Advertisement
ಸುದ್ದಿಗಳು

ಡಾ.ನಾ.ಮೊಗಸಾಲೆ ಅವರ ‘ವಿಶ್ವಂಭರ’ ಕಾದಂಬರಿ | ರಾಜ್ಯಪಾಲರಿಂದ ಬಿಡುಗಡೆ |

Share

ಕರ್ನಾಟಕ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಪುರಸ್ಕೃತ ಡಾ.ನಾ.ಮೊಗಸಾಲೆ ಅವರ ‘ವಿಶ್ವಂಭರ’ ಚೈತನ್ಯ ಮಹಾಪ್ರಭುಗಳ ಜೀವಾನಾಧರಿತ ಕಾದಂಬರಿಯನ್ನು ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಬೆಂಗಳೂರಿನಲ್ಲಿ ಬಿಡುಗಡೆ ಮಾಡಿದರು.

ಬಳಿಕ ರಾಜ್ಯಪಾಲರು, ಚೈತನ್ಯ ಮಹಾಪ್ರಭುಗಳು ಭಕ್ತಿ ಚಳುವಳಿಯ ಮಹಾನ್ ಸಂತ , ಸಮಾಜ ಸುಧಾರಕ ಮತ್ತು ಕೃಷ್ಣ ಭಕ್ತ , ಈ ಯುಗದಲ್ಲಿ ಪ್ರೀತಿ ಮತ್ತು ಭಕ್ತಿಯ ಮೂಲಕ ಸಮಾಜಕ್ಕೆ ಧೈವಿಕ , ಆದ್ಯಾತ್ಮಿಕತೆಯ ಮಾರ್ಗವನ್ನು ತೋರಿಸಿದವರು. ಚೈತನ್ಯ ಮಹಾಪ್ರಭು ಅವರ ಬೋಧನೆಗಳು ಆಧ್ಯಾತ್ಮಿಕ ಸಮಾನತೆ , ಸಹೋದರತ್ವ ಮತ್ತು ಸ್ವಾತಂತ್ರದ ತತ್ವಗಳನ್ನು ಆಧರಿಸಿವೆ ಎಂದು ಅವರು ಹೇಳಿದರು. ಚೈತನ್ಯ ಮಹಾಪ್ರಭು ಅವರ ಮುಖ್ಯ ಸಂದೇಶವೆಂದರೆ ಹರಿನಾಮ ಸಂಕೀರ್ತನೆ ಇದರ ಅರ್ಥ ಸಾಮೂಹಿಕ ಪಠಣ ಮತ್ತು  ದೇವರ ಹೆಸರಿನ ಕೀರ್ತನೆ. ಪ್ರತಿ ನಗರ ಮತ್ತು ಹಳ್ಳಿಗಳಲ್ಲಿ ಶ್ರೀ ಕೃಷ್ಣನ ಪವಿತ್ರ ನಾಮವನ್ನು ಜಪಿಸಬೇಕು ಎಂದು ಬಯಸಿದ್ದರು. 12 ವರ್ಷಗಳ ಅವಧಿಯಲ್ಲಿ 6 ಖಂಡಗಳಲ್ಲಿ 100ಕ್ಕೂ ಹೆಚ್ಚು  ಇಸ್ಕಾನ್ ದೇವಾಲಯಗಳನ್ನು ಸ್ಧಾಪಿಸುವ ಮೂಲಕ ಭಾರತೀಯ ಸಂಸ್ಕೃತಿಯನ್ನು ಪಾಶ್ಟಿಮಾತ್ಯ ದೇಶಗಳಲ್ಲೂ ಹರಡುವ ಕೆಲಸ ಮಾಡಿದ್ದಾರೆ. ಆಧುನಿಕ ಯುಗದಲ್ಲಿ ಭಾರತದ ಸಂಸ್ಕೃತಿ ಮತ್ತು ಪರಂಪರೆಯ ಶ್ರೇಷ್ಠ ರಾಯಾಭಾರಿಯಾಗಿದ್ದಾರೆ ಎಂದು ತಿಳಿಸಿದರು. ಚೈತನ್ಯ ಪ್ರಭುಗಳ ಜೀವನ ಕುರಿತು ಕನ್ನಡದಲ್ಲಿ ಬರೆದ ಬರಹಕ್ಕಾಗಿ ಕರ್ನಾಟಕ ಸಾಹಿತ್ಯ ಅಕಾಡೆಮಿ ಪುರಸ್ಕೃತ ಡಾ. ಮೊಗಸಾಲೆ ಅವರನ್ನು ಅಭಿನಂದಿಸುವುದಾಗಿ ಹೇಳಿದ ಅವರು .ಈ ಕೃತಿ ಭಾರತೀಯ, ಕನ್ನಡ ಸಾಹಿತ್ಯದ ಪ್ರಮುಖ ಪುಸ್ತಕವಾಗಲಿದೆ .ಜತೆಗೆ ಸ್ಪೂರ್ತಿಯ ಮೂಲ ಹಾಗೂ ಸಮಾಜದಲ್ಲಿ ಸಕಾರಾತ್ಮಕ ಬದಲಾವಣೆ ತರಲು ಸಹಕಾರಿಯಾಗಲಿದೆ ಎಂದು ಹೇಳಿದರು.

