ ಮೋದಿ ಅವರನ್ನು ಇದೇ ವೇಳೆ ಒತ್ತಾಯಿಸಿದರು.
ತಮಿಳುನಾಡಿಗೆ 2.5 ಟಿಎಂಸಿ ನೀರು ಹರಿಸುವಂತೆ ಕರ್ನಾಟಕಕ್ಕೆ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ ವಾರದ ಹಿಂದೆಯಷ್ಟೇ ಸೂಚನೆ ನೀಡಿತ್ತು. ಮೇ ತಿಂಗಳ ಭಾಗವಾಗಿ 2.5 ಟಿಎಂಸಿ ನೀರು ಹರಿಸಲು ಪ್ರಾಧಿಕಾರ ನಿರ್ದೇಶನ ನೀಡಿತ್ತು. ಈ ಹಿಂದೆ ಕಾವೇರಿ ನೀರು ನಿರ್ವಹಣಾ ಸಮಿತಿಯೂ 2.5 ಟಿಎಂಸಿ ನೀರು ಬಿಡಲು ಶಿಫಾರಸು ಮಾಡಿತ್ತು.
ಇದು ಆಕಸ್ಮಿಕವೇ, ಅಪಘಾತವೇ, ಅನಿರೀಕ್ಷಿತವೇ, ಅನಿವಾರ್ಯವೇ, ಅಜ್ಞಾನವೇ, ಮೂರ್ಖತನವೇ, ಸ್ವಯಂಕೃತಾಪರಾಧವೇ, ಸಹಜವೇ, ಅಸಹಜವೇ,…
ಅಡಿಕೆ ಜಗಿಯುವುದರಿಂದ ಆಯಾಸ ದೂರವಾಗುತ್ತದೆ ಹಾಗೂ ಕರುಳಿನ ಚಟುವಟಿಕೆ ಹೆಚ್ಚಾಗುತ್ತದೆ ಎನ್ನುವ ಅಧ್ಯಯನವೊಂದು…
ಚಾಮರಾಜನಗರ ಜಿಲ್ಲೆಯ ಒಟ್ಟು 130 ಗ್ರಾಮ ಪಂಚಾಯಿತಿಗಳ ಪೈಕಿ ಕನಿಷ್ಠ 50 ಪಂಚಾಯಿತಿಗಳನ್ನು…
ಅಸ್ಸಾಂ ಪ್ರವಾಹದಲ್ಲಿ ಶುಕ್ರವಾರ ಕೂಡಾ 6 ಮಂದಿ ಬಲಿಯಾಗಿದ್ದು ಈ ಮೂಲಕ ಒಟ್ಟು…
ಕಳೆದ ವಾರ ರಾಜ್ಯ ಸರ್ಕಾರ(State Govt) ಕೆಎಂಎಫ್ (KMF) ಹಾಲಿನ ದರ (Milk…
ಮಲೆನಾಡು ಗಿಡ್ಡ ಗೋತಳಿ ಉಳಿಸುವ ಹಾಗೂ ಬೆಳೆಸುವ ಯೋಜನೆಯ ಸಣ್ಣ ಗುಂಪು ವಿಸ್ತಾರವಾದ…