ಕಳೆದ ಬಾರಿ ಮುಂಗಾರು(Mansoon) ಕೈಕೊಟ್ಟ ಹಿನ್ನೆಲೆ ಈ ಬಾರಿ ಬರಗಾಲ(Drought) ಆವರಿಸಿದೆ. ಅದರಲ್ಲೂ ಕಾವೇರಿ ಜಲಾನಯನ(Cauvery belt) ಪ್ರದೇಶದಲ್ಲಿ ಮಳೆ(Rain) ಕಡಿಮೆಯಾದ ಹಿನ್ನೆಲೆ ಕೆಆರ್ಎಸ್ ಡ್ಯಾಂನಲ್ಲಿ(KRS Dam) ನೀರಿನ ಪ್ರಮಾಣ ಬಹಳ ಕಡಿಮೆಯಾಗಿತ್ತು. ಕುಡಿಯಲು ಹಾಗೂ ಕೃಷಿಗೆ ನೀರು ಇಲ್ಲದಂತಾಗಿದೆ. ಈ ಮಧ್ಯೆ ತಮಿಳುನಾಡಿನಿಂದ ನೀರು ಬಿಡಿ ಅನ್ನುವ ಖ್ಯಾತೆ. ಇದೀಗ ಮತ್ತೆ ಕಾವೇರಿ ನೀರನ್ನು (Cauvery Water) ತಮಿಳುನಾಡಿಗೆ (Tamil Nadu Farmers) ಬಿಡುವಂತೆ ಆಗ್ರಹಿಸಿ ರೈತರು ತಿರುಚಿರಾಪಳ್ಳಿಯಲ್ಲಿ ಪ್ರತಿಭಟನೆ ನಡೆಸಿದ್ದಾರೆ.
ತಮಿಳುನಾಡಿಗೆ ಕಾವೇರಿ ನೀರು ಬಿಡುವಂತೆ ಕೇಂದ್ರ ಮತ್ತು ಕರ್ನಾಟಕ ಸರ್ಕಾರಗಳಿಗೆ ಒತ್ತಾಯಿಸಿ ರೈತ ಅಯ್ಯಕಣ್ಣು ನೇತೃತ್ವದಲ್ಲಿ ರೈತರ ಗುಂಪು ಮುಕ್ಕೊಂಬು ಅಣೆಕಟ್ಟೆಯಲ್ಲಿ ಪ್ರತಿಭಟನೆ ನಡೆಸಿತು. ರೈತರ ಆದಾಯವನ್ನು ದ್ವಿಗುಣಗೊಳಿಸುವುದು ಮತ್ತು ಕನಿಷ್ಠ ಬೆಂಬಲ ಬೆಲೆಯನ್ನು ಖಾತರಿಪಡಿಸುವುದು ಮುಂತಾದ ಭರವಸೆಗಳನ್ನು ಈಡೇರಿಸುವಂತೆ ಪ್ರಧಾನಿ ನರೇಂದ್ರ ಮೋದಿ ಅವರನ್ನು ಇದೇ ವೇಳೆ ಒತ್ತಾಯಿಸಿದರು.
ತಮಿಳುನಾಡಿಗೆ 2.5 ಟಿಎಂಸಿ ನೀರು ಹರಿಸುವಂತೆ ಕರ್ನಾಟಕಕ್ಕೆ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ ವಾರದ ಹಿಂದೆಯಷ್ಟೇ ಸೂಚನೆ ನೀಡಿತ್ತು. ಮೇ ತಿಂಗಳ ಭಾಗವಾಗಿ 2.5 ಟಿಎಂಸಿ ನೀರು ಹರಿಸಲು ಪ್ರಾಧಿಕಾರ ನಿರ್ದೇಶನ ನೀಡಿತ್ತು. ಈ ಹಿಂದೆ ಕಾವೇರಿ ನೀರು ನಿರ್ವಹಣಾ ಸಮಿತಿಯೂ 2.5 ಟಿಎಂಸಿ ನೀರು ಬಿಡಲು ಶಿಫಾರಸು ಮಾಡಿತ್ತು.
ಬೇಸಿಗೆಯಲ್ಲಿ ದೇಹದಲ್ಲಿ ನೀರಿನಾಂಶ ಕಡಿಮೆಯಾಗುವುದರಿಂದ ಕಿಡ್ನಿ ಸ್ಟೋನ್ ಸಮಸ್ಯೆ ಹೆಚ್ಚಾಗುವ ಸಾಧ್ಯತೆ ಇದೆ.…
ಮಂಗಳೂರು ನಗರದಲ್ಲಿ ಮಳೆಗಾಲದ ಹಿನ್ನೆಲೆ ಜೂನ್ 1ರಿಂದ ಸೆಪ್ಟೆಂಬರ್ 30ರವರೆಗೆ ರಸ್ತೆ, ಗುಡ್ಡ…
ಈಶಾನ್ಯ ಭಾರತದಲ್ಲಿ ಡಿಆರ್ಐ ನಡೆಸಿದ ದಾಳಿಯಲ್ಲಿ ಸುಮಾರು 60 ಸಾವಿರ ಕೆಜಿ ಅಕ್ರಮ…
ರಾಜ್ಯದ ಹಲವು ಜಿಲ್ಲೆಗಳಲ್ಲಿ ಇನ್ನೂ ಎರಡು ದಿನ ಸಂಜೆ ಹಾಗೂ ರಾತ್ರಿ ಮಳೆಯ…
ಅಡಿಕೆ ಮಾರುಕಟ್ಟೆಗೆ ದೊಡ್ಡ ಕಾರ್ಪೊರೇಟ್ ಸಂಸ್ಥೆಗಳು ಬಂದರೆ ರೈತರಿಗೆ ಆರಂಭದಲ್ಲಿ ಲಾಭದ ಅನುಭವ…
“ಕಾಕ್ರೋಚ್ ಜನತಾ ಪಾರ್ಟಿ” ಬಳಿಕ ಇದೀಗ “ನ್ಯಾಷನಲ್ ಪ್ಯಾರಾಸಿಟಿಕ್ ಫ್ರಂಟ್” ಎಂಬ ಹೊಸ…