Advertisement
MIRROR FOCUS

ತಮಿಳುನಾಡಿಗೆ ಕಾವೇರಿ ನೀರು ಬಿಡಲು ಒತ್ತಾಯ | ಮುಕ್ಕೊಂಬು ಅಣೆಕಟ್ಟೆಯಲ್ಲಿ ರೈತರ ಪ್ರತಿಭಟನೆ | ಕೇಂದ್ರ, ಕರ್ನಾಟಕ ಸರ್ಕಾರಕ್ಕೆ ತಮಿಳುನಾಡು ರೈತರ ಆಗ್ರಹ |

Share

ಕಳೆದ ಬಾರಿ ಮುಂಗಾರು(Mansoon) ಕೈಕೊಟ್ಟ ಹಿನ್ನೆಲೆ ಈ ಬಾರಿ ಬರಗಾಲ(Drought) ಆವರಿಸಿದೆ. ಅದರಲ್ಲೂ ಕಾವೇರಿ ಜಲಾನಯನ(Cauvery belt) ಪ್ರದೇಶದಲ್ಲಿ ಮಳೆ(Rain) ಕಡಿಮೆಯಾದ ಹಿನ್ನೆಲೆ ಕೆಆರ್‌ಎಸ್‌ ಡ್ಯಾಂನಲ್ಲಿ(KRS Dam) ನೀರಿನ ಪ್ರಮಾಣ ಬಹಳ ಕಡಿಮೆಯಾಗಿತ್ತು. ಕುಡಿಯಲು ಹಾಗೂ ಕೃಷಿಗೆ ನೀರು ಇಲ್ಲದಂತಾಗಿದೆ. ಈ ಮಧ್ಯೆ ತಮಿಳುನಾಡಿನಿಂದ ನೀರು ಬಿಡಿ ಅನ್ನುವ ಖ್ಯಾತೆ. ಇದೀಗ ಮತ್ತೆ  ಕಾವೇರಿ ನೀರನ್ನು (Cauvery Water) ತಮಿಳುನಾಡಿಗೆ (Tamil Nadu Farmers) ಬಿಡುವಂತೆ ಆಗ್ರಹಿಸಿ ರೈತರು ತಿರುಚಿರಾಪಳ್ಳಿಯಲ್ಲಿ ಪ್ರತಿಭಟನೆ ನಡೆಸಿದ್ದಾರೆ.   

Advertisement
Advertisement

ತಮಿಳುನಾಡಿಗೆ ಕಾವೇರಿ ನೀರು ಬಿಡುವಂತೆ ಕೇಂದ್ರ ಮತ್ತು ಕರ್ನಾಟಕ ಸರ್ಕಾರಗಳಿಗೆ ಒತ್ತಾಯಿಸಿ ರೈತ ಅಯ್ಯಕಣ್ಣು ನೇತೃತ್ವದಲ್ಲಿ ರೈತರ ಗುಂಪು ಮುಕ್ಕೊಂಬು ಅಣೆಕಟ್ಟೆಯಲ್ಲಿ ಪ್ರತಿಭಟನೆ ನಡೆಸಿತು. ರೈತರ ಆದಾಯವನ್ನು ದ್ವಿಗುಣಗೊಳಿಸುವುದು ಮತ್ತು ಕನಿಷ್ಠ ಬೆಂಬಲ ಬೆಲೆಯನ್ನು ಖಾತರಿಪಡಿಸುವುದು ಮುಂತಾದ ಭರವಸೆಗಳನ್ನು ಈಡೇರಿಸುವಂತೆ ಪ್ರಧಾನಿ ನರೇಂದ್ರ ಮೋದಿ ಅವರನ್ನು ಇದೇ ವೇಳೆ ಒತ್ತಾಯಿಸಿದರು.

