ಡಾ.ನಾ.ಮೊಗಸಾಲೆ ಅವರ ‘ವಿಶ್ವಂಭರ’ ಕಾದಂಬರಿ | ರಾಜ್ಯಪಾಲರಿಂದ ಬಿಡುಗಡೆ |

December 9, 2024
6:47 AM
ಚೈತನ್ಯ ಮಹಾಪ್ರಭು ಅವರ ಬೋಧನೆಗಳು ಆಧ್ಯಾತ್ಮಿಕ ಸಮಾನತೆ , ಸಹೋದರತ್ವ ಮತ್ತು ಸ್ವಾತಂತ್ರದ ತತ್ವಗಳನ್ನು ಆಧರಿಸಿವೆ ಎಂದು ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಹೇಳಿದರು.

ಕರ್ನಾಟಕ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಪುರಸ್ಕೃತ ಡಾ.ನಾ.ಮೊಗಸಾಲೆ ಅವರ ‘ವಿಶ್ವಂಭರ’ ಚೈತನ್ಯ ಮಹಾಪ್ರಭುಗಳ ಜೀವಾನಾಧರಿತ ಕಾದಂಬರಿಯನ್ನು ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಬೆಂಗಳೂರಿನಲ್ಲಿ ಬಿಡುಗಡೆ ಮಾಡಿದರು.

ಬಳಿಕ ರಾಜ್ಯಪಾಲರು, ಚೈತನ್ಯ ಮಹಾಪ್ರಭುಗಳು ಭಕ್ತಿ ಚಳುವಳಿಯ ಮಹಾನ್ ಸಂತ , ಸಮಾಜ ಸುಧಾರಕ ಮತ್ತು ಕೃಷ್ಣ ಭಕ್ತ , ಈ ಯುಗದಲ್ಲಿ ಪ್ರೀತಿ ಮತ್ತು ಭಕ್ತಿಯ ಮೂಲಕ ಸಮಾಜಕ್ಕೆ ಧೈವಿಕ , ಆದ್ಯಾತ್ಮಿಕತೆಯ ಮಾರ್ಗವನ್ನು ತೋರಿಸಿದವರು. ಚೈತನ್ಯ ಮಹಾಪ್ರಭು ಅವರ ಬೋಧನೆಗಳು ಆಧ್ಯಾತ್ಮಿಕ ಸಮಾನತೆ , ಸಹೋದರತ್ವ ಮತ್ತು ಸ್ವಾತಂತ್ರದ ತತ್ವಗಳನ್ನು ಆಧರಿಸಿವೆ ಎಂದು ಅವರು ಹೇಳಿದರು. ಚೈತನ್ಯ ಮಹಾಪ್ರಭು ಅವರ ಮುಖ್ಯ ಸಂದೇಶವೆಂದರೆ ಹರಿನಾಮ ಸಂಕೀರ್ತನೆ ಇದರ ಅರ್ಥ ಸಾಮೂಹಿಕ ಪಠಣ ಮತ್ತು  ದೇವರ ಹೆಸರಿನ ಕೀರ್ತನೆ. ಪ್ರತಿ ನಗರ ಮತ್ತು ಹಳ್ಳಿಗಳಲ್ಲಿ ಶ್ರೀ ಕೃಷ್ಣನ ಪವಿತ್ರ ನಾಮವನ್ನು ಜಪಿಸಬೇಕು ಎಂದು ಬಯಸಿದ್ದರು. 12 ವರ್ಷಗಳ ಅವಧಿಯಲ್ಲಿ 6 ಖಂಡಗಳಲ್ಲಿ 100ಕ್ಕೂ ಹೆಚ್ಚು  ಇಸ್ಕಾನ್ ದೇವಾಲಯಗಳನ್ನು ಸ್ಧಾಪಿಸುವ ಮೂಲಕ ಭಾರತೀಯ ಸಂಸ್ಕೃತಿಯನ್ನು ಪಾಶ್ಟಿಮಾತ್ಯ ದೇಶಗಳಲ್ಲೂ ಹರಡುವ ಕೆಲಸ ಮಾಡಿದ್ದಾರೆ. ಆಧುನಿಕ ಯುಗದಲ್ಲಿ ಭಾರತದ ಸಂಸ್ಕೃತಿ ಮತ್ತು ಪರಂಪರೆಯ ಶ್ರೇಷ್ಠ ರಾಯಾಭಾರಿಯಾಗಿದ್ದಾರೆ ಎಂದು ತಿಳಿಸಿದರು. ಚೈತನ್ಯ ಪ್ರಭುಗಳ ಜೀವನ ಕುರಿತು ಕನ್ನಡದಲ್ಲಿ ಬರೆದ ಬರಹಕ್ಕಾಗಿ ಕರ್ನಾಟಕ ಸಾಹಿತ್ಯ ಅಕಾಡೆಮಿ ಪುರಸ್ಕೃತ ಡಾ. ಮೊಗಸಾಲೆ ಅವರನ್ನು ಅಭಿನಂದಿಸುವುದಾಗಿ ಹೇಳಿದ ಅವರು .ಈ ಕೃತಿ ಭಾರತೀಯ, ಕನ್ನಡ ಸಾಹಿತ್ಯದ ಪ್ರಮುಖ ಪುಸ್ತಕವಾಗಲಿದೆ .ಜತೆಗೆ ಸ್ಪೂರ್ತಿಯ ಮೂಲ ಹಾಗೂ ಸಮಾಜದಲ್ಲಿ ಸಕಾರಾತ್ಮಕ ಬದಲಾವಣೆ ತರಲು ಸಹಕಾರಿಯಾಗಲಿದೆ ಎಂದು ಹೇಳಿದರು.

ಈ ವೇಳೆ ವ್ಯಾಸರಾಜ ಮಠದ ಪೀಠಾಧಿಪತಿ  ವಿದ್ಯಾಶ್ರೀಶ ತೀರ್ಥ ಸ್ವಾಮೀಜಿ, ನಟ ಪ್ರಕಾಶ್ ಬೆಳವಾಡಿ, ಮೈಸೂರು ಇಸ್ಕಾನ್ ಅಧ್ಯಕ್ಷ ಸ್ತೋಕ ಕೃಷ್ಣ ಸ್ವಾಮಿ, ಬೆಂಗಳೂರು ಇಸ್ಕಾನ್ ಅಧ್ಯಕ್ಷ ಚಂಚಲ ಪತಿದಾಸ್, ಕರ್ನಾಟಕ ಸಂಸ್ಕೃತ ವಿಶ್ವ ವಿದ್ಯಾಲಯದ ನಿವೃತ್ತ ಕುಲಪತಿ ಡಾ.ಮಲ್ಲೇಪುರಂ ಜಿ.ವೆಂಕಟೇಶ್ ಸೇರಿದಂತೆ ಮತ್ತಿರರು ಉಪಸ್ಧಿತರಿದ್ದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel

ಲೇಖಕರ ಪರಿಚಯ​

The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು[email protected] ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

ಇದನ್ನೂ ಓದಿ

ಎತ್ತುಗಳಿಂದ ಡ್ರೋನ್‌ವರೆಗೆ… ಇದು ಭಾರತದ ಕೃಷಿಯ 79 ವರ್ಷಗಳ ಪಯಣ..!
August 15, 2026
7:42 AM
by: ದ ರೂರಲ್ ಮಿರರ್.ಕಾಂ
ತೀವ್ರ ವಿರೋಧದ ಹಿನ್ನೆಲೆ – ರಾಜ್ಯದಲ್ಲಿ ಗುಟ್ಕಾ ನಿಷೇಧ ಹಿಂತೆಗೆದುಕೊಳ್ಳಲು ಸರ್ಕಾರ ನಿರ್ಧಾರ – ಹೊರಬೀಳದ ಅಧಿಕೃತ ಆದೇಶ..!
August 15, 2026
7:18 AM
by: ದ ರೂರಲ್ ಮಿರರ್.ಕಾಂ
ಗುಟ್ಕಾ–ಪಾನ್‌ಮಸಾಲಾ ನಿಷೇಧ : ಅಡಿಕೆ ಬೆಳೆಗಾರನ ಮುಂದಿರುವ ನಿಜವಾದ ಪ್ರಶ್ನೆ ಏನು?
August 14, 2026
7:14 AM
by: ಮಹೇಶ್ ಪುಚ್ಚಪ್ಪಾಡಿ
ಹವಾಮಾನ ವರದಿ | 13- 08-2026 | ಕರ್ನಾಟಕದಲ್ಲಿ ಮಳೆ ಮುಂದುವರಿಕೆ| ಸುಳ್ಯ, ಘಟ್ಟದ ಕೆಳಭಾಗದಲ್ಲಿ ಮಧ್ಯಾಹ್ನದ ಬಳಿಕ ಹೆಚ್ಚು ಮಳೆ ಸಾಧ್ಯತೆ
August 13, 2026
2:01 PM
by: ಸಾಯಿಶೇಖರ್ ಕರಿಕಳ

You cannot copy content of this page - Copyright -The Rural Mirror