ಕಳೆದ ಬಾರಿ ಮುಂಗಾರು(Mansoon) ಕೈಕೊಟ್ಟ ಹಿನ್ನೆಲೆ ಈ ಬಾರಿ ಬರಗಾಲ(Drought) ಆವರಿಸಿದೆ. ಅದರಲ್ಲೂ ಕಾವೇರಿ ಜಲಾನಯನ(Cauvery belt) ಪ್ರದೇಶದಲ್ಲಿ ಮಳೆ(Rain) ಕಡಿಮೆಯಾದ ಹಿನ್ನೆಲೆ ಕೆಆರ್ಎಸ್ ಡ್ಯಾಂನಲ್ಲಿ(KRS Dam) ನೀರಿನ ಪ್ರಮಾಣ ಬಹಳ ಕಡಿಮೆಯಾಗಿತ್ತು. ಕುಡಿಯಲು ಹಾಗೂ ಕೃಷಿಗೆ ನೀರು ಇಲ್ಲದಂತಾಗಿದೆ. ಈ ಮಧ್ಯೆ ತಮಿಳುನಾಡಿನಿಂದ ನೀರು ಬಿಡಿ ಅನ್ನುವ ಖ್ಯಾತೆ. ಇದೀಗ ಮತ್ತೆ ಕಾವೇರಿ ನೀರನ್ನು (Cauvery Water) ತಮಿಳುನಾಡಿಗೆ (Tamil Nadu Farmers) ಬಿಡುವಂತೆ ಆಗ್ರಹಿಸಿ ರೈತರು ತಿರುಚಿರಾಪಳ್ಳಿಯಲ್ಲಿ ಪ್ರತಿಭಟನೆ ನಡೆಸಿದ್ದಾರೆ.
ತಮಿಳುನಾಡಿಗೆ ಕಾವೇರಿ ನೀರು ಬಿಡುವಂತೆ ಕೇಂದ್ರ ಮತ್ತು ಕರ್ನಾಟಕ ಸರ್ಕಾರಗಳಿಗೆ ಒತ್ತಾಯಿಸಿ ರೈತ ಅಯ್ಯಕಣ್ಣು ನೇತೃತ್ವದಲ್ಲಿ ರೈತರ ಗುಂಪು ಮುಕ್ಕೊಂಬು ಅಣೆಕಟ್ಟೆಯಲ್ಲಿ ಪ್ರತಿಭಟನೆ ನಡೆಸಿತು. ರೈತರ ಆದಾಯವನ್ನು ದ್ವಿಗುಣಗೊಳಿಸುವುದು ಮತ್ತು ಕನಿಷ್ಠ ಬೆಂಬಲ ಬೆಲೆಯನ್ನು ಖಾತರಿಪಡಿಸುವುದು ಮುಂತಾದ ಭರವಸೆಗಳನ್ನು ಈಡೇರಿಸುವಂತೆ ಪ್ರಧಾನಿ ನರೇಂದ್ರ ಮೋದಿ ಅವರನ್ನು ಇದೇ ವೇಳೆ ಒತ್ತಾಯಿಸಿದರು.
ತಮಿಳುನಾಡಿಗೆ 2.5 ಟಿಎಂಸಿ ನೀರು ಹರಿಸುವಂತೆ ಕರ್ನಾಟಕಕ್ಕೆ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ ವಾರದ ಹಿಂದೆಯಷ್ಟೇ ಸೂಚನೆ ನೀಡಿತ್ತು. ಮೇ ತಿಂಗಳ ಭಾಗವಾಗಿ 2.5 ಟಿಎಂಸಿ ನೀರು ಹರಿಸಲು ಪ್ರಾಧಿಕಾರ ನಿರ್ದೇಶನ ನೀಡಿತ್ತು. ಈ ಹಿಂದೆ ಕಾವೇರಿ ನೀರು ನಿರ್ವಹಣಾ ಸಮಿತಿಯೂ 2.5 ಟಿಎಂಸಿ ನೀರು ಬಿಡಲು ಶಿಫಾರಸು ಮಾಡಿತ್ತು.
ಗೋಕರ್ಣದಲ್ಲಿ ನಡೆದ ಅನ್ನಬ್ರಹ್ಮ ಚಾತುರ್ಮಾಸ್ಯ ಧರ್ಮಸಭೆಯಲ್ಲಿ ಜಗದ್ಗುರು ಶ್ರೀ ರಾಘವೇಶ್ವರ ಭಾರತೀ ಮಹಾಸ್ವಾಮಿಗಳು…
ಮಧ್ಯಪ್ರದೇಶದಲ್ಲಿರುವ ವಾಯುಭಾರ ಕುಸಿತದ ಪರಿಣಾಮವಾಗಿ ಕರಾವಳಿ, ಮಲೆನಾಡು ಹಾಗೂ ಉತ್ತರ ಒಳನಾಡಿನ ಹಲವು…
ಗೋಕರ್ಣದ ಅಶೋಕೆಯ ಮೂಲಮಠದಲ್ಲಿ 'ಅನ್ನಬ್ರಹ್ಮ ಚಾತುರ್ಮಾಸ್ಯ' ಆರಂಭಗೊಂಡಿದ್ದು, ಸಮಾಜಕ್ಕೆ ಸರಿಯಾದ ದಾರಿ ತೋರಿಸುವುದು…
ಅಪೊಲೊ ಫಾರ್ಮಸಿ ವತಿಯಿಂದ ವಿವಿಧ ಹುದ್ದೆಗಳ ಭರ್ತಿಗಾಗಿ ಆಗಸ್ಟ್ 1ರಂದು ಪುತ್ತೂರಿನಲ್ಲಿ ನೇರ…
ಕರಾವಳಿ, ಮಲೆನಾಡು ಹಾಗೂ ಉತ್ತರ ಒಳನಾಡಿನಲ್ಲಿ ಇನ್ನೂ ಬಿಟ್ಟುಬಿಟ್ಟು ಮಳೆ ಮುಂದುವರಿಯಲಿದೆ. ಆದರೆ…
ಆಸ್ಪತ್ರೆಗಳಲ್ಲಿ ಬಳಕೆಯಾಗದೆ ಉಳಿಯುವ ಔಷಧಗಳನ್ನು ಸುರಕ್ಷಿತವಾಗಿ ಮರುಬಳಕೆ ಮಾಡಿದರೆ ಆರೋಗ್ಯ ಕ್ಷೇತ್ರದ ವೆಚ್ಚ…