Advertisement

ತಮಿಳುನಾಡಿಗೆ 2.5 ಟಿಎಂಸಿ ನೀರು ಹರಿಸುವಂತೆ ಕರ್ನಾಟಕಕ್ಕೆ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ ವಾರದ ಹಿಂದೆಯಷ್ಟೇ ಸೂಚನೆ ನೀಡಿತ್ತು. ಮೇ ತಿಂಗಳ ಭಾಗವಾಗಿ 2.5 ಟಿಎಂಸಿ ನೀರು ಹರಿಸಲು ಪ್ರಾಧಿಕಾರ ನಿರ್ದೇಶನ ನೀಡಿತ್ತು. ಈ ಹಿಂದೆ ಕಾವೇರಿ ನೀರು ನಿರ್ವಹಣಾ ಸಮಿತಿಯೂ 2.5 ಟಿಎಂಸಿ ನೀರು ಬಿಡಲು ಶಿಫಾರಸು ಮಾಡಿತ್ತು.

  • ಅಂತರ್ಜಾಲ ಮಾಹಿತಿ

Advertisement
Advertisement
Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
Advertisement
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಬೋಲೇ ಬಾಬಾ ಮತ್ತು 125 ಸಾವು….. : ಉತ್ತರ ಪ್ರದೇಶದ ಹತ್ರಾಸ್ ಭೀಕರ ಘಟನೆ…….

ಇದು ಆಕಸ್ಮಿಕವೇ, ಅಪಘಾತವೇ, ಅನಿರೀಕ್ಷಿತವೇ, ಅನಿವಾರ್ಯವೇ, ಅಜ್ಞಾನವೇ, ಮೂರ್ಖತನವೇ,‌ ಸ್ವಯಂಕೃತಾಪರಾಧವೇ, ಸಹಜವೇ, ಅಸಹಜವೇ,…

23 mins ago

ಅಡಿಕೆ ಜಗಿಯುವುದರಿಂದ ಆಯಾಸ ದೂರ | ಅಧ್ಯಯನ ವರದಿಗೆ ಪೂರಕ ಮಾಹಿತಿ | ಊಟದ ನಂತರ ಅಡಿಕೆ ಪುಡಿ ಸೇವನೆ ಉತ್ತಮ ಪರಿಣಾಮ |

ಅಡಿಕೆ ಜಗಿಯುವುದರಿಂದ ಆಯಾಸ ದೂರವಾಗುತ್ತದೆ ಹಾಗೂ ಕರುಳಿನ ಚಟುವಟಿಕೆ ಹೆಚ್ಚಾಗುತ್ತದೆ ಎನ್ನುವ ಅಧ್ಯಯನವೊಂದು…

45 mins ago

ಸಹಜ ಕೃಷಿಯತ್ತ ರೈತರ ಚಿತ್ತ | ಚಾಮರಾಜನಗರ ಜಿಲ್ಲೆಯಲ್ಲಿ ಸಹಜ ಕೃಷಿಯನ್ನು ಅಳವಡಿಸಲು ರೈತರಿಗೆ ನೆರವು ನೀಡಲು ಕಾರ್ಯ ಯೋಜನೆ |

ಚಾಮರಾಜನಗರ ಜಿಲ್ಲೆಯ ಒಟ್ಟು 130 ಗ್ರಾಮ ಪಂಚಾಯಿತಿಗಳ ಪೈಕಿ ಕನಿಷ್ಠ 50 ಪಂಚಾಯಿತಿಗಳನ್ನು…

46 mins ago

ಎಲ್ಲಾದರೂ ಇರು… ಎಂತಾದರು ಇರು…. ಎಂದೆಂದಿಗೂ ನೀ ಮಲೆನಾಡು ಗಿಡ್ಡವಾಗಿರು….

ಮಲೆನಾಡು ಗಿಡ್ಡ ಗೋತಳಿ ಉಳಿಸುವ ಹಾಗೂ ಬೆಳೆಸುವ ಯೋಜನೆಯ ಸಣ್ಣ ಗುಂಪು ವಿಸ್ತಾರವಾದ…

2 hours ago