ಈ ವೇಳೆ ವ್ಯಾಸರಾಜ ಮಠದ ಪೀಠಾಧಿಪತಿ  ವಿದ್ಯಾಶ್ರೀಶ ತೀರ್ಥ ಸ್ವಾಮೀಜಿ, ನಟ ಪ್ರಕಾಶ್ ಬೆಳವಾಡಿ, ಮೈಸೂರು ಇಸ್ಕಾನ್ ಅಧ್ಯಕ್ಷ ಸ್ತೋಕ ಕೃಷ್ಣ ಸ್ವಾಮಿ, ಬೆಂಗಳೂರು ಇಸ್ಕಾನ್ ಅಧ್ಯಕ್ಷ ಚಂಚಲ ಪತಿದಾಸ್, ಕರ್ನಾಟಕ ಸಂಸ್ಕೃತ ವಿಶ್ವ ವಿದ್ಯಾಲಯದ ನಿವೃತ್ತ ಕುಲಪತಿ ಡಾ.ಮಲ್ಲೇಪುರಂ ಜಿ.ವೆಂಕಟೇಶ್ ಸೇರಿದಂತೆ ಮತ್ತಿರರು ಉಪಸ್ಧಿತರಿದ್ದರು.

Advertisement
Advertisement
Advertisement
ಇದು ನಮ್ಮ YouTube ಚಾನೆಲ್ - Subscribe ಮಾಡಿ ಬೆಂಬಲಿಸಿ
Advertisement
Rural Mirror Special | Subscribe Our Channel
The Rural Mirror ಸುದ್ದಿಜಾಲ

ದಿ ರೂರಲ್‌ ಮಿರರ್.com ಸುದ್ದಿಗಳನ್ನು ‌theruralmirror@gmail.com ಅಥವಾ 9449125447 ಗೆ ವ್ಯಾಟ್ಸಪ್ ಮೂಲಕ ಕಳುಹಿಸಿ.

Published by
The Rural Mirror ಸುದ್ದಿಜಾಲ

Recent Posts

ಕೇರಳದಲ್ಲಿ ಭಾರಿ ಮಳೆ ಆರ್ಭಟ : ಮಲಪ್ಪುರಂನಲ್ಲಿ ಸರಣಿ ಭೂಕುಸಿತ , ಸಂಚಾರ ಸಂಪೂರ್ಣ ಸ್ಥಗಿತ

ಕೇರಳದ ಮಲಪ್ಪುರಂ ಜಿಲ್ಲೆಯಲ್ಲಿ ಭಾರಿ ಮಳೆಯಿಂದ ರಾಜ್ಯ ಹೆದ್ದಾರಿಯಲ್ಲಿ ಭೂಕುಸಿತ ಸಂಭವಿಸಿ ವಾಹನ…

17 minutes ago

ಆಕೆ ಏಕೆ ತನ್ನ ನೋವನ್ನು ಯಾರಿಗೂ ಹೇಳುವುದಿಲ್ಲ..?

ಕುಟುಂಬದ ನೆಮ್ಮದಿಗಾಗಿ ತನ್ನ ನೋವನ್ನೂ ಮರೆಮಾಚುವ ಅಮ್ಮಂದಿರ ಮೌನ ತ್ಯಾಗವನ್ನು 'ತಿರುವು' ಅಂಕಣ…

2 hours ago

ಹಿಂದೂ ಮಹಾಸಾಗರದ ಹವಾಮಾನದಲ್ಲಿ ಹಠಾತ್ ಬದಲಾವಣೆ – ಮತ್ತೆ ಮಹಾಮಳೆಗೆ ಕಾರಣವಾಗುತ್ತಿದೆಯೇ?

ಹಿಂದೂ ಮಹಾಸಾಗರದ ಹವಾಮಾನ ಬದಲಾವಣೆ ಹಾಗೂ ಸಕಾರಾತ್ಮಕ IOD ಪರಿಣಾಮದಿಂದ ಕರ್ನಾಟಕದಲ್ಲಿ ಮುಂಗಾರು…

6 hours ago

ರಾಜ್ಯದಲ್ಲಿ ಭಾರೀ ಮಳೆ ಆರ್ಭಟ – ಕೆಲವು ಜಿಲ್ಲೆಗಳಲ್ಲಿ ಇಂದು ಶಾಲೆ-ಕಾಲೇಜುಗಳಿಗೆ ರಜೆ ಘೋಷಣೆ

ರಾಜ್ಯದ ಹಲವೆಡೆ ಭಾರೀ ಮಳೆಯ ಹಿನ್ನೆಲೆಯಲ್ಲಿ ಕೆಲವು ಜಿಲ್ಲೆಗಳಲ್ಲಿ ಶಾಲೆ-ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.…

11 hours ago

ಆಹಾರ-ನಿದ್ರೆ ಪರಸ್ಪರ ಪೂರಕ; ಉತ್ತಮ ನಿದ್ರೆಗೆ ಹಸಿವು ಅಗತ್ಯ: ರಾಘವೇಶ್ವರ ಶ್ರೀ

ಉತ್ತಮ ಆರೋಗ್ಯಕ್ಕೆ ಸರಿಯಾದ ಆಹಾರ ಮತ್ತು ನಿದ್ರೆ ಎರಡೂ ಅವಿಭಾಜ್ಯ ಎಂದು ಶ್ರೀ…

20 hours